ಗುರು ಮಾಂಬಾಡಿಯವರಿಗೆ ಸಮ್ಮಾನ
Team Udayavani, Sep 7, 2018, 6:00 AM IST
ಮಾಂಬಾಡಿ ಸುಬ್ರಹ್ಮಣ್ಯ ಭಟ್ 50 ವರ್ಷಗಳಿಂದ ಹಿಮ್ಮೇಳ ತರಬೇತಿ ನಡೆಸುತ್ತಾ ಬಂದಿದ್ದಾರೆ. ತೀರ್ಥರೂಪರಿಂದಲೇ ಹಿಮ್ಮೇಳ ಕರಗತ ಮಾಡಿಕೊಂಡ ಬಳಿಕ ಕಟೀಲು, ಕದ್ರಿ, ಧರ್ಮಸ್ಥಳ ಮೇಳಗಳಲ್ಲಿ ತಿರುಗಾಟ ನಡೆಸಿ ಇದೀಗ ಮೇಳದ ಬದುಕಿಗೆ ವಿರಾಮ ಹಾಡಿ ಆಸಕ್ತರಿಗೆ ಹಿಮ್ಮೇಳ ಕಲಿಸುತ್ತಿದ್ದಾರೆ.
ಚೆಂಡೆ ಮದ್ದಳೆ ಎರಡರಲ್ಲೂ ಅವರದ್ದು ಪಳಗಿದ ಕೈ. ಕಲಿಯಲು ಬರುವ ಪ್ರತಿಯೋರ್ವ ವಿದ್ಯಾರ್ಥಿಯನ್ನೂ ಹುರಿದುಂಬಿಸುತ್ತಾ ಆತನಿಗೆ ಧೈರ್ಯ ಆತ್ಮವಿಶ್ವಾಸ ತುಂಬುತ್ತಾ ಕಲಿಸುವ ಪರಿ ಅಮೋಘವಾದದ್ದು. ಆದ್ಧರಿಂದಲೇ ಇಂದು ಒಂದು ಸಾವಿರಕ್ಕೂ ಮಿಕ್ಕ ಯಕ್ಷಗಾನ ಶಿಷ್ಯರನ್ನು ಹೊಂದಿರುವ ನಿಜಾರ್ಥದ ಗುರು.
ಮೀಯಪದವು ಚಿಗುರುಪಾದೆ ಶ್ರೀ ಮಹಾಲಿಂಗೇಶ್ವರ ದೇಗುಲದಲ್ಲಿ ದೇಗುಲದಲ್ಲಿ ಸೆಪ್ಟಂಬರ್ 8 ರಂದು ಜರಗುವ ವೇದಮೂರ್ತಿ ಗಣೇಶ ನಾವಡ ಹಾಗೂ ಬಳಗದವರ ಸೇವಾರೂಪದ ಉದಯೋನ್ಮುಖ ಭಾಗವತರ ಯಕ್ಷಗಾನಾರ್ಚನೆ ಜರಗಲಿದ್ದು ಈ ಸಂದರ್ಭ ಸುಬ್ರಹ್ಮಣ್ಯ ಭಟ್ ಅವರ ಕಲಾ ಸಾಧನೆಯನ್ನು ಸಮ್ಮಾನಿಸಿ ಗೌರವಿಸುವ ಮೂಲಕ ಗುರುವಂದನೆ ಸಲ್ಲಿಸಲಾಗುವುದು.
ಯೋಗೀಶ ರಾವ್ ಚಿಗುರುಪಾದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ