ಉದಯವಾಣಿ ವಿದ್ಯಾರ್ಥಿ ಪತ್ರಕರ್ತ ಯೋಜನೆಗೆ ಆಹ್ವಾನ
Team Udayavani, Aug 31, 2018, 11:26 AM IST
ಮಣಿಪಾಲ: ಉದಯವಾಣಿ ವಿದ್ಯಾರ್ಥಿ ಪತ್ರಕರ್ತ ಯೋಜನೆ ಈ ವರ್ಷದಿಂದ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗೆ ಪೂರ್ಣ ಪ್ರಮಾಣದಲ್ಲಿ ವಿಸ್ತರಿಸಲಾಗುತ್ತಿದೆ. ಕಳೆದ ವರ್ಷದಿಂದ ಪ್ರಾಯೋಗಿಕವಾಗಿ ಪುತ್ತೂರಿನಲ್ಲಿ ಜಾರಿಗೊಳಿಸಲಾಗಿತ್ತು. ಈ ಯೋಜನೆ ವಿಶೇಷವಾಗಿದ್ದು, ಓದಿನ ಜತೆಗೇ ಕೆಲವು ಸಮಯವನ್ನು ವಿನಿಯೋಗಿಸುವ ಮೂಲಕ ಉಚಿತವಾಗಿ ಉದಯವಾಣಿಯೊಂದಿಗೆ ಪತ್ರಿಕೋದ್ಯಮದ ಪ್ರಾಯೋಗಿಕ ಅನುಭವವನ್ನು ಪಡೆಯಬಹುದಾಗಿದೆ. ಬಿಎ ಹಾಗೂ ಎಂಎ ಓದುತ್ತಿರುವವರು ಈ ಯೋಜನೆಗೆ ಅರ್ಹರು. ಪ್ರಸ್ತುತ ಯಾವುದಾದರೂ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರಬೇಕು. ಈ ಯೋಜನೆಯಡಿ ವಿವಿಧ ಭಾಗಗಳಿಂದ ನಿಗದಿತ ಸಂಖ್ಯೆಯ ಆಸಕ್ತರನ್ನು ಆಯ್ದುಕೊಳ್ಳಲಾಗುವುದು.
ತರಬೇತಿ ವಿವರ: ಆಯ್ದ ವಿದ್ಯಾರ್ಥಿಗಳಿಗೆ ಓರಿಯೆಂಟೇಷನ್ ನೀಡುವುದಲ್ಲದೆ, ನಾಲ್ಕು ತಿಂಗಳಿಗೊಮ್ಮೆ ಕಾರ್ಯಾಗಾರ ನಡೆಸಲಾಗುವುದು. ವಾರದಲ್ಲಿ ಅವರು ಇರುವ ಸುತ್ತಲಿನ ಪ್ರದೇಶದಲ್ಲೇ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಮಾಡಲು ಅವಕಾಶ ನೀಡಲಾಗುವುದು. ಆ ಮೂಲಕ ಅವರಿಗೆ ವರದಿಗಾರಿಕೆಯಲ್ಲದೇ, ವರ್ಷದಲ್ಲಿ ಒಂದು-ಎರಡು ಬಾರಿ ಸುದ್ದಿಮನೆಯಲ್ಲೂ (ಡೆಸ್ಕ್) ಕೆಲಸ ಮಾಡಲು ಅವಕಾಶ ಕಲ್ಪಿಸಲಾಗುವುದು. ತರಬೇತಿ ಬಳಿಕ ಉದಯವಾಣಿ ವಿದ್ಯಾರ್ಥಿ ಪತ್ರಕರ್ತ ಯೋಜನೆಯ ಪ್ರಮಾಣಪತ್ರ ನೀಡಲಾಗುವುದು. ತರಬೇತಿ ಅವಧಿಯಲ್ಲಿ ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸಿದವರಿಗೆ ಅವಕಾಶವಿದ್ದಲ್ಲಿ ಉದಯವಾಣಿಯಲ್ಲೇ ಪರಿಗಣಿಸಲಾಗುವುದು.
ಆಯ್ಕೆ ಹೇಗೆ?: ಸೆ. 19ರಂದು ಕಿರು ಪರೀಕ್ಷೆ ನಡೆಯಲಿದೆ. ಸುಳ್ಯ ಮತ್ತು ಪುತ್ತೂರು ಭಾಗದವರಿಗೆ ಪುತ್ತೂರಿನಲ್ಲಿ ಪರೀಕ್ಷೆ ನಡೆಯಲಿದೆ. ಬೆಳ್ತಂಗಡಿಯವರು ಮತ್ತು ಬಂಟ್ವಾಳದವರು ಪುತ್ತೂರಿನಲ್ಲೂ ಪರೀಕ್ಷೆ ಬರೆಯಲು ಅವಕಾಶವಿದೆ. ಆಸಕ್ತರು ತಮ್ಮ ಹೆಸರು, ಊರು, ಓದುತ್ತಿರುವ ಕೋರ್ಸ್-ವರ್ಷ, ಕಾಲೇಜಿನ ಹೆಸರು, ಸಂಪರ್ಕ ಸಂಖ್ಯೆ ಹಾಗೂ ಇಮೇಲ್ ಐಡಿ ಈ ವಾಟ್ಸ್ ಆ್ಯಪ್ ನಂಬರ್ಗೆ 99641 69554ಗೆ ಅಥವಾ ಇಮೇಲ್ [email protected]
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ