ಔರಂಗಾಬಾದ್: ಪತ್ನಿ, ಇಬ್ಬರು ಪುತ್ರಿಯರ ಕೊಂದು ವ್ಯಕ್ತಿ ಆತ್ಮಹತ್ಯೆ
Team Udayavani, Aug 31, 2018, 5:02 PM IST
ಮುಂಬಯಿ : 32 ವರ್ಷ ಪ್ರಾಯದ ವ್ಯಕ್ತಿಯೋರ್ವ ತನ್ನ ಪತ್ನಿ ಮತ್ತು ಇಬ್ಬರು ಪುತ್ರಿಯರನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಹಾರಾಷ್ಟ್ರದ ಔರಂಗಾಬಾದ್ ಜಿಲ್ಲೆಯಲ್ಲಿ ನಡೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಔರಂಗಾಬಾದ್ ಜಿಲ್ಲೆಯ ಫುಲಾಂಬ್ರಿ ಪಟ್ಟಣದಲ್ಲಿ ಈ ಘಟನೆ ನಿನ್ನೆ ತಡ ರಾತ್ರಿ ನಡೆದಿದೆ. ಕೃಷ್ಣ ದೇವರಾ ಎಂಬ ವ್ಯಕ್ತಿ ತನ್ನ ಪತ್ನಿ ಸುಕನ್ಯಾ ಮತ್ತು ಇಬ್ಬರು ಪುತ್ರಿಯರಾದ ಸುವರ್ಣಾ (6) ಮತ್ತು ಹಿಂದವೀ (4) ಇವರನ್ನು ಕತ್ತು ಹಿಸುಕಿ ಕೊಂದು ಬಳಿಕ ತಾನು ನೇಣಿಗೆ ಶರಣಾಗಿದ್ದಾನೆ ಎಂದು ಔರಂಗಾಬಾದ್ ಗ್ರಾಮಾಂತರ ಎಸ್ಪಿ ಆರ್ತಿ ಸಿಂಗ್ ಹೇಳಿದ್ದಾರೆ.
ಕೃಷ್ಣ ದೇವರಾ ನಡೆಸಿರುವ ಪತ್ನಿ, ಪುತ್ರಿಯರ ಕೊಲೆ ಮತ್ತು ಸ್ವಯಂ ಆತ್ಮಹತ್ಯೆಯ ಹಿಂದಿನ ಕಾರಣ ಏನೆಂಬುದು ಗೊತ್ತಾಗಿಲ್ಲ; ವಾಡೋದ್ ಬಜಾರ್ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಕೇಸು ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್ ಘೋಷಣೆ ಬರೆದ ವಿದ್ಯಾರ್ಥಿ ಪಾಸ್: ಪ್ರಾಧ್ಯಾಪಕ ಅಮಾನತು!
ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್