15ವರೆಗೆ ಹಾಸನ-ಮಂಗಳೂರು ರೈಲು ರದ್ದು


Team Udayavani, Sep 1, 2018, 5:05 PM IST

has-1.jpg

ಹಾಸನ: ಜಿಲ್ಲೆಯ ಸಕಲೇಶಪುರ ತಾಲೂಕಿನಲ್ಲಿ ಇತ್ತೀಚೆಗೆ ಸುರಿದ ಭಾರೀ ಮಳೆಯಿಂದಾಗಿ ರೈಲು ಹಳಿಗಳ ಮೇಲೆ ಸಾಕಷ್ಟು ಭೂ ಕುಸಿತವಾಗಿದೆ. ಹೀಗಾಗಿ ತೆರವು ಕಾರ್ಯಾಚರಣೆ ನಿರಂತರವಾಗಿ ನಡೆಯುತ್ತಿದ್ದು, ಈಗಾಗಲೇ ರದ್ದುಗೊಂಡಿರುವ ಹಾಸನ – ಮಂಗಳೂರು ನಡುವೆ ರೈಲು ಸಂಚಾರ ವನ್ನು ಸೆ.15ರವರೆಗೆ ಮುಂದೂಡಲಾಗಿದೆ.

ಆ.14 ಸುರಿದ ಭಾರೀ ಮಳೆಯಿಂದ ಸಕಲೇಶ ಪುರ – ಸುಬ್ರಹ್ಮಣ್ಯ ನಡುವಿನ ಘಟ್ಟ ಪ್ರದೇಶದ 56 ಕಿ.ಮೀ. ರೈಲು ಮಾರ್ಗದಲ್ಲಿ 68 ಕಡೆ ರೈಲು ಹಳಿಗಳ ಮೇಲೆ ಗುಡ್ಡ, ಮರ, ಬೃಹತ್‌ ಬಂಡೆ, ಭಾರೀ ಪ್ರಮಾಣದಲ್ಲಿ ಮಣ್ಣು ಕುಸಿತವಾಗಿದೆ. ರೈಲು ಸಿಬ್ಬಂದಿ ಪರಿಹಾರ ಕಾರ್ಯಾಚರಣೆಯನ್ನು ಹಗಲು ರಾತ್ರಿ ನಡೆಸುತ್ತಿದ್ದಾರೆ. ಈಗಾಗಲೇ 40 ಕಡೆ ಮಣ್ಣು ತೆರವುಗೊಳಿ ಸಲಾಗಿದೆ. ಇನ್ನೂ 28 ಕಡೆ ಹಳಿಗಳ ಮೇಲೆ ಬಿದ್ದಿರುವ ಮಣ್ಣು, ಕಲ್ಲು, ಮರಗಳನ್ನು ರೈಲ್ವೆ ಸಿಬ್ಬಂದಿ, ಸ್ಥಳೀಯ ಕಾರ್ಮಿಕರು ಯಂತ್ರೋಪಕರಣಗಳನ್ನು ಬಳಸಿ ತೆರವು ಮಾಡುವ ಕಾರ್ಯಾ ಚರಣೆಯನ್ನು ಮುಂದು ವರಿಸಿದ್ದಾರೆ.

12 ದಿನ ತೆರವು: ಕೆಲವು ಕಡೆ ಲೋಡ್‌ಗಟ್ಟಲೇ ಮಣ್ಣು ಹಳಿಯ ಮೇಲೆ ಕುಸಿತವಾಗಿರುವ ಕಾರಣ ಅದನ್ನು ಹೊರಗಡೆ ಸಾಗಿಸುವುದೇ ಸವಾಲಾಗಿದೆ. ಕೆಲವು ಕಡೆ ಬಂಡೆಗಳು ಉರುಳಿ ಬಿದ್ದು, ಹಳಿಯೇ ಬಗ್ಗಿದೆ. ಹೀಗಾಗಿ ತೆರವು ಮಾಡಲು ವಿಳಂಬವಾಗುತ್ತಿದೆ. ಹೀಗಾಗಿ ಮಣ್ಣು ತೆರವು ಕಾರ್ಯಾಚರಣೆ ಪೂರ್ಣಗೊಳ್ಳಲು ಇನ್ನೂ 10-12 ದಿನಗಳು ಬೇಕಾಗಬಹುದು ಎನ್ನಲಾಗುತ್ತಿದೆ. ಬೆಂಗಳೂರು – ಕಣ್ಣೂರು- ಕಾರವಾರ ಎಕ್ಸ್‌ಪ್ರೆಸ್‌ ರೈಲು ಸಂಚಾರವನ್ನು ಸೆ.11ರವರೆಗೆ ರದ್ದುಪಡಿಸ ಲಾಗಿದೆ. ಕಣ್ಣೂರು-ಕಾರವಾರ – ಬೆಂಗಳೂರು ಎಕ್ಸ್‌ ಪ್ರಸ್‌ ರೈಲು ಸಂಚಾರ ಸೆ.15ರವರೆಗೂ ಆರಂಭವಾಗು ವುದೇ ಇಲ್ಲ. ಯಶವಂತಪುರ – ಕಾರವಾರ ಎಕ್ಸ್‌ ಪ್ರಸ್‌, ಕಾರವಾರ – ಯಶವಂತಪುರ ಎಕ್ಸ್‌ಪ್ರೆಸ್‌ ಸೆ.14ರ ವರೆಗೂ ಸಂಚಾರ ಮಾಡುವುದಿಲ್ಲ. ಹೀಗೆ 8 ರೈಲುಗಳು ಈ ಮಾರ್ಗದಲ್ಲಿ ರದ್ದಾಗಿವೆ. ಆದರೆ, ಯಶ ವಂತಪುರ – ಕಾರವಾರ ಎಕ್ಸ್‌ಪ್ರೆಸ್‌ ರೈಲು ಸಂಚಾರ ಹಾಸನದವರೆಗೆ ಮುಂದುವರಿಯುತ್ತದೆ ಎಂದು ವಿವರ ನೀಡಲಾಗಿದೆ.

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.