‘ಧಾರ್ಮಿಕ ನಂಬಿಕೆಗಳ ತಿಳಿವಳಿಕೆ ಅಗತ್ಯ’


Team Udayavani, Sep 7, 2018, 12:02 PM IST

7-september-10.jpg

ಮಹಾನಗರ: ಅತ್ತಾವರ ಸಾರ್ವಜನಿಕ ಶ್ರೀ ಕೃಷ್ಣ ಜಯಂತ್ಯುತ್ಸವ ಸಮಿತಿ ವತಿಯಿಂದ 109ನೇ ವರ್ಷದ ಅತ್ತಾವರ ಮೊಸರುಕುಡಿಕೆ ಉತ್ಸವವು ಮೊಸರು ಕುಡಿಕೆ ಕಟ್ಟೆ ಮೈದಾನದಲ್ಲಿ ಜರಗಿತು. ಸಂಜೆ ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕ ಡಿ. ವೇದವ್ಯಾಸ್‌ ಕಾಮತ್‌ ವಹಿಸಿದ್ದರು. ಕರ್ನಾಟಕ ವಿಧಾನ ಸಭಾ ಪರಿಷತ್‌ನ ಸದಸ್ಯ ಹರೀಶ್‌ ಕುಮಾರ್‌ ಮಾತನಾಡಿ, ಉತ್ಸವದ ಮೂಲಕ ಬಿಂಬಿಸಲಾಗುವ ಧಾರ್ಮಿಕ ನಂಬಿಕೆಗಳನ್ನು ಅರಿಯುವ ಅಗತ್ಯವಿದೆ ಎಂದರು. ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಎ.ಸಿ. ಭಂಡಾರಿ ಮಾತನಾಡಿ, ಜನರಲ್ಲಿ ಉತ್ಸವದ ಮೂಲಕ ಸಾಮಾಜಿಕ ಕಳಕಳಿಯ ಎಚ್ಚರ, ಚಿಂತನೆ ಮೂಡಿ ಬರಲೆಂದು ಹಾರೈಸಿದರು.

ಯೇನಪೊಯ ವಿಶ್ವ ವಿದ್ಯಾಲಯದ ಓರಲ್‌ ಪೆಥಾಲೊಜಿ ವಿಭಾಗದ ಪ್ರೊಫೆಸರ್‌ ಡಾ| ವಿಷ್ಣುದಾಸ್‌ ಪ್ರಭು, ಫಾದರ್‌ ಮುಲ್ಲರ್‌ ಹೋಮಿಯೊಪೆತಿಕ್‌ ಮೆಡಿಕಲ್‌ ಕಾಲೇಜಿನ ಪ್ರಾಂಶುಪಾಲ, ವಿಭಾಗ ಮುಖ್ಯಸ್ಥ ಡಾ| ಶಿವಪ್ರಸಾದ್‌ ಕೆ., ಉದ್ಯಮಿ ದಿಲ್‌ರಾಜ್‌ ಆಳ್ವ ಉಪಸ್ಥಿತರಿದ್ದರು.

ಬಳಿಕ ಚಿತ್ರಾಲಿ ಅವರು ವಿವಿಧ ಪಾತ್ರಗಳ ತುಣುಕನ್ನು ಅಭಿನಯಿಸಿ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರರಾದರು. ಉತ್ಸವ ಸಮಿತಿಯ ಅಧ್ಯಕ್ಷ ಎ. ಸುರೇಶ್‌ ಬಾಬು ಸ್ವಾಗತಿಸಿದರು. ಸಂಯೋಜಕ ಸುನಿಲ್‌ ಕುಮಾರ್‌ ಉತ್ಸವ ಸಮಿತಿಯ ಬಗ್ಗೆ ಪ್ರಸ್ತಾವಿಸಿದರು. ಪ್ರಧಾನ ಕಾರ್ಯದರ್ಶಿ ಕ್ಷಿತಿ ಮಮ್ಲೂರು, ಅರುಣಾ ಸುಶೀಲ್‌ ಕುಮಾರ್‌, ಪೂರ್ಣಿಮಾ ಶರತ್‌ ಕುಮಾರ್‌ ಸಮ್ಮಾನ ಪತ್ರ ವಾಚಿಸಿದರು. ಕ್ರೀಡಾ ಕಾರ್ಯದರ್ಶಿ ಪ್ರಶಾಂತ್‌ ಕುಮಾರ್‌ ಮುದ್ದುಕೃಷ್ಣ ಸ್ಪರ್ಧೆ ಮತ್ತು ಕಾರ್ಯದರ್ಶಿ ಶರತ್‌ ಕುಮಾರ್‌ ಅತ್ತಾವರ ಕ್ರೀಡಾ ಸ್ಪರ್ಧೆಯ ವಿಜೇತರ ವಿವರವನ್ನು ಓದಿದರು. ಕಂಕನಾಡಿ ಬಿಲ್ಲವ ಸಂಘದ ಪ್ರಧಾನ ಕಾರ್ಯದರ್ಶಿಯವರಾದ ದಿನೇಶ್‌ ಅಂಚನ್‌ ನಿರೂಪಿಸಿದರು. ಕಾರ್ಯದರ್ಶಿ ಶರತ್‌ ಕುಮಾರ್‌ ವಂದಿಸಿದರು.

ಶಾಮ್‌ ಅತ್ತಾವರ ಇವರ ಮ್ಯಾಕ್ಸ್‌ ಇವೆಂಟ್‌ ನೇತೃತ್ವದಲ್ಲಿ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮವು ನಡೆದವು. ಉಮಾಮಹೇಶ್ವರ ದೇಗುಲದ ರಥಸಹಿತ ಬೆಳ್ಳಿಮಂಟಪದಲ್ಲಿ ಸ್ವರ್ಣಮಯ ಶ್ರೀಕೃಷ್ಣ ಪರಮಾತ್ಮನ ಶೋಭಾಯಾತ್ರೆಯು ಕೋಟಿ ಚೆನ್ನಯ ವೃತ್ತದಿಂದ ಆರಂಭಗೊಂಡು ವಿವಿಧ ಸಂಘ ಸಂಸ್ಥೆಗಳ ಹುಲಿವೇಷ, ದೃಶ್ಯಾವಳಿಗಳೊಂದಿಗೆ ಮೊಸರುಕುಡಿಕೆ ಕಟ್ಟೆಯಲ್ಲಿ ಸಮಾಪನಗೊಂಡಿತು. 

ಸಮ್ಮಾನ
ಶಾಸಕ ಡಿ. ವೇದವ್ಯಾಸ ಕಾಮತ್‌ ಹಾಗೂ ಪರಿಷತ್‌ ಸದಸ್ಯ ಹರೀಶ್‌ ಕುಮಾರ್‌ ಅವರನ್ನು ಸಮ್ಮಾನಿಸಲಾಯಿತು. ನಂದಿಗುಡ್ಡಾ ಫ್ರೆಂಡ್ಸ್‌ ಬಾಬುಗುಡ್ಡೆ ಮುಖ್ಯಸ್ಥ ಜಯಂತ ಪೂಜಾರಿ ಬಾಬುಗುಡ್ಡೆ, ಬಾಲಕೃಷ್ಣ ಕುಂದರ್‌ ಮತ್ತು ಬಾಲ ಪ್ರತಿಭೆ, ಡ್ರಾಮಾ ಜೂನಿಯರ್ 1ರ ಪ್ರಥಮ ಪ್ರಶಸ್ತಿ ವಿಜೇತೆ ಚಿತ್ರಾಲಿ ತೇಜ್‌ಪಾಲ್‌ ಅವರನ್ನು ಅಭಿನಂದಿಸಲಾಯಿತು.

ಟಾಪ್ ನ್ಯೂಸ್

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.