ಲೋಕಲ್‌ ಫೈಟ್‌ಗೆ ಶಾಂತಿಯುತ ಮತದಾನ


Team Udayavani, Sep 1, 2018, 6:20 AM IST

31bnp-14.jpg

ಮೈಸೂರು, ತುಮಕೂರು, ಶಿವಮೊಗ್ಗ ಮಹಾನಗರ ಪಾಲಿಕೆಗಳು, ರಾಜ್ಯದ 21 ಜಿಲ್ಲೆಗಳ 81 ತಾಲೂಕುಗಳ 102 ನಗರ ಸ್ಥಳೀಯ ಸಂಸ್ಥೆಗಳು ಸೇರಿ ಒಟ್ಟು 105 ನಗರ ಸ್ಥಳೀಯ ಸಂಸ್ಥೆಗಳಿಗೆ ಶುಕ್ರವಾರ ಶಾಂತಿಯುತವಾಗಿ ಮತದಾನ ನಡೆದಿದೆ. ಬೆಳಗ್ಗೆ 7ರಿಂದ ಸಂಜೆ 5 ಗಂಟೆವರೆಗೆ ನಡೆದ ಮತದಾನದ ವೇಳೆ ಹಲವು ಸ್ವಾರಸ್ಯಕರ ಸಂಗತಿಗಳು ಕಂಡು ಬಂದವು.

ದೇವದುರ್ಗ: ವಾರ್ಡ್‌ ನಂ.3ರಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಮತ್ತೂಂದು ಕೇಂದ್ರದ ಸಹಾಯಕಿ ನೇರ ಸ್ಪರ್ಧೆಗೆ ಇಳಿದಿರುವುದು ವಿಶೇಷ. ಕಾಂಗ್ರೆಸ್‌ನಿಂದ ನಿವೃತ್ತ ಶಿಕ್ಷಕ ರಂಗಪ್ಪ ಅವರ ಪತ್ನಿ, ಅಂಗನವಾಡಿ ಕಾರ್ಯಕರ್ತೆ ರಂಗಮ್ಮ ಹಾಗೂ ಪಕ್ಕದ ಕೇಂದ್ರದ ಸಹಾಯಕಿ ಶಿವಮ್ಮ ಶರಣಪ್ಪ ಮಧ್ಯೆ ಹಣಾಹಣಿ ಏರ್ಪಟ್ಟಿದೆ.

ಕೊಪ್ಪಳದಲ್ಲಿ ಲಾಠಿ ಪ್ರಹಾರ: ಕೊಪ್ಪಳ ನಗರಸಭೆ 3ನೇ ವಾರ್ಡ್‌ನಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಅಮ್ಜದ್‌ ಪಟೇಲ ಕಳ್ಳ ಮತದಾನ ಮಾಡಿಸುತ್ತಿದ್ದಾರೆಂಬ ಆರೋಪ ಕೇಳಿ ಬಂದಿದ್ದರಿಂದ ಕಾಂಗ್ರೆಸ್‌, ಬಿಜೆಪಿ, ಜೆಡಿಎಸ್‌ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆಯಿತು. ಗುಂಪು ಚದುರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದರು.

ಹಣ ಹಂಚಿದ ಶಿಕ್ಷಕನ ವಿಚಾರಣೆ: ಇಳಕಲ್ಲ ಸಜ್ಜಲಗುಡ್ಡ ಪ್ರಾಥಮಿಕ ಶಾಲೆಯ ಶಿಕ್ಷಕ ಸಂಗನಬಸಪ್ಪ ಲೆಕ್ಕಿಹಾಳ ಎಂಬುವರು ಇಳಕಲ್ಲ ನಗರಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಮನೆಯೊಂದರಲ್ಲಿ ಮಹಿಳೆಯರಿಗೆ ಹಣ ಹಂಚುತ್ತಿದ್ದರು. ಹಣ ಹಂಚುತ್ತಿದ್ದ ವಿಡಿಯೋ ವೈರಲ್‌ ಆಗಿದ್ದು, ಕಾಂಗ್ರೆಸ್‌ನವರು ಈ ಕುರಿತು ಪೊಲೀಸರಿಗೆ ದೂರು ನೀಡಿದ್ದರು. ಸ್ಥಳಕ್ಕೆ ಆಗಮಿಸಿದ ಹುನಗುಂದ ಸಿಪಿಐ ಕರುಣೇಶ ಗೌಡ, ಹಣ ಹಂಚಿದ ಶಿಕ್ಷಕ ಹಾಗೂ ಹಣ ಪಡೆದರು ಎನ್ನಲಾದ ಮಹಿಳೆಯರ ವಿಚಾರಣೆ ನಡೆಸಿದರು.

ಮತದಾನ ಮಾಡಿದ ಬಾಣಂತಿ: ಹುನಗುಂದದ ಪುರಸಭೆ ವಾರ್ಡ್‌ ನಂ.10ರಲ್ಲಿ 4 ದಿನಗಳ ಬಾಣಂತಿ ಮಹಾದೇವಿ ದೇವರಡ್ಡಿ ಎಂಬುವರು ಮತಗಟ್ಟೆ ಕೇಂದ್ರಕ್ಕೆ ಆಗಮಿಸಿ ಮತದಾನ ಮಾಡಿದರು.

ಹೃದಯಾಘಾತ: ವೃದ್ಧೆಸಾವು: ಮಾನ್ವಿ ಪಟ್ಟಣದ ಪುರಸಭೆ ಚುನಾವಣೆಗೆ ವಾರ್ಡ್‌ ಸಂಖ್ಯೆ 14ರಲ್ಲಿ ಮತ ಹಾಕಿ ಹೊರ ಬರುತ್ತಿದ್ದ ಡಿ.ಸತ್ಯವತಿ (60) ಎಂಬುವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಮತದಾನ ವಂಚಿತ ಸುತ್ತೂರು ಶ್ರೀ,ಎಸ್‌.ಎಲ್‌.ಭೈರಪ್ಪ, ನಿವೇದಿತಾ 
ಮೈಸೂರು:
ಅಕ್ಕ ಸಮ್ಮೇಳನದ ಹಿನ್ನೆಲೆಯಲ್ಲಿ ಅಮೆರಿಕ ಪ್ರವಾಸದಲ್ಲಿರುವ ಕಾರಣ ಸುತ್ತೂರು ಶ್ರೀಗಳು ಪಾಲಿಕೆ ಚುನಾವಣೆಯಿಂದ ದೂರ ಉಳಿದರು. ಇವರೊಂದಿಗೆ ವಿದೇಶ ಪ್ರವಾಸದಲ್ಲಿರುವ ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್‌ ಹಾಗೂ ಇಂಗ್ಲೆಂಡ್‌ ಪ್ರವಾಸದಲ್ಲಿರುವ ಹಿರಿಯ ಸಾಹಿತಿ ಡಾ.ಎಸ್‌.ಎಲ್‌.ಭೈರಪ್ಪ ಕೂಡ ಹಕ್ಕು
ಚಲಾವಣೆಯಿಂದ ದೂರ ಉಳಿದರು. ಈ ಮಧ್ಯೆ, ಕಳೆದ ವಿಧಾನಸಭಾ ಚುನಾವಣೆ ವೇಳೆ ಮೈಸೂರು ಜಿಲ್ಲೆಗೆ ಮತದಾನ ಜಾಗೃತಿ ರಾಯಭಾರಿಯಾಗಿ “ಮತದಾನ ಮಾಡಿದವನೇ ನಿಜವಾದ ಬಿಗ್‌ಬಾಸ್‌’ ಎನ್ನುತ್ತಾ ನಾಗರಿಕರಲ್ಲಿ ಮತಜಾಗೃತಿ ಮೂಡಿಸಿದ್ದ ಬಿಗ್‌ಬಾಸ್‌ ಖ್ಯಾತಿಯ ನಿವೇದಿತಗೌಡ, ಈ ಬಾರಿ ಮತ ಚಲಾಯಿಸಲಿಲ್ಲ. ತಮ್ಮ ಗೊಂಬೆ ಆಲ್ಬಂ ಸಾಂಗ್‌ ಆಡಿಯೋ ರಿಲೀಸ್‌ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಸಲುವಾಗಿ ಕುಟುಂಬ ಸಮೇತ ಅವರು ಬೆಂಗಳೂರಿನಲ್ಲಿದ್ದರು. 

ನಗದು, ಬೆಳ್ಳಿ ದೀಪ ವಶ: ಮೈಸೂರು ವಾರ್ಡ್‌ ನಂ 6ರ ವ್ಯಾಪ್ತಿಯ ಗೋಕುಲಂನ ಕಾಂಟೂರ್‌ ರಸ್ತೆ ಬಳಿ ನಂಬರ್‌ ಪ್ಲೇಟ್‌ ಇಲ್ಲದ ಬೈಕ್‌ನಲ್ಲಿ ಬಂದು ಯೋಗೇಶ್‌ ಎಂಬಾತ ಹಣ ಹಂಚುತ್ತಿದ್ದ. ಸುದ್ದಿ ತಿಳಿದು ಸ್ಥಳಕ್ಕೆ ಬಂದ ಪೊಲೀಸರು ಯೋಗೇಶನನ್ನು ಬಂಧಿಸಿ ಆತನಿಂದ 3.14 ಲಕ್ಷ ರೂ.ನಗದು ಮತ್ತು ಮೂರು ಬೆಳ್ಳಿದೀಪಗಳನ್ನು      ವಶಪಡಿಸಿಕೊಂಡಿದ್ದಾರೆ. ವಾರ್ಡ್‌ 6ರ ಜೆಡಿಎಸ್‌ ಅಭ್ಯರ್ಥಿ ಎಸ್‌.ಬಿ.ಎಂ. ಮಂಜು ಅವರಿಗೆ ಇದು ಸೇರಿದ್ದು ಎನ್ನಲಾಗಿದೆ.

ಕಾಲಿಗೆ ಬಿದ್ದ ಅಭ್ಯರ್ಥಿ: ಮೈಸೂರಿನ ಅಗ್ರಹಾರದ ಶ್ರೀಕಾಂತ ಮಹಿಳಾ ಕಾಲೇಜಿನಲ್ಲಿ ತೆರೆಯಲಾಗಿದ್ದ ಪಾಲಿಕೆ ವಾರ್ಡ್‌ ಸಂಖ್ಯೆ 51ರ ಮತಗಟ್ಟೆ 547ರಲ್ಲಿ ಪ್ರಮೋದಾದೇವಿ ಒಡೆಯರ್‌ ಅವರು ಮತದಾನ ಮಾಡಲು ಆಗಮಿಸಿದಾಗ, ಸ್ಥಳದಲ್ಲಿದ್ದ ಕಾಂಗ್ರೆಸ್‌ ಅಭ್ಯರ್ಥಿ ಶ್ರೀನಾಥ್‌ ಬಾಬು, ಪ್ರಮೋದಾದೇವಿ ಅವರ ಕಾಲಿಗೆ ಬಿದ್ದು ನಮಸ್ಕರಿಸಿದರು.

ಆ್ಯಂಬುಲೆನ್ಸ್‌ನಲ್ಲಿ ಬಂದ ವೃದ್ಧೆ
ಉಡುಪಿ ಜಿಲ್ಲೆಯ ಕೋಟ ಸಮೀಪದ ಕಾರ್ತಟ್ಟು ವಾರ್ಡ್‌ನಲ್ಲಿ 90 ವರ್ಷದ ರುದ್ರಮ್ಮ ಶೆಡ್ತಿ ಎಂಬುವರು ಕೋಟ ಜೀವನ್‌ಮಿತ್ರ ಆ್ಯಂಬುಲೆನ್ಸ್‌ ಮೂಲಕ ಮತಗಟ್ಟೆಗೆ ಬಂದು ಮತ ಚಲಾಯಿಸಿ ಆಸ್ಪತ್ರೆಗೆ ವಾಪಸ್ಸಾದರು.

ಪರದಾಡಿದ ಸಿಬ್ಬಂದಿ: ಉಳ್ಳಾಲ ಸಮೀಪದ ಕಲ್ಲಾಪು ಪಟ್ಲ ಮತದಾನ ಕೇಂದ್ರದ ಸಿಬ್ಬಂದಿ ಮತ್ತು ಪೊಲೀಸರು ಶುಕ್ರವಾರ ಮಧ್ಯಾಹ್ನ ಸರಿಯಾದ ಸಮಯಕ್ಕೆ ಆಹಾರ ಸಿಗದೆ ಪರದಾಡಿದರು. ಸೂಕ್ಷ್ಮ ಮತಗಟ್ಟೆಯಾದ ಇಲ್ಲಿಗೆ ಹೆಚ್ಚುವರಿ ಪೊಲೀಸರು ಆಗಮಿಸಿದ್ದರಿಂದ ಆಹಾರದ ಕೊರತೆ ಉಂಟಾಗಿತ್ತು. ಬಳಿಕ, ಉಳ್ಳಾಲ ಠಾಣೆಯ ಪೊಲೀಸ್‌ ಸಿಬ್ಬಂದಿ ಭದ್ರತಾ ಕಾರ್ಯದಲ್ಲಿ ತೊಡಗಿದ್ದ ಪೊಲೀಸರಿಗೆ ತಮ್ಮದೇ ಖರ್ಚಿನಲ್ಲಿ ಆಹಾರ ತರಿಸಿದರು.ಇಲ್ಲಿನ ಮತದಾನ ಕೇಂದ್ರದಲ್ಲಿ ಗರ್ಭಿಣಿಯೊಬ್ಬಳು ಸಿಬ್ಬಂದಿಯಾಗಿದ್ದು, ಅವರೂ ಆಹಾರದ ಕೊರತೆಯಿಂದ ತೊಂದರೆ ಅನುಭವಿಸಿದರು.

ಟಾಪ್ ನ್ಯೂಸ್

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.