ಹಿರೇಕಲ್ಮಠ ಮಹಾರಥೋತ್ಸವ
Team Udayavani, Sep 8, 2018, 4:42 PM IST
ಹೊನ್ನಾಳಿ: ಇಲ್ಲಿನ ಸುಕ್ಷೇತ್ರ ಹಿರೇಕಲ್ಮಠದ ಶ್ರೀ ಚನ್ನಪ್ಪಸ್ವಾಮಿಗಳ ಮಹಾ ರಥೋತ್ಸವ ಶುಕ್ರವಾರ ವಿಜೃಂಭಣೆಯಿಂದ ಜರುಗಿತು. ಶಹನಾಯಿ, ಭಜನೆ, ಡೊಳ್ಳು, ನಾಸಿಕ್ ಡೊಳ್ಳು, ಚಂಡಿ ವಾದ್ಯ, ಕೀಲು ಕುದುರೆ, ಪುರವಂತರ ಉರುವಣೆ, ಸಕಲ ಬಿರುದಾವಳಿಗಳು ಹಾಗೂ ವಿನೋದಾವಳಿಗಳು ರಥೋತ್ಸವದಲ್ಲಿ ಪಾಲ್ಗೊಂಡಿದ್ದವು.
ರಥದಲ್ಲಿ ಡಾ| ಒಡೆಯರ್ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮಿಗಳು ಆಸೀನರಾದ ನಂತರ ರಥೋತ್ಸವಕ್ಕೆ ಚಾಲನೆ ನೀಡಲಾಯಿತು. ಸಾವಿರಾರು ಭಕ್ತರು ರಥಕ್ಕೆ ಉತ್ತತ್ತಿ, ಬಾಳೆಹಣ್ಣು ಹಾರಿಸುವ ಮೂಲಕ ತಮ್ಮ ಭಕ್ತಿಯನ್ನು ಸಮರ್ಪಿಸಿದರು.
ಚನ್ನಪ್ಪ ಸ್ವಾಮಿಗಳಿಗೆ ಜಯವಾಗಲಿ, ಒಡೆಯರ್ ಚಂದ್ರಶೇಖರ ಶಿವಾಚಾರ್ಯ ಸ್ವಾಮಿಗಳಿಗೆ, ಒಡೆಯರ್ ಚನ್ನಮಲ್ಲಿಕಾರ್ಜುನ ಶಿವಾಚಾರ್ಯರಿಗೆ ಜಯವಾಗಲಿ ಎನ್ನುವ ಘೋಷಣೆಗಳು ಮೆರವಣಿಗೆಯುದ್ದಕ್ಕೂ ಕೇಳಿ ಬಂದವು. ರಥೋತ್ಸವ ಶ್ರೀಮಠದಿಂದ ಪ್ರಾರಂಭವಾಗಿ ಖಾಸಗಿ ಬಸ್ ನಿಲ್ದಾಣದವರೆಗೆ ಸಾಗಿ ಪುನಃ ಶ್ರೀಮಠಕ್ಕೆ ಮರಳಿತು.
ರಥೋತ್ಸವಕ್ಕೂ ಮುನ್ನ ಧ್ವಜ, ಹೂವಿನ ಹಾರಗಳು ಸೇರಿದಂತೆ ಇತರ ಪ್ರಮುಖ ವಸ್ತುಗಳನ್ನು ಬಹಿರಂಗ
ಹರಾಜು ಮಾಡಲಾಯಿತು.
ಕೆಂಡದರ್ಚನೆ: ರಥೋತ್ಸವಕ್ಕೆ ಮುನ್ನ ಶ್ರೀಮಠದ ಮುಂಭಾಗದಲ್ಲಿ ವೀರಭದ್ರದೇವರ ಕೆಂಡದರ್ಚನೆ ಅಂಗವಾಗಿ ಸಾವಿರಾರು ಭಕ್ತರು ಕೆಂಡ ಹಾಯ್ದರು. ಮಕ್ಕಳು, ಹೆಣ್ಣುಮಕ್ಕಳು, ವಯೋವೃದ್ಧರು ಕೆಂಡ ಹಾಯುವ ಮೂಲಕ ತಮ್ಮ ಭಕ್ತಿಯ ಪರಾಕಾಷ್ಠೆಯನ್ನು ಮೆರೆದರು.
ಸಾಮೂಹಿಕ ಭೋಜನ: ಆಗಮಿಸಿದ್ದ ಭಕ್ತಾದಿಗಳಿಗೆ ಶ್ರೀಮಠದ ಆವರಣದಲ್ಲಿ ಭೋಜನ ವ್ಯವಸ್ಥೆ ಮಾಡಲಾಗಿತ್ತು. ಸುಮಾರು 25 ಸಾವಿರಕ್ಕೂ ಹೆಚ್ಚಿನ ಭಕ್ತರು ಗೋಧಿಪಾಯಸ, ಅನ್ನ, ಸಾಂಬಾರು, ಪಲ್ಯ ಸ್ವೀಕರಿಸಿದರು.
ಚೌಡೇಶ್ವರಿದೇವಿಯ ಶಾಂತ್ಯರ್ಥವಾಗಿ ಹೋಮ ಮತ್ತು ಮುತ್ತೈದೆಯರಿಗೆ ಉಡಿ ತುಂಬುವ ಕಾರ್ಯಕ್ರಮ ಜರುಗಿದವು. ಜಂಗಮ ವಟುಗಳಿಗೆ ಶಿವದೀಕ್ಷಾ ಕಾರ್ಯಕ್ರಮ ನಡೆಯಿತು. ಡಾ| ಒಡೆಯರ್ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮಿಗಳು ಸಾನ್ನಿಧ್ಯ ವಹಿಸಿದ್ದರು.
ಮಳೆ ಸಿಂಚನ: ರಥೋತ್ಸವ ಪ್ರಾರಂಭ ಸಮಯದಲ್ಲಿ 5 ನಿಮಿಷ ಮಳೆ ಸುರಿದರೂ ನಂತರ ಸ್ವತ್ಛ ಬಿಸಿಲು ಬಿತ್ತು. ರಥೋತ್ಸವಕ್ಕೆ ಯಾವುದೇ ತೊಂದರೆಯಾಗಲಿಲ್ಲ. ಶಾಸಕ ಎಂ.ಪಿ. ರೇಣುಕಾಚಾರ್ಯ, ಮಾಜಿ ಶಾಸಕ ಡಿ.ಜಿ. ಶಾಂತನಗೌಡ ರಥೋತ್ಸವದಲ್ಲಿ ಪಾಲ್ಗೊಂಡು ಸ್ವಾಮಿಗಳ ಆಶೀರ್ವಾದ ಪಡೆದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು
Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
MUST WATCH
ಹೊಸ ಸೇರ್ಪಡೆ
PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್
Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’