ಪ್ರವಾಹದ ಬಳಿಕ ಇಲಿ ಜ್ವರ!
Team Udayavani, Sep 1, 2018, 6:00 AM IST
ತಿರುವನಂತಪುರಂ: ಪ್ರವಾಹದ ಭೀಕರತೆಯಿಂದ ಸಾವರಿಸಿಕೊಳ್ಳುತ್ತಿದ್ದಂತೆಯೇ ಕೇರಳದಲ್ಲಿ ಈಗ ಇಲಿ ಜ್ವರ ಜನರ ಜೀವನದ ಜೊತೆ ಚೆಲ್ಲಾಟ ಆರಂಭಿಸಿದೆ. ಕಳೆದ 3 ದಿನಗಳಲ್ಲಿ 12 ಜನರು ಇಲಿ ಜ್ವರದಿಂದ ಸಾವನ್ನಪ್ಪಿದ್ದು, 150ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಆ.28 ರಂದೇ ರಾಜ್ಯ ಆರೋಗ್ಯ ಇಲಾಖೆ ಈ ಸಂಬಂಧ ಸೂಚನೆ ಹೊರಡಿಸಿದ್ದು, ಯಾವುದೇ ರೀತಿಯ ಜ್ವರ ಕಾಣಿಸಿಕೊಂಡರೂ ಅದನ್ನು ಮೊದಲು ಇಲಿ ಜ್ವರವೇ ಎಂಬುದಾಗಿ ಪರಿಶೀಲಿಸಬೇಕು ಎಂದು ಸೂಚಿಸಿದೆ. ಆರೋಗ್ಯ ಇಲಾಖೆ ಈ ಸೂಚನೆ ಹೊರಡಿಸುತ್ತಿದ್ದಂತೆಯೇ ಆತಂಕ ಜನರಲ್ಲಿ ಮನೆ ಮಾಡಿದೆ.
ಲೆಪ್ಟೋಸ್ಪಿರೋಸಿಸ್ ಎಂದು ಕರೆಯಲಾಗುವ ಈ ರೋಗ ತ್ರಿಶೂರ್, ಪಾಲಕ್ಕಾಡ್, ಕಲ್ಲಿಕೋಟೆ, ಮಳಪ್ಪುರಂ ಹಾಗೂ ಕಣ್ಣೂರು ಜಿಲ್ಲೆಗಳಲ್ಲಿ ಹೆಚ್ಚಾಗಿದ್ದು, ಕಲುಷಿತಗೊಂಡ ನೀರು ಸೇವನೆಯಿಂದ ಹರಡಿದೆ. ಇದು ಸಾಂಕ್ರಾಮಿಕ ರೋಗವಾಗಿದ್ದು, ಸಾಮಾನ್ಯವಾಗಿ ಪ್ರಾಣಿಯಿಂದ ಮನುಷ್ಯನಿಗೆ ನೀರಿನ ಮೂಲಕ ಹರಡುತ್ತದೆ. 20 ವರ್ಷಗಳ ಹಿಂದೆ ಕೂಡ ಇಲಿ ಜ್ವರ ವ್ಯಾಪಕವಾಗಿ ಹರಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Amith Shah: ಮೀಸಲು ಬಗ್ಗೆ ಸುಳ್ಳು ಹೇಳಬೇಡಿ: ಖರ್ಗೆಗೆ ಅಮಿತ್ ಶಾ ಮನವಿ
Written Statement: ಧರ್ಮಾಧಾರಿತ ಮೀಸಲು ಜಾರಿ ಮಾಡದ ಬಗ್ಗೆ ಲಿಖೀತ ಹೇಳಿಕೆ ಕೊಡಿ: ಮೋದಿ
LS Polls: ಉತ್ತರ ಪ್ರದೇಶದಲ್ಲಿ ಗಾಂಧಿ ಕುಟುಂಬದ ಸ್ಪರ್ಧೆಗೆ ಕಸರತ್ತು
Lok Sabha Election: ವಾರಾಣಸಿಯಲ್ಲಿ ರಿಯಲ್ ಮೋದಿ VS ರೀಲ್ ಮೋದಿ ಫೈಟ್!
GST ಎಪ್ರಿಲ್ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್ಟಿ ಸಂಗ್ರಹ !
MUST WATCH
ಹೊಸ ಸೇರ್ಪಡೆ
Amith Shah: ಮೀಸಲು ಬಗ್ಗೆ ಸುಳ್ಳು ಹೇಳಬೇಡಿ: ಖರ್ಗೆಗೆ ಅಮಿತ್ ಶಾ ಮನವಿ
ವೇಷದ ಬಣ್ಣ ಕಳಚುವ ವೇಳೆ ಹೃದಯಾಘಾತ… ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಇನ್ನಿಲ್ಲ
Written Statement: ಧರ್ಮಾಧಾರಿತ ಮೀಸಲು ಜಾರಿ ಮಾಡದ ಬಗ್ಗೆ ಲಿಖೀತ ಹೇಳಿಕೆ ಕೊಡಿ: ಮೋದಿ
LS Polls: ಉತ್ತರ ಪ್ರದೇಶದಲ್ಲಿ ಗಾಂಧಿ ಕುಟುಂಬದ ಸ್ಪರ್ಧೆಗೆ ಕಸರತ್ತು
Lok Sabha Election: ವಾರಾಣಸಿಯಲ್ಲಿ ರಿಯಲ್ ಮೋದಿ VS ರೀಲ್ ಮೋದಿ ಫೈಟ್!