ಕ್ರೈಸ್ತ ಬಾಂಧವರಿಂದ ಸಂಭ್ರಮದ ತೆನೆಹಬ್ಬ ಆಚರಣೆ


Team Udayavani, Sep 9, 2018, 10:42 AM IST

9-sepctember-4.jpg

ವಾಮಂಜೂರು: ಇಲ್ಲಿನ ಶ್ರಮಿಕ ಸಂತ ಜೋಸೆಫ್‌ ಚರ್ಚ್‌ನಲ್ಲಿ ಚರ್ಚ್‌ನ ಧರ್ಮಗುರು ವಂ| ಸಿಪ್ರಿಯನ್‌ ಪಿಂಟೋ ಅವರ ನೇತೃತ್ವದಲ್ಲಿ ತೆನೆಹಬ್ಬ ಆಚರಿಸಲಾಯಿತು. ವಾಮಂಜೂರು ಚರ್ಚಿನ ಕ್ರೈಸ್ತ ಬಾಂಧವರು ‘ಮೊಂತಿ ಫೆಸ್ತ್’ ಮರಿಯಮ್ಮ ಮಾತೆಯ ಹುಟ್ಟು ಹಬ್ಬವನ್ನು ಶನಿವಾರ ಭಕ್ತಿಶ್ರದ್ಧೆಯಿಂದ ಆಚರಿಸಿದರು. ಬೆಳಗ್ಗೆ ವಾಮಂಜೂರು ಪೇಟೆಯಲ್ಲಿ ಭಕ್ತರು ಪ್ರಥಮ ತೆನೆ, ಫಲಪುಷ್ಪಗಳನ್ನು ಸಂಗ್ರಹಿಸಿ ಪ್ರಾರ್ಥನಾ ವಿಧಿಯಲ್ಲಿ ಪಾಲ್ಗೊಂಡರು. ಚರ್ಚಿನ ಪ್ರಧಾನ ಗುರುಗಳು ವಂ| ಸಿಪ್ರಿಯಾನ್‌ ಪಿಂಟೊ ಪ್ರಾರ್ಥನಾ ವಿಧಿಯನ್ನು ನಡೆಸಿ ‘ತೆನೆ’ ಆಶೀರ್ವದಿಸಿದರು. ಮಕ್ಕಳು ಮರಿಯಮ್ಮ ಮಾತೆಗೆ ಹೂಗಳನ್ನು ಅರ್ಪಿಸಿದರು. ಬಳಿಕ ಧರ್ಮಗುರುಗಳು, ವೇದಿಕೆ ಸೇವಕರು, ಧರ್ಮಭಗಿನಿಯರು ಮತ್ತು ಭಕ್ತರು ವಾದ್ಯ ಮೇಳದೊಂದಿಗೆ ಸ್ತೋತ್ರ ಗೀತೆಗಳನ್ನು ಹಾಡಿ ಚರ್ಚಿಗೆ ಮೆರವಣಿಗೆಯಲ್ಲಿ ಆಗಮಿಸಿದರು.

ಚರ್ಚಿನಲ್ಲಿ ವಂ| ಅನಿಲ್‌ ಲೋಬೋ ಅವರು ಪವಿತ್ರ ದಿವ್ಯಬಲಿಪೂಜೆಯನ್ನು ನೆರವೇರಿಸಿದರು ಮತ್ತು ಮಾತೆ ಮರಿಯಮ್ಮನವರ ಆದರ್ಶಗಳನ್ನು ನಿತ್ಯ ಜೀವನದಲ್ಲಿ ಅಳವಡಿಸಲು ಭಕ್ತರಿಗೆ ಕರೆ ನೀಡಿ ಮಾತೆ ಮರಿಯಮ್ಮನವರು ಸದಾ ನಮ್ಮನ್ನು ಹರಸಲಿ ಎಂದು ಪ್ರಾರ್ಥಿಸಿದರು. ಹಿರಿಯ ಗುರುಗಳು ವಂ| ಜೋನ್‌ ಫೆರ್ನಾಂಡಿಸ್‌ ಮತ್ತು ಚರ್ಚಿನ ಪ್ರಧಾನ ಗುರುಗಳು ದಿವ್ಯ ಬಲಿಪೂಜೆಯಲ್ಲಿ ಪಾಲ್ಗೊಂಡರು.

ದಿವ್ಯಪೂಜೆಯ ಬಳಿಕ 26 ವಾರ್ಡ್‌ನ ಗುರಿಕಾರರಿಗೆ ಧರ್ಮಗುರುಗಳು ಆಶೀರ್ವದಿತ ತೆನೆಗಳನ್ನು ನೀಡಿದರು. ಗುರಿಕಾರರು ನೆರೆದ ಭಕ್ತರಿಗೆ ಹೊಸ ತೆನೆಯನ್ನು ವಿತರಿಸಿದರು. ದಿವ್ಯಪೂಜೆಯ ಬಳಿಕ ಭಕ್ತರಿಗೆ ಲಘು ಉಪಾಹಾರ ಮತ್ತು ಕಬ್ಬು ವಿತರಿಸಲಾಯಿತು.

ವಾಮಂಜೂರು ವಾಳೆಯ ಗುರಿಕಾರ ಮತ್ತು ಸದಸ್ಯರು ಹಬ್ಬದ ಮೇಲುಸ್ತುವಾರಿಯನ್ನು ನೋಡಿಕೊಂಡರು. ಕೆಥೋಲಿಕ್‌ ಸಭಾ ವಾಮಂಜೂರು ಘಟಕದ ಅಧ್ಯಕ್ಷರು ಮತ್ತು ಸದಸ್ಯರು ಹೊಸ ತೆನೆಗಳನ್ನು ಸಂಗ್ರಹಿಸಿದರು. ಹಬ್ಬದ ಪ್ರಯುಕ್ತ ಬಡ ಕುಟುಂಬಗಳಿಗೆ ದವಸಧಾನ್ಯಗಳನ್ನು ನೀಡಿದರು. ಚರ್ಚ್‌ ಪಾಲನಾ ಸಮಿತಿಯ ಉಪಾಧ್ಯಕ್ಷ ಸುನಿಲ್‌ ಪಿಂಟೋ ಮತ್ತು ಕಾರ್ಯದರ್ಶಿ ರೋಹನ್‌ ಪಿರೇರ ಉಪಸ್ಥಿತರಿದ್ದರು. 

ಟಾಪ್ ನ್ಯೂಸ್

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

6-

Modi ಒಬ್ಬ ಸುಳ್ಳುಗಾರ: ಸಚಿವ ಸಂತೋಷ್ ಲಾಡ್ ಆರೋಪ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

5

Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.