ಬೆಳಗಾವಿ ಕೈ ಕಲಹ :ಮಧ್ಯಪ್ರವೇಶಿಸುವ ಅವಶ್ಯಕತೆ ನನಗಿಲ್ಲ:ಸಚಿವ ಡಿಕೆಶಿ
Team Udayavani, Sep 5, 2018, 4:12 PM IST
ಹೊಸದಿಲ್ಲಿ: ಬೆಳಗಾವಿ ನಾಯಕರ ಭಿನ್ನಾಭಿಪ್ರಾಯದ ವಿಚಾರದಲ್ಲಿ ಮಧ್ಯ ಪ್ರವೇಶಿಸುವ ಅವಶ್ಯಕತೆ ನನಗಿಲ್ಲ. ನನ್ನ ಮಿತಿ ಏನು ಅನ್ನುವುದು ನನಗೆ ಗೊತ್ತಿದೆ ಎಂದು ಸಚಿವ ಡಿ.ಕೆ.ಶಿವಕುಮಾರ್ ಅವರು ಹೇಳಿಕೆ ನೀಡಿದ್ದಾರೆ.
ಕಾಂಗ್ರೆಸ್ ನಾಯಕರಾದ ಲಕ್ಷ್ಮಿ ಹೆಬ್ಬಾಳ್ಕರ್ ಮತ್ತು ಜಾರಕಿಹೊಳಿ ಸಹೋದರರ ನಡುವಿನ ಕಲಹದ ಕುರಿತಾಗಿ ಸುದ್ದಿಗಾರರ ಪ್ರಶ್ನೆಗೆ ಬುಧವಾರ ಉತ್ತರಿಸಿದ ಅವರು ನನಗೆ ನನ್ನದೇ ಕೆಲಸ ಇದೆ. ಬೇರೆಯವರ ಕ್ಷೇತ್ರದಲ್ಲಿ ನಾನು ಹಸ್ತಕ್ಷೇಪ ಮಾಡುವುದಿಲ್ಲ ಎಂದರು.
ನಮ್ಮ ಪಕ್ಷದ ನಾಯಕರು ಹೇಳಿದರೆ ಆ ಕೆಲಸ ಮಾಡುತ್ತೇನೆ. ನನಗೆ ಮಿತಿ ಇದೆ, ಅನುಭವವೂ ಇದೆ. ಚಾರಕಿಹೊಳಿ ಸಹೋದರರು ನಮ್ಮ ಪ್ರಮುಖ ನಾಯಕರು. ಎಲ್ಲರೂ ಅವರವರ ಕ್ಷೇತ್ರಗಳಲ್ಲಿ ಸ್ವತಂತ್ರವಾಗಿ ಕೆಲಸ ಮಾಡಬಹುದು, ಯಾರೂ ಕೈಯಾಡಿಸುವುದಿಲ್ಲ. ನನಗದರ ಅವಶ್ಯಕತೆಯೂ ಇಲ್ಲ ಎಂದರು.
ಭವಿಷ್ಯ ನುಡಿಯುವುದಿಲ್ಲ
ನಾನು ಭವಿಷ್ಯ ನಂಬುತ್ತೇನೆ ಆದರೆ ಭವಿಷ್ಯ ನುಡಿಯುವುದಿಲ್ಲ. ದಿನ ಬೆಳಗಾದರೆ ಟಿವಿಯಲ್ಲಿ 150 ಜ್ಯೋತಿಷಿಷಳು ಬರುತ್ತಾರೆ. ಅವರಂತೆಯೇ ಯಡಿಯೂರಪ್ಪ , ಶೆಟ್ಟರ್ ಅವರೂ ಭವಿಷ್ಯ ಹೇಳುತ್ತಿದ್ದಾರೆ ಎಂದು ಲೇವಡಿ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
MUST WATCH
ಹೊಸ ಸೇರ್ಪಡೆ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ
Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ