ಸ್ನೇಹಿತನಿಗೆ ವಂಚಿಸಿದವನ ಸೆರೆ


Team Udayavani, Sep 6, 2018, 10:56 AM IST

blore-5.jpg

ಬೆಂಗಳೂರು: ಸುಳ್ಳು ದಾಖಲೆಗಳನ್ನು ಸೃಷ್ಟಿಸಿ ಸ್ನೇಹಿತನಿಗೆ ಕೋಟ್ಯಂತರ ರೂ. ವಂಚಿಸಿದ ಐಐಟಿ ಪದವೀಧರನನ್ನು ಸೈಬರ್‌ ಕ್ರೈಂ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಿಇಎಲ್‌ ಲೇಔಟ್‌ನ ಅಭಿಲಾಷ್‌ ರಾವ್‌
ಮಾಗಣ್ಣ (35) ಬಂಧಿತ. ಈತನಿಂದ 12 ಲ್ಯಾಪ್‌ಟಾಪ್‌ಗ್ಳು, 7 ಡೆಬಿಟ್‌ ಕಾರ್ಡ್‌, ಒಂದು ಮೊಬೈಲ್‌ ಸೇರಿ 7 ಲಕ್ಷ ರೂ.
ಮೌಲ್ಯದ ವಸ್ತು ವಶಪಡಿಸಿಕೊಳ್ಳಲಾಗಿದೆ. ಈತನ ವಿರುದ್ಧ ಸಾಹಿರಾ ಎಂಬುವವರು ದೂರು ನೀಡಿದ್ದರು.

ಸಾಹಿರಾ ಅವರ ಪುತ್ರ ನಬಿಲ್‌ ಹಾಗೂ ಆರೋಪಿ ಕೆಲ ವರ್ಷಗಳ ಹಿಂದೆ ಚೆನ್ನೈನ ಐಐಟಿಯಲ್ಲಿ ಒಟ್ಟಿಗೆ ವ್ಯಾಸಂಗ ಮಾಡುತ್ತಿದ್ದರು. ಬಳಿಕ ನಬಿಲ್‌ ಇಕ್ರಾ ಎಜುಕೇಷನ್‌ ಎಂಬ ಅಂತಾರಾಷ್ಟ್ರೀಯ ಮಟ್ಟದ ಶಿಕ್ಷಣ ಸಂಸ್ಥೆಯೊಂದನ್ನು ತೆರೆದಿದ್ದರು. ಇದೇ ವೇಳೆ ಕೆಲಸ ಇಲ್ಲದೆ ಮನೆಯಲ್ಲೇ ಇದ್ದ ಆರೋಪಿಗೆ ನಬಿಲ್‌ ಇಂದಿರಾನಗರದಲ್ಲಿರುವ ತಮ್ಮ  ಸ್ಥೆಯಲ್ಲಿ ಕೆಲಸ ಕೊಡಿಸಿದ್ದರು. ಆರಂಭದಲ್ಲಿ ಮ್ಯಾನೆಜ್‌ಮೆಂಟ್‌ ಕನ್ಸಲ್ಟೆಂಟ್‌ ಹುದ್ದೆ ನಿರ್ವಹಿಸುತ್ತಿದ್ದ ಆರೋಪಿ, 2014ರಿಂದ 2018ರವರೆಗೆ ಇಂಡಿಪೆಂಡೆಂಟ್‌ ಪೇಡ್‌ ಡೈರೆಕ್ಟರ್‌ ಹುದ್ದೆ ನಿರ್ವಹಿಸಿಕೊಂಡಿದ್ದ. ಹೀಗಾಗಿ ದುಬೈನಲ್ಲಿ ವಾಸವಾಗಿದ್ದ ನಬಿಲ್‌ ಸ್ನೇಹಿತನ ಮೇಲೆ ನಂಬಿಕೆ ಇಟ್ಟು ಸಂಸ್ಥೆ ಅಭಿವೃದ್ಧಿಗೆ ಹಣ ಕೊಡುತ್ತಿದ್ದರು.

ಇದನ್ನೇ ದುರುಪಯೋಗ ಪಡಿಸಿಕೊಂಡ ಆರೋಪಿ, ಸಂಸ್ಥೆಯ ಅಭಿವೃದ್ಧಿ ಹೆಸರಿನಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ಸ್ನೇಹಿತನಿಂದ ಕೋಟಿಗಟ್ಟಲೇ ಹಣ ಪಡೆದುಕೊಳ್ಳುತ್ತಿದ್ದ. ನಂತರ ಯಾರಿಗೂ ತಿಳಿಯದ್ದಂತೆ ಕಂಪನಿಯ ಹೆಸರಿನಲ್ಲಿ ಮತ್ತೂಂದು ಖಾತೆ ತೆರೆದು ಹಣ ವರ್ಗಾಹಿಸಿಕೊಂಡು ಇದುವರೆಗೂ 7.5 ಕೋಟಿ ರೂ. ವಂಚಿಸಿದ್ದ. ಜತೆಗೆ ಕಂಪನಿಯ ಡಾಟಾಗಳನ್ನು ಕಳ್ಳತನ ಮಾಡಿದ್ದ ಎಂದು ಆರೋಪಿಸಿ ನಬಿಲ್‌ ತಾಯಿ ಸಾಹಿರಾ, ಇಂದಿರಾನಗರ
ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಪರಿಶೀಲನೆ ವೇಳೆ ಕೃತ್ಯ ಪತ್ತೆ ಕೆಲ ತಿಂಗಳ ಹಿಂದೆ ದುಬೈನಲ್ಲಿದ್ದ ನಬಿಲ್‌ ಬೆಂಗಳೂರಿಗೆ ಬಂದಿದ್ದು, ಸಂಸ್ಥೆಯ ಎಲ್ಲ ಹಣಕಾಸು ವ್ಯವಹಾರ ಕುರಿತ ದಾಖಲೆಗಳನ್ನು ಪರಿಶೀಲಿಸುವಂತೆ ತಮ್ಮ ಲೆಕ್ಕಪರಿಶೋಧಕರಿಗೆ ಸೂಚಿಸಿದ್ದರು. ದಾಖಲೆಗಳ ಪರಿಶೀಲನೆ ವೇಳೆ ಆರೋಪಿ ಕೃತ್ಯ ಬೆಳಕಿಗೆ ಬಂದಿದೆ. ಅನುಮಾನಗೊಂಡು ಆರೋಪಿ ದುಬೈಗೆ ಕಳುಹಿಸಿದ್ದ ಎಲ್ಲ ದಾಖಲೆಗಳ ಕುರಿತು ಮಾಹಿತಿ ಸಂಗ್ರಹಿಸಿದಾಗ ಎಲ್ಲವೂ ನಕಲಿ ಎಂಬುದು ಗೊತ್ತಾಗಿದೆ. ಈ ಮೂಲಕ 7.5 ಕೋಟಿ ರೂ. ವಂಚನೆ ಮಾಡಿರುವುದು ತಿಳಿದು ಬಂದಿದೆ.

ಟಾಪ್ ನ್ಯೂಸ್

Revanna 2

H.D. Revanna;ಇನ್ನಷ್ಟು ವಿಚಾರಣೆಗೆ 4 ದಿನ ಎಸ್ ಐಟಿ ಕಸ್ಟಡಿಗೆ

1-wqeqwqe

IPL; ಪಂಜಾಬ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಗೆ 28 ರನ್‌ಗಳ ಜಯ

voter

Pen Drive ಹಗರಣದ ನಡುವೆ ರಾಜ್ಯದ ಎರಡನೇ ಹಂತದ ಬಹಿರಂಗ ಪ್ರಚಾರ ಅಂತ್ಯ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

ಯತ್ನಾಳ್ ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Basangouda Patil Yatnal ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Prajwal Revanna ಮಾಡಿದ್ದು ಅತ್ಯಂತ ಹೇಯ ಕೃತ್ಯ: ಎಂ.ಬಿ.ಪಾಟೀಲ್

Prajwal Revanna ಮಾಡಿದ್ದು ಅತ್ಯಂತ ಹೇಯ ಕೃತ್ಯ: ಎಂ.ಬಿ.ಪಾಟೀಲ್

Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್

Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BESCOM: ಮಳೆ; ಬೆಸ್ಕಾಂಗೆ 1.2 ಕೋಟಿ ರೂ.ನಷ್ಟ

BESCOM: ಮಳೆ; ಬೆಸ್ಕಾಂಗೆ 1.2 ಕೋಟಿ ರೂ.ನಷ್ಟ

ಬಿಲ್ಡರ್‌ಗಳಿಂದ ಸಂಗ್ರಹಿಸಿದ್ದ ಶುಲ್ಕವನ್ನು ಮರಳಿಸುವ ಆದೇಶಕ್ಕೆ ತಡೆ: ಜಲಮಂಡಳಿಗೆ ರಿಲೀಫ್

ಬಿಲ್ಡರ್‌ಗಳಿಂದ ಸಂಗ್ರಹಿಸಿದ್ದ ಶುಲ್ಕವನ್ನು ಮರಳಿಸುವ ಆದೇಶಕ್ಕೆ ತಡೆ: ಜಲಮಂಡಳಿಗೆ ರಿಲೀಫ್

QR code system: ರೈಲ್ವೆ ಟಿಕೆಟ್‌ ಖರೀದಿಗೆ ಕ್ಯೂಆರ್‌ಕೋಡ್‌ ವ್ಯವಸ್ಥೆ; ಉತ್ತಮ ಸ್ಪಂದನೆ

QR code system: ರೈಲ್ವೆ ಟಿಕೆಟ್‌ ಖರೀದಿಗೆ ಕ್ಯೂಆರ್‌ಕೋಡ್‌ ವ್ಯವಸ್ಥೆ; ಉತ್ತಮ ಸ್ಪಂದನೆ

BMTC: ತನ್ನ ಆಸ್ತಿಯನ್ನೇ ರಕ್ಷಿಸಿಕೊಳ್ಳದ ಬಿಎಂಟಿಸಿ

BMTC: ತನ್ನ ಆಸ್ತಿಯನ್ನೇ ರಕ್ಷಿಸಿಕೊಳ್ಳದ ಬಿಎಂಟಿಸಿ

Crime: ತವರು ಮನೆಗೆ 1 ಕೋಟಿ ರೂ.ಕೊಟ್ಟಿದ್ದಕ್ಕೆ ಪತ್ನಿಯ ಕೊಂದ ಪತಿ

Crime: ತವರು ಮನೆಗೆ 1 ಕೋಟಿ ರೂ.ಕೊಟ್ಟಿದ್ದಕ್ಕೆ ಪತ್ನಿಯ ಕೊಂದ ಪತಿ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

1-wewwqewq

Bantwal: ನೇತ್ರಾವತಿ ನದಿಯಲ್ಲಿ ಮುಳುಗಿ ಇಬ್ಬರು ಬಾಲಕಿಯರು ಮೃತ್ಯು

Revanna 2

H.D. Revanna;ಇನ್ನಷ್ಟು ವಿಚಾರಣೆಗೆ 4 ದಿನ ಎಸ್ ಐಟಿ ಕಸ್ಟಡಿಗೆ

1-wqeqwqe

IPL; ಪಂಜಾಬ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಗೆ 28 ರನ್‌ಗಳ ಜಯ

voter

Pen Drive ಹಗರಣದ ನಡುವೆ ರಾಜ್ಯದ ಎರಡನೇ ಹಂತದ ಬಹಿರಂಗ ಪ್ರಚಾರ ಅಂತ್ಯ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.