ಕರ್ನಾಟಕ ಸಂಘ ಮುಂಬಯಿ: ಯಕ್ಷಗಾನ ತಾಳಮದ್ದಳೆ


Team Udayavani, Sep 6, 2018, 4:57 PM IST

ataa.jpg

ಮುಂಬಯಿ: ಕರ್ನಾಟಕ ಸಂಘ ಮುಂಬಯಿ ಆಯೋಜನೆಯಲ್ಲಿ ಕಲಾ ಪ್ರಕಾಶ ಪ್ರತಿಷ್ಠಾನ ಮುಂಬಯಿ ಇವರು ಪ್ರಸಿದ್ಧ ಯಕ್ಷಗಾನ ಕಲಾವಿದರ ಕೂಡುವಿಕೆಯಲ್ಲಿ ಸೆ. 3ರಂದು ಮಾಟುಂಗ ಪೂರ್ವದ ಮೈಸೂರು ಅಸೋಸಿಯೇಶನ್‌ ಸಭಾಗೃಹದಲ್ಲಿ ವಾಲಿಮೋಕ್ಷ ಯಕ್ಷಗಾನ ತಾಳಮದ್ದಳೆ ನಡೆಯಿತು.

ಪ್ರಾರಂಭದಲ್ಲಿ ಕರ್ನಾಟಕ ಸಂಘ ಮುಂಬಯಿ ಇದರ ಗೌರವ ಪ್ರಧಾನ ಕಾರ್ಯದರ್ಶಿ ಡಾ| ಭರತ್‌ ಕುಮಾರ್‌ ಪೊಲಿಪು ಅವರು ಕಲಾ ಪ್ರಕಾಶ ಪ್ರತಿಷ್ಠಾನದ ಸಂಚಾಲಕರಾದ ಪ್ರಕಾಶ್‌ ಶೆಟ್ಟಿ ಸುರತ್ಕಲ್‌ ಮತ್ತು ಪ್ರಸಿದ್ಧ ಭಾಗವತರಾದ ರವಿಚಂದ್ರ ಕನ್ನಡಿಕಟ್ಟೆ ಹಾಗೂ ಇತರ ಕಲಾವಿದರನ್ನು ಪುಷ್ಪಗುತ್ಛವನ್ನಿತ್ತು ಸ್ವಾಗತಿಸಿದರು.
ಮಾಜಿ ಕಾರ್ಯದರ್ಶಿ ಓಂದಾಸ್‌ ಕಣ್ಣಂಗಾರ್‌ ಅವರು ಕಲಾವಿದರನ್ನು ಪರಿಚಯಿಸಿ ಕರ್ನಾಟಕ ಸಂಘದ ಕಾರ್ಯಚಟುವಟಿಕೆಗಳ ಬಗ್ಗೆ ವಿವರಿಸಿ, ಕರ್ನಾಟಕ ಸಂಘವು ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸದಾ ಪ್ರೋತ್ಸಾಹ ನೀಡುತ್ತಿದ್ದು, ಯಕ್ಷಗಾನದಂತಹ ಕಾರ್ಯಕ್ರಮಗಳಿಗೆ ಸಂಘದ ಬೆಂಬಲ ಸದಾಯಿದೆ ಎಂದರು.

ಇದೇ ಸಂದರ್ಭದಲ್ಲಿ ಡಾ| ಭರತ್‌ ಕುಮಾರ್‌ ಪೊಲಿಪು ಅವರು ಮಾತನಾಡಿ,   ಸೆ. 8 ಮತ್ತು ಸೆ. 9 ರಂದು ಕುವೆಂಪು  ಸ್ಮಾರಕ ಏಕಾಂಕ ನಾಟಕ ಸ್ಪರ್ಧೆಯು ಕರ್ನಾಟಕ ಸಂಘದ ವತಿಯಿಂದ ಮೈಸೂರು ಅಸೋಸಿಯೇಶನ್‌ನಲ್ಲಿ ಜರಗಲಿದೆ. ಇದರಲ್ಲಿ ಮುಂಬಯಿಯ ಹಾಗೂ ಹೊರನಾಡಿನ ಪ್ರಸಿದ್ಧ ತಂಡಗಳು ಭಾಗವಹಿಸಲಿವೆ. ಅತ್ಯುತ್ತಮ ನಾಟಕಗಳು ಇಲ್ಲಿ ಪ್ರದರ್ಶನಗೊಳ್ಳಲಿದ್ದು, ಕಲಾರಸಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಕಲಾಪ್ರಕಾಶನ ಪ್ರತಿಷ್ಠಾನದ ವತಿಯಿಂದ ಪ್ರಕಾಶ್‌ ಶೆಟ್ಟಿ ಸುರತ್ಕಲ್‌ ಅವರು ಡಾ| ಭರತ್‌ ಕುಮಾರ್‌ ಪೊಲಿಪು ಹಾಗೂ ಓಂದಾಸ್‌ ಕಣ್ಣಂಗಾರ್‌ ಅವರನ್ನು ಶಾಲು ಹೊದೆಸಿ ಗೌರವಿಸಿದರು. ಆನಂತರ ನಡೆದ ವಾಲಿಮೋಕ್ಷ ತಾಳಮದ್ದಳೆಯಲ್ಲಿ ಭಾಗವತರಾಗಿ ರವಿಚಂದ್ರ ಕನ್ನಡಿಕಟ್ಟೆ, ಮದ್ದಳೆಯಲ್ಲಿ ಪದ್ಮನಾಭ ಉಪಾಧ್ಯಾಯ, ಚೆಂಡೆಯಲ್ಲಿ ಗಣೇಶ್‌ ಮಯ್ಯ ವರ್ಕಾಡಿ ಸಹಕರಿಸಿದರು.

ಅರ್ಥಧಾರಿಗಳಾಗಿ ಸುಣ್ಣಂಬಳ ವಿಶ್ವೇಶ್ವರ ಭಟ್‌, ಜಬ್ಟಾರ್‌ ಸಮೋ ಸಂಪಾಜೆ, ಗಣೇಶ್‌ ಶೆಟ್ಟಿ ಕನ್ನಡಿಕಟ್ಟೆ, ವಿಜಯ ಆಚಾರ್ಯ ಹೊಸಬೆಟ್ಟು, ಸುರೇಶ್‌ ಶೆಟ್ಟಿ ನಂದೊÅಳ್ಳಿ, ಅತಿಥಿ ಭಾಗವತರಾಗಿ ಪೊಲ್ಯ ಲಕ್ಷ್ಮೀನಾರಾಯಣ ಶೆಟ್ಟಿ ಮೊದಲಾದವರು ಭಾಗವಹಿಸಿದರು. ಕಲಾಭಿಮಾನಿಗಳ ಅಧಿಕ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. 
ಚಿತ್ರ-ವರದಿ : ಸುಭಾಷ್‌ ಶಿರಿಯಾ

ಟಾಪ್ ನ್ಯೂಸ್

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.