ಉದ್ಘರ್ಷದಲ್ಲಿ ಕೇವಲ 20 ನಿಮಿಷ ಡೈಲಾಗ್‌!


Team Udayavani, Sep 4, 2018, 11:34 AM IST

udgarsha.jpg

ಅದು ಹೊಸ ವರ್ಷದ ದಿನ. ಅಲ್ಲೊಂದು ರೆಸಾರ್ಟ್‌ನಲ್ಲಿ ಒಂದು ಕೊಲೆಯಾಗುತ್ತೆ. ಆಮೇಲೇನಾಗುತ್ತೆ ಅನ್ನೊದೇ ಸಸ್ಪೆನ್ಸ್‌. ಕೇವಲ ಹತ್ತು ನಿಮಿಷದಲ್ಲಿ ನಡೆಯುವ ಘಟನೆಯನ್ನಿಟ್ಟುಕೊಂಡು ಒಂದು ಥ್ರಿಲ್ಲರ್‌ ಸಿನಿಮಾ ಮಾಡಲಾಗಿದೆ. ಅಷ್ಟೇ ಆಗಿದ್ದರೆ, ಇಷ್ಟೊಂದು ಹೇಳುವ ಅಗತ್ಯವಿರುತ್ತಿರಲಿಲ್ಲ. ಸಿನಿಮಾ ಅಂದಮೇಲೆ ಮಾತುಕತೆ ಸಹಜ. ಆದರೆ, ಇಲ್ಲಿ ಕೇಳಿಬರುವ ಸಂಭಾಷಣೆ ಕೇವಲ ಇಪ್ಪತ್ತು ನಿಮಿಷಗಳದ್ದಷ್ಟೇ!

ಹೌದು, ಇಂಥದ್ದೊಂದು ಹೊಸ ಪ್ರಯತ್ನ “ಉದ್ಘರ್ಷ’ ಚಿತ್ರದಲ್ಲಾಗಿದೆ. ಇದು ಸುನೀಲ್‌ಕುಮಾರ್‌ ದೇಸಾಯಿ ಅವರ ನಿರ್ದೇಶನದ ಚಿತ್ರ. ಎರಡು ವರ್ಷದ ನಂತರ ನಿರ್ದೇಶನಕ್ಕಿಳಿದಿರುವ ಸುನೀಲ್‌ ಕುಮಾರ್‌ ದೇಸಾಯಿ, ಈ ಬಾರಿ ಹೊಸತನದ ಚಿತ್ರ ಕೊಡುವ ಉತ್ಸಾಹದಲ್ಲಿದ್ದಾರೆ. ಸಸ್ಪೆನ್ಸ್‌, ಥ್ರಿಲ್ಲರ್‌ ಸಿನಿಮಾಗಳನ್ನು ಮಾಡುವಲ್ಲಿ ದೇಸಾಯಿ ಎತ್ತಿದ ಕೈ.

ಆ ಸಾಲಿಗೆ “ಉದ್ಘರ್ಷ’ ಹೊಸ ಸೇರ್ಪಡೆ ಎನ್ನಬಹುದು. ಕೇವಲ ಇಪ್ಪತ್ತು ನಿಮಿಷಗಳಷ್ಟೇ ಚಿತ್ರದಲ್ಲಿ ಸಂಭಾಷಣೆ ಇಟ್ಟುಕೊಂಡು ಎರಡು ತಾಸಿನವರೆಗೆ ಪ್ರೇಕ್ಷಕರನ್ನು ಕೂರಿಸುವ ಸಾಹಸ ಮಾಡಲು ಹೊರಟಿರುವ ದೇಸಾಯಿ ಅವರಿಗೆ “ಉದ್ಘರ್ಷ’ ಚಿತ್ರದ ಮೇಲೆ ಎಲ್ಲಿಲ್ಲದ ನಂಬಿಕೆ.  ಈಗಾಗಲೇ ಬಿಡುಗಡೆಯಾದ ಚಿತ್ರದ ಪೋಸ್ಟರ್‌ ಜೋರು ಸದ್ದು ಮಾಡಿತ್ತು.

ರಕ್ತ ಅಂಟಿಕೊಂಡ ಹುಡುಗಿಯೊಬ್ಬಳ ಕಾಲನ್ನಷ್ಟೇ ಪೋಸ್ಟರ್‌ನಲ್ಲಿ ಹಾಕಿ ಹರಿಬಿಟ್ಟಿದ್ದ ದೇಸಾಯಿ, ಒಂದಷ್ಟು ಕುತೂಹಲ ಮೂಡಿಸಿದ್ದರು. ಈಗ ಹೊಸದೊಂದು ಪೋಸ್ಟರ್‌ ಬಿಡುಗಡೆ ಮಾಡಿ, ಮತ್ತಷ್ಟು ಕುತೂಹಲಕ್ಕೆ ಕಾರಣರಾಗಿದ್ದಾರೆ. ಮೊದಲ ಪೋಸ್ಟರ್‌ನಲ್ಲಿ ರಕ್ತ ಕಲೆಯುಳ್ಳ ಹುಡುಗಿ ಕಾಲಿದ್ದರೆ, ಎರಡನೇ ಪೋಸ್ಟರ್‌ನಲ್ಲಿ ಬಟ್ಟೆಯಿಂದ ಕಟ್ಟಿದ ಹುಡುಗನೊಬ್ಬನ ಕೈ ಕಾಣುವ ಭಾವಚಿತ್ರವಿದೆ.

ಜೊತೆಗೆ ಹುಡುಗಿಯೊಬ್ಬಳ ಕೈಯಲ್ಲಿ ಚಾಕು ಹಿಡಿದಿರುವ ಭಾವಚಿತ್ರವೂ ಇದೆ. ಈ ಮೂಲಕ ದೇಸಾಯಿ ಚಿತ್ರದ ನಿರೀಕ್ಷೆ ಹೆಚ್ಚಿಸಿರುವುದಂತೂ ಸುಳ್ಳಲ್ಲ. ಹಾಗಾದರೆ, ದೇಸಾಯಿ ಚಿತ್ರದ ಪಾತ್ರಧಾರಿಗಳ ಭಾವಚಿತ್ರ ತೋರಿಸುವುದಿಲ್ಲವೇ? ಪ್ರಶ್ನೆ ಎದುರಾಗಬಹುದು. ಮುಂದಿನ ದಿನಗಳಲ್ಲಿ ಬರುವ ಪೋಸ್ಟರ್‌ ಹಾಗೂ ಮೋಷನ್‌ ಪೋಸ್ಟರ್‌ಗಳಲ್ಲಿ ಕೇವಲ ಪಾತ್ರಧಾರಿಗಳ ಕೈ, ಕಾಲು, ಮುಖದ ಛಾಯೆ ಮತ್ತು ಭಯ ಹುಟ್ಟಿಸುವ ಕಣ್ಣುಗಳನ್ನಷ್ಟೇ ಪ್ರಕಟಿಸಿ ನೋಡುಗರ ಕುತೂಹಲ ಹೆಚ್ಚಿಸುವ ಪ್ರಯತ್ನ ಮಾಡಲಿದ್ದಾರೆ.

ಸಿನಿಮಾದಲ್ಲಿ ಯಾರ್ಯಾರಿದ್ದಾರೆ ಅನ್ನುವುದಕ್ಕೆ ಚಿತ್ರದಲ್ಲೇ ಕಾಣಬೇಕೆಂಬ ಬಯಕೆ ನಿರ್ದೇಶಕರದ್ದು. ದೇಸಾಯಿ ಈ ಸಲ ಬಿಡುಗಡೆ ಮುನ್ನವೇ ತಮ್ಮ ಚಿತ್ರ ಒಂದಷ್ಟು ಸುದ್ದಿಯಾಗಬೇಕು ಅಂತ ನಿರ್ಧರಿಸಿದ್ದಾರೆ. ಆ ಕಾರಣಕ್ಕೆ ಅವರು ವಿಭಿನ್ನವಾದಂತಹ ಪೋಸ್ಟರ್‌ ಬಿಡುಗಡೆ ಮಾಡುವ ಮೂಲಕ  ಚಿತ್ರದ ಕಥೆ ಮತ್ತು ಪಾತ್ರಗಳ ಬಗ್ಗೆ ಕುತೂಹಲ ಕೆರಳಿಸುವ ಕೆಲಸ ಮಾಡಿದ್ದಾರೆ.

ಅಂದಹಾಗೆ, “ಉದ್ಘರ್ಷ’ ಪಕ್ಕಾ ಸಸ್ಪೆನ್ಸ್‌ ಥ್ರಿಲ್ಲರ್‌ ಚಿತ್ರವಾಗಿದ್ದು, ಚಿತ್ರದಲ್ಲಿ ಠಾಕೂರ್‌ ಅನೂಪ್‌ ಸಿಂಗ್‌, ಧನ್ಸಿಕಾ, ತಾನ್ಯಾ ಹೋಪ್‌, ಕಬೀರ್‌ಸಿಂಗ್‌ ದುಹಾನ್‌, ಪ್ರಭಾಕರ್‌, ಶ್ರದ್ಧಾ ದಾಸ್‌, ಹರ್ಷಿಕಾ ಪೂಣಚ್ಚ ಸೇರಿದಂತೆ ಇತರರು ನಟಿಸಿದ್ದಾರೆ. ಹೈದರಾಬಾದ್‌, ಕೇರಳ, ಮಡಿಕೇರಿ, ಬೆಂಗಳೂರಿನಲ್ಲಿ ಚಿತ್ರೀಕರಣವಾಗಿದೆ. ಈ ಚಿತ್ರ ಕನ್ನಡ, ತೆಲುಗು, ತಮಿಳಿನಲ್ಲೂ ತಯಾರಾಗಿದ್ದು, ಏಕಕಾಲದಲ್ಲಿ ಬಿಡುಗಡೆಯಾಗಲಿದೆ.

ಟಾಪ್ ನ್ಯೂಸ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.