ದ್ರಾವಿಡ್ ಗರಡಿಯ ಖಲೀಲ್ ಅಹಮದ್ ಏಶ್ಯಾಕಪ್ ಗೆ ಆಯ್ಕೆ


Team Udayavani, Sep 1, 2018, 4:56 PM IST

khaleel.jpg

ಖಲೀಲ್ ಅಹಮದ್. ಈ ಹೆಸರು ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಪರಿಚಿತ ಹೆಸರು. 2016ರ ಅಂಡರ್ 19 ಕ್ರಿಕೆಟ್ ವಿಶ್ವಕಪ್ ನಲ್ಲಿ ಆಡಿ ಗಮನ ಸೆಳೆದಿದ್ದ ಈ ಎಡಗೈ ವೇಗಿ ಈಗ ಮತ್ತೆ ಸುದ್ದಿಯಾಗಿದ್ದಾರೆ. ಸಪ್ಟೆಂಬರ್ 15 ರಿಂದ ದುಬೈನಲ್ಲಿ ನಡೆಯುವ ಏಶ್ಯಾಕಪ್ ಏಕದಿನ ಸರಣಿಗೆ ಖಲೀಲ್ ಅಹಮದ್ ಟೀಂ ಇಂಡಿಯಾಗೆ ಆಯ್ಕೆಯಾಗಿದ್ದಾರೆ. 

ಮೂಲತಃ ರಾಜಸ್ಥಾನದವರಾದ ಖಲೀಲ್ ಹುಟ್ಟಿದ್ದು 1997ರ ಡಿಸೆಂಬರ್ 5ರಂದು. ಅಂಡರ್ 16 ಮತ್ತು ಅಂಡರ್ 19 ಕೂಟಗಳಲ್ಲಿ ರಾಜಸ್ಥಾನ ತಂಡವನ್ನು ಪ್ರತಿನಿಧಿಸಿದ್ದರು. 2016ರ ಅಂಡರ್ 19 ಕ್ರಿಕೆಟ್ ವಿಶ್ವಕಪ್ ನಲ್ಲಿ ಭಾರತದ ಪ್ರಮುಖ ವೇಗಿಯಾಗಿದ್ದರು. ರಾಹುಲ್ ದ್ರಾವಿಡ್ ಕೋಚಿಂಗ್ ನಲ್ಲಿ ಖಲೀಲ್ ಅಹಮದ್ ಭಾರತ ಟೂರ್ನಿಯಲ್ಲಿ ಫೈನಲ್ ಗೇರಲು ಪ್ರಮುಖ ಪಾತ್ರ ವಹಿಸಿದ್ದರು. 


ಪ್ರಥಮ ದರ್ಜೆ ಕ್ರಿಕೆಟ್ ನಲ್ಲಿ ಅಷ್ಟೇನು ಗಮನ ಸೆಳೆಯದ ಖಲೀಲ್ ಎರಡು ಪಂದ್ಯಗಳಿಂದ ಎರಡು ವಿಕಟ್ ಅಷ್ಟೇ ಪಡೆದಿದ್ದಾರೆ. ಆದರೆ ಲಿಸ್ಟ್ ಎ ಕ್ರಿಕೆಟ್ ನಲ್ಲಿ 17 ಪಂದ್ಯಗಳಿಂದ ಬರೋಬ್ಬರಿ 28 ವಿಕೆಟ್ ಕಬಳಿಸಿದ್ದಾರೆ. ದೇಶೀಯ ಟಿ20ಯ 12 ಪಂದ್ಯಗಳಿಂದ 17 ವಿಕೆಟ್ ಉರುಳಿಸಿರುವ ಖಲೀಲ್ ಅಹಮದ್ ಸಾಧನೆ ಕಡಿಮೆಯೇನಲ್ಲ.  2018ರ ಸೈಯ್ಯದ್ ಮುಶ್ತಾಕ್ ಅಲಿ ಕೂಟದಲ್ಲಿ ಖಲೀಲ್ 10 ಪಂದ್ಯಗಳಿಂದ 17 ವಿಕಟ್ ಉರುಳಿಸಿದ ಖಲೀಲ್ ಎಕಾನಮಿ ರೇಟ್ ಕೇವಲ 6.77.

ಭಾರತ ಎ ತಂಡದಲ್ಲಿ ಸಾಧನೆ:
ಭಾರತ ಎ ತಂಡದ ಪರವಾಗಿ ಖಲೀಲ್ ತೋರ್ಪಡಿಸಿದ ಅದ್ಭುತ ಸಾಧನೆ ರಾಷ್ಟ್ರೀಯ ಆಯ್ಕೆಗಾರರ ಚಿತ್ತ ಸೆಳೆಯುವಲ್ಲಿ ಕಾರಣವಾಯಿತು. ಎ ತಂಡದ ಪರವಾಗಿ ಇಂಗ್ಲೆಂಡ್ ಸರಣಿ ಮತ್ತು ಇತ್ತೀಚೆಗೆ ಮುಗಿದ ಚತುಷ್ಕೋನ ಸರಣಿಯಲ್ಲಿ ಉತ್ತಮ ಪ್ರದರ್ಶನ ತೊರಿದ್ದರು.  ಕಳೆದ 9 ಪಂದ್ಯಗಳಿಂದ 15 ವಿಕೆಟ್ ಪಡೆದ ಖಲೀಲ್ ಪ್ರತೀ ಪಂದ್ಯದಲ್ಲೂ ವಿಕೆಟ್ ಕಬಳಿಸಿದ್ದಾರೆ ಎನ್ನುವುದು ವಿಶೇಷ. 

ಐಪಿಎಲ್ ನಲ್ಲೂ ಆಡಿರುವ ಖಲೀಲ್ ಅಹಮದ್ ಕಳೆದ ಆವೃತ್ತಿಯಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡದ ಭಾಗವಾಗಿದ್ದರು. 20 ಲಕ್ಷ ಮೂಲ ಬೆಲೆ ಹೊಂದಿದ್ದ ಖಲೀಲ್ ಬಿಕರಿಯಾಗಿದ್ದು ಮಾತ್ರ ಬರೋಬ್ಬರಿ ಮೂರೂ ಕೋಟಿ ರೂಪಾಯಿಗಳಿಗೆ. 

ಭಾರತದ ಮಾಜಿ ಎಡಗೈ ವೇಗಿ ಜಹೀರ್ ಖಾನ್ ಅವರನ್ನು ಬಹುವಾಗಿ ಮೆಚ್ಚುವ ಖಲೀಲ್ ಅಹಮದ್ ಕೂಡಾ ಎಡಗೈ ವೇಗಿ. ತಾನು ವೇಗದ ಬೌಲರ್ ಆಗಲು ಜಹೀರ್ ಖಾನ್ ಸ್ಪೂರ್ತಿ ಎನ್ನುವ ಖಲೀಲ್ ಬೌಲಿಂಗ್ ಶೈಲಿ ಕೂಡಾ ಜಹೀರ್ ಬೌಲಿಂಗ್ ಶೈಲಿಯನ್ನು ಹೋಲುತ್ತದೆ ಎನ್ನುವುದನ್ನು ಇಲ್ಲಿ ಗಮನಿಸಬಹುದು.  

ಟಾಪ್ ನ್ಯೂಸ್

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kejriwal 2

CM ‘ಅಲಂಕಾರಿಕವಲ್ಲ’: ಕೇಜ್ರಿಗೆ ಮತ್ತೆ ಕೋರ್ಟ್‌ ಗುದ್ದು

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

1-wqqwqwqeqwe

Kodava Hockey: ಚೇಂದಂಡಕ್ಕೆ 3ನೇ ಪ್ರಶಸ್ತಿ

1-wwwewqe

IPL; ವಿಲ್‌ ಜಾಕ್ಸ್‌ ಭಾರೀ ಸಂಚಲನ: ಆರೇ ನಿಮಿಷದಲ್ಲಿ ಅರ್ಧ ಶತಕ!

BCCI

T20 World Cup: ಇಂದು ಭಾರತ ತಂಡ ಪ್ರಕಟ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.