ಕಂಪ್ಲಿ ಮಾರ್ಗವಾಗಿ ಬಸ್‌ ಓಡಿಸಲು ಆಗ್ರಹ


Team Udayavani, Aug 31, 2018, 5:28 PM IST

bell-1.jpg

ಕಂಪ್ಲಿ: ಗಂಗಾವತಿಯಿಂದ ಹೊಸಪೇಟೆ, ಹೊಸಪೇಟೆಯಿಂದ ಗಂಗಾವತಿಗೆ ರಾಮಸಾಗರ ಮತ್ತು ಕಂಪ್ಲಿ ಮಾರ್ಗವಾಗಿ
ವಿವಿಧ ಘಟಕಗಳ ಸರ್ಕಾರಿ ಬಸ್‌ಗಳ ಸಂಚಾರಕ್ಕೆ ಅವಕಾಶ ಕಲ್ಪಿಸಬೇಕೆಂದು ಆಗ್ರಹಿಸಿ ವಿದ್ಯಾರ್ಥಿಗಳು, ಸರ್ಕಾರಿ
ನೌಕರರು ಹಾಗೂ ಪ್ರಯಾಣಿಕರು ಗುರುವಾರ ಬೃಹತ್‌ ಪ್ರತಿಭಟನೆ ನಡೆಸಿದರು.

ಬುಕ್ಕಸಾಗರ ಕಡೆಬಾಗಿಲು ಸೇತುವೆ ಬಳಿ ವಿದ್ಯಾರ್ಥಿಗಳು ದಿಢೀರ್‌ ಪ್ರತಿಭಟನೆ ನಡೆಸಿದ ಪರಿಣಾಮ ಸುಮಾರು 3 ರಿಂದ 4 ತಾಸು ರಸ್ತೆ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಇದರಿಂದ ವಾಹನಗಳು ಸಾಲುಗಟ್ಟಿ ನಿಂತಿದ್ದು, ಪ್ರಯಾಣಿಕರು ತೊಂದರೆಯಾಯಿತು. 

ತುಂಗಭದ್ರಾ ನದಿಗೆ ಭಾರೀ ಪ್ರಮಾಣದಲ್ಲಿ ನೀರು ಬಿಟ್ಟಿರುವುದರಿಂದ ಹಾಗೂ ಕಂಪ್ಲಿ-ಕೋಟೆಯ ಹತ್ತಿರ ತುಂಗಭದ್ರಾ ನದಿಗೆ ನಿರ್ಮಿಸಿದ್ದ ಸೇತುವೆ ಶಿಥಿಲಗೊಂಡಿರುವುದರಿಂದ ಬಸ್‌ಗಳನ್ನು ಕಂಪ್ಲಿ ಮಾರ್ಗವಾಗಿ ಸಂಚಾರಕ್ಕೆ ಅವಕಾಶ ಕೊಡದೇ ಕಡೆಬಾಗಿಲು ಮೂಲಕ ಸಂಚರಿಸುವಂತೆ ಕ್ರಮ ಕೈಗೊಳ್ಳಬೇಕೆಂದು ಗಂಗಾವತಿ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಗಂಗಾವತಿ ಮತ್ತು ಹೊಸಪೇಟೆ ಈಶಾನ್ಯ ಕರ್ನಾಟಕ ಸಾರಿಗೆ ಸಂಸ್ಥೆಗೆ ಪತ್ರ ಬರೆದ ಹಿನ್ನೆಲೆಯಲ್ಲಿ ಬಹುತೇಕ ಬಸ್‌ಗಳು ಬುಕ್ಕಸಾಗರ ಕಡೆಬಾಗಿಲು ಮೂಲಕ ಸಂಚರಿಸುತ್ತಿದ್ದವು.

ಇದರಿಂದ ಕಂಪ್ಲಿ ಮಾರ್ಗವಾಗಿ ಬಸ್‌ಗಳು ಬಾರದಿರುವುದರಿಂದ ವಿದ್ಯಾರ್ಥಿಗಳು, ಸರ್ಕಾರಿ ನೌಕರರು, ದೈನಂದಿನ ಕೆಲಸ ಕಾರ್ಯಗಳಿಗೆ ಹೊಸಪೇಟೆ, ಗಂಗಾವತಿಗೆ ತೆರಳುವವರಿಗೆ ತೀವ್ರ ತೊಂದರೆಯಾಗಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಹೊಸಪೇಟೆ ಬಸ್‌ ನಿಲ್ದಾಣದಲ್ಲಿ ಸಂಚಾರ ನಿಯಂತ್ರಕರು ಹಾಗೂ ಘಟಕ ವ್ಯವಸ್ಥಾಪಕರು ರಾಮಸಾಗರ ಮತ್ತು ಕಂಪ್ಲಿ
ಮೂಲಕವೇ ಬಸ್‌ಗಳು ಸಂಚರಿಸಬೇಕೆಂದು ಆದೇಶ ನೀಡಿದರೂ ಸಹಿತ ಬಸ್‌ಗಳ ಚಾಲಕರು ಮತ್ತು ನಿರ್ವಾಹಕರು ಅಧಿಕಾರಿಗಳ ಆದೇಶ ಧಿಕ್ಕರಿಸಿ ತಮ್ಮಿಚ್ಚೆಯಂತೆ ಕಡೆಬಾಗಿಲು ಮೂಲಕ ಸಂಚರಿಸುತ್ತಿವೆ ಎಂದು ಅಧಿಕಾರಿಗಳು ವಿರುದ್ಧ ಕಿಡಿಕಾರಿದರು.

ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ತಹಶೀಲ್ದಾರ್‌ ಎಂ.ರೇಣುಕಾ, ಪಿಎಸ್‌ಐ ಆರ್‌.ಆರ್‌.ನಾಯ್ಕ ಪ್ರತಿಭಟನಾಕಾರರೊಂದಿಗೆ ಚರ್ಚಿಸಿದರು. ಅಲ್ಲದೇ, ಸಾರಿಗೆ ಇಲಾಖೆ ಅಧಿಕಾರಿಗಳನ್ನು ಸ್ಥಳಕ್ಕೆ ಕರೆಯಿಸಿ ಕಟ್ಟುನಿಟ್ಟಾಗಿ ಎಲ್ಲಾ ಬಸ್‌ಗಳು ಕಂಪ್ಲಿ ಮಾರ್ಗವಾಗಿಯೇ ತೆರಳಬೇಕು. ತಪ್ಪಿದರೆ ಅಂತವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದರು.

ಹೊಸಪೇಟೆ ಈಶಾನ್ಯ ಸಾರಿಗೆ ಸಂಸ್ಥೆಯ ಘಟಕ ವ್ಯವಸ್ಥಾಪಕ ಎಂ.ವೆಂಕಟೇಶ್‌, ಹೊಸಪೇಟೆ ಬಸ್‌ ನಿಲ್ದಾಣದಿಂದ
ಹೊರಡುವ ಎಲ್ಲಾ ಬಸ್‌ಗಳು ರಾಮಸಾಗರ ಮತ್ತು ಕಂಪ್ಲಿ ಮಾರ್ಗವಾಗಿ ಸಂಚರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಲಿಖೀತ ಮೂಲಕ ತಹಶೀಲ್ದಾರ್‌ ಎಂ.ರೇಣುಕಾ, ಪಿಎಸ್‌ಐ ಆರ್‌.ಆರ್‌.ನಾಯ್ಕ ಅವರಿಗೆ ಬರೆದುಕೊಟ್ಟ ನಂತರ ಪ್ರತಿಭಟನಾಕಾರರು ಪ್ರತಿಭಟನೆ ಹಿಂಪಡೆದರು.

ವಿದ್ಯಾರ್ಥಿಗಳು ಬೆಳಗ್ಗೆ 8 ಗಂಟೆಯಿಂದ ಮಧ್ಯಾಹ್ನ 12ರ ವರೆಗೂ ಪ್ರತಿಭಟನೆ ನಡೆಸಿದ್ದರಿಂದ ನೂರಾರು ವಾಹನಗಳು
ಸಾಲುಗಟ್ಟಿ ನಿಂತಿದ್ದವು ಹಾಗೂ ಶಾಲಾ ಕಾಲೇಜುಗಳಿಗೆ ತೆರಳುವ ಮತ್ತು ಸರ್ಕಾರಿ, ಖಾಸಗಿ ನೌಕರಿಗೆ ತೆರಳುವವರಿಗೆ ತೀವ್ರ ತೊಂದರೆ ಉಂಟಾಯಿತು.

ಟಾಪ್ ನ್ಯೂಸ್

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.