ಸಿಎಂ “ಮಿತವ್ಯಯ ಮಂತ್ರ’ಕ್ಕೆ ಶಿಕ್ಷಣ ಇಲಾಖೆ ನಿರ್ಲಕ್ಷ್ಯ


Team Udayavani, Sep 9, 2018, 6:50 AM IST

ban09091806medn.jpg

ಬೆಂಗಳೂರು: ರೈತರ ಸಾಲಮನ್ನಾ ಹಿನ್ನೆಲೆಯಲ್ಲಿ ಎಲ್ಲಾ ಇಲಾಖೆಗಳಲ್ಲಿ ಖರ್ಚು ವೆಚ್ಚಕ್ಕೆ ಕಡಿವಾಣ ಹಾಕಲು ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ನಿರ್ಧರಿಸಿದ್ದರೂ, ಅವರ ಮೌಖೀಕ ಆದೇಶವನ್ನು ಮೀರಿ ಈಗ ಸಾರ್ವಜನಿಕ ಶಿಕ್ಷಣ ಇಲಾಖೆ ಸುಮಾರು 10 ಕೋಟಿ ರೂ. ವೆಚ್ಚದಲ್ಲಿ ಅತ್ಯಾಧುನಿಕ ಕಾರುಗಳನ್ನು ಕೊಳ್ಳಲು ಮುಂದಾಗಿರುವುದು ಬೆಳಕಿಗೆ ಬಂದಿದೆ.

ಕುಮಾರಸ್ವಾಮಿಯವರ ಮಿತವ್ಯಯದ ಮಂತ್ರಕ್ಕೆ ನಿರ್ಲಕ್ಷ್ಯ ತೋರಿರುವ ಶಿಕ್ಷಣ ಇಲಾಖೆ 116 ಹೊಸ ಕಾರುಗಳನ್ನು ಖರೀದಿಸಲು ನಿರ್ಧರಿಸಿದೆ.  ಈಗಾಗಲೇ ಮೊದಲ ಹಂತದಲ್ಲಿ 28 ಕಾರುಗಳನ್ನು ಖರೀದಿಸಲು ಸಂಬಂಧ ಪಟ್ಟ ಅಧಿಕಾರಿಗಳಿಗೆ ಸೂಚಿಸಲಾಗಿದ್ದು, ವಾಹನ ಸರಬರಾಜು ಮಾಡುವ ಅಧಿಕೃತ ಡೀಲರ್‌ಗಳಿಂದ ಪಡೆಯಲು ಆದೇಶಿಸಲಾಗಿದೆ.

ಹೊಸ ಕಾರು ಖರೀದಿಗೆ ಕನಿಷ್ಠ 10 ಕೋಟಿ ವೆಚ್ಚವಾಗುತ್ತದೆ ಎಂಬ ಅಂದಾಜು ಮಾಡಲಾಗಿದೆ. ಈಗಾಗಲೇ ಪ್ರತಿಯೊಂದಕ್ಕೂ ಹಣ ಹೊಂದಿಸಲು ಮುಖ್ಯಮಂತ್ರಿ ಕುಮಾರಸ್ವಾಮಿ ಆರ್ಥಿಕ ಲೆಕ್ಕಾಚಾರ ಹಾಕುತ್ತಿದ್ದರೂ, ಶಿಕ್ಷಣ ಇಲಾಖೆಯ ಅಧಿಕಾರಿಗಳು 3 ವರ್ಷಗಳ ಹಿಂದಿನ ಬೇಡಿಕೆಗೆ ಈಗ ದಿಢೀರ್‌ ಎಂದು ಹೊಸ ಕಾರು ಖರೀದಿಗೆ ಒಪ್ಪಿಗೆ ನೀಡಿರುವುದು ಚರ್ಚೆಗೆ ಗ್ರಾಸವಾಗಿದೆ.

ಒಂದು ಕಾರು ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ಜಂಟಿ ನಿರ್ದೇಶಕರ ಕಚೇರಿ ಬೆಳಗಾವಿ, ಹತ್ತು ಕಾರುಗಳು ಬೆಳಗಾವಿ, ಉತ್ತರ ಕನ್ನಡ, ಶಿರಸಿ ಶೈಕ್ಷಣಿಕ ಜಿಲ್ಲೆ, ಹಾವೇರಿ, ಬಾಗಲಕೋಟೆ, ಧಾರವಾಡ, ಗದಗ ಹಾಗೂ ವಿಜಯಪುರ ಜಿಲ್ಲೆಗಳ ಉಪ ನಿರ್ದೇಶಕರ ಕಚೇರಿಗಳಿಗೆ ಹಾಗೂ ಖಾನಾಪುರ, ಚಿಕ್ಕೋಡಿ, ಅಂಕೋಲಾ, ಹಳಿಯಾಳ, ಕುಂದಗೋಳ, ಬಸವನಬಾಗೇವಾಡಿ, ಇಂಡಿ, ರೋಣ, ಶಿರಹಟ್ಟಿ, ಬಾಗಲಕೋಟೆ ಸೇರಿ 17 ಕಾರುಗಳನ್ನು ವಿವಿಧ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಗಳಿಗೆ ನೀಡಲು ಆದೇಶಿಸಲಾಗಿದೆ.

2ನೇ ಹಂತದಲ್ಲಿ ಉಳಿದ ಕಾರುಗಳನ್ನು ಖರೀದಿಸಲು ಇಲಾಖೆ ಆಲೋಚನೆ ಮಾಡಿದೆ ಎಂದು ತಿಳಿದು ಬಂದಿದೆ. ಮೂಲಗಳ ಪ್ರಕಾರ ಅನೇಕ ಕಚೇರಿಗಳಲ್ಲಿ ಹಳೆಯ ಕಾರುಗಳನ್ನು ಅಧಿಕಾರಿಗಳು ದುರಸ್ತಿ ಮಾಡಿಸದೇ ಬಾಡಿಗೆ ಕಾರುಗಳನ್ನು ಬಳಕೆ ಮಾಡುತ್ತಿದ್ದಾರೆಂಬ ಆರೋಪ ಕೇಳಿ ಬಂದಿದೆ. ಬಾಡಿಗೆ ಕಾರು ಬಳಕೆ ಮಾಡುತ್ತಿರುವುದರಿಂದ ಇಲಾಖೆಯ ವಾಹನ ಚಾಲಕರು ಉದ್ಯೋಗವಿಲ್ಲದೇ ಇರುವಂತಾಗಿದೆ. ಇದರಿಂದ ಇಲಾಖೆಗೆ ನಷ್ಟವಾಗುತ್ತಿದೆ ಎಂಬ ವಾದ ಸರ್ಕಾರಿ ಅಧಿಕಾರಿಗಳದ್ದು.

ಆದರೆ, ಸಿಎಂ ಕುಮಾರಸ್ವಾಮಿ ಸಾಲಮನ್ನಾ ಮಾಡಿರುವ ಕಾರಣದಿಂದ ತಮ್ಮ ಇಲಾಖೆ ಸೇರಿ ಸರ್ಕಾರದಲ್ಲಿ ದುಂದು ವೆಚ್ಚಕ್ಕೆ ಕಡಿವಾಣ ಹಾಕಿರುವುದಾಗಿ ಮೇಲಿಂದ ಮೇಲೆ ಹೇಳುತ್ತಿದ್ದರೂ, ಅವರ ಗಮನಕ್ಕೂ ಬಾರದೇ ಸರ್ಕಾರದ ಮಟ್ಟದಲ್ಲಿ ಅನೇಕ ರೀತಿಯ ದುಂದು ವೆಚ್ಚ ನಡೆಯುತ್ತಿದೆ ಎಂಬ ಆರೋಪವೂ ಇದೆ.

ಹಿಂದಿನ ಸಿದ್ದರಾಮಯ್ಯ ಸರ್ಕಾರದ ಯೋಜನೆಗಳಿಗೆ ಕತ್ತರಿ ಹಾಕುವ ಮೂಲಕ ಸಾಲ ಮನ್ನಾಕ್ಕೆ ಹೊಂದಾಣಿಕೆ ಮಾಡಿಕೊಳ್ಳುವ ಲೆಕ್ಕಾಚಾರ ನಡೆಸಿದ್ದಾರೆ ಎನ್ನುವ ಆರೋಪವನ್ನು ಕುಮಾರಸ್ವಾಮಿ ಎದುರಿಸಿದ್ದರು. ಹೊಸ ಸರ್ಕಾರದಲ್ಲಿ ನೂತನ ಸಚಿವರು ಹೊಸ ಕಾರುಗಳ  ಖರೀದಿಗೆ ಬೇಡಿಕೆ ಇಟ್ಟಾಗ ಮುಖ್ಯ ಕಾರ್ಯದರ್ಶಿಯಾಗಿದ್ದ ರತ್ನಪ್ರಭಾ ಬ್ರೇಕ್‌ ಹಾಕಿ ಯಾವುದೇ ಹೊಸ ಕಾರು ಖರೀದಿಗೆ ಅವಕಾಶವಿಲ್ಲ ಎಂದು ಖಡಾಖಂಡಿತವಾಗಿ ನಿರಾಕರಿಸಿದ್ದರು.

ಇದರ ನಡುವೆ ಸಮ್ಮಿಶ್ರ ಸರ್ಕಾರದಲ್ಲಿ ಹತ್ತಕ್ಕೂ ಹೆಚ್ಚು ಸಚಿವರು ವಿಧಾನಸೌಧದಲ್ಲಿರುವ ತಮ್ಮ ಕೊಠಡಿಗಳಿಗೆ ಹೊಸ ಪಿಠೊಪಕರಣಗಳು ಬೇಕು ಎಂದು ಬೇಡಿಕೆ ಇಟ್ಟಿದ್ದು, ಸದ್ದಿಲ್ಲದೇ ಹೊಸ ಪೀಠೊಪಕರಣಗಳ ಖರೀದಿ ಮಾಡಿಸಿ ಸಚಿವರ ಕೊಠಡಿಗಳಿಗೆ ನೀಡಲಾಗುತ್ತಿದೆ ಎಂಬ ಆರೋಪವೂ ಕೇಳಿ ಬಂದಿತ್ತು.

ಚುನಾವಣೆಗೂ ಮುಂಚೆಯೇ ಕಾರು ಖರೀದಿಸಲು ತೀರ್ಮಾನ ಮಾಡಲಾಗಿತ್ತು. ಈಗ ಕಾರು ಪಡೆದುಕೊಳ್ಳಲು ಆದೇಶ ಮಾಡಲಾಗಿದೆ. ಅಲ್ಲದೇ ಇಲಾಖೆಗೆ ಬಹಳ ವರ್ಷಗಳಿಂದ ಕಾರು ಖರೀದಿ ಮಾಡಿರಲಿಲ್ಲ. ಹೀಗಾಗಿ ಅನುಮತಿ ಪಡೆದುಕೊಂಡು  ಖರೀದಿ ಮಾಡಲಾಗಿದೆ. ಸರ್ಕಾರದ ಮಿತವ್ಯಯದ ನಿಯಮ ಅನ್ವಯ ಆಗುವುದಿಲ್ಲ.
– ಡಾ.ಪಿ.ಸಿ. ಜಾಫ‌ರ್‌, ಆಯುಕ್ತರು, ಸಾರ್ವಜನಿಕ ಶಿಕ್ಷಣ ಇಲಾಖೆ.

– ಶಂಕರ ಪಾಗೋಜಿ

ಟಾಪ್ ನ್ಯೂಸ್

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.