ನಿಷೇಧಾಜ್ಞೆ ಕರಿನೆರಳಲ್ಲೇ ಮಲ್ಲಯ್ಯನ ಜಾತ್ರೆ


Team Udayavani, Aug 31, 2018, 4:08 PM IST

31-agust-18.jpg

ಬೀಳಗಿ: ದಶಕಗಳಿಗೂ ಹೆಚ್ಚು ಕಾಲ ತಾಲೂಕಿನ ತುಮ್ಮರಮಟ್ಟಿ ಮತ್ತು ತೋಳಮಟ್ಟಿ ಗ್ರಾಮಗಳ ಮಧ್ಯೆ ವಿವಾದದಲ್ಲಿ ಸಿಲುಕಿಕೊಂಡು ನಲುಗುತ್ತಿರುವ ತಾಲೂಕಿನ ಆರಾಧ್ಯ ದೈವ ವಾರಿ ಮಲ್ಲಯ್ಯನ ಜಾತ್ರೆ ಈ ಬಾರಿಯೂ ಪ್ರತಿ ವರ್ಷದಂತೆ ನಿಷೇಧಾಜ್ಞೆ ಕರಿನೆರಳಲ್ಲಿಯೇ ನಡೆಯುತ್ತಿದ್ದು, ಭಕ್ತ ಸಮೂಹ ಭಯದ ವಾತಾವರಣದಲ್ಲಿಯೇ ಜಾತ್ರೋತ್ಸವದಲ್ಲಿ ಪಾಲ್ಗೊಳ್ಳುವುದು ಅನಿವಾರ್ಯ.

ಭೀತಿಯಲ್ಲಿಯೇ ದರ್ಶನ: ಸುಂದರ ಪ್ರಕೃತಿ ಮಡಿಲಲ್ಲಿರುವ ವಾರಿ ಮಲ್ಲಯ್ಯನ ಜಾತ್ರೆ ಸೆ. 3ರಂದು ನೆರವೇರಲಿದೆ. ದೇವಸ್ಥಾನದ ಹಕ್ಕು ಪ್ರತಿಪಾದಿಸುವ ವಿಷಯದಲ್ಲಿ ತಾಲೂಕಿನ ತೋಳಮಟ್ಟಿ ಮತ್ತು ತುಮ್ಮರಮಟ್ಟಿ ಗ್ರಾಮಗಳ ಮಧ್ಯೆ ವಿವಾದ ಉದ್ಭವಿಸಿ ದಶಕಗಳ ಕಾಲವೇ ದಾಟಿದೆ. ಆದರೆ ದೇವಸ್ಥಾನ ಯಾವ ಗ್ರಾಮಕ್ಕೆ ಸೇರಿದ್ದು ಎನ್ನುವ ವಿವಾದ ಇದುವರೆಗೂ ಇತ್ಯರ್ಥವಾಗದೆ ಇರುವ ಕಾರಣ, ಪ್ರತಿ ವರ್ಷವೂ ವಾರಿ ಮಲ್ಲಯ್ಯನ ಜಾತ್ರೆ ನಿಷೇಧಾಜ್ಞೆಯ ಭೀತಿಯಲ್ಲಿಯೇ ನಡೆಯುವಂತಾಗಿದೆ. ಜಾತ್ರೆಯ ಸಂದರ್ಭ ಹಲವು ಬಾರಿ ಎರಡೂ ಗ್ರಾಮಸ್ಥರ ಮಧ್ಯೆ ಗಲಾಟೆ ಏರ್ಪಟ್ಟಿರುವ ಪ್ರಸಂಗವೂ ನಡೆದಿದೆ. ಜಾತ್ರೆಗೆ ಆಗಮಿಸುವ ಅಸಂಖ್ಯಾತ ಭಕ್ತರು ಯಾವಾಗ ಏನು ಗಲಭೆಯಾಗುತ್ತದೆಯೋ ಎನ್ನುವ ಭೀತಿಯಲ್ಲಿಯೇ ಮಲ್ಲಯ್ಯನ ಮುಖ ದರುಶನ ಮಾಡುವಂತಾಗಿದೆ.

ತಣ್ಣಗಾಗದ ವಿವಾದ: ತಾಲೂಕಿನ ತೋಳಮಟ್ಟಿ ಹಾಗೂ ತುಮ್ಮರಮಟ್ಟಿ ಈ ಎರಡು ಗ್ರಾಮಗಳ ಸರಹದ್ದಿನಲ್ಲಿ ವಾರಿ ಮಲ್ಲಯ್ಯನ ದೇವಸ್ಥಾನವಿದೆ. ಆ ಕಾರಣಕ್ಕಾಗಿ ದಶಕಗಳಿಗೂ ಹೆಚ್ಚು ಕಾಲ ದೇವಸ್ಥಾನದ ಸೀಮೆಯ ವಿಚಾರವಾಗಿ ಉಭಯ ಗ್ರಾಮಸ್ಥರಲ್ಲಿ ಬಲವಾದ ವಿವಾದ ಹುಟ್ಟಿಕೊಂಡಿದೆ.

ದೇವಸ್ಥಾನದ ಹಕ್ಕು ಪ್ರತಿಪಾದನೆಗಾಗಿ ಉಭಯ ಗ್ರಾಮಗಳ ನಡುವೆ ಹುಟ್ಟಿಕೊಂಡ ವಿವಾದ ಇದುವರೆಗೂ ತಣ್ಣಗಾಗಿಲ್ಲ. ಕಾರಣ, ಭಕ್ತ ಸಮೂಹದ ಆತಂಕಕ್ಕೆ ಕಾರಣವಾಗಿದೆ. ಪ್ರತಿ ವರ್ಷ ನಡೆಯುವ ಜಾತ್ರೆಗೂ ಮುನ್ನ ಸುವ್ಯವಸ್ಥೆ ಉದ್ದೇಶದಿಂದ ತಾಲೂಕು ಆಡಳಿತ ಅಧಿಕಾರಿಗಳು ಉಭಯ ಗ್ರಾಮಸ್ಥರ ಶಾಂತಿ ಸಭೆ ಕರೆದು ಪರಿಸ್ಥಿತಿ ತಿಳಿಗೊಳಿಸಲು ಪ್ರಯತ್ನಿಸುತ್ತಲೇ ಬಂದಿದ್ದಾರೆ. ಆದರೆ ಪ್ರತಿಫಲ ಮಾತ್ರ ಶೂನ್ಯ. ಇದರಿಂದ ಪ್ರತಿ ವರ್ಷ ಜಾತ್ರೆ ನಿಷೇಧಾಜ್ಞೆ ನೆರಳಿನಲ್ಲಿಯೇ ನಡೆಯುವಂತಾಗಿದೆ.

ಜಾತ್ಯತೀತ, ಧರ್ಮಾತೀತ ಹಾಗೂ ಸೀಮಾತೀತವಾಗಿ ತನ್ನ ಆಲಯಕ್ಕೆ ಬರುವ ಎಲ್ಲ ಭಕ್ತರಿಗೆ ದರ್ಶನ ಭಾಗ್ಯ ನೀಡುತ್ತ ಕುಳಿತಿರುವ ಶಾಂತಮೂರ್ತಿ ಮಲ್ಲಯ್ಯನ ಭಕ್ತರಿಗೆ ಮಾತ್ರ ನಿಷೇಧಾಜ್ಞೆಯಿಂದ ಕಿರಿ ಕಿರಿ ಉಂಟಾಗಿದೆ. ವಾರಿ ಮಲ್ಲಯ್ಯ ಯಾವ ಊರಿನವನಾದರೂ ಆಗಲಿ. ಸಡಗರ ಸಂಭ್ರಮದಿಂದ ಜಾತ್ರೆಯಲ್ಲಿ ಪಾಲ್ಗೊಳ್ಳುವಂತ ಮುಕ್ತ ವಾತಾವರಣ ನಿರ್ಮಾಣವಾಗಲಿ ಎನ್ನುವುದು ನೂರಾರು ಭಕ್ತರ ಬಲವಾದ ಆಶಯವಾಗಿದೆ.

ನಿಷೇಧಾಜ್ಞೆ ಜಾರಿ
ಪ್ರತಿ ವರ್ಷದಂತೆ ಈ ವರ್ಷವೂ ಜಾತ್ರೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಸೆ. 3ರಂದು ಸಿಆರ್‌ಪಿಸಿ ಕಲಂ 144 ರ ಪ್ರಕಾರ ದೇವಸ್ಥಾನದ ಪರೀದಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಭಕ್ತರು ಸಹಕರಿಸಬೇಕು.
. ಉದಯ ಕುಂಬಾರ,
ತಹಶೀಲ್ದಾರ್‌ ಬೀಳಗಿ

ರವೀಂದ್ರ ಕಣವಿ

ಟಾಪ್ ನ್ಯೂಸ್

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.