ವಿದ್ಯಾರ್ಥಿಗಳ ಸೆಲ್ಫಿ ವಿತ್‌ ಬಸ್‌ಪಾಸ್‌


Team Udayavani, Sep 1, 2018, 6:00 AM IST

btmc-bus.jpg

ಬೆಂಗಳೂರು: ಯಾಕೋ ಈ ಬಾರಿ ವಿದ್ಯಾರ್ಥಿಗಳಿಗೆ ರಿಯಾಯ್ತಿ ಪಾಸು ಗಳಿಸುವ ಅದೃಷ್ಟ ಇದ್ದಂತಿಲ್ಲ. ಆರಂಭದಲ್ಲಿ ಸರ್ಕಾರದ ಉಚಿತ ಪಾಸಿನ ನಿರೀಕ್ಷೆ ಹುಸಿಯಾಯಿತು. ನಂತರ ಬಿಎಂಟಿಸಿ ಪರಿಚಯಿಸಿದ ಹೊಸ ವ್ಯವಸ್ಥೆಯಿಂದ ತಡವಾಯಿತು. ಈಗ ಸ್ವತಃ ವಿದ್ಯಾರ್ಥಿಗಳ ಸೆಲ್ಫಿ ಗೀಳು ತೊಡಕಾಗಿದೆ!

ಪ್ರಸಕ್ತ ಸಾಲಿನಿಂದ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಸ್ಮಾರ್ಟ್‌ಕಾರ್ಡ್‌ ರೂಪದಲ್ಲಿ ವಿದ್ಯಾರ್ಥಿಗಳ ಪಾಸು ವಿತರಣೆಗೆ ನಿರ್ಧರಿಸಿದ್ದು, ಅದಕ್ಕೆ ಪೂರಕವಾಗಿ ಆನ್‌ಲೈನ್‌ನಲ್ಲೇ ಫೋಟೋ ಸಹಿತ ಅರ್ಜಿ ಸಲ್ಲಿಸಲು ಸೂಚಿಸಿದೆ. ಆದರೆ, ವಿದ್ಯಾರ್ಥಿಗಳು ಪಾಸ್‌ಪೋರ್ಟ್‌ ಫೋಟೋ ಹಾಕಬೇಕಾದ ಜಾಗದಲ್ಲಿ ತಮ್ಮ ನೆಚ್ಚಿನ ನಾಯಕ ಅಥವಾ ನಾಯಕಿ ಜತೆ ಒಂದು ಸೆಲ್ಫಿ, ಪಾರ್ಕ್‌ನಲ್ಲಿ ಸ್ನೇಹಿತರೊಂದಿಗೆ ಜಾಲಿಮೂಡ್‌ನ‌ಲ್ಲಿರುವ ಫೋಟೋ, ಬೈಕ್‌ನಲ್ಲಿ ಕುಳಿತ ವಿವಿಧ ಭಂಗಿಗಳು, ಸೆಲ್ಫಿ ವಿತ್‌ ಫ್ಯಾಮಿಲಿ ಫೋಟೋಗಳನ್ನು ಅಪ್‌ಲೋಡ್‌ ಮಾಡಿದ್ದಾರೆ. ಅದೇ ಈಗ ಉಚಿತ ಪಾಸ್‌ಗೆ ವಿತರಣೆಗೆ ಅಡ್ಡಿಯಾಗಿದೆ.

30 ಸಾವಿರಕ್ಕೂ ಅಧಿಕ ಸೆಲ್ಫಿ!
ಇಲಾಖೆ ನೀಡಿರುವ ಮಾಹಿತಿ ಪ್ರಕಾರ ಹೀಗೆ ಬಂದಿರುವ ಫೋಟೋಗಳು 30 ಸಾವಿರಕ್ಕೂ ಹೆಚ್ಚು. ಆದರೆ, ಈ ರೀತಿಯ ಫೋಟೋಗಳನ್ನು ಸ್ಮಾರ್ಟ್‌ಕಾರ್ಡ್‌ ಸಾಫ್ಟ್ವೇರ್‌ ಸ್ವೀಕರಿಸುತ್ತಿಲ್ಲ. ಜತೆಗೆ ಹೋಲಿಕೆಯಾಗದೇ ತಿರಸ್ಕೃತಗೊಳ್ಳುತ್ತಿವೆ. ಇದು ಸಿಬ್ಬಂದಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಶಾಲಾ ವಿದ್ಯಾರ್ಥಿಗಳ ಫೋಟೋಗಳಲ್ಲಿ ಅಷ್ಟಾಗಿ ಈ ಸಮಸ್ಯೆ ಇಲ್ಲ. ಕಾಲೇಜು ವಿದ್ಯಾರ್ಥಿಗಳಲ್ಲೇ ಈ ಸಮಸ್ಯೆ ಹೆಚ್ಚಿದೆ. ಪರಿಣಾಮ ಪಾಸುಗಳ ವಿತರಣೆಯಲ್ಲಿ ವಿಳಂಬವಾಗುತ್ತಿದೆ ಎಂದು ಹೆಸರು ಹೇಳಲಿಚ್ಛಿಸದ ಬಿಎಂಟಿಸಿ ಅಧಿಕಾರಿಯೊಬ್ಬರು ಅಸಹಾಯಕತೆ ವ್ಯಕ್ತಪಡಿಸುತ್ತಾರೆ.

ತಾಂತ್ರಿಕ ಕಾರಣದಿಂದ ಹಿನ್ನಡೆ:
ಶಾಲೆಗಳಿಂದ ಅಪ್‌ಲೋಡ್‌ ಆಗಿರುವ ಅರ್ಜಿಗಳ ಫೋಟೋಗಳು ಬಹುತೇಕ ಸರಿಯಾಗಿವೆ. ಕಾಲೇಜು ವಿದ್ಯಾರ್ಥಿಗಳು ಅಪ್‌ಲೋಡ್‌ ಮಾಡಿರುವ ಫೋಟೋಗಳೇ ಅಸಮರ್ಪಕವಾಗಿವೆ. ಅದರಲ್ಲಿ ತಂದೆಯೊಂದಿಗೆ, ಕುಟುಂಬದ ಸದಸ್ಯರು, ಸ್ಟಾರ್‌ಗಳೊಂದಿಗೆ ತೆಗೆದುಕೊಂಡ ಸೆಲ್ಫಿ ಹೆಚ್ಚಿನ ಸಂಖ್ಯೆಯಲ್ಲಿವೆ. ಇನ್ನು ಹಲವು ಫೋಟೋಗಳು ಉತ್ತಮ ಗುಣಮಟ್ಟದ್ದಾಗಿಲ್ಲ. ಕೆಲವು ಅಸ್ಪಷ್ಟವಾಗಿದ್ದು, ಒಂದಕ್ಕೊಂದು ಹೋಲಿಕೆಯೂ ಆಗುತ್ತಿಲ್ಲ. ಈ ರೀತಿಯ ತಾಂತ್ರಿಕ ಕಾರಣಗಳಿಂದ ಸ್ವಲ್ಪ ಹಿನ್ನಡೆ ಆಗಿದೆ ಎಂದು ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕ ವಿ. ಪೊನ್ನುರಾಜ್‌ ಸ್ಪಷ್ಟಪಡಿಸುತ್ತಾರೆ.

ಅಸ್ಪಷ್ಟವಾದ ಫೋಟೋ ಅಪ್‌ಲೋಡ್‌ ಮಾಡಿರುವ ಅಭ್ಯರ್ಥಿಗಳಿಗೆ ತಕ್ಷಣ ಬದಲಿ ಫೋಟೋ ತಲುಪಿಸುವಂತೆ ಮೆಸೇಜ್‌ ಮಾಡಲಾಗಿದೆ. ಈಗಾಗಲೇ ಅರ್ಜಿ ಸಲ್ಲಿಸಿರುವವರು ಸ್ವೀಕೃತಿ ಪ್ರತಿ ಮತ್ತು ಶಿಕ್ಷಣ ಸಂಸ್ಥೆಯು ನೀಡಿರುವ ಗುರುತಿನಚೀಟಿ ತೋರಿಸಿ ಬಸ್‌ಗಳಲ್ಲಿ ಸಂಚರಿಸಬಹುದು.
– ವಿ. ಪೊನ್ನುರಾಜ್‌,  ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕ

– ವಿಜಯಕುಮಾರ ಚಂದರಗಿ
 

ಟಾಪ್ ನ್ಯೂಸ್

Mussoorie: ಭೀಕರ ರಸ್ತೆ ಅಪಘಾತ… 5 ವಿದ್ಯಾರ್ಥಿಗಳ ದುರಂತ ಅಂತ್ಯ, ಓರ್ವಳ ಸ್ಥಿತಿ ಗಂಭೀರ

Mussoorie: ಭೀಕರ ರಸ್ತೆ ಅಪಘಾತ… 5 ವಿದ್ಯಾರ್ಥಿಗಳ ದುರಂತ ಅಂತ್ಯ, ಓರ್ವಳ ಸ್ಥಿತಿ ಗಂಭೀರ

mangalore international airport

Mangaluru; ವಿಮಾನ ನಿಲ್ದಾಣದಲ್ಲಿ ಬಾಂಬ್ ಸ್ಪೋಟ ಬೆದರಿಕೆ; ಪೊಲೀಸ್ ಭದ್ರತೆ

Pen drive case; ಪ್ರಜ್ವಲ್ ರೇವಣ್ಣ ಹಾಸನ ನಿವಾಸದಲ್ಲಿ ಎಸ್ಐಟಿ ಪರಿಶೀಲನೆ

Pen drive case; ಪ್ರಜ್ವಲ್ ರೇವಣ್ಣ ಹಾಸನ ನಿವಾಸದಲ್ಲಿ ಎಸ್ಐಟಿ ಪರಿಶೀಲನೆ

Raichur; ಅಣ್ಣಾಮಲೈ ಸೆಲ್ಫಿಗಾಗಿ ನೂಕುನುಗ್ಗಲು: ವೇದಿಕೆಯಲ್ಲೇ ಲಾಠಿ ಬೀಸಿದ ಪೊಲೀಸರು

Raichur; ಅಣ್ಣಾಮಲೈ ಸೆಲ್ಫಿಗಾಗಿ ನೂಕುನುಗ್ಗಲು: ವೇದಿಕೆಯಲ್ಲೇ ಲಾಠಿ ಬೀಸಿದ ಪೊಲೀಸರು

MIvsKKR; ಹಲವು ಪ್ರಶ್ನೆಗಳಿವೆ, ಆದರೆ…: ಎಂಟನೇ ಸೋಲಿನ ಬಳಿಕ ಹಾರ್ದಿಕ್ ಪಾಂಡ್ಯ ಹೇಳಿದ್ದೇನು?

MIvsKKR; ಹಲವು ಪ್ರಶ್ನೆಗಳಿವೆ, ಆದರೆ…: ಎಂಟನೇ ಸೋಲಿನ ಬಳಿಕ ಹಾರ್ದಿಕ್ ಪಾಂಡ್ಯ ಹೇಳಿದ್ದೇನು?

ಬಿಗ್‌ಬಾಸ್‌ ವಿಜೇತ ಎಲ್ವಿಶ್‌ ಯಾದವ್‌ ವಿರುದ್ಧ ಅಕ್ರಮ ವರ್ಗಾವಣೆ ಕೇಸ್‌ ದಾಖಲಿಸಿದ ಇ.ಡಿ

ಬಿಗ್‌ಬಾಸ್‌ ವಿಜೇತ ಎಲ್ವಿಶ್‌ ಯಾದವ್‌ ವಿರುದ್ಧ ಅಕ್ರಮ ವರ್ಗಾವಣೆ ಕೇಸ್‌ ದಾಖಲಿಸಿದ ಇ.ಡಿ

nosthush-kenjige

T20 World Cup; ಅಮೆರಿಕ ತಂಡದಲ್ಲಿ ಮೂಡಿಗೆರೆಯ ನಾಸ್ತುಷ್‌ ಕೆಂಜಿಗೆಗೆ ಸ್ಥಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mangalore international airport

Mangaluru; ವಿಮಾನ ನಿಲ್ದಾಣದಲ್ಲಿ ಬಾಂಬ್ ಸ್ಪೋಟ ಬೆದರಿಕೆ; ಪೊಲೀಸ್ ಭದ್ರತೆ

Pen drive case; ಪ್ರಜ್ವಲ್ ರೇವಣ್ಣ ಹಾಸನ ನಿವಾಸದಲ್ಲಿ ಎಸ್ಐಟಿ ಪರಿಶೀಲನೆ

Pen drive case; ಪ್ರಜ್ವಲ್ ರೇವಣ್ಣ ಹಾಸನ ನಿವಾಸದಲ್ಲಿ ಎಸ್ಐಟಿ ಪರಿಶೀಲನೆ

ಸಮರ್ಥ ರಾಷ್ಟ್ರ – ಸಮಗ್ರ ಅಭಿವೃದ್ಧಿಗಾಗಿ ಮತ್ತೂಮ್ಮೆ ಸಂಸತ್‌ಗೆ ಕಳುಹಿಸಿ: B.Y. ರಾಘವೇಂದ್ರ

ಸಮರ್ಥ ರಾಷ್ಟ್ರ – ಸಮಗ್ರ ಅಭಿವೃದ್ಧಿಗಾಗಿ ಮತ್ತೂಮ್ಮೆ ಸಂಸತ್‌ಗೆ ಕಳುಹಿಸಿ: B.Y. ರಾಘವೇಂದ್ರ

Lok Sabha Election: ಗೆಲುವು ಸಾಧಿಸಿ ಮೋದಿ ಕೈ ಬಲಪಡಿಸುವೆ: ಗಾಯತ್ರಿ ಸಿದ್ದೇಶ್ವರ

Lok Sabha Election: ಗೆಲುವು ಸಾಧಿಸಿ ಮೋದಿ ಕೈ ಬಲಪಡಿಸುವೆ: ಗಾಯತ್ರಿ ಸಿದ್ದೇಶ್ವರ

Tragedy: ಬಿಸಿಲಿನ ತಾಪಕ್ಕೆ ಬಿಎಂಟಿಸಿ ಕಂಡಕ್ಟರ್ ಮಲ್ಲಯ್ಯ ಮೃತ್ಯು…

Tragedy: ಬಿಸಿಲಿನ ತಾಪ… ಕುಸಿದು ಬಿದ್ದು ಬಿಎಂಟಿಸಿ ಕಂಡಕ್ಟರ್ ಮಲ್ಲಯ್ಯ ಮೃತ್ಯು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Desi Swara: ಹೆಮ್ಮೆಯ ದುಬೈ ಕನ್ನಡ ಸಂಘ- ಶಾರ್ಜಾ ಮಳೆ ಸಂತ್ರಸ್ಥರಿಗೆ ಸಹಾಯ ಹಸ್ತ

Desi Swara: ಹೆಮ್ಮೆಯ ದುಬೈ ಕನ್ನಡ ಸಂಘ- ಶಾರ್ಜಾ ಮಳೆ ಸಂತ್ರಸ್ಥರಿಗೆ ಸಹಾಯ ಹಸ್ತ

Mussoorie: ಭೀಕರ ರಸ್ತೆ ಅಪಘಾತ… 5 ವಿದ್ಯಾರ್ಥಿಗಳ ದುರಂತ ಅಂತ್ಯ, ಓರ್ವಳ ಸ್ಥಿತಿ ಗಂಭೀರ

Mussoorie: ಭೀಕರ ರಸ್ತೆ ಅಪಘಾತ… 5 ವಿದ್ಯಾರ್ಥಿಗಳ ದುರಂತ ಅಂತ್ಯ, ಓರ್ವಳ ಸ್ಥಿತಿ ಗಂಭೀರ

mangalore international airport

Mangaluru; ವಿಮಾನ ನಿಲ್ದಾಣದಲ್ಲಿ ಬಾಂಬ್ ಸ್ಪೋಟ ಬೆದರಿಕೆ; ಪೊಲೀಸ್ ಭದ್ರತೆ

Pen drive case; ಪ್ರಜ್ವಲ್ ರೇವಣ್ಣ ಹಾಸನ ನಿವಾಸದಲ್ಲಿ ಎಸ್ಐಟಿ ಪರಿಶೀಲನೆ

Pen drive case; ಪ್ರಜ್ವಲ್ ರೇವಣ್ಣ ಹಾಸನ ನಿವಾಸದಲ್ಲಿ ಎಸ್ಐಟಿ ಪರಿಶೀಲನೆ

Desi Swara: ವಸಂತನಾಗಮನ- ಇಂಗ್ಲೆಂಡಿನಲ್ಲಿ ಹರುಷದಿ ಸಂಭ್ರಮಿಸಿದ ಕನ್ನಡ ಜನ

Desi Swara: ವಸಂತನಾಗಮನ- ಇಂಗ್ಲೆಂಡಿನಲ್ಲಿ ಹರುಷದಿ ಸಂಭ್ರಮಿಸಿದ ಕನ್ನಡ ಜನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.