ಚಾ.ನಗರದಲ್ಲಿ ದ.ಭಾರತದ ಮೊದಲ ಅರಿಶಿನ ಸಂಸ್ಕರಣ ಘಟಕ


Team Udayavani, Sep 9, 2018, 6:00 AM IST

chamarajanagar.jpg

ಚಾಮರಾಜನಗರ: ದಕ್ಷಿಣ ಭಾರತದಲ್ಲಿಯೇ ಪ್ರಥಮವಾಗಿ ಸರ್ಕಾರಿ ಸ್ವಾಮ್ಯದ ಅರಿಶಿನ ಸಂಸ್ಕರಣ ಘಟಕ ನಗರದ ಎಪಿಎಂಸಿಯಲ್ಲಿ ಕಾರ್ಯಾರಂಭ ಮಾಡಲಿದ್ದು, ಯಂತ್ರೋ ಪಕರಣಗಳ ಜೋಡಣೆ ಕಾರ್ಯ ಪ್ರಗತಿಯಲ್ಲಿದೆ. ಎಪಿಎಂಸಿ ಪ್ರಾಂಗಣದಲ್ಲಿ ಒಂದು ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಿರುವ ಅರಿಶಿನ ಸಂಸ್ಕರಣ ಘಟಕದ ಅಂತಿಮ ಸಿದಟಛಿತೆ ಹಾಗೂ ಹೈಟೆಕ್‌ ಯಂತ್ರೋಪಕರಣಗಳ ಜೋಡಣೆ ಕಾರ್ಯ ನಡೆಯುತ್ತಿದೆ.

ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ಕೋಟಿ ರೂ. ವೆಚ್ಚದಲ್ಲಿ ಅರಿಶಿನ ಸಂಸ್ಕರಣ ಘಟಕ ನಿರ್ಮಾಣಕ್ಕೆ ಚಾಲನೆ ನೀಡಲಾಗಿತ್ತು.

ಈ ಪೈಕಿ 50ಲಕ್ಷ ರೂ. ವೆಚ್ಚದಲ್ಲಿ ಕಟ್ಟಡ ನಿರ್ಮಾಣಗೊಂಡಿದ್ದು, 50 ಲಕ್ಷ ರೂ. ವೆಚ್ಚದಲ್ಲಿ ಯಂತ್ರೋಪಕರಣಗಳ ಜೋಡಣೆ ಹಾಗೂ ವಿದ್ಯುದೀಕರಣ ಕಾಮಗಾರಿ ಪ್ರಗತಿಯಲ್ಲಿದೆ. ಕೆಲವೇ ದಿನಗಳಲ್ಲಿ ಉದ್ಘಾಟನೆಗೊಂಡು, ರೈತರ ಸೇವೆಗೆ ಸಮರ್ಪಿಸಲಾಗುತ್ತದೆ.

ತಮಿಳುನಾಡಿಗೇ ಹೋಗಬೇಕಿತ್ತು: ದಕ್ಷಿಣ ಕರ್ನಾಟಕದ ಚಾ.ನಗರ, ಮೈಸೂರು ಭಾಗದಲ್ಲಿ ಹೆಚ್ಚಾಗಿ ರೈತರು ಅರಿಶಿನ ಬೆಳೆಯುತ್ತಿದ್ದಾರೆ. ಇದನ್ನು ಮಾರಾಟ ಹಾಗೂ ಸಂಸ್ಕರಿಸಲು ತಮಿಳುನಾಡಿಗೆ ರೈತರು ಕೊಂಡೊಯ್ಯ ಬೇಕಾಗಿತ್ತು. ಚಾಮರಾಜನಗರ ಜಿಲ್ಲೆಯಲ್ಲೂ ಹೆಚ್ಚಿನ ರೈತರು ಅರಿಶಿನ ಬೆಳೆಯುತ್ತಿದ್ದಾರೆ.

ಅಲ್ಲದೇ, ಮೈಸೂರು, ಧಾರವಾಡ, ದಾವಣಗೆರೆ ಜಿಲ್ಲೆಯಿಂದಲೂ ರೈತರು ಹಾಗೂ ವರ್ತಕರು ಅರಿಶಿನ ಖರೀದಿಗೆ, ಮಾರಾಟಕ್ಕೆ ಜಿಲ್ಲೆಗೆ ಬರುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಚಾಮರಾಜ ನಗರ ಎಪಿಎಂಸಿ ಅವರಣದಲ್ಲಿ ನಿರ್ಮಾಣವಾಗುತ್ತಿರುವ ಸಂಸ್ಕರಣ ಘಟಕ ಈ ಭಾಗದ ಬೆಳೆಗಾರರಿಗೆ ಹಾಗೂ ವರ್ತಕರಿಗೆ ಹೆಚ್ಚಿನ ಅನುಕೂಲವಾಗಿದೆ.

ರೈತರಿಗೆ ಅನುಕೂಲ: ಕಳೆದ ಸಾಲಿನಲ್ಲಿ ಎಪಿಎಂಸಿ ಯಲ್ಲಿ 72 ಸಾವಿರ ಕ್ವಿಂಟಾಲ್‌ಅರಿಶಿನ ವಹಿವಾಟು ಆಗಿತ್ತು. ಇತ್ತೀಚಿನ ದಿನಗಳಲ್ಲಿ ಶುದ್ಧಿ ಛೀಕರಿಸಿದ ಅರಿಶಿನ ದೊರೆಯದ ಕಾರಣ ವರ್ತಕರು ಖರೀದಿಗಾಗಿ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿರಲಿಲ್ಲ. ಅಲ್ಲದೇ ರೈತರಿಗೂ ಸ್ಪರ್ಧಾತ್ಮಕ ಬೆಲೆ ದೊರೆಯದೇ ಸಂಕಷ್ಟದಲ್ಲಿದ್ದರು. ಈ ಸಂಸ್ಕರಣ ಘಟಕ ಸ್ಥಾಪನೆಯಿಂದ ರೈತರು ಹಾಗೂ ವರ್ತಕರಿಗೆ ಹೆಚ್ಚಿನ ಅನುಕೂಲವಾಗುತ್ತದೆ. ಇದೊಂದು ಹೈಟೆಕ್‌ ಅರಿಶಿನ ಸಂಸ್ಕರಣಘಟಕವಾಗಿದ್ದು, ಒಂದೇ ಹಂತದಲ್ಲಿ ಅರಿಶಿನವನ್ನು ಕ್ಲೀನಿಂಗ್‌ ಹಾಗೂ ಗೆùಂಡಿಂಗ್‌ಮಾಡಿ ಪ್ಯಾಕಿಂಗ್‌ ಮಾಡಲಾಗುತ್ತದೆ.ಇದರಿಂದ ಅರಿಶಿನ ಹೆಚ್ಚು ಬೆಲೆಗೆ ಮಾರಾಟವಾಗಲಿದೆ. ಜತೆಗೆ ವರ್ತಕರು ಹಾಗೂ ಕಂಪನಿಗಳಿಗೂ ಗುಣಮಟ್ಟದ ಉತ್ಕೃಷ್ಟವಾದ ಅರಿಶಿನ ದೊರೆಯಲಿದೆ.

ಸಾಂಗ್ಲಿ, ಈರೋಡ್‌ನ‌ಲ್ಲಿ ಖಾಸಗಿ ಘಟಕ:ಈಗಾಗಲೇ ಇಂಥ ಘಟಕ ಮಹಾರಾಷ್ಟ್ರದ ಸಾಂಗ್ಲಿ, ತಮಿಳುನಾಡಿನ ಈರೋಡ್‌ನ‌ಲ್ಲಿ ಖಾಸಗಿ ಒಡೆತನದಲ್ಲಿ ನಡೆಯುತ್ತಿದೆ. ಈಗ ಚಾ.ನಗರ ಎಪಿಎಂಸಿಯಲ್ಲಿ ಸರ್ಕಾರದ ಒಡೆತನದಲ್ಲಿ ಘಟಕ ನಿರ್ಮಾಣ ಮಾಡಲಾಗುತ್ತಿದೆ. ರೈತರಿಗೆ ಅತಿ ಕಡಿಮೆ ದರದಲ್ಲಿ ಅರಿಶಿನ ಸಂಸ್ಕರಣೆ ಮಾಡಿಕೊಡಲಾಗುತ್ತದೆ.

21ಕ್ಕೆ ಘಟಕದ ಬಗ್ಗೆ ರೈತರಿಗೆ ಕಾರ್ಯಾಗಾರ: ಎಪಿಎಂಸಿ ಮತ್ತು ಚಾ.ನಗರ ತಾಲೂಕುಸೌಹಾರ್ದ ಅರಿಶಿನ ಬೆಳೆಗಾರರ ರೈತ ಉತ್ಪಾದಕರ ಸಂಘದ ಸಹಯೋಗದಲ್ಲಿ ಸೆ.21ರಂದು ಅರಿಶಿನ ಬೆಳೆಗಾರರ ಕಾರ್ಯಾಗಾರ ಆಯೋಜಿಸಲಾಗಿದ್ದು, ರೈತರಿಗೆ ಬೆಳೆ ವಿಧಾನ, ಮಾರುಕಟ್ಟೆ ವ್ಯವಸ್ಥೆ, ಸಂಸ್ಕರಣ ಘಟಕದ ಅನುಕೂಲಗಳ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ.

ಅರಿಶಿನ ಸಂಸ್ಕರಣ ಘಟಕ ನಿರ್ಮಾಣ ನನ್ನ ಬಹುದಿನಗಳ ಕನಸಾಗಿತ್ತು. ಸರ್ಕಾರಿ ಒಡೆತನದ ಸಂಸ್ಕರಣ ಘಟಕ ದಕ್ಷಿಣ ಭಾರತದಲ್ಲೇ ಇರಲಿಲ್ಲ. ಸರ್ಕಾರದ ಮಟ್ಟದಲ್ಲಿ ವ್ಯವಹರಿಸಿ ಘಟಕ ಸ್ಥಾಪಿಸಲು ಶ್ರಮಿಸಿದ್ದೇನೆ. ಸಂಸದ ಧ್ರುವನಾರಾಯಣ, ಜಿಲ್ಲಾ ಉಸ್ತುವಾರಿ ಸಚಿವ ಸಿ.ಪುಟ್ಟರಂಗಶೆಟ್ಟಿ ಇದಕ್ಕೆ ಸಹಕಾರ ನೀಡಿದ್ದಾರೆ.
– ಬಿ.ಕೆ.ರವಿಕುಮಾರ್‌,
ಎಪಿಎಂಸಿ ಅಧ್ಯಕ್ಷ

– ಬನಶಂಕರ ಆರಾಧ್ಯ

ಟಾಪ್ ನ್ಯೂಸ್

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.