ಜಿಪಂ ಸಿಇಒ ವಿರುದ್ಧ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ
Team Udayavani, Sep 6, 2018, 3:27 PM IST
ರಾಮನಗರ: ಅಂಚೆ ಪೇಮೆಂಟ್ ಬ್ಯಾಂಕ್ ಉದ್ಘಾಟನೆ ದಿನ ಪ್ರಧಾನ ಮಂತ್ರಿಗಳ ಭಾಷಣವನ್ನುಧಿಕ್ಕರಿಸಿ ಹೊರ ನಡೆದ ಜಿಪಂ ಸಿಇಒ ಅವರನ್ನು ಪ್ರಶ್ನಿಸಿದ ಬಿಜೆಪಿ ಕಾರ್ಯಕರ್ತರನ್ನು ಜೈಲಿಗೆ ಕಳುಹಿಸುವೆ ಎಂದು ಬೆದರಿಸಿದ್ದಾರೆ ಎಂದು ಆರೋಪಿಸಿ ಸಿಇಒ ಧೋರಣೆ ಖಂಡಿಸಿ ಬಿಜೆಪಿ ಕಾರ್ಯಕರ್ತರು ಬುಧವಾರ ಜಿಲ್ಲಾ ಪಂಚಾಯ್ತಿ ಭವನದ ಮುಂಭಾಗ ಪ್ರತಿಭಟನೆ ನಡೆಸಿದರು.
ಸೆ.1ರಂದು ಜಿಪಂ ಭವನದಲ್ಲಿ ನಡೆದ ಪೋಸ್ಟಲ್ ಪೇಮಂಟ್ಸ್ ಬ್ಯಾಂಕ್ನ ರಾಮನಗರ ಶಾಖೆಯನ್ನು ಉದ್ಘಾಟಿಸಿದ ನಂತರ ಪ್ರಧಾನಿ ನರೇಂದ್ರ ಮೋದಿ ವಿಡಿಯೋ ಕಾನ್ಫರೆನ್ಸ್ ಮುಖಾಂತರ ದೇಶವನ್ನು ಉದ್ದೇಶಿಸಿ ಮಾತನಾಡುವ ಸಮಯಕ್ಕೆ ಸರಿಯಾಗಿ ಸಿಇಒ ಮತ್ತು ಎಸ್ಪಿ ಸಭೆಯಿಂದ ಹೊರನಡೆದರು. ಉದ್ಘಾಟನೆಗೆ ಸಂಸದ ಡಿ.ಕೆ.ಸುರೇಶ್ ಮತ್ತು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ಗೈರಾಗಿದ್ದರು.
ಇಡೀ ಕಾರ್ಯಕ್ರಮ ಕಾಟಾಚಾರಕ್ಕೆ ಮಾಡಿದಂತಿತ್ತು. ಹೀಗಾಗಿ ಸಭೆಯಲ್ಲಿ ಹಾಜರಿದ್ದ ಬಿಜಪಿ ಕಾರ್ಯಕರ್ತರು ಬೇಸರದಿಂದ ಧಿಕ್ಕಾರ ಕೂಗಿದ್ದರು. ಇದನ್ನು ಸಹಿಸದ ಸಿಇಒ ಮುಲ್ಲೆ ಮುಹಿಲನ್ ಮತ್ತೆ ಸಭೆಗೆ ಆಗಮಿಸಿ ಬಿಜೆಪಿ ಕಾರ್ಯಕರ್ತರನ್ನು ಜೈಲಿಗೆ ಕಳುಹಿಸುವ ಬೆದರಿಕೆ ಒಡ್ಡಿದ್ದರು ಎಂದು ಪ್ರತಿಭಟನಾಕಾರರು ಹರಿ ಹಾಯ್ದರು.
ನರೇಗಾ ಹಗರಣ ತಡೆಯದ ಸಿಇಒ: ಈ ವೇಳೆ ಮಾತನಾಡಿದ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮುರುಳಿ, ಜಿಲ್ಲೆಯಲ್ಲಿ ನರೇಗಾ ಕಾಮಗಾರಿಗಳಲ್ಲಿ ಆಗುತ್ತಿರುವ ಭ್ರಷ್ಟಾಚಾರ ತಡೆಗೆ ಸಿಇಒ ಏನೊಂದು ಕ್ರಮ ಕೈಗೊಂಡಿಲ್ಲ. ಆದರೆ ಬಿಜೆಪಿ ಕಾರ್ಯಕರ್ತರ ಮೇಲೆ ಕೂಗಾಡುವುದು, ಜೈಲಿಗೆ ಕಳುಹಿಸುವ ಬೆದರಿಕೆ ಒಡ್ಡುವುದಾಗಿ ಹೇಳಿದ್ದಾರೆ.
ಇಂತಹ ಅಧಿಕಾರಿಯಿಂದ ಸರ್ಕಾರದ ಯೋಜನೆಗಳು ಸಮರ್ಪಕವಾಗಿ ಅನುಷ್ಠಾನಗೊಳ್ಳುವುದು ಅನುಮಾನ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಅಧಿಕಾರಿಗಳು ಸಮ್ಮಿಶ್ರ ಸರ್ಕಾರದ ಕೈಗೊಂಬೆಗಳಾಗಿದ್ದಾರೆ. ಈ ಅಧಿಕಾರಿಯ ವಿರುದ್ಧ ರಾಜ್ಯ ಪಾಲರಿಗೆ ಮನವಿ ಸಲ್ಲಿಸುವುದಾಗಿ, ಪೇಮೆಂಟ್ಸ್ ಬ್ಯಾಂಕ್ನ ಉದ್ಘಾಟನೆ ವೇಳೆ ನಡೆದ ಪ್ರಕರಣದ ನಿರ್ಲಕ್ಷ್ಯ ಖಂಡಿಸಿ ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳಲು ಮನವಿ ಮಾಡುವುದಾಗಿ ತಿಳಿಸಿದರು.
ಕೇಂದ್ರದ ಯೋಜನೆಗಳು ಜಾರಿ ಆಗ್ತಿಲ್ಲ: ಬಿಜೆಪಿ ಮುಖಂಡ ಜಿ.ವಿ.ಪದ್ಮನಾಭ ಮಾತನಾಡಿ, ಜಿಲ್ಲೆಯಲ್ಲಿ ಕೇಂದ್ರ ಸರ್ಕಾರದ ಯೋಜನೆಗಳು ಪೂರ್ಣ ಪ್ರಮಾಣದಲ್ಲಿ ಅನುಷ್ಠಾನವಾಗುತ್ತಿಲ್ಲ ಎಂದು ದೂರಿದರು. ಜಿಲ್ಲಾಡಳಿತ ಮತ್ತು ಜಿಪಂ ಅಧಿಕಾರಿಗಳು ಈ ಬಗ್ಗೆ ಕಾಳಜಿವಹಿಸುತ್ತಿಲ್ಲ ಎಂದು ಆರೋಪಿಸಿದರು.
ಹಿರಿಯ ಬಿಜೆಪಿ ಮುಖಂಡ ಎಸ್.ನಾಗರಾಜು ಅಧಿಕಾರಿಗಳ ಧೋರಣೆಯನ್ನು ಖಂಡಿಸಿದರು. ಮುಖಂಡರಾದ ಪ್ರವೀಣ್ ಗೌಡ, ಮಂಜು, ಚಂದ್ರಶೇಖರ ರೆಡ್ಡಿ, ಚನ್ನಪ್ಪ, ವಿ.ರಾಜು, ಸಾವಿತ್ರಮ್ಮ, ಚಂದ್ರಪ್ರಭಾ, ಹೇಮಾವತಿ, ಕಾಳಯ್ಯ, ಚಂದ್ರಕಲಾ ಮುಂತಾದವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಪ್ರತಿಭಟನಾಕಾರರು ರಾಜ್ಯಪಾಲರಿಗೆ ಮಾಡಿ ಕೊಂಡ ಮನವಿಯನ್ನು ಅಪರ ಜಿಲ್ಲಾಧಿಕಾರಿ ಡಾ.ಪ್ರಶಾಂತ್ ಸ್ವೀಕರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ
Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು
Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ
MUST WATCH
ಹೊಸ ಸೇರ್ಪಡೆ
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ