ಅಧಿಕಾರಿ ವಾಹನಗಳ ಮೇಲೆ ಸೇ ನೋ ಡ್ರಗ್ಸ್‌


Team Udayavani, Sep 7, 2018, 12:18 PM IST

adikari.jpg

ಬೆಂಗಳೂರು: ಮಾದಕ ವಸ್ತು ಮಾರಾಟ ದಂಧೆಯನ್ನು ಕೇವಲ ಕಾನೂನು ಮೂಲಕ ನಿಯಂತ್ರಿಸಲು ಸಾಧ್ಯವಿಲ್ಲ. ಅದಕ್ಕಿಂತ ಮಖ್ಯವಾಗಿ ಜನಜಾಗೃತಿ ಅಗತ್ಯ ಎಂಬ ನಿರ್ಧಾರಕ್ಕೆ ಬಂದಿರುವ ಗೃಹ ಇಲಾಖೆ ಮತ್ತು ಬೆಂಗಳೂರು ನಗರ ಪೊಲೀಸರು ಇದೀಗ ಜಾಗೃತಿ ಅಭಿಯಾನಕ್ಕೆ ಮುಂದಾಗಿದೆ.

ವಿಶೇಷವೆಂದರೆ ಸ್ವತಃ ಗೃಹ ಸಚಿವರೆ ಈ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಿದ್ದು, ತಮ್ಮ ಕಾರಿನ ಮೇಲೆ “ಲವ್‌ ಯು ಲೈಫ್’ ಮತ್ತು “ಸೇ ನೋ ಡ್ರಗ್ಸ್‌’ ಎಂಬ ಘೋಷವಾಕ್ಯ ಇರುವ ಸ್ಟಿಕ್ಕರ್‌ ಹಾಕಿಕೊಂಡಿದ್ದಾರೆ. ಅಲ್ಲದೆ, ಪೊಲೀಸ್‌ ಇಲಾಖೆಯ ಹೊಯ್ಸಳ ಸೇರಿ ಎಲ್ಲ ವಾಹನಗಳ ಮೇಲೂ ಈ ಸ್ಟಿಕ್ಕರ್‌ ಅಂಟಿಸಿ ಅಭಿಯಾನ ಆರಂಭಿಸಲಾಗಿದೆ.

ಜತೆಗೆ, ಶಾಲಾ-ಕಾಲೇಜುಗಳ ಆಡಳಿತ ಮಂಡಳಿ ಹಾಗೂ ವಿದ್ಯಾರ್ಥಿ ಸಂಘಟನೆಗಳ ಜತೆ ಚರ್ಚೆ ನಡೆಸಿರುವ ಪೊಲೀಸರು ಈ ಅಭಿಯಾನಕ್ಕೆ ಸಹಕಾರ ನೀಡುವಂತೆ ಮನವಿ ಮಾಡಿದ್ದು, ನಿಮ್ಮ ಮನೆ ಅಥವಾ ಸಾರ್ವಜನಿಕ ಸ್ಥಳಗಳಲ್ಲಿ ಮಾದಕ ವಸ್ತು ಮಾರಾಟಗಾರರು ಹಾಗೂ ವ್ಯಸನಿಗಳ ಬಗ್ಗೆ ಮಾಹಿತಿ ಇದ್ದರೆ ಟೋಲ್‌ ಫ್ರೀ ನಂಬರ್‌ “1908’ಗೆ ಕರೆ ಮಾಡಿ ಮಾಹಿತಿ ನೀಡುವಂತೆಯೂ ಮನವಿ ಮಾಡಿದ್ದಾರೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಹಿರಿಯ ಪೊಲೀಸ್‌ ಅಧಿಕಾರಿಯೊಬ್ಬರು, ಸಾಮಾನ್ಯವಾಗಿ ಪ್ರತಿವರ್ಷ ಬಿತ್ತಿಪತ್ರಗಳ ಮೂಲಕ ಜಾಗೃತಿ ಅಭಿಯಾನ ಮಾಡಲಾಗುತ್ತಿತ್ತು. ಈ ವರ್ಷ ವಿಶೇಷವಾಗಿ ಜಾಗೃತಿ ಮೂಡಿಸಲು ಮುಂದಾಗಿದ್ದು, ವಾಹನಗಳ ಮೇಲೆ ಅಂಟಿಸುವ ಸ್ಟಿಕ್ಕರ್‌ಗಳನ್ನು ವಿತರಿಸಲಾಗಿದೆ.

ಇವುಗಳನ್ನು ಪೊಲೀಸರು ಮಾತ್ರವಲ್ಲದೆ, ಸ್ವಯಂ ಪ್ರೇರಿತವಾಗಿ ಸಾರ್ವಜನಿಕರು ಕೂಡ ತಮ್ಮ ವಾಹನಗಳಿಗೆ ಅಂಟಿಸಿಕೊಂಡು ಅಭಿಯಾನಕ್ಕೆ ಸಹಕಾರ ನೀಡಬಹುದು. ಈ ನಿಟ್ಟಿನಲ್ಲಿ ಕೆಲಸ ಸಂಘ, ಸಂಸ್ಥೆಗಳು ಮುಂದೆ ಬಂದಿವೆ. ಜತೆಗೆ ಸಾರ್ವಜನಿಕ ಸಾರಿಗೆ ವಾಹನಗಳ ಮೇಲೂ ಈ ಸ್ಟಿಕ್ಕರ್‌ಗಳನ್ನು ಹಾಕಿಕೊಳ್ಳುವಂತೆ ಸೂಚಿಸಲಾಗಿದೆ. 

ಕೈ ಬ್ಯಾಂಡ್‌ಗಳು: ಶಾಲಾ-ಕಾಲೇಜುಗಳಲ್ಲಿ ಅಭಿಯಾನ ಆರಂಭಿಸಿರುವ ಪೊಲೀಸರು ಎಲ್ಲ ವಿದ್ಯಾರ್ಥಿಗಳಿಗೆ ಈ ಹ್ಯಾಂಡ್‌ ಬ್ಯಾಂಡ್‌ಗಳನ್ನು ವಿತರಿಸಲಾಗುತ್ತಿದೆ. ಈ ಬ್ಯಾಂಡ್‌ಗಳಲ್ಲಿ ಲವ್‌ ಯುವರ್‌ ಲೈಫ್, ಸೇ ನೋ ಡ್ರಗ್ಸ್‌ ಎಂಬ ಘೋಷವಾಕ್ಯಗಳೊಂದಿಗೆ ಟೋಲ್‌ ಫ್ರೀ ನಂಬರ್‌ 1908 ಕೂಡ ಇರುತ್ತದೆ. ಈ ಮೂಲಕ ವಿದ್ಯಾರ್ಥಿಗಳು ಹಾಗೂ ಪೋಷಕರಲ್ಲಿ ಜಾಗೃತಿ ಮೂಡಿಸಲಾಗುವುದು.

ರೇಡಿಯೋ ಜಿಂಗಲ್ಸ್‌: ನಗರದ 10 ಎಫ್ಎಂ ರೇಡಿಯೋಗಳಲ್ಲಿ ಮಾದಕ ವಸ್ತು ಬಗ್ಗೆ ಅರಿವು ಮೂಡಿಸಲಾಗುತ್ತಿದೆ. ಪ್ರತಿ ನಿತ್ಯ ಬೆಳಗ್ಗೆ, ಮಧ್ಯಾಹ್ನ ಮತ್ತು ಸಂಜೆ ವೇಳೆಯಲ್ಲಿ ಕನ್ನಡ ಮತ್ತು ಇಂಗ್ಲಿಷ್‌ನಲ್ಲಿ ಅಭಿಯಾನದ ಆಡಿಯೋ ತುಣುಕುಗಳು ಪ್ರಸಾರ ಮಾಡಲಾಗುತ್ತದೆ.

ಪ್ರಾತ್ಯಕ್ಷಿಕೆ ಮೂಲಕ ಮಾಹಿತಿ: ನಗರ ಪೊಲೀಸ್‌ ಆಯುಕ್ತರೇ ಖುದ್ದು ನಗರದ ಪ್ರತಿಷ್ಠಿತ ಶಾಲಾ-ಕಾಲೇಜುಗಳಲ್ಲಿ ನಡೆಯುವ ಅಭಿಯಾನಗಳಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಪ್ರಾತ್ಯಕ್ಷಿಕೆ ಮೂಲಕ ಮಾದಕ ವಸ್ತು ಸೇವನೆಯಿಂದ ಏನೇಲ್ಲಾ ಅನಾಹುತ ಸಂಭವಿಸುತ್ತವೆ. ಆರೋಗ್ಯದ ಮೇಲಿನ ಪರಿಣಾಮಗಳು ಹಾಗೂ ತಪ್ಪು ಮಾಡಿದರೆ ಎಷ್ಟು ಪ್ರಮಾಣದಲ್ಲಿ ಶಿಕ್ಷೆ ಹಾಗೂ ದಂಡದ ಮೊತ್ತ ಎಷ್ಟು ಎಂಬುದನ್ನು ತಿಳಿಸುತ್ತಿದ್ದಾರೆ. ಹಾಗೆಯೇ ಸಾಮಾಜಿಕ ಜಾಲತಾಣಗಳಲ್ಲಿಯೂ ಅಭಿಯಾನ ನಡೆಸಲಾಗುತ್ತಿದೆ ಎಂದು ಅಧಿಕಾರಿಯೊಬ್ಬರು “ಉದಯವಾಣಿ’ಗೆ ವಿವರಿಸಿದರು.

ಪಬ್‌ ಮತ್ತು ಬಾರ್‌ಗಳಲ್ಲಿ ನೋಟಿಸ್‌: ನಗರದಲ್ಲಿರುವ ಪಬ್‌ ಮತ್ತು ಬಾರ್‌ಗಳಲ್ಲಿ ಮಾದಕ ವಸ್ತು ಮಾರಾಟ ಹಾಗೂ ಸೇವನೆ ಪ್ರಮಾಣ ಹೆಚ್ಚಾಗಿದೆ ಎಂಬ ಮಾಹಿತಿಯಿದ್ದು, ಈ ನಿಟ್ಟಿನಲ್ಲಿ ಎಲ್ಲ ಪಬ್‌ ಮತ್ತು ಬಾರ್‌ಗಳಲ್ಲಿ ಮಾದಕ ವಸ್ತು ಸೇವನೆಯಿಂದಾಗುವ ದುಷ್ಪರಿಣಾಮಗಳ ಬಗ್ಗೆ ಭಿತ್ತಿಪತ್ರ ಅಂಟಿಸಲಾಗುವುದು. ಮಾದಕ ವಸ್ತು ಮಾರಾಟ ಮಾಡಿದರೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ, 2 ಲಕ್ಷ ರೂ. ದಂಡ. ಸೇವಿಸಿದರೆ 1 ವರ್ಷ ಶಿಕ್ಷೆ, 20 ಸಾವಿರ ದಂಡ ಎಂಬ ಮಾಹಿತಿಯನ್ನೂ ಪ್ರಕಟಿಸಲಾಗುವುದು ಎಂದು ಪೊಲೀಸ್‌ ಅಧಿಕಾರಿ ಹೇಳಿದ್ದಾರೆ.

ಸಾರ್ವಜನಿಕ ಜಾಗೃತಿ: ಸ್ಟಿಕ್ಕರ್‌ ಜೊತೆಗೆ ರೇಡಿಯೋ ಜಿಂಗಲ್ಸ್‌, ಕಿರುಚಿತ್ರಗಳು, ಹಾಡುಗಳು, ಬೀದಿ ನಾಟಕಗಳು, ಕೈ ಬ್ಯಾಂಡ್‌ಗಳು. ಜತೆಗೆ ಇದಕ್ಕಾಗಿಯೇ ವಿಶೇಷ ವಾಹನ ಕೂಡ ಸಿದ್ಧವಾಗಿದ್ದು, ನಗರದೆಲ್ಲೆಡೆ ಸಾರ್ವಜನಿಕವಾಗಿ ಜಾಗೃತಿ ಮೂಡಿಸಲಾಗುವುದು. ಒಂದೂವರೆ ನಿಮಿಷಗಳ ಕಿರುಚಿತ್ರಗಳನ್ನು ಮಲ್ಟಿಪ್ಲೆಕ್ಸ್‌ಗಳಲ್ಲಿ ಪ್ರಸಾರ ಮಾಡುವಂತೆ ಮಾಲ್‌ಗ‌ಳ ಮಾಲೀಕರಿಗೆ ಸೂಚಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

* ಮೋಹನ್‌ ಭದ್ರಾವತಿ

ಟಾಪ್ ನ್ಯೂಸ್

Gadag; ಬೈಕ್ ಗೆ ಹಿಂಬದಿಯಿಂದ ಟಿಪ್ಪರ್ ಡಿಕ್ಕಿ; ಬೈಕ್ ಗೆ ಸವಾರನ ಕಾಲು ಕಟ್!

Gadag; ಬೈಕ್ ಗೆ ಹಿಂಬದಿಯಿಂದ ಟಿಪ್ಪರ್ ಡಿಕ್ಕಿ; ಬೈಕ್ ಗೆ ಸವಾರನ ಕಾಲು ಕಟ್!

Swindon Borough ಕೌನ್ಸಿಲ್‍ನ ಮೇಯರ್ ಆಗಿ ಭಾರತೀಯ ಮೂಲದ ಇಮ್ತಿಯಾಜ್ ಶೇಖ್ ಆಯ್ಕೆ

Swindon Borough ಕೌನ್ಸಿಲ್‍ನ ಮೇಯರ್ ಆಗಿ ಭಾರತೀಯ ಮೂಲದ ಇಮ್ತಿಯಾಜ್ ಶೇಖ್ ಆಯ್ಕೆ

The Election Commission banned the BJP candidate from campaigning for 24 hours

W.Bengal; ಬಿಜೆಪಿ ಅಭ್ಯರ್ಥಿಗೆ 24 ಗಂಟೆ ಕಾಲ ಪ್ರಚಾರ ಮಾಡದಂತೆ ತಡೆ ನೀಡಿದ ಚುಣಾವಣಾ ಆಯೋಗ

17

Mollywood: 5 ತಿಂಗಳಿನಲ್ಲಿ 1000 ಕೋಟಿಗೂ ಅಧಿಕ ಗಳಿಕೆ: ಈ 3 ಸಿನಿಮಾಗಳ ಕೊಡುಗೆಯೇ ಹೆಚ್ಚು

Gangavati; ಕಿಷ್ಕಿಂಧಾ ಅಂಜನಾದ್ರಿ ಹುಂಡಿಯಲ್ಲಿ 30.21 ಲಕ್ಷ ರೂ.ಸಂಗ್ರಹ

Gangavati; ಕಿಷ್ಕಿಂಧಾ ಅಂಜನಾದ್ರಿ ಹುಂಡಿಯಲ್ಲಿ 30.21 ಲಕ್ಷ ರೂ.ಸಂಗ್ರಹ

Kottigehara ನಿಯಂತ್ರಣ ತಪ್ಪಿ ಆಟೋ ರಿಕ್ಷಾ ಪಲ್ಟಿ; ಚಾಲಕ ಮೃತ್ಯು

Kottigehara ನಿಯಂತ್ರಣ ತಪ್ಪಿ ಆಟೋ ರಿಕ್ಷಾ ಪಲ್ಟಿ; ಚಾಲಕ ಮೃತ್ಯು

Udupi: ಉಡುಪಿ ಪತ್ರಕರ್ತರಿಗೆ ‘ಪೋಕ್ಸೊ ಕಾಯಿದೆ ಮತ್ತು ಮಾಧ್ಯಮ’ ಕಾರ್ಯಾಗಾರ

Udupi: ಉಡುಪಿ ಪತ್ರಕರ್ತರಿಗೆ ‘ಪೋಕ್ಸೊ ಕಾಯಿದೆ ಮತ್ತು ಮಾಧ್ಯಮ’ ಕಾರ್ಯಾಗಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-pan

Liquid Nitrogen ಪಾನ್‌ ಸೇವಿಸಿ ಬಾಲಕಿ ಹೊಟ್ಟೆಯಲ್ಲಿ ರಂಧ್ರ

5-arrest

Arrest: ಬಾರ್‌ನಲ್ಲಿ ಮಾರಕಾಸ್ತ್ರ ತೋರಿಸಿ ಬೆದರಿಕೆ: ಇಬ್ಬ ರ ಸೆರೆ

4-bng

Bengaluru: ಶಾಸಕ ಮಹಾಂತೇಶ್‌ ಕೌಜಲಗಿ ಕಾರಿಗೆ ಡಿಕ್ಕಿ ಹೊಡೆದ ಚಾಲಕ ಸೆರೆ

3-bng

Road Mishap: ನೈಸ್‌ ರಸ್ತೆಯಲ್ಲಿ ಅಪರಿಚಿತ ವಾಹನ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವು

2-bng

Bengaluru ನಗರದಲ್ಲಿ ಮತ್ತೆ ರೇವ್‌ ಪಾರ್ಟಿ ನಶೆ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Gadag; ಬೈಕ್ ಗೆ ಹಿಂಬದಿಯಿಂದ ಟಿಪ್ಪರ್ ಡಿಕ್ಕಿ; ಬೈಕ್ ಗೆ ಸವಾರನ ಕಾಲು ಕಟ್!

Gadag; ಬೈಕ್ ಗೆ ಹಿಂಬದಿಯಿಂದ ಟಿಪ್ಪರ್ ಡಿಕ್ಕಿ; ಬೈಕ್ ಗೆ ಸವಾರನ ಕಾಲು ಕಟ್!

Swindon Borough ಕೌನ್ಸಿಲ್‍ನ ಮೇಯರ್ ಆಗಿ ಭಾರತೀಯ ಮೂಲದ ಇಮ್ತಿಯಾಜ್ ಶೇಖ್ ಆಯ್ಕೆ

Swindon Borough ಕೌನ್ಸಿಲ್‍ನ ಮೇಯರ್ ಆಗಿ ಭಾರತೀಯ ಮೂಲದ ಇಮ್ತಿಯಾಜ್ ಶೇಖ್ ಆಯ್ಕೆ

The Election Commission banned the BJP candidate from campaigning for 24 hours

W.Bengal; ಬಿಜೆಪಿ ಅಭ್ಯರ್ಥಿಗೆ 24 ಗಂಟೆ ಕಾಲ ಪ್ರಚಾರ ಮಾಡದಂತೆ ತಡೆ ನೀಡಿದ ಚುಣಾವಣಾ ಆಯೋಗ

17

Mollywood: 5 ತಿಂಗಳಿನಲ್ಲಿ 1000 ಕೋಟಿಗೂ ಅಧಿಕ ಗಳಿಕೆ: ಈ 3 ಸಿನಿಮಾಗಳ ಕೊಡುಗೆಯೇ ಹೆಚ್ಚು

Gangavati; ಕಿಷ್ಕಿಂಧಾ ಅಂಜನಾದ್ರಿ ಹುಂಡಿಯಲ್ಲಿ 30.21 ಲಕ್ಷ ರೂ.ಸಂಗ್ರಹ

Gangavati; ಕಿಷ್ಕಿಂಧಾ ಅಂಜನಾದ್ರಿ ಹುಂಡಿಯಲ್ಲಿ 30.21 ಲಕ್ಷ ರೂ.ಸಂಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.