ಯುವಕರಲ್ಲಿ ಸಾಧನೆಯ ಛಲ ಹೆಚ್ಚಲಿ: ಚನ್ನಣ್ಣನವರ್‌


Team Udayavani, Sep 4, 2018, 4:01 PM IST

bell.jpg

ಸಿರುಗುಪ್ಪ: ಬಳ್ಳಾರಿ ಜಿಲ್ಲೆಯ ವಿಜಯನಗರ ಸಾಮ್ರಾಜ್ಯದ ಗತ ವೈಭವ ಮರಳಿ ಬರಬೇಕು. ಇಲ್ಲಿ ಸೇರಿದ ಯುವಕರಲ್ಲಿ ನನ್ನಂತೆ ಸಾಧನೆ ಮಾಡಬೇಕೆನ್ನುವ ಛಲವಿರುವ, ಆಶಯವಿರುವ ನೂರಾರು ಜನರು ದೊರೆಯುತ್ತಾರೆ. ಪ್ರತಿ ಗ್ರಾಮ, ಮನೆಗಳಲ್ಲಿಯೂ ರವಿ ಚನ್ನಣ್ಣನವರ್‌ ನನ್ನಂತಹವರು ಜನಿಸಬೇಕು. ಎಲ್ಲರೂ ಸಾಧಕರಾಗಬೇಕು ಎಂದು ಬೆಂಗಳೂರಿನ ಪಶ್ಚಿಮ ವಲಯದ ಉಪಪೊಲೀಸ್‌ ಆಯುಕ್ತ ರವಿ ಡಿ. ಚನ್ನಣ್ಣನವರ್‌ ಅಭಿಪ್ರಾಯಪಟ್ಟರು.

ನಗರದ ಲಕ್ಷ್ಮೀ ವೆಂಕಟೇಶ್ವರ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಬಸವ ಬಳಗ ಟ್ರಸ್ಟ್‌ ವತಿಯಿಂದ ನೀಡಲಾದ 2018-19ನೇ ಸಾಲಿನ ರಾಜ್ಯಮಟ್ಟದ ಬಸವಭೂಷಣ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಅವರು, ನನ್ನ ಮೇಲೆ ರಾಮಕೃಷ್ಣ ಮಠದ ನಿರ್ಭಯಾನಂದ ಸರಸ್ವತಿ ಗುರುಗಳ ಪ್ರಭಾವವಿದ್ದಂತೆ ನೀವು ಕೂಡ ಗುರುವಿನ ಗುಲಾಮನಾಗಿ ಜೀವನದಲ್ಲಿ ಉತ್ತಮ ಸಾಧನೆ ತೋರಿ. ಭಗತ್‌ಸಿಂಗ್‌, ಚಂದ್ರಶೇಖರ್‌ ಆಜಾದ್‌ನವರ ಆಶಯಗಳಂತೆ ಯುವಕರು ದೇಶವನ್ನು ಕಟ್ಟೋಣ ಎನ್ನುವ ಆಶಯ ಬೆಳೆಸಿಕೊಳ್ಳಬೇಕು. ಯಾರಿಗೆ ಧೈರ್ಯವಿದೆ, ಓದಬೇಕೆನ್ನುವ ಛಲವಿದೆ, ಎಷ್ಟೇ ಸಂಖ್ಯೆಯಲ್ಲಿ ಇದ್ದರೂ ಬಂದು ಬಿಡಿ, ನಮ್ಮ ಸಮಾನ ಮನಸ್ಕರಿಂದ ಶಿಕ್ಷಣಕ್ಕೆ ನೆರವು ನೀಡಲಾಗುವುದು. ಮನುಷ್ಯನನ್ನು ಸೋಲಿಸುವ ವಸ್ತು ಈ ಜಗತ್ತಿನಲ್ಲಿಯೇ ಹುಟ್ಟಿಲ್ಲ. ಭಗವಂತನ ಅದ್ಭುತ ಸೃಷ್ಟಿಯೇ ಮನುಷ್ಯನಾಗಿದ್ದು, ಉಪನಿಷತ್ತುಗಳಲ್ಲಿ ತಿಳಿಸಿದಂತೆ ಭೂಮಿಯನ್ನು ಆಳುವ ಸಾಮರ್ಥ್ಯವನ್ನು ಪ್ರತಿಯೊಂದು ಮಗುವಿಗೂ ಭಗವಂತ ನೀಡಿರುತ್ತಾನೆ. ಆದರೆ ಆ ಸಾಮರ್ಥ್ಯವನ್ನು ಬಳಸಿಕೊಳ್ಳುವಲ್ಲಿ ವಿಫಲರಾಗುತ್ತಿದ್ದೇವೆ ಎಂದರು.

ಪ್ರಶಸ್ತಿ ಎನ್ನುವುದು ಲಕ್ಷ್ಮಣರೇಖೆ ಇದ್ದಂತೆ. ಬಸವಣ್ಣನವರ ಹೆಸರಿನಲ್ಲಿರುವ ಪ್ರಶಸ್ತಿಯನ್ನು ಪಡೆದ ನಂತರ ನನ್ನ ನಿರೀಕ್ಷೆಗಳು, ಜವಾಬ್ದಾರಿಗಳು ಹೆಚ್ಚಾಗಿದ್ದು, ಬಸವಾದಿ ಶರಣರ ಆಶಯದಂತೆ ವಿದ್ಯಾರ್ಥಿಗಳಿಗೆ, ದೀನ ದಲಿತರಿಗೆ ನೆರವಾಗುತ್ತೇನೆ. ವಿದ್ಯಾರ್ಥಿಗಳು ಐಎಎಸ್‌, ಐಪಿಎಸ್‌ ಅಧಿಕಾರಿಗಳಾಗಬೇಕೆನ್ನುವ ಚಿಂತನೆ ಹೊಂದಿ, ಇಲ್ಲವೆ ಲಾಭದಾಯಕ ಕೃಷಿ ಬದುಕನ್ನು ಕಟ್ಟಿಕೊಳ್ಳಿ ಎಂದರು.

ತಾಲೂಕಿನ ನಂಟನ್ನು ಭಾಷಣದಲ್ಲಿ ನೆನಪಿಸಿಕೊಂಡ ಅವರು, ನನ್ನ ವಿದ್ಯಾರ್ಥಿ ಜೀವನದ ಕಷ್ಟಕಾಲದಲ್ಲಿ ಕರ್ಚಿಗನೂರಿನ ಗೆಳೆಯ ಎರ್ರೆಪ್ಪಚಾನಾಳ್‌ ಕಳುಹಿಸುತ್ತಿದ್ದ ಇಲ್ಲಿಯ ಅಕ್ಕಿಯನ್ನು ವರ್ಷವಿಡೀ ಊಟ ಮಾಡಿದ್ದೇನೆ. ಇಲ್ಲಿ ಹರಿಯುವ ಹಗರಿಯಲ್ಲಿ ಈಜಾಡಿದ್ದೇನೆ. ಕರ್ಚಿಗನೂರು ಹಾಲ್ವಿ ಮಠದಲ್ಲಿ ಪುರಾಣ ಕೇಳಿದ್ದೇನೆ. ದಾಸೋಹದಲ್ಲಿ ಪ್ರಸಾದ ಸ್ವೀಕರಿಸಿದ್ದೇನೆ. ಇಲ್ಲಿನ ಅನ್ನದ ಋಣ ನನ್ನ ಮೇಲಿದೆ ಎಂದು ತಮ್ಮ ಹಿಂದಿನ ದಿನಗಳನ್ನು ಮೆಲುಕು ಹಾಕಿದರು.

ಹಾಲ್ವಿಯ ಚರಣಗಿರಿ ಸಂಸ್ಥಾನ ಮಠದ ಅಭಿನವ ಮಹಾಂತಸ್ವಾಮಿಗಳು ಮಾತನಾಡಿ, ವಿದ್ಯಾರ್ಥಿಗಳು ಒಳ್ಳೆಯ ಪ್ರತಿಯೊಂದು ವಿಷಯವನ್ನು ತಿಳಿದುಕೊಳ್ಳಬೇಕು, ಯಾರು ಹೆಚ್ಚು ಪುಸ್ತಕವನ್ನು ಅಧ್ಯಯನ ನಡೆಸುತ್ತಾರೋ ಅವರು
ಪ್ರತಿಭಾವಂತರಾಗುತ್ತಾರೆ ಎಂದು ತಿಳಿಸಿದರು. 

ಗುರುಬಸವ ಮಠದ ಬಸವಭೂಷಣ ಸ್ವಾಮೀಜಿ ಹಾಗೂ ಬಸವ ಬಳಗ ಟ್ರಸ್ಟ್‌ನ ಗೌರವಾಧ್ಯಕ್ಷ ಎನ್‌.ಜಿ. ಲಿಂಗಣ್ಣ, ತಾಲೂಕು ಅಧ್ಯಕ್ಷ ಡಾ| ಎನ್‌.ಎಂ. ಶಿವಪ್ರಕಾಶ್‌, ಟ್ರಸ್ಟಿನ ನಾಗನಗೌಡ, ವಿರುಪಾಕ್ಷಿಗೌಡ ಸೇರಿದಂತೆ ಅಕ್ಕನ ಬಳಗದ ಸದಸ್ಯರು ಇದ್ದರು. 

ಟಾಪ್ ನ್ಯೂಸ್

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.