“ಅಜೇಯ ಬಿಜೆಪಿ’ಯಡಿ ಸ್ಪರ್ಧೆ
Team Udayavani, Sep 9, 2018, 6:00 AM IST
ಹೊಸದಿಲ್ಲಿ: “ಅಜೇಯ ಬಿಜೆಪಿ…’ -ಇದು 2019ರ ಲೋಕಸಭೆ ಚುನಾವಣೆಗಾಗಿ ಬಿಜೆಪಿಯ ಹೊಸ ಘೋಷವಾಕ್ಯ. ಇಲ್ಲಿನ ಅಂಬೇಡ್ಕರ್ ಅಂತಾರಾಷ್ಟ್ರೀಯ ಕೇಂದ್ರದಲ್ಲಿ ಎರಡು ದಿನಗಳ ಕಾಲ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಶನಿವಾರ ಆರಂಭವಾಗಿದ್ದು, “ಅಜೇಯ ಬಿಜೆಪಿ’ ಘೋಷವಾಕ್ಯದೊಂದಿಗೆ ಚುನಾವಣೆ ಎದುರಿಸಲು ನಿರ್ಧರಿಸಲಾಗಿದೆ. ಅಲ್ಲದೆ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ನೇತೃತ್ವದಲ್ಲೇ ಚುನಾವಣೆ ಎದುರಿಸಲೂ ಮೊದಲ ದಿನದ ಕಾರ್ಯಕಾರಿಣಿಯಲ್ಲೇ ತೀರ್ಮಾನ ತೆಗೆದುಕೊಳ್ಳಲಾಗಿದೆ. ಈ ವರ್ಷಾಂತ್ಯಕ್ಕೆ ನಾಲ್ಕು ರಾಜ್ಯಗಳ ವಿಧಾನಸಭೆ ಮತ್ತು ಮುಂದಿನ ವರ್ಷ ಲೋಕಸಭೆ ಚುನಾವಣೆ ನಡೆಯಲಿದ್ದು, ಇದರ ಸಿದ್ಧತೆಗಾಗಿ ಈ ಸಭೆ ಕರೆಯಲಾಗಿದೆ. ಎಲ್ಲ ರಾಜ್ಯಗಳ ಬಿಜೆಪಿ ಘಟಕಗಳ ಅಧ್ಯಕ್ಷರು, ಕೇಂದ್ರದ ಹಿರಿಯ ನಾಯಕರು ಪಾಲ್ಗೊಂಡಿದ್ದಾರೆ. ರವಿವಾರ ಪ್ರಧಾನಿ ಮೋದಿ ಅವರು ಮಾತನಾಡಲಿದ್ದಾರೆ.
ಶನಿವಾರದ ಸಭೆಯಲ್ಲಿ ಮುಂದಿನ ವರ್ಷಾರಂಭದಲ್ಲಿ ನಡೆಸಲು ಉದ್ದೇಶಿಸಿದ್ದ ಆಂತರಿಕ ಚುನಾವಣೆಯನ್ನು ಮುಂದೂಡುವ ನಿರ್ಧಾರ ತೆಗೆದುಕೊಳ್ಳಲಾಗಿದೆ. ಈ ಮೂಲಕ 2019ರ ಲೋಕಸಭೆ ಚುನಾ ವಣೆಯನ್ನೂ ಶಾ ನೇತೃತ್ವದಲ್ಲೇ ಎದುರಿಸಲು ತೀರ್ಮಾನ ತೆಗೆದುಕೊಳ್ಳಲಾಗಿದೆ. ಜತೆಗೆ ಈ ವರ್ಷಾಂತ್ಯದಲ್ಲಿ ನಡೆಯುವ ನಾಲ್ಕು ರಾಜ್ಯಗಳ ಚುನಾವಣೆಗೆ ತಂತ್ರಗಾರಿಕೆ ಮತ್ತು ತೆಲಂಗಾಣ ಚುನಾವಣೆ ಮೇಲೂ ಹೆಚ್ಚಿನ ಗಮನಹರಿಸಲು ನಿರ್ಧರಿಸಲಾಗಿದೆ.
ಘಟಬಂಧನ್ ಕಣ್ಣೊರೆಸುವ ತಂತ್ರ
ಕಾರ್ಯಕಾರಿಣಿಯನ್ನು ಉದ್ದೇಶಿಸಿ ಮಾತನಾಡಿದ ಅಮಿತ್ ಶಾ, ವಿಪಕ್ಷಗಳ ಮಹಾ ಘಟಬಂಧನ್ ಕೇವಲ ಕಣ್ಣೊರೆಸುವ ತಂತ್ರ ಮತ್ತು ಭ್ರಮಾಕೂಟ. ನಾವು 2014ರಲ್ಲಿ ಗೆದ್ದಿದ್ದ ಸ್ಥಾನಗಳಿಗಿಂತಲೂ ಈ ಬಾರಿ ಹೆಚ್ಚು ಗೆಲ್ಲುತ್ತೇವೆ ಎಂದಿದ್ದಾರೆ. ಈ ಮಧ್ಯೆ ಬಿಜೆಪಿ ಮೇಕ್ ಇನ್ ಇಂಡಿಯಾ ಬಗ್ಗೆ ಯೋಚನೆ ಮಾಡುತ್ತಿದ್ದರೆ, ಕಾಂಗ್ರೆಸ್ ಬ್ರೇಕಿಂಗ್ ಇಂಡಿಯಾಗೆ ಪ್ರಯತ್ನಿಸು ತ್ತಿದೆ ಎಂದೂ ಪ್ರಮುಖ ವಿಪಕ್ಷದ ವಿರುದ್ಧ ಕಿಡಿಕಾರಿದ್ದಾರೆ.
ಅಮಿತ್ ಶಾ ನೇತೃತ್ವದಲ್ಲಿ 2019ರ ಚುನಾವಣೆ ಎದುರಿಸಲು ನಿರ್ಧಾರ
ರವಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಭಾಷಣ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು