ಶಾಲೆ ಅಂದರೆ ಹೀಗಿರಬೇಕು!;ಇದು ಸರ್ಕಾರಿ ಮಾದರಿ ಶಾಲೆ


Team Udayavani, Sep 8, 2018, 4:12 PM IST

80.jpg

ನಾಗತಿಹಳ್ಳಿ ಶಾಲೆಯ ಮುಂದೆ ನಿಂತರ ಹೀಗನಿಸುತ್ತದೆ. ದೂರದಿಂದ ನೋಡಿದರೆ ಇದ್ಯಾವುದೋ ಖಾಸಗಿ ಶಾಲೆಯ ಅನಿಸಿಬಿಟ್ಟರೆ ಆಶ್ಚರ್ಯ ಪಡಬೇಕಿಲ್ಲ. ಹತ್ತಿರ ಹೋದರೆ, ಅರೆ, ಸರ್ಕಾರಿ ಸ್ಕೂಲ್‌ ಹೀಗುಂಟ? ಅಂತ ಚಕಿತ ಗೊಳಿಸುವಷ್ಟು ಚೆನ್ನಾಗಿದೆ ಈ ಶಾಲೆ.

ವಿಶಾಲವಾದ ಕಟ್ಟಡ, ಶಾಲೆಯ ಅಂದಕ್ಕೆ ವಿಶಿಷ್ಟ ಮೆರುಗು ನೀಡಿರುವ ಕೆಂಪು ಇಟ್ಟಿಗೆಗಳು ಇಡೀ ಶಾಲೆಯ ಸೌಂದರ್ಯ ಹೆಚ್ಚಿಸಿದೆ. ಇಡೀ ಕಟ್ಟಡ ಎರಡೇ ಬಣ್ಣದಿಂದ ಕೂಡಿದೆ. ಕೆಂಪು ಮತ್ತು ಸಿಮೆಂಟ್‌. ಕೊಠಡಿಗಳಲ್ಲಿ ಬೋರ್ಡು ಇರುವ ಸ್ಥಳವನ್ನು ಮಾತ್ರ ಪ್ಲಾಸ್ಟಿಂಗ್‌ ಮಾಡಿದೆ. ಉಳಿದ ಕಡೆ ಜಂಬು ಇಟ್ಟಿಗೆಯ ಗೋಡೆಗಳು. ಪೇಯಿಂಟ್‌ ಇಲ್ಲ.ಬೆಳಕು, ಗಾಳಿ ಎಲ್ಲವೂ ವೈಜ್ಞಾನಿಕವಾಗಿಯೇ. 

ಮೊದಲು ಹತ್ತರಲ್ಲಿ ಹನ್ನೊಂದು ಅನ್ನುವಂತೆ ಇತ್ತು ಈ ನಾಗತಿಹಳ್ಳಿ ಸರ್ಕಾರಿ ಪ್ರಾಥಮಿಕ ಶಾಲೆ. ಈಗ ಅದರ ಖದರೇ ಬದಲಾಗಿದೆ. ಬಂದವರೆಲ್ಲಾ, ಸ್ಕೂಲ್‌ ಅಂದರೆ ಹೀಗಿರಬೇಕು ಅನ್ನೋ ರೀತಿ ರೂಪಿತವಾಗಿದೆ.  

  ಒಟ್ಟು 6 ಕೊಠಡಿಗಳಿವೆ. ಕೆಳಗೆ ಮೂರು, ಮೇಲೆ ಎರಡು. ಮೇಲೆ ಕೊಠಡಿಯಂತಿದ್ದರೂ ಅಲ್ಲಿ ಸಣ್ಣ ಸಮಾರಂಭ ಕೂಡ ಮಾಡಬಹುದು. ಆ ರೀತಿ ನಿರ್ಮಿಸಲಾಗಿದೆ. ಖ್ಯಾತ ಚಲನಚಿತ್ರ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ ಅವರ ಹುಟ್ಟೂರು ಇದು. ಹೀಗಾಗಿ, ಊರ ಶಾಲೆಗೆ ಅತ್ಯಾಧುನಿಕ ವಿನ್ಯಾಸದ ಕಟ್ಟಡ ಬರುವಲ್ಲಿ ನಾಗತಿಹಳ್ಳಿ ಚಂದ್ರಶೇಖರ್‌ ಅತಿಕಾಳಜಿ ವಹಿಸಿದ್ದಾರೆ. ಇವರು ಒಂದು ಬಯಲು ರಂಗಮಂದಿರವನ್ನೂ, ಹೆತ್ತವರ ನೆನಪಿಗೆ ಗ್ರಂಥಾಲಯವನ್ನೂ ನಿರ್ಮಿಸಿಕೊಟ್ಟಿದ್ದಾರೆ. ಅಲ್ಲದೇ, ಒಟ್ಟಾರೆ ಕಟ್ಟಡ ನಿರ್ಮಾಣ ವೆಚ್ಚದಲ್ಲಿ ಅಗತ್ಯವಿದ್ದ ನಾಲ್ಕು  ಲಕ್ಷ ರೂ. ಅನ್ನು ಅವರೇ ಹೊಂದಿಸಿದ್ದಾರೆ. ಉಳಿಕೆ 16 ಲಕ್ಷ ರೂಪಾಯಿಗಳನ್ನು ಸರ್ಕಾರವೇ ನೀಡಿತ್ತು ಎನ್ನುತ್ತಾರೆ ಇಲ್ಲಿ ಈ ಹಿಂದೆ ಹೆಡ್‌ಮಾಸ್ಟರ್‌ ಆಗಿದ್ದ ಕೆ.ಎನ್‌. ಪುಟ್ಟೇಗೌಡ. 

ಈಗ ಪ್ರಾಥಮಿಕ ಶಾಲೆಯಲ್ಲಿ ಎಲ್‌.ಕೆ.ಜಿ, ಯೂ.ಕೆ.ಜಿ ಕೂಡ ಪ್ರಾರಂಭವಾಗಿದೆಯಂತೆ.  ಶಾಲೆಯಲ್ಲಿ ಪರಿಸರ ಸ್ನೇಹಿ ಶಾಲೆ ಅನ್ನೋ ಬೋರ್ಡು ಇದೆ. ಅದಕ್ಕೆ ತಕ್ಕಂತೆ ಕಟ್ಟಡವೂ ಇದೆ. ನೋಟಕ್ಕೆ ಮಾತ್ರ ಚೆಂದವಲ್ಲ ಈ ನಾಗತಿ ಹಳ್ಳಿ ಶಾಲೆ. ಒಳಾಂಗಣದ ತಾಂತ್ರಿಕತೆ ನಮ್ಮ ಸಕಲ  ಸರ್ಕಾರಿ ಶಾಲೆಗಳಿಗೆ ಮಾದರಿಯಾಗುವ ರೀತಿಯಲ್ಲಿದೆ. 

ಹೈಟೆಕ್‌ ತಂತ್ರ
 ಶಾಲೆ ಎಂದ ಮೇಲೆ ಶಿಕ್ಷಕರು ಪಾಠ ಮಾಡಬೇಕಾದರೆ ಗುಸು ಗುಸು, ಪಿಸು ಪಿಸು ಇದ್ದೇ ಇರುತ್ತದೆ. ವಿದ್ಯಾರ್ಥಿಗಳು ತೀಟೆ ಮಾಡಿದರೆ ಶಿಕ್ಷಕರು ರಾಂಗ್‌ ಆಗುತ್ತಾರೆ ಆಗಲೇ ಅವರ ಜೊತೆಗೆ ಧ್ವನಿಯೂ ಗಡುಸಾಗಿ ಕೇಳಿಬರುತ್ತದೆ!  ಎಷ್ಟೋ ಸಲ ಅಧ್ಯಾಪಕರಿಗೆ ಕೋಪವೇನೂ ಬಂದಿರುವುದಿಲ್ಲ, ಆದರೆ ಮಕ್ಕಳು “ಮೇಷ್ಟ್ರಿಗೆ ಕೋಪ ಬಂದಿರಬೇಕು, ಮುಖನೋಡಿದರೆ ಹಾಗೇ ಅನ್ನಿಸುತ್ತದೆ!’ ಎಂದು ಯೋಚಿಸುತ್ತಾರೆ. ಇಂಥ ಸಮಸ್ಯೆ ಈ ಶಾಲೆಯಲ್ಲಿಲ್ಲ. 

 ಏಕೆಂದರೆ,  ಪಾಠಮಾಡುವ ಕೋಣೆಗಳಲ್ಲಿ ಶಬ್ದಗ್ರಹಿಕೆ (ಅಕೊಸ್ಟಿಕ್‌) ತಂತ್ರಜ್ಞಾನ ಅಳವಡಿಸಿದೆ. ಹೀಗಾಗಿ ಈ ಶಾಲೆಯಲ್ಲಿ ಮೇಷ್ಟ್ರು ಮೆಲುಧ್ವನಿಯಲ್ಲಿ ಹಸನ್ಮುಖರಾಗಿ ಪಾಠಮಾಡಿದರೂ ಸ್ಪಷ್ಟವಾಗಿ ಕೇಳುತ್ತದೆ.  ಡ್ರಾಮಾ ಥಿಯೇಟರ್‌ಗಳಲ್ಲಿ ಇರುವಂತೆ “ಬೀಸಣಿಗೆ’- ಹ್ಯಾಂಡ್‌ ಫ್ಯಾನ್‌ ಆಕಾರದಲ್ಲಿ ಎದುರು ಬದಿರು ಗೋಡೆಗಳು ಒಂದು ಕೋನದಲ್ಲಿದಲ್ಲಿರುವುದರಿಂದ ಪ್ರತಿಧ್ವನಿ ಕಡಿಮೆಯಾಗಿ ಶಬ್ಧಗ್ರಹಿಕೆ ಉತ್ತಮವಾಗಿದೆ. 

ಇದೇ ಕಟ್ಟುವಿಕೆಯ ತಂತ್ರ ಪ್ರಪಂಚದ ಅತ್ಯುತ್ತಮ ನಾಟಕಗಳ ಮಂದಿರಗಳಲ್ಲಿದೆ.  ಅಲ್ಲಿ ಪ್ರತಿಧ್ವನಿಸುವುದಿಲ್ಲ ಹಾಗೂ ಧ್ವನಿ  ಸ್ಪಷ್ಟವಾಗಿ ಕೇಳುತ್ತದೆ. ಇದರಿಂದಾಗಿ ಉಚ್ಛಾರಣೆಯೂ ಉತ್ತಮವಾಗಲು ಸಹಕಾರಿ.

ಈ ಶಾಲೆಯ ಎಲ್ಲ ಕೋಣೆಗಳೂ ಅಕಾಸ್ಟಿಕ್‌ ಡಿಸೈನ್‌ ಹೊಂದಿವೆ. ಗೋಡೆಗಳು ಎದರುರುಬದಿರು ಇರದೆ ಒಂದು ಕೋನದಲ್ಲಿವೆ. ಜೊತೆಗೆ ಮಾಮೂಲಿ ನಾಲ್ಕು ಮೂಲೆಗಳ ಕೋಣೆಗಳ ಬದಲಿಗೆ ಈ ಶಾಲೆಯ ಪ್ರತಿ ಕೋಣೆಗಳಲ್ಲಿ ಆರು ಮುಲೆಗಳಿದ್ದು, ಮೂರು ಗೋಡೆಗಳು ಧ್ವನಿ ಪ್ರತಿಫ‌ಲಿಸದಂತೆ ತಡೆಯಲು ಉಬ್ಬಿದಂತೆ “ಕಾನ್‌ವೆಕ್ಸ್‌’ ಆಗಿ ಇವೆ. ಈ ಮಾದರಿಯ ಗೋಡೆಗಳು ಧ್ವನಿಯನ್ನು ಎಲ್ಲಿಬೇಕೋ ಅಲ್ಲಿ ಪ್ರಸರಿಸಿ, “ಬ್ಯಾಕ್‌ಗ್ರೌಂಡ್‌ ನಾಯ್ಸ’ -ಅನಗತ್ಯ ಶಬ್ದವನ್ನು ನಿಗ್ರಹಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ ಎನ್ನುತ್ತಾರೆ ಶಾಲೆಯ ಕಟ್ಟಡ ವಿನ್ಯಾಸ ಮಾಡಿದ ಕೆ. ಜಯರಾಮ್‌. 

 ಕಣ್ಣೇ ಸಿಸಿ ಟೀವಿ
ಮಾಮೂಲಿ ಶಾಲೆಗಳಲ್ಲಿ ಕೋಣೆಯ ಒಳಪ್ರವೇಶ ಕಾರಿಡಾರ್‌ ಮೂಲಕ ಆಗುವುದರಿಂದ, ಮೇಷ್ಟ್ರು ಬಾಗಿಲಿನ ಬಳಿಗೆ ಬಂದು ಇಣುಕಿನೋಡುವವರೆಗೂ ಒಳಗೆ ಏನು ಆಗುತ್ತಿರುತ್ತದೆ ಎಂಬುದು ತಿಳಿಯುವುದಿಲ್ಲ! ಸಾಮಾನ್ಯವಾಗಿ ಯಾವ ಸಾರ್ವಜನಿಕ ಸ್ಥಳ ಹೊರಗಿನಿಂದ ನೋಡಲು ಹಾಗೂ ಒಳಗಿನಿಂದ ಹೊರಗೆ ನೋಡಿಕೊಳ್ಳಲೂ ಸುಲಭಸಾಧ್ಯ ಆಗಿರುತ್ತದೋ ಅಂಥ ಸ್ಥಳಗಳು ಹೆಚ್ಚು ಸುರಕ್ಷಿತ ಎನ್ನಬಹುದು. ನಾಗತಿಹಳ್ಳಿ ಶಾಲೆಯಲ್ಲಿ ಕಾಲಿಡುತ್ತಿದ್ದಂತೆ ಬಹುತೇಕ ಎಲ್ಲ ಕೋಣೆಗಳು ಗೋಚರವಾಗುತ್ತವೆ. ಹೀಗಾಗಿ ಮಕ್ಕಳ ಮೇಲೆ  ಕಣ್ಣಿಡಲು ಮುಖ್ಯೋಪಾಧ್ಯಾಯರಿಗೂ ಸುಲಭ ಸಾಧ್ಯ. 

ಪರಿಸರ ಪ್ರೇಮಿ ಕಟ್ಟಡ 
ಈ ಶಾಲೆಯ ಕಟ್ಟಡವನ್ನು ನೈಸರ್ಗಿಕವಾಗಿಯೇ “ಏರ್‌ ಕಂಡಿಷನ್‌’ ಇರುವಂತೆ ವಿನ್ಯಾಸ ಮಾಡಲಾಗಿದೆ. ಇಲ್ಲಿ ಗಾಳಿ ಬೆಳಕು ಧಾರಾಳವಾಗಿದೆ. ಹೀಗಾಗಿ ಬೇಸಿಗೆಯಲ್ಲಿ ತರಗತಿಗಳೆಲ್ಲವೂ ತಂಪಾಗಿರುವ ಹಾಗೆಯೇ ಚಳಿಗಾಲದಲ್ಲಿ ಬೆಚ್ಚಗಿರುತ್ತದೆ. ಇದಕ್ಕಾಗಿ ಕಿಟಕಿಗಳ ಸ್ಥಳ ವಿನ್ಯಾಸವನ್ನು ವಿಶೇಷವಾಗಿ ರೂಪಿಸಿ ಕ್ರಾಸ್‌ ವೆಂಟಿಲೇಷನ್‌ – (ಗಾಳಿ ಅಡ್ಡ ಹಾಯುವಂತೆ) ಮಾಡಲಾಗಿದೆ. ಮಾಮೂಲಿ ಇಟ್ಟಿಗೆ ಬದಲಿಗೆ ಪರಿಸರ ಸ್ನೇಹಿ ಜೇಡಿಮಣ್ಣಿನ ಠೊಳ್ಳು ಇಟ್ಟಿಗೆಗಳನ್ನು ಬಳಸಿರುವುದರಿಂದ ಶಾಲೆಯ ಹೊರನೋಟ ಬದಲಾಗಿದೆ.   

ಒಂದು ಕಾಲದಲ್ಲಿ ಶಾಲಾ ಕಟ್ಟಡಗಳು ಆಯಾ ಪ್ರದೇಶದ ಅತಿ ಉತ್ತಮ ಹಾಗೂ ಸುಂದರವಾದ ನಿರ್ಮಿತಿಗಳಾಗಿರುತ್ತಿದ್ದವು. ಇಂದಿಗೂ ಅನೇಕ ಕಲ್ಲಿನಲ್ಲಿ ಕಟ್ಟಿದ, ಗಡಿಯಾರಗೋಪುರ ಹೊಂದಿದ ಕಟ್ಟಡಗಳು ಎಪ್ಪತ್ತು, ಎಂಭತ್ತು ವರ್ಷಗಳ ಹಿಂದಿನಿಂದ ಗಟ್ಟಿ ಮುಟ್ಟಾಗಿರುವುದನ್ನು ನೋಡಬಹುದು. ನಾಗತಿಹಳ್ಳಿಯ ಶಾಲೆಯ ವಿನ್ಯಾಸ ಕೂಡ ಇಂಥದೇ ತಂತ್ರಗಳನ್ನು ಬಳಸಿ ನಿರ್ಮಿತವಾಗಿದೆ. 

ಸರ್ಕಾರಿಶಾಲೆಯನ್ನು, ಸರ್ಕಾರಿ ದುಡ್ಡಲ್ಲೇ ಹೀಗೂ ಕಟ್ಟಬಹುದು ಅನ್ನೋದಕ್ಕೆ ಇದು ಮಾದರಿ.  

ಕೆ.ಜಿ

ಟಾಪ್ ನ್ಯೂಸ್

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bahumuki

ಅರಮನೆಯಂಥ ಬಂಗಲೆ ಇದೆ, ಏನುಪಯೋಗ?

ಮೊದಲ ಗುರಿಯೇ ಕೊನೆಯದೂ ಆಗಿದೆ!

ಮೊದಲ ಗುರಿಯೇ ಕೊನೆಯದೂ ಆಗಿದೆ!

bahumuki

ಹುಡುಗಿಯ ಚುಂಬನ ಮತ್ತು ಆಗಸದ ತಾರೆ

ಟೊಮೇಟೊ ಹಣ್ಣಿನ ಗೊಜ್ಜು

ಟೊಮೇಟೊ ಹಣ್ಣಿನ ಗೊಜ್ಜು

ದೀಪವನ್ನೇ ಏಕೆ ಬಳಸಬೇಕು?

ದೀಪವನ್ನೇ ಏಕೆ ಬಳಸಬೇಕು?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.