ಹೊಸಬರ ಹಾರರ್‌ ಚಿತ್ರ


Team Udayavani, Sep 7, 2018, 6:00 AM IST

27.jpg

ಹಾರರ್‌ ಸಿನಿಮಾಗಳ ಕ್ರೇಜ್‌ ಹೆಚ್ಚುತ್ತಿದೆ. ಹಾಗಂತ ಪ್ರೇಕ್ಷಕರಿಗಲ್ಲ, ಹೊಸದಾಗಿ ಚಿತ್ರ ರಂಗಕ್ಕೆ ಬರುವ ಚಿತ್ರತಂಡಗಳಿಗೆ. ನೀವು ಸೂಕ್ಷ್ಮವಾಗಿ ಗಮನಿಸಿದರೆ ಗಾಂಧಿನಗರಕ್ಕೆ ಹೊಸದಾಗಿ ಬರುವ ಬಹುತೇಕ ಮಂದಿ ಕಥೆಯಲ್ಲಿ ದೆವ್ವಕ್ಕೊಂದು ಸ್ಥಾನ ಕೊಟ್ಟಿರುತ್ತಾರೆ. “ಮನೆ ನಂ.67′ ಎಂಬ ಹೊಸಬರ ಸಿನಿಮಾದಲ್ಲೂ ದೆವ್ವದಾಟ ಜೋರಾಗಿದೆ. ಜೈಕುಮಾರ್‌ ಈ ಚಿತ್ರದ ನಿರ್ದೇಶಕರು. ವಿಎಫ್ಎಕ್ಸ್‌ ವಿಭಾಗದಲ್ಲಿ ಸುಮಾರು 10 ವರ್ಷ ಕೆಲಸ ಮಾಡಿರುವ ಜೈಕುಮಾರ್‌ ಅವರಿಗೆ ಸಿನಿಮಾ ಮಾಡುವ  ಆಸೆ ಮುಂಚಿನಿಂದಲೂ ಇತ್ತಂತೆ. ಅದೀಗ ಈಡೇರಿದೆ. ಅವರ ಮೊದಲ ಚಿತ್ರದಲ್ಲೇ ದೆವ್ವ ಪ್ರಮುಖ ಪಾತ್ರ ವಹಿಸುತ್ತಿದೆ. 

ಎಲ್ಲಾ ಓಕೆ, “ಮನೆ ನಂ.67′ ಕಥೆಯೇನು, ಇದು ಬೇರೆ ಹಾರರ್‌ ಸಿನಿಮಾಗಳಿಗಿಂತ ಹೇಗೆ ಭಿನ್ನ ಎಂಬ ಪ್ರಶ್ನೆ ಸಹಜವಾಗಿಯೇ ಎಲ್ಲರನ್ನು ಕಾಡುತ್ತದೆ. ಆದರೆ, ಜೈಕುಮಾರ್‌ ಅದಕ್ಕೆ ಸ್ಪಷ್ಟವಾಗಿ ಉತ್ತರಿಸಲು ತಯಾರಿಲ್ಲ. “ಭಿನ್ನವಾಗಿದೆ, ವಿಭಿನ್ನವಾಗಿದೆ’ ಎಂದಷ್ಟೇ ಹೇಳುತ್ತಾರೆ. ಹಳ್ಳಿಯಿಂದ ಸಿಟಿಗೆ ಬರುವ ಹುಡುಗ ಸಿಟಿಯಲ್ಲೊಂದು ಬಾಡಿಗೆ ಮನೆ ಸೇರುತ್ತಾನಂತೆ. ಆ ನಂತರ ಏನಾಗುತ್ತದೆ ಎಂಬ ಅಂಶವೇ ಸಿನಿಮಾದ ಹೈಲೈಟ್‌ ಎನ್ನುತ್ತಾರೆ. ಇಷ್ಟು ಹೇಳಿದ ಮೇಲೆ ಮುಂದಿನ ಕಥೆಯನ್ನು ಊಹಿಸಿಕೊಳ್ಳೋದು ನಿಮಗೇನು ಕಷ್ಟದ ಕೆಲಸವಲ್ಲ. 

ಈ ಚಿತ್ರದ ಕಾರ್ಯಕಾರಿ ನಿರ್ಮಾಪಕ ಸುರೇಶ್‌ ಕೂಡಾ ಸಿನಿಮಾ ಬಗ್ಗೆ ಮಾತನಾಡಿದರು. ಇಡೀ ತಂಡ ಸೇರಿಕೊಂಡು ಒಂದೊಳ್ಳೆಯ ಸಿನಿಮಾವನ್ನು ಕಟ್ಟಿಕೊಟ್ಟಿದೆ ಎಂಬ ಅಭಿಪ್ರಾಯ ಅವರಿಗಿದೆ. ಚಿತ್ರದಲ್ಲಿ ಸತ್ಯ ಅಜಿತ್‌ ನಾಯಕರಾಗಿ ನಟಿಸಿದ್ದಾರೆ. ಸಿನಿಮಾದ ಬಗ್ಗೆ ಮಾತನಾಡುವ ಬದಲು, ಟ್ರೇಲರ್‌ನಲ್ಲಿದ್ದ ಡೈಲಾಗ್‌ ಅನ್ನೇ ಪುನರುತ್ಛರಿಸಿದರು. ಉಳಿದಂತೆ ಚಿತ್ರದಲ್ಲಿ ಸುಮಿತ್ರಾ ನಟಿಸಿದ್ದು, ಅವರಿಲ್ಲಿ ದೆವ್ವವಾಗಿ ನಟಿಸಿದ್ದಾರೆ. ಮೊದಲಿಗೆ ದೆವ್ವದ ಪಾತ್ರ ಎಂದಾಗ ಭಯವಾಯಿತಂತೆ. ಆದರೆ, ಇಡೀ ತಂಡದ ಬೆಂಬಲದೊಂದಿಗೆ ಪಾತ್ರ ನಿಭಾಯಿಸಿದ್ದಾಗಿ ಹೇಳಿಕೊಂಡರು. ಉಳಿದಂತೆ ಚಿತ್ರದಲ್ಲಿ ನಟಿಸಿರುವ ವಾಸಂತಿ, ಸ್ವಪ್ನ, ಗಾಯತ್ರಿ ತಮ್ಮ ಪಾತ್ರದ ಬಗ್ಗೆ ಹೇಳಿಕೊಂಡರು. ಇತ್ತೀಚೆಗೆ ಚಿತ್ರದ ಆಡಿಯೋ ಬಿಡುಗಡೆಯಾಯಿತು. 

ಟಾಪ್ ನ್ಯೂಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

5-belagavi

Belagavi: ಗಡಿ ಹೋರಾಟದಲ್ಲಿ‌ ಯಶಸ್ವಿಯಾಗಲು ಒಂದಾಗಿ: ಮನೋಜ್‌ ಜರಾಂಗೆ ಪಾಟೀಲ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.