ನಮ್ಮ ಪ್ರತಿಷ್ಠೆಗೆ ಧಕ್ಕೆಯಾಗಿಲ್ಲ
Team Udayavani, Sep 8, 2018, 6:15 AM IST
ಬೆಳಗಾವಿ: “ಪಿಎಲ್ಡಿ ಬ್ಯಾಂಕ್ನ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆಯಲ್ಲಿ ನಮ್ಮ ಪ್ರತಿಷ್ಠೆಗೆ ಯಾವುದೇ ಧಕ್ಕೆ ಆಗಿಲ್ಲ’ ಎಂದು ಶಾಸಕ ಸತೀಶ ಜಾರಕಿಹೊಳಿ ಹೇಳಿದರು.
ಸುದ್ದಿಗಾರರ ಜೊತೆ ಮಾತನಾಡಿದ ಆವರು, “ಸಂಪರ್ಕದ ಕೊರತೆಯಿಂದ ಈ ಸಮಸ್ಯೆ ಉಂಟಾಗಿತ್ತು. ಈಗ ಎಲ್ಲವೂ
ಬಗೆಹರಿದಿದೆ. ನಮ್ಮಲ್ಲಿ ಯಾವುದೇ ಭಿನ್ನಮತ ಇಲ್ಲ. ಚುನಾವಣೆ ಹಿನ್ನೆಲೆಯಲ್ಲಿ ಬೆಳಗ್ಗೆ ಕೆಪಿಸಿಸಿ ಅಧ್ಯಕ್ಷ ದಿನೇಶ್
ಗುಂಡೂರಾವ್ ಜೊತೆ ಮಾತನಾಡಿದ್ದೇನೆ. ಬ್ಯಾಂಕ್ ನಿರ್ದೇಶಕ ಬಾಪುಗೌಡ ಪಾಟೀಲ ಅವರಿಂದಾಗಿ ಈ ಎಲ್ಲ
ಸಮಸ್ಯೆ ಉಂಟಾಗಿತ್ತು. ಮಾತುಕತೆಯ ನಂತರ ಎಲ್ಲ ಬಗೆಹರಿದಿದೆ. ನಾವು ಒಗ್ಗಟ್ಟಾಗಿದ್ದೇವೆ ಎಂದರು.
ಚುನಾವಣೆಗೆ ಮೊದಲೇ ನಾನು ಇದು ಸ್ಥಳೀಯ ಸಮಸ್ಯೆ ಎಂದು ಹೇಳಿದ್ದೆ. ಈ ಹಿಂದೆ ಅವಿರೋಧ ಆಯ್ಕೆಯಾಗುತ್ತಲೇ ಬಂದಿತ್ತು. ಹಾಗಾಗಿ, ಈ ಬಾರಿಯೂ ಚುನಾವಣೆ ನಡೆಯಬಾರದು ಎಂಬುದು ನಮ್ಮ ಆಸೆಯಾಗಿತ್ತು. ಇದರಿಂದ
ಬೇಸರವಾಗಿದೆ. ಜಿಲ್ಲಾ ಉಸ್ತುವಾರಿ ಸಚಿವರು ಅಧ್ಯಕ್ಷ ಸ್ಥಾನವನ್ನು ಮರಾಠಾ ಸಮಾಜದವರಿಗೆ ನೀಡಬೇಕು ಎಂದು ಹೇಳಿದ್ದರು. ಅದರಂತೆ ಅಧ್ಯಕ್ಷ ಹುದ್ದೆ ಈ ಸಮುದಾಯಕ್ಕೆ ಸಿಕ್ಕಿದೆ. ಯಾವುದೇ ಗೊಂದಲ ಇಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Drought Relief: ಕಾಂಗ್ರೆಸ್-ಬಿಜೆಪಿ ಬರ ಪರಿಹಾರ ಜಟಾಪಟಿ
Drought Relief: ಎಕ್ಸ್ (ಟ್ವಿಟರ್)ನಲ್ಲೂ ಕಾಂಗ್ರೆಸ್-ಬಿಜೆಪಿ ವಾಕ್ಸಮರ
Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್ ಏಜೆಂಟ್ ಟ್ರಿಫ್’: ಬಿಜೆಪಿ ಆರೋಪ
HDK ಪೆನ್ಡ್ರೈವ್ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ
Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್.ಡಿ. ಕುಮಾರಸ್ವಾಮಿ