ಮಂಡ್ಯ: ಬಿಜೆಪಿ ಲೋಕಾ ಅಭ್ಯರ್ಥಿ ಯದುವೀರ್?
Team Udayavani, Sep 8, 2018, 6:00 AM IST
ಮಂಡ್ಯ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಮೈಸೂರು ಯುವರಾಜ ಯದುವೀರ್ ಅವರನ್ನು ಕಣಕ್ಕಿಳಿಸುವ ಮಾತುಗಳು ಬಿಜೆಪಿ ವಲಯದಲ್ಲಿ ಕೇಳಿ ಬರುತ್ತಿವೆ.
ಆರು ತಿಂಗಳ ಹಿಂದೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ. ಎಸ್.ಯಡಿಯೂರಪ್ಪ ಅವರು ಮೈಸೂರು ಅರಮನೆಗೆ ಭೇಟಿ ನೀಡಿ, ಯದುವೀರ್ ಜೊತೆ ರಹಸ್ಯ ಮಾತುಕತೆ ನಡೆಸಿ ಹೋಗಿದ್ದರು. ಆ ವೇಳೆ, ಮಂಡ್ಯ ಲೋಕಸಭಾ ಕ್ಷೇತ್ರದಿಂದ ಯದುವೀರ್ ಅವರನ್ನು ಕಣಕ್ಕಿಳಿಸುವ ಬಗ್ಗೆ ಗುಪ್ತವಾಗಿ ಮಾತುಕತೆ ನಡೆಸಲಾಗಿದೆ ಎನ್ನಲಾಗುತ್ತಿದ್ದು, ಅದಕ್ಕೆ ಈಗ ರೆಕ್ಕೆ-ಪುಕ್ಕ ಮೂಡಲಾರಂಭಿಸಿದೆ. ಲೋಕಸಭಾ ಚುನಾವಣೆಯಲ್ಲಿ ರಾಷ್ಟ್ರದಲ್ಲಿ ಮತ್ತೆ ಬಿಜೆಪಿ ಅಧಿಕಾರದ ಚುಕ್ಕಾಣಿ ಹಿಡಿಯಬೇಕಾದರೆ ಒಂದೊಂದು ಸ್ಥಾನವೂ ಬಹಳ ಮುಖ್ಯ.
ಆ ನಿಟ್ಟಿನಲ್ಲಿ ಯದುವೀರ್ ಆಯ್ಕೆ ಸೂಕ್ತ ಹಾಗೂ ಸಮಯೋಚಿತ ಎಂದು ರಾಜ್ಯ, ರಾಷ್ಟ್ರ ನಾಯಕರಿಗೆ ಸಂದೇಶ ರವಾನಿಸಲಾಗಿದೆ. ಬಿಜೆಪಿ ಕೂಡ ಈಗಾಗಲೇ ಇಲ್ಲಿ ಹಲವಾರು ಅಭ್ಯರ್ಥಿಗಳನ್ನು ಕರೆ ತಂದು ನಿಲ್ಲಿಸಿದ್ದರೂ ಜೆಡಿಎಸ್, ಕಾಂಗ್ರೆಸ್ ಎದುರು ಗೆಲುವಿನ ಗುರಿ ಮುಟ್ಟಲಾಗಲೇ ಇಲ್ಲ. ಚಿತ್ರನಟ ಉಪೇಂದ್ರ ಅವರನ್ನು ಕರೆ ತರುವ ಪ್ರಯತ್ನ ಈಡೇರಲೇ ಇಲ್ಲ. ಹಾಗಾಗಿ, ಯದುವೀರ್ ಅವರನ್ನು ಕರೆ ತಂದಲ್ಲಿ ಕಾರ್ಯಕರ್ತರು, ಮುಖಂಡರು ಒಗ್ಗಟ್ಟಿನಿಂದ ದುಡಿಯುವರೆಂಬ ವಿಶ್ವಾಸ ವ್ಯಕ್ತಪಡಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್ಡ್ರೈವ್; ಸಂಕಷ್ಟದಲ್ಲಿ ಜೆಡಿಎಸ್