ಅವಕಾಶ ಸದುಪಯೋಗ ಮಾಡಿಕೊಳ್ಳಿ


Team Udayavani, Aug 31, 2018, 11:39 AM IST

gul-5.jpg

ದಾವಣಗೆರೆ: ಸಿಕ್ಕ ಅವಕಾಶ ಸದ್ಬಳಕೆ ಮಾಡಿಕೊಂಡು ಲಭ್ಯವಿರುವ ಸಂಪನ್ಮೂಲದಿಂದ ವಿಶ್ವವಿದ್ಯಾಲಯದ
ಅಭಿವೃದ್ಧಿ ಕಾರ್ಯದಲ್ಲಿ ಸರ್ವರೂ ಕೊಡುಗೆ ನೀಡಬೇಕು ಎಂದು ವೆಸ್ಟ್‌ಇಂಡೀಸ್‌ನ ಕಿಂಗ್‌ ಸ್ಟನ್‌ಜಮೈಕಾದ ತಾಂತ್ರಿಕ ವಿಶ್ವವಿದ್ಯಾಲಯದ ವಿಶ್ರಾಂತ ಉಪಾಧ್ಯಕ್ಷ ಪ್ರೊ| ಎ.ಬಿ. ಕುಲಕರ್ಣಿ ಸಲಹೆ ನೀಡಿದರು.

ದಾವಣಗೆರೆ ವಿಶ್ವವಿದ್ಯಾಲಯದ ಶಿವಗಂಗೋತ್ರಿಯ ಜ್ಞಾನ ಸೌಧ ಸಭಾ ವೇದಿಕೆಯಲ್ಲಿ ಗುರುವಾರ ವಿಶ್ವವಿದ್ಯಾಲಯದ
ಹತ್ತನೇ ವರ್ಷದ ಸಂಸ್ಥಾಪನಾ ದಿನಾಚರಣೆ ಮತ್ತು ದಶಮಾನೋತ್ಸವ ಕಾರ್ಯಕ್ರಮಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು. 

ದಾವಣಗೆರೆ ವಿವಿ ಅಭಿವೃದ್ಧಿ ನಿಜಕ್ಕೂ ಗಮನಾರ್ಹವಾಗಿದೆ. ಈ ವಿವಿ ಇದುವರೆಗಿನ ಪ್ರಗತಿಗೆ ಕಾರಣೀ ಭೂತರಾದವರನ್ನು ಸ್ಮರಿಸಲೇಬೇಕು. ಭವಿಷ್ಯದಲ್ಲಿ ದಾವಣಗೆರೆ ವಿಶ್ವ ವಿದ್ಯಾಲಯ ದೇಶದ ಮೊದಲ ಹತ್ತು ವಿಶ್ವವಿದ್ಯಾಲಯಗಳಲ್ಲಿ ಒಂದಾಗಬೇಕು ಎನ್ನುವ ಆಶಯ ವ್ಯಕ್ತಪಡಿಸಿದರು.

ದಾವಣಗೆರೆ ವಿಶ್ವವಿದ್ಯಾಲಯ ಸಾಗಿಬಂದ ದಾರಿ ಕುರಿತು ಸಿಂಹಾವಲೋಕನ ಮಾಡಿಕೊಳ್ಳಬೇಕಿದೆ. ವಿವಿ ಸ್ಥಾಪನೆಗೆ
ಕಾರಣರಾದವರಿಂದ ಹಿಡಿದು ಸಂಪನ್ಮೂಲ, ಸ್ಥಳ ಹಾಗೂ ಹಣದ ನೆರವು ನೀಡಿದವರು ಸೇರಿ ಎಲ್ಲರ ಕೊಡುಗೆ ಗಣನೀಯವಾಗಿದೆ. ಹೀಗಾಗಿಯೇ ಈ ವಿವಿ ಕಡಿಮೆ ಅವಧಿಯಲ್ಲಿಯೇ ಇಷ್ಟೊಂದು ಪ್ರಗತಿ ಸಾಧಿಸಿದೆ. ಯಾವುದೇ ವಿವಿಯ ಅಭಿವೃದ್ಧಿ ಕುಲಪತಿ ಒಬ್ಬರಿಂದಲೇ ಅಸಾಧ್ಯ. ವಿದ್ಯಾರ್ಥಿಗಳು, ಬೋಧಕರು, ಬೋಧಕೇತರರು, ದಾನಿಗಳು, ಸರ್ಕಾರ ಹೀಗೆ ಸರ್ವರ ಕೊಡುಗೆಯಿಂದ ಬೆಳವಣಿಗೆ ಆಗಲಿದೆ ಎಂದು ಹೇಳಿದರು.

ಯಾವುದೇ ವ್ಯಕ್ತಿ ಹೊಸ ಹುದ್ದೆ ಇಲ್ಲವೇ, ಸ್ಥಾನ ಅಲಂಕರಿಸಿದಾಗ ತಾನು ಏನಾದರೂ ಸಮಾಜಕ್ಕೆ ಕೊಡುಗೆ ನೀಡುವ ಬಗ್ಗೆ ಆಲೋಚಿಸಬೇಕು. ಸಿಕ್ಕ ಅವಕಾಶದಿಂದ ಲಭ್ಯವಿರುವ  ಸೌಲಭ್ಯ ಬಳಸಿಕೊಂಡು ಪ್ರಗತಿಗೆ ಸಿದ್ಧರಾಗಬೇಕು. ಬೇಕಿರುವ ಸೌಲಭ್ಯ ಹೇಗೆ ಪಡೆಯಬೇಕು ಎಂಬುದಾಗಿ ಯೋಚಿಸಬೇಕು. ಕೇವಲ ಪ್ರಚಾರಕ್ಕಾಗಿ ಕೆಲಸ ಮಾಡುವಂತಾಗಬಾರದು. ಅಭಿವೃದ್ಧಿ ನಮ್ಮ ಕೆಲಸದ ಭಾಗ ಎಂಬುದಾಗಿ ಪರಿಗಣಿಸಿ, ಜವಾಬ್ದಾರಿ, ಬದ್ಧತೆಯಿಂದ
ಕಾರ್ಯೋನ್ಮುಖರಾಗಬೇಕು. ಏಕೆಂದರೆ ವಿವಿ ಕುಲಪತಿಗಳಿಂದ ಸಮಾಜ ಬಹಳಷ್ಟು ನಿರೀಕ್ಷೆ ಇಟ್ಟುಕೊಂಡಿರುತ್ತದೆ ಎಂದರು.

ವಿದ್ಯಾರ್ಥಿಗಳಿಗೆ ಉಪಯೋಗ ವಾಗುವಂತಹ ಸಂಗತಿ ಬಗ್ಗೆ ನಿರಂತರವಾಗಿ ಆಲೋಚಿಸಿ, ಅದನ್ನು ಕಾರ್ಯಗತಗೊಳಿಸಬೇಕು ಎಂದರಲ್ಲದೇ, ತಾವು ಈ ಹಿಂದೆ ಗುಲ್ಬರ್ಗ ವಿಶ್ವವಿದ್ಯಾಲಯದಲ್ಲಿ ಪ್ರೋಫೆಸರ್‌ ಹಾಗೂ
ಡೀನ್‌ ಆಗಿದ್ದಾಗಿನಿಂದ ಹಿಡಿದು ವಿದೇಶಕ್ಕೆ ತೆರಳಿ ಅಲ್ಲಿ ಯಶಸ್ಸು ಗಳಿಸಿದ ಅನುಭವವನ್ನು ಹಂಚಿಕೊಂಡರು. ವಿಶ್ವವಿದ್ಯಾಲಯದಲ್ಲಿ ಪದವಿ ಪಡೆಯುವ ಜತೆಗೆ ವಿದ್ಯಾರ್ಥಿಗಳು ಕೌಶಲ್ಯಾಭಿವೃದ್ಧಿಯಲ್ಲಿ ಪರಿಣಿತರಾಗಬೇಕು.

ಆಗ ಪದವಿ ಜತೆಗೆ ಪಡೆಯುವ ಮತ್ತೂಂದು ಕೋರ್ಸ್‌ ನಿಮ್ಮ ಭವಿಷ್ಯ ರೂಪಿಸಿಕೊಳ್ಳಲು ಸಹಕಾರಿಯಾಗುತ್ತದೆ ಎಂದು ಹೇಳಿದರು. ದಾವಣಗೆರೆಯಲ್ಲಿರುವ ದೃಶ್ಯಕಲಾ ಕಾಲೇಜಿನ ಆವರಣದಲ್ಲಿ ಸಾಕಷ್ಟು ಜಾಗವಿದ್ದು, ವಿದ್ಯಾರ್ಥಿಗಳು ಯುಪಿಎಸ್‌ಸಿ, ಕೆಪಿಎಸ್‌ಸಿ ಸೇರಿದಂತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗೆ ಸಜ್ಜುಗೊಳ್ಳಲು ತರಬೇತಿ ಕೇಂದ್ರ ತೆರೆಯಲು
ಕ್ರಮ ವಹಿಸುವಂತೆ ವಿವಿ ಕುಲಪತಿಗೆ ಸಲಹೆ ನೀಡಿದರು. ದಾವಣಗೆರೆ ವಿಶ್ವ ವಿದ್ಯಾಲಯ ಕುಲಪತಿ ಪ್ರೊ| ಶರಣಪ್ಪ ವಿ. ಹಲಸೆ ಅಧ್ಯಕ್ಷತೆ ವಹಿಸಿದ್ದರು. ದಾವಿವಿ ಹಣಕಾಸು ಅಧಿಕಾರಿ ಜೆ.ಕೆ. ರಾಜು ವೇದಿಕೆಯಲ್ಲಿದ್ದರು.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.