ದುಶ್ಚಟಗಳಿಗೆ ಬಲಿಯಾಗದಿರಿ: ಲಿಂಗಣ್ಣ
Team Udayavani, Sep 1, 2018, 5:45 PM IST
ಮಾಯಕೊಂಡ: ವಿದ್ಯಾರ್ಥಿಗಳು ದುಶ್ಚಟಗಳಿಗೆ ಬಲಿಯಾಗದೆ ಉತ್ತಮ ಶಿಕ್ಷಣ ಪಡೆಯಬೇಕು ಎಂದು ಶಾಸಕ ಪ್ರೊ| ಲಿಂಗಣ್ಣ ಕರೆ ನೀಡಿದರು. ಗ್ರಾಮದ ಬಸವೇಶ್ವರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ 2018-19 ನೇ ಸಾಲಿನ ಸಾಂಸ್ಕೃತಿಕ, ಕ್ರೀಡೆ ಹಾಗೂ ರೋವರ್ಮತ್ತು ರೇಂಜರ್ ಚಟುವಟಿಕೆಗಳನ್ನು ಉದ್ಘಾಟಿಸಿ ಮಾತನಾಡಿದ ಅವರು, ನಮ್ಮ ದೇಶದಲ್ಲಿ ವಿದ್ಯಾವಂತರಿಗೆ ನೌಕರಿ ದೊರಕುವುದು ಕಷ್ಟಕರವಾಗಿದೆ.
ಜೀವನದಲ್ಲಿ ಪ್ರತಿಭಾವಂತರಿಗೆ ಅವಕಾಶಗಳು ಸಿಗುತ್ತವೆ. ಕೀಳರಿಮೆ ತೊರೆದು, ಉತ್ತಮ ವಿದ್ಯಾಭ್ಯಾಸ ಮಾಡಿ, ಸರ್ಕಾರದ ಸೌಲಭ್ಯಗಳನ್ನು ಪಡೆದು ತಂದೆ-ತಾಯಿ ಹಾಗೂ ಸಮಾಜಕ್ಕೆ ಹೆಸರು ತರುವಂತೆ ಉತ್ತಮರಾಗಬೇಕು ಎಂದರು.
ದಾವಣಗೆರೆ ದವನ್ ಕಾಲೇಜು ಪ್ರಾಚಾರ್ಯ ಪ್ರೊ| ಬಾತಿ ಬಸವರಾಜು ಮಾತನಾಡಿ. ಕನ್ನಡ ಭಾಷೆಯ ಜತೆಗೆ ಪ್ರಮುಖವಾಗಿ ಇಂಗ್ಲಿಷ್ ಭಾಷೆ ಕಲಿಯಬೇಕು. ಹಾಗೂ ಎಂದೂ ಪಲಾಯನವಾದ ವ್ಯಕ್ತಿತ್ವ ಬೇಡ ಎಂದರು. ಪ್ರಾಚಾರ್ಯ ಪಾಲಾಕ್ಷಿನಾಯ್ಕ, ಆಂಗ್ಲ ಪ್ರಾಧ್ಯಾಪಕ ಡಾ| ಚಂದ್ರಶೇಖರಪ್ಪ ಮಾತನಾಡಿದರು.
ಗ್ರಾಪಂ ಸದಸ್ಯ ಸಂಡೂರ್ ರಾಜಶೇಖರ್, ಡಾ| ಸುಪ್ರಿಯಾ ಆರ್, ರಾಘವೇಂದ್ರರಾವ್, ಮಂಜುನಾಥ, ಪ್ರಸನ್ನ, ನಟರಾಜು, ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷ ಅಶೋಕ, ಮುಖಂಡರಾದ ನೀಲಪ್ಪ, ಕಾಲೇಜಿನ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಇದ್ದರು. ಉಷಾ, ಪೂಜಾ, ಸಿಂಧು ಸಂಗಡಿಗರು ಪ್ರಾರ್ಥಿಸಿದರು.
ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ದ್ವಿತೀಯ ದರ್ಜೆ ಸಹಾಯಕ ಎಚ್.ಎಸ್. ತಿಲಕ್ ನಗದು ಬಹುಮಾನ ನೀಡಿ ಗೌರವಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು
Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
MUST WATCH
ಹೊಸ ಸೇರ್ಪಡೆ
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ