ಸಹಕಾರ ಸಕ್ಕರೆ ಕಾರ್ಖಾನೆ ವಸ್ತುಸ್ಥಿತಿ ಪರಿಶೀಲನೆ


Team Udayavani, Sep 8, 2018, 11:21 AM IST

bid-3.jpg

ಹುಮನಾಬಾದ: ಹಳ್ಳಿಖೇಡ(ಬಿ) ಬಳಿಯ ಬೀದರ ಸಹಕಾರ ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿ ರದ್ದುಗೊಂಡ ನಂತರ
ನೇಮಕಗೊಂಡ ಆಡಳಿತಾಧಿಕಾರಿಗಳೂ ಆದ ಜಿಲ್ಲಾಧಿಕಾರಿ ಡಾ| ಎಚ್‌.ಆರ್‌. ಮಹಾದೇವ ಅವರು ಶುಕ್ರವಾರ ಪ್ರಥಮ
ಬಾರಿಗೆ ಕಾರ್ಖಾನೆಗೆ ಭೇಟಿನೀಡಿ, ವಸ್ತುಸ್ಥಿತಿ ಪರಿಶೀಲಿಸಿರು.

ಕಾರ್ಖಾನೆಯ ವಿವಿಧ ವಿಭಾಗಗಳಿಗೆ ಭೇಟಿ ನೀಡಿದ ನಂತರ, ಪ್ರಭಾರ ವ್ಯವಸ್ಥಾಪಕ ನಿರ್ದೇಶಕ ವಿಶ್ವನಾಥ ಮಲ್ಕೂಡ್‌,
ಶಿವಶರಣಪ್ಪ, ಹಣಮಂತಪ್ಪ, ಮುಖ್ಯ ಇಂಜಿನಿಯರ್‌ ಸಂಜೀವಕುಮಾರ ಪಾಟೀಲ ಅವರೊಂದಿಗೆ ಕಾರ್ಖಾನೆ ಸಭಾಂಗಣದಲ್ಲಿ ಪ್ರತ್ಯೇಕ ಸಭೆ ನಡೆಸಿದರು.

ತಕ್ಷಣ ಕಾರ್ಖಾನೆ ಆರಂಭಿಸಲು ಬೇಕಾಗುವ ಸಿಬ್ಬಂದಿ, ಯಂತ್ರೋಪಕರಣ ದುರಸ್ತಿ, ಕಬ್ಬು ಕಟಾವಿಗೆ ಬೇಕಾಗುವ
ಕಾರ್ಮಿಕರ ಸಂಖ್ಯೆ, ತಗಲುವ ಒಟ್ಟು ವೆಚ್ಚ ಇತ್ಯಾದಿ ಕುರಿತು ಸಂಜೆ 5ಗಂಟೆ ವರೆಗೆ ಅಧಿಕಾರಿಗಳ ಜೊತೆಗೆ ಸುದೀರ್ಘ‌ ಚರ್ಚೆ ನಡೆಸಿದರು.

ಕಾರ್ಮಿಕರೊಂದಿಗೆ ಚರ್ಚೆ: ಅಧಿಕಾರಿಗಳ ಜೊತೆಗೆ ಚರ್ಚಿಸಿದ ನಂತರ, ಹುದ್ದೆ ಕಳೆದುಕೊಂಡ ಕಾರ್ಖಾನೆಯ ನೌಕರರ
ಸಂಘದ ಪ್ರಮುಖ ಪದಾಧಿಕಾರಿಗಳನ್ನು ಆಹ್ವಾನಿಸಿ, ಕಾರ್ಖಾನೆ ಆರಂಭಿಸಲು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಚರ್ಚೆ ನಡೆಸಿದರು. ಈ ವೇಳೆ ನೌಕರರ ಸಂಘದ ಅಧ್ಯಕ್ಷ ಗುರುಲಿಂಗಯ್ಯ, 15ತಿಂಗಳಿಂದ ಸಂಬಳವಿಲ್ಲದೇ ತೀವ್ರ ತೊಂದರೆ ಅನುಭವಿಸುತ್ತಿದ್ದೇವೆ. ಮೊದಲು ಕೇವಲ ಸಂಬಳದ ಸಮಸ್ಯೆ ಮಾತ್ರ ಇತ್ತು. ಈಗ ಹುದ್ದೆ ಕಳೆದುಕೊಂಡ ನೋವು ಗಾಯದ ಮೇಲೆ ಬರೆ ಎಳೆದಂತಾಗಿದೆ. ಮೊದಲಿಗೆ ಹುದ್ದೆಯಿಂದ ತೆಗೆದು ಹಾಕಿದವರನ್ನು ಮರು ನೇಮಕ ಮಾಡಿಕೊಳ್ಳಬೇಕು. ಬಾಕಿ ಸಂಬಳವನ್ನು ಸಾಧ್ಯವಾದಷ್ಟು ಶೀಘ್ರ ಪಾವತಿಸಬೇಕು ಎಂದು ಒತ್ತಾಯಸಿದರು.
 
ಎಂಟು ದಿನ ಕಾಲಾವಕಾಶ: ಅಧಿಕಾರಿಗಳು ಮಾತ್ರವಲ್ಲದೇ ನಿಮ್ಮೊಂದಿಗೂ ಸುದೀರ್ಘ‌ ಚರ್ಚೆ ನಡೆಸಿದ್ದೇನೆ. ಕಾರ್ಖಾನೆಯ ವಸ್ತುಸ್ಥಿತಿ, ಶೀಘ್ರ ಆರಂಭಿಸಲು ತಗಲುವ ವೆಚ್ಚ, ಇತ್ಯಾದಿಗಳ ಕುರಿತು ಸಮಗ್ರ ವರದಿಯನ್ನು ನಿರ್ದೇಶಕರಿಗೆ ಸಲ್ಲಿಸುತ್ತೇವೆ. ಆ ವರದಿಯನ್ನು ಮುಖ್ಯಮಂತ್ರಿ ಅವರು ಆಹ್ವಾನಿಸಿದಲ್ಲಿ ಅಲ್ಲಿ ನಡೆಯುವ ಚರ್ಚೆಯ ನಂತರ ಕೈಗೊಳ್ಳುವ ನಿರ್ಧಾರ ಕುರಿತು 8-10ದಿನಗಳಲ್ಲಿ ತಿಳಿಸುವುದಾಗಿ ಡಾ| ಎಚ್‌.ಆರ್‌.ಮಹಾದೇವ ಅವರು ಕಾರ್ಮಿಕ ಮುಖಂಡರಿಗೆ ತಿಳಿಸಿದರು. 

ಸಮಸ್ಯೆ ಬಗೆಹರಿಯದಿದ್ದರೆ ಹೋರಾಟ: ಆಡಳಿತಾಧಿಕಾರಿಗಳು ಕಾರ್ಖಾನೆಗೆ ಭೇಟಿ ನೀಡಿ, ಭರವಸೆ ಏನೋ ನೀಡಿದ್ದಾರೆ. ಪ್ರಭಾರ ವ್ಯವಸ್ಥಾಪಕ ನಿರ್ದೇಶಕರಿಗೆ ಅಷ್ಟಾಗಿ ಆಸಕ್ತಿ ಇಲ್ಲದಿರುವುದು ಮೇಲ್ನೋಟ‌ಕ್ಕೆ ಸ್ಪಷ್ಟವಾಗಿ
ಕಾಣುತ್ತಿದೆ. ಆದರೇ ಆಡಳಿತಾಧಿಕಾರಿ ಅವರು ಕೈಗೊಳ್ಳುವ ಮುಂದಿನ ಕ್ರಮದ ಮೇಲೆ ನಮ್ಮ ನೌಕರಿ, ಬಾಕಿ ಸಂಬಳ ಅವಲಂಬನೆ ಆಗಿದೆ. 

ಸಚಿವರಿಬ್ಬರೂ ನಮ್ಮವರೇ ಆಗಿರುವುದರಿಂದ ಅನ್ಯಾಯ ಆಗಲಿಕ್ಕಿಲ್ಲ ಎಂಬ ನಂಬಿಕೆ ಇದೆ. ಅಷ್ಟಕ್ಕೂ ನಂಬಿಕೆ ದ್ರೋಹ ಬಗೆದಲ್ಲಿ ಉಗ್ರಸ್ವರೂಪದ ಹೋರಾಟ ನಡೆಸುವುದು ಅನಿವಾರ್ಯವಾಗುತ್ತದೆ ಎಂದು ಕಾರ್ಖಾನೆ ಕಾರ್ಮಿಕ ಸಂಘಟನೆ ಅಧ್ಯಕ್ಷ ಗುರುಲಿಂಗಯ್ಯ ಹಾಲಾ ತಿಳಿಸಿದರು.

ಕಾರ್ಮಿಕ ಸಂಘಟನೆ ಮುಖಂಡರಾದ ರಾಜು ಪಾಟೀಲ, ಸುರೇಶ, ಶಶಿಕಾಂತ, ಝರಣಾರೆಡ್ಡಿ, ಪ.ಜಾ, ಪ.ಪಂ
ನೌಕರರ ಸಂಘದ ಅಧ್ಯಕ್ಷ ಅನೀಲರೆಡ್ಡಿ, ಮಲ್ಲಿಕಾರ್ಜುನ ಭಂಡಾರಿ, ಪ್ರಕಾಶ, ರವಿಕುಮಾರ ಮೊದಲಾದವರು ಇದ್ದರು. 

ಟಾಪ್ ನ್ಯೂಸ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.