ಚಂದಗುಳಿಯ ಘಂಟೆ ಗಣಪತಿ 


Team Udayavani, Sep 1, 2018, 11:43 AM IST

8.jpg

ಸಣ್ಣ ಗಾತ್ರದ ಗಂಟೆಯಿಂದ ಆರಂಭಿಸಿ ಭಾರೀ ತೂಕದ ಗಂಟೆಯವರೆಗೆ, ಕಣ್ಣು ಹಾಯಿಸಿದ ಕಡೆಯಲ್ಲೆಲ್ಲ ಗಂಟೆಗಳನ್ನು ಹೊಂದಿರುವುದು ಚಂದಗುಳಿಯ ಗಣೇಶ ದೇವಾಲಯದ ವೈಶಿಷ್ಟé. ಈ ದೇವರಿಗೆ ರಾಜ್ಯದಲ್ಲಿ ಮಾತ್ರವಲ್ಲ, ಗೋವಾ-ಮಹಾರಾಷ್ಟ್ರಗಳಲ್ಲಿ ಕೂಡ ಸಾವಿರಾರು ಮಂದಿ ಭಕ್ತರಿದ್ದಾರೆ.  

ಏಕದಂತ, ಗಣೇಶ, ಗಣಪತಿ, ವಕ್ರತುಂಡ ಎಂದೆಲ್ಲಾ ಕರೆಯುವ ವಿನಾಯಕನಿರುವ ಪವಿತ್ರ ಪಾವನ ಶ್ರೀಕ್ಷೇತ್ರವೇ ಈ ಚಂದಗುಳಿ.  ಇಲ್ಲಿರುವ ಶ್ರೀ ಘಂಟೆ ಗಣಪತಿಯ ದೇವಾಲಯವು ಉತ್ತರ ಕನ್ನಡ ಜಿಲ್ಲೆಯ ಪ್ರಸಿದ್ದ ಧಾರ್ಮಿಕ ಸ್ಥಳಗಳಲ್ಲಿ ಒಂದಾಗಿದೆ. ಭಕ್ತಿಯಿಂದ ಬೇಡಿ ಬರುವವರ ಇಷ್ಟಾರ್ಥಗಳನ್ನು ಪೂರೈಸುವ ವರಪ್ರದಾಯಕನಾಗಿ ತನ್ನ ಭಕ್ತರಿಗೆ ಸದಾ ಆಭಯ ಹಸ್ತ ನೀಡುವ ಈ ಗಣಪ, ಬರೀ ಘಂಟೆಗಳಿಗೆ ಒಲಿಯುವವನು ಎಂದರೆ ನೀವು ನಂಬಲೇ ಬೇಕು. 

ನೌಕರಿ ಸಿಗಲಿಲ್ಲವೇ? ಮದುವೆಯ ಸಮಸ್ಯೆಯೇ, ಮಕ್ಕಳಾಗಲಿಲ್ಲವೆಂಬ ಚಿಂತೆಯೆ? ಬಿಜಿನೆಸ್‌ ಕೈಹಿಡಿಯಲಿಲ್ಲವೆ? ಹೀಗೆ ತನ್ನ ಭಕ್ತರ ಸಮಸ್ಯೆಯೇನೇ ಇರಲಿ ಅದನ್ನು ಪರಿಹರಿಸಲು ಈ ಗಣಪ ಕೇಳುವುದು ಬರೀ ಘಂಟೆ ಅಷ್ಟೆ.  ನಿಮ್ಮ ಶಕಾöನುಸಾರ ಯಾವುದೇ ಗಾತ್ರದ ಘಂಟೆಯನ್ನು ಈ ದೇವರಿಗೆ  ಹರಕೆ ಮೂಲಕ ತೀರಿಸಿದರೆ ಸಾಕು: ನಿಮ್ಮ ಸಮಸ್ಯೆಗಳಿಗೆ ಪರಿಹಾರ ಸಿಗುತ್ತದೆ ಎಂದು ಭಕ್ತಾದಿಗಳು ನಂಬಿದ್ದಾರೆ.  

ಅಪಾರ ಭಕ್ತರನ್ನು ಹೊಂದಿರುವ ಈ ಗಣಪ, ಹಚ್ಚ ಹಸಿರಿನಿಂದ ಕೂಡಿರುವ ಸುಂದರ ಪ್ರಕೃತಿಯ ಮಧ್ಯೆ ನೆಲೆನಿಂತಿ¨ªಾನೆ. ಈ ದೇವಾಲಯದ ಸುತ್ತಲೂ ಎಲ್ಲಿ ನೋಡಿದರಲ್ಲಿ ಭಕ್ತಾದಿಗಳು ಸಲ್ಲಿಸಿ ಹೋದ ಘಂಟೆಗಳ ದೊಡ್ಡ ಸಾಲೇ ಕಾಣುತ್ತದೆ. ಅತಿ ಚಿಕ್ಕ ಗಾತ್ರದ ಘಂಟೆಗಳಿಂದ ಹಿಡಿದು ದೊಡ್ಡ ದೊಡ್ಡ ಘಂಟೆಗಳು ಇಲ್ಲುಂಟು.  ಪ್ರವೇಶ ದ್ವಾರದಲ್ಲೂ ಘಂಟೆ, ಕಿಟಕಿಗಳ ಮೇಲ್ಭಾಗಗಳಿಗೂ ಘಂಟೆ, ಅಷ್ಟೇ ಅಲ್ಲ, ದೇವಾಲಯದ ಛಾವಣಿಗಳಲ್ಲೂ ಸಾಲುಸಾಲು ಘಂಟೆಗಳು, ಗೋಪುರದ ಸುತ್ತಲೂ ಘಂಟೆಗಳು.  ಹೀಗೆ, ಕಣ್ಣು ಹಾಯಿಸಿದ ಕಡೆಯಲ್ಲೆಲ್ಲ ವಿವಿಧ ಗಾತ್ರದ  ಘಂಟೆಗಳ ಸಾಲನ್ನು ನೋಡುವುದೇ ಒಂದು ವಿಶೇಷ ಅನುಭವ. ಬಹಳಷ್ಟು ಜನ ಅವರ ಹರಕೆ ಪೂರೈಸಿದ ನಂತರ ಅರ್ಪಿಸಿದ ಘಂಟೆಗಳಿವು. 

ಈ ಘಂಟೆ ಗಣಪ ಕರ್ನಾಟಕದಲ್ಲಿ ಮಾತ್ರವಲ್ಲ, ದೂರ ದೂರದ ರಾಜ್ಯಗಳಲ್ಲೂ ಅಪಾರ  ಭಕ್ತರನ್ನು ಹೊಂದಿ¨ªಾನೆ. ಪ್ರತಿ ದಿನವೂ ವಿಶೇಷ ಪೂಜೆ ನಡೆಯುಲ ಈ ದೇವಸ್ಥಾನದಲ್ಲಿ ಸಂಕಷ್ಟ ಚತುರ್ಥಿ, ವಿನಾಯಕ ಚತುರ್ಥಿಗಳಂದು ವಿಶೇಷ ಪೂಜೆಗಳು ನಡೆಯುತ್ತವೆ.  ಅಷ್ಟೇ ಅಲ್ಲದೇ,  ಕ್ಷೇತ್ರದಲ್ಲಿ ವಿವಿಧ ಧಾರ್ಮಿಕ ಕಾರ್ಯಗಳು, ಮದುವೆ, ಸಮಾರಂಭಗಳು ಕೂಡ ನಡೆಯುತ್ತವೆ. ಈ ಗಣಪನ ಮಹಿಮೆ ಅರಿತ ನೆರೆಯ ಗೋವಾ, ಮಹಾರಾಷ್ಟ್ರಗಳಿಂದ ಕೂಡ ಪ್ರತಿನಿತ್ಯವೂ ಸಾಕಷ್ಟು ಭಕ್ತಾದಿಗಳು ಈ ಕ್ಷೇತ್ರಕ್ಕೆ ಬರುತ್ತಿರುತ್ತಾರೆ. 

ತಲುಪುವ ಮಾರ್ಗ : ಯಲ್ಲಾಪುರದಿಂದ ಕೇವಲ 17 ಕಿ.ಮೀ ದೂರದಲ್ಲಿ ಚಂದಗುಳಿ ದೇವಸ್ಥಾನವಿದೆ. ಇಲ್ಲಿಗೆ ತಲುಪಲು ಮಾಗೋಡು ಜಲಪಾತದ ಮಾರ್ಗದಲ್ಲಿ ಬರಬಹುದು. ಅಲ್ಲಿಗೂ ಕೂಡ ಸಾಕಷ್ಟು ಬಸ್ಸುಗಳು ಇವೆ. 

ಆಶಾ ಎಸ್‌.ಕುಲಕರ್ಣಿ

ಟಾಪ್ ನ್ಯೂಸ್

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bahumuki

ಅರಮನೆಯಂಥ ಬಂಗಲೆ ಇದೆ, ಏನುಪಯೋಗ?

ಮೊದಲ ಗುರಿಯೇ ಕೊನೆಯದೂ ಆಗಿದೆ!

ಮೊದಲ ಗುರಿಯೇ ಕೊನೆಯದೂ ಆಗಿದೆ!

bahumuki

ಹುಡುಗಿಯ ಚುಂಬನ ಮತ್ತು ಆಗಸದ ತಾರೆ

ಟೊಮೇಟೊ ಹಣ್ಣಿನ ಗೊಜ್ಜು

ಟೊಮೇಟೊ ಹಣ್ಣಿನ ಗೊಜ್ಜು

ದೀಪವನ್ನೇ ಏಕೆ ಬಳಸಬೇಕು?

ದೀಪವನ್ನೇ ಏಕೆ ಬಳಸಬೇಕು?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ARMY (2)

ಕಾಶ್ಮೀರದ ಉಧಂಪುರದಲ್ಲಿ ಗ್ರಾಮ ರಕ್ಷಣ ಸಿಬಂದಿ ಹತ್ಯೆ

arrested

ಮಹಾದೇವ್‌ ಆ್ಯಪ್‌ ಕೇಸು: ನಟ ಸಾಹಿಲ್‌ ಖಾನ್‌ ಬಂಧನ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.