ಸಾಧನೆಯೊಂದೇ ವಿದ್ಯಾರ್ಥಿಗಳ ಗುರಿಯಾಗಲಿ: ಪ್ರೇಮಾ
Team Udayavani, Sep 9, 2018, 5:21 PM IST
ಬೆಳಗಾವಿ: ಪೈಪೋಟಿಯ ಇಂದಿನ ದಿನಗಳಲ್ಲಿ ವಿದ್ಯಾರ್ಥಿಗಳು ಮೌಲ್ಯಯುತ ಶಿಕ್ಷಣ ಪಡೆಯುವುದರೊಂದಿಗೆ ಭಾರತೀಯ ಸಂಸ್ಕೃತಿಯನ್ನು ಉಳಿಸಿ ಬೆಳೆಸಬೇಕು ಎಂದು ಚಿತ್ರನಟಿ ಪ್ರೇಮಾ ಕರೆ ನೀಡಿದರು. ನಗರದ ನಾಯ್ಕರ ಶಿಕ್ಷಣ ಸಂಸ್ಥೆಯ ರವೀಂದ್ರನಾಥ ಠಾಗೋರ ಪದವಿ ಪೂರ್ವ ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯದ ಆಶ್ರಯದಲ್ಲಿ ಶನಿವಾರ ಜಿಲ್ಲೆಯ 10ನೇ ತರಗತಿಯ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಲಕ್ಷ್ಯ -2018 ಸಾಂಸ್ಕೃತಿಕ ಉತ್ಸವವನ್ನು ಉದ್ಘಾಟಿಸಿ ಮಾತನಾಡಿದ ಅವರು, ಜೀವನದಲ್ಲಿ ನೂರಾರು ಕಷ್ಟಗಳು ಬರುತ್ತವೆ. ಅವುಗಳನ್ನೆಲ್ಲ ಬದಿಗೊತ್ತಿ ಸಾಧನೆಯೊಂದೇ ವಿದ್ಯಾರ್ಥಿಗಳ ಗುರಿಯಾಗಬೇಕು.
ಗುರಿ ಸಾಧನೆಗೆ ಯೋಗವನ್ನು ಆಳವಡಿಸಿಕೊಳ್ಳುವುದು ಉತ್ತಮ ಮಾರ್ಗವಾಗಿದೆ. ಮಕ್ಕಳು ಸದಭಿರುಚಿಗೆ ತಕ್ಕಂತೆ ಶಿಕ್ಷಣ ಮಾರ್ಗ ಆಯ್ಕೆ ಮಾಡಿಕೊಳ್ಳಲು ಪಾಲಕರು ಪ್ರಯತ್ನಿಸಬೇಕು ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ಡಾ| ಸಿ.ಎನ್.ನಾಯ್ಕರ ಮಾತನಾಡಿ, ಸಂಸ್ಥೆಯ ಧ್ಯೇಯ ಹಾಗೂ ಉದ್ದೇಶಗಳ ಬಗ್ಗೆ ವಿವರಿಸಿದರು. ಲಕ್ಷ್ಯ-2018 ಸಾಂಸ್ಕೃತಿಕ ಕಾರ್ಯಕ್ರಮವಲ್ಲ. ಇದೊಂದು ಸಾಂಸ್ಕೃತಿಕ ಜಾತ್ರೆಯಾಗಿದ್ದು, ಸುಮಾರು 63 ಶಾಲೆಗಳ ವಿದ್ಯಾರ್ಥಿಗಳು ಭಾಗಿಯಾಗಿದ್ದಾರೆ ಎಂದರು.
ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಶ್ಯಾಮ ಘಾಟಗೆ, ಜಿಪಂ ಅಧ್ಯಕ್ಷ ಆಶಾ ಐಹೊಳೆ ಹಾಗೂ ನಾಯ್ಕರ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಶ್ವೇತಾ ನಾಯ್ಕರ ಉಪಸ್ಥಿತರಿದ್ದರು. ಸೃತಿ ಮತ್ತು ಚೈತ್ರಾ ನಿರೂಪಿಸಿದರು. ಹೃತುರಾಜ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
MUST WATCH
ಹೊಸ ಸೇರ್ಪಡೆ
Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
ಬಿಗ್ಬಾಸ್ ವಿನ್ನರ್ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ