ಹರಿಪ್ರಿಯಾಗೆ ಕನ್ನಡ್ ಗೊತ್ತಿಲ್ಲ: 26ನೇ ಚಿತ್ರ ಇಂದಿನಿಂದ ಶುರು
Team Udayavani, Sep 6, 2018, 1:11 PM IST
“ಬೆಲ್ ಬಾಟಮ್’ ಹಾಗೂ “ಡಾಟರ್ ಆಫ್ ಪಾರ್ವತಮ್ಮ’ ಚಿತ್ರಗಳು ಮುಕ್ತಾಯದ ಹಂತಕ್ಕೆ ಬರುತ್ತಿದ್ದಂತೆಯೇ, ಹರಿಪ್ರಿಯಾ ಸದ್ದಿಲ್ಲದೆ ಇನ್ನೊಂದು ಚಿತ್ರವನ್ನು ಒಪ್ಪಿಕೊಂಡಿದ್ದಾರೆ. ಅಷ್ಟೇ ಅಲ್ಲ, ಅದು ಅವರ 26ನೇ ಚಿತ್ರವಾಗಿದ್ದು, ಇಂದಿನಿಂದ ಪ್ರಾರಂಭವಾಗಲಿದೆ.
ಹರಿಪ್ರಿಯಾ ಒಪ್ಪಿರುವ ಚಿತ್ರದ ಹೆಸರೇನು ಗೊತ್ತಾ? “ಕನ್ನಡ್ ಗೊತ್ತಿಲ್ಲ’ ಅಂತ. ಅದು ಕನ್ನಡ್ ಅಲ್ಲ, ಕನ್ನಡ ಅಂತ ನೀವು ತಿದ್ದಬಹುದು. ಆದರೆ, ಚಿತ್ರದ ಹೆಸರೇ “ಕನ್ನಡ್ ಗೊತ್ತಿಲ್ಲ’ ಅಂತ. ಇಷ್ಟು ಹೇಳಿದ ಮೇಲೆ, ಚಿತ್ರದ ಕಥಾವಸ್ತುವೇನು ಎಂದು ಅಂದಾಜಿಗೆ ಬರಬಹುದು. ಇತ್ತೀಚಿನ ದಿನಗಳಲ್ಲಿ “ಕನ್ನಡ್ ಗೊತ್ತಿಲ್ಲ’ ಎಂಬ ಮಾತುಗಳನ್ನು ಬಹಳಷ್ಟು ಕಡೆ ಕೇಳಿರಬಹುದು. ಅದರಲ್ಲೂ ಉತ್ತರ ಭಾರತೀಯರು ಬೆಂಗಳೂರಿನಲ್ಲಿ ದೊಡ್ಡ ಸಂಖ್ಯೆಯಲ್ಲಿದ್ದು, ಅವರ ಬಾಯಲ್ಲಿ ಈ ಮಾತುಗಳು ಸರ್ವೇ ಸಾಮಾನ್ಯ. ಹೀಗೆ ಕನ್ನಡ ಕಲಿಯದೆ “ಕನ್ನಡ್ ಗೊತ್ತಿಲ್ಲ’ ಎನ್ನುವವರ ಸುತ್ತ ಈ ಚಿತ್ರದ ಕಥೆ ಸುತ್ತುತ್ತದೆ. ಚಿತ್ರದ ಕಥೆ ಮತ್ತು ಹೆಸರೇ ಹೀರೋ ಎನ್ನುವ ಹರಿಪ್ರಿಯಾ, “ಇದುವರೆಗೂ ಯಾವುದೋ ಒಂದು ಪಾತ್ರವನ್ನು ಪ್ರತಿನಿಧಿಸುತ್ತಿದ್ದೆ. ಈಗ ಮೊದಲ ಬಾರಿಗೆ ಕನ್ನಡಿಗರನ್ನು ಪ್ರತಿನಿಧಿಸುವ ಒಂದೊಳ್ಳೆಯ ಅವಕಾಶ ಸಿಕ್ಕಿದೆ. ಕಥೆ ಮತ್ತು ಹೆಸರು ಕೇಳಿದ ತಕ್ಷಣ ಒಪ್ಪಿಕೊಂಡೆ’ ಎನ್ನುತ್ತಾರೆ ಹರಿಪ್ರಿಯಾ. ಈ ಚಿತ್ರದಲ್ಲಿ ಅವರು ಶ್ರುತಿ ಚಕ್ರವರ್ತಿ ಎಂಬ ಪಾತ್ರವನ್ನು ಮಾಡುತ್ತಿದ್ದಾರೆ.
ಈ ಚಿತ್ರವನ್ನು ಮಯೂರ್ ರಾಘವೇಂದ್ರ ನಿರ್ದೇಶಿಸುತ್ತಿದ್ದಾರೆ. ಮೂಲತಃ ರೇಡಿಯೋ ಜಾಕಿ ಆಗಿರುವ ಮಯೂರ್, ಇದಕ್ಕೂ ಮುನ್ನ “ರಿಷಭ್ ಪ್ರಿಯ’ ಎಂಬ ಕಿರುಚಿತ್ರವೊಂದನ್ನು ನಿರ್ದೇಶಿಸಿದ್ದರು. ಈಗ “ಕನ್ನಡ್ ಗೊತ್ತಿಲ್ಲ’ ನಿರ್ದೇಶಿಸುವ ಸಾಹಸಕ್ಕೆ ಕೈ ಹಾಕಿರುವ ಅವರು, ನಿರ್ದೇಶನದ ಜೊತೆಗೆ ಕಥೆ ಮತ್ತು ಚಿತ್ರಕಥೆಯನ್ನು ಸಹ ರಚಿಸಿದ್ದಾರೆ. ಕುಮಾರ ಕಂಠೀರವ ಎನ್ನುವವರು ಈ ಚಿತ್ರದ ನಿರ್ಮಾಪಕರು. ಗಿರಿಧರ್ ದಿವಾನ್ ಅವರ ಛಾಯಾಗ್ರಹಣ ಮತ್ತು ನಕುಲ್ ಅಭಯಂಕರ್ ಅವರ ಸಂಗೀತ ಈ ಚಿತ್ರಕ್ಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandalwood: ಜಪಾನ್ನಲ್ಲಿ ಈ ದಿನ ರಿಲೀಸ್ ಆಗಲಿದೆ ‘777 ಚಾರ್ಲಿʼ?
Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು
Rakshit Shetty: ʼರಿಚರ್ಡ್ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?
Sandalwood; ಟ್ರೆಂಡ್ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ
Kannada Cinema; ಬ್ಯಾಡ್ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…
MUST WATCH
ಹೊಸ ಸೇರ್ಪಡೆ
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
IPL; ಮೆಕ್ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ