ನಾಲ್ಕು ವರ್ಷಗಳಿಂದ ಮುಚ್ಚಿದ ಕಳ್ಳಿಗುಡ್ಡೆ ಸಮುದಾಯ ಭವನ


Team Udayavani, Sep 10, 2018, 1:55 AM IST

kalligudde-9-9.jpg

ಬಸ್ರೂರು: ಬಳ್ಕೂರು ಗ್ರಾ.ಪಂ. ವ್ಯಾಪ್ತಿಯ ಕಳ್ಳಿಗುಡ್ಡೆಯಲ್ಲಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಹತ್ತಿರ ರೂ.40 ಲಕ್ಷ ವೆಚ್ಚದಲ್ಲಿ ನಿರ್ಮಾಣವಾದ ವಿಶಾಲವಾದ ‘ಸಮುದಾಯ ಭವನ’ ಉಪಯೋಗ ಶೂನ್ಯವಾಗಿದೆ. 2014-15 ನೇ ಸಾಲಿನಲ್ಲಿ ವಾರಾಹಿ ನೀರಾವರಿ ಯೋಜನಾ ವಲಯದ ವತಿಯಿಂದ ಪ.ಜಾತಿಯ ಅನುದಾನದಡಿ ಪ.ಜಾತಿ ಮತ್ತು ಪ.ಪಂಗಡದವರಿಗಾಗಿ ನಿರ್ಮಿಸಲಾದ ಈ ಸಮುದಾಯ ಭವನವನ್ನು ಅಂದಿನ ಸಂಸದ ಕೆ.ಜಯಪ್ರಕಾಶ್‌ ಹೆಗ್ಡೆ 2014 ರಲ್ಲಿ ಉದ್ಘಾಟಿಸಿ ಬಳ್ಕೂರು ಗ್ರಾ.ಪಂ.ಗೆ ಹಸ್ತಾಂತರ ಮಾಡಿದ್ದರು. ನಂತರದ ನಾಲ್ಕು ವರ್ಷಗಳಲ್ಲಿ ಈ ಭವನದಲ್ಲಿ ಯಾವುದೇ ಸಭೆ-ಸಮಾರಂಭಗಳು ನಡೆದಿಲ್ಲ!

ಸೌಲಭ್ಯಗಳಿಲ್ಲ
ವಿಶಾಲವಾದ ಸಭಾಂಗಣದಲ್ಲಿ ಸಭಿಕರಿಗೆ ಕುಳಿತುಕೊಳ್ಳಲು ಒಂದೇ ಒಂದು ಕುರ್ಚಿ ಇಲ್ಲ. ಸಭೆ ನಡೆಸಲು ವೇದಿಕೆ ಇಲ್ಲ. ಬಟ್ಟೆ ಬದಲಿಸಲು ಕೊಠಡಿಯಿಲ್ಲ. ವಿಶ್ರಾಂತಿ ಕೋಣೆಯೂ ಇಲ್ಲ. ಮದುವೆ ಇತ್ಯಾದಿ ನಡೆಸುವುದಾದರೆ ಅಡುಗೆ ಕೋಣೆಯಿಲ್ಲ. ಕಳೆದ ವರ್ಷ ಸಮುದಾಯ ಭವನದ ಅವ್ಯವಸ್ಥೆಯ ಬಗ್ಗೆ ಬಳ್ಕೂರಿನಲ್ಲಿ ನಡೆದ ಗ್ರಾಮ ಸಭೆಯಲ್ಲಿ ಗ್ರಾಮಸ್ಥರು ಪ್ರಶ್ನಿಸಿದ್ದರು. ಆದರೆ ಈವರೆಗೆ ಯಾವ ಪ್ರಯೋಜನ ಕೂಡ ಆಗಿಲ್ಲ.

ಪ್ರತಿಕ್ರಿಯೆ ಶೂನ್ಯ 
ಉಡುಪಿಯಲ್ಲಿ ದಲಿತ ಕುಂದು-ಕೊರತೆಗಳ ಸಭೆಯಲ್ಲಿ ಈ ಸಮುದಾಯ ಭವನದ ಅವ್ಯವಸ್ಥೆಯ ಬಗ್ಗೆ ಪ್ರಶ್ನಿಸಿದಾಗ ಪೋಲೀಸ್‌ ವರಿಷ್ಠಾಧಿಕಾರಿಗಳು ಶಾಸಕರಿಗೆ ಈ ಬಗ್ಗೆ ಕೊಟ್ಟ ಮನವಿ ಪತ್ರವನ್ನು ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿಗಳಿಗೆ ಮತ್ತು ಜಿಲ್ಲಾಧಿಕಾರಿಗಳಿಗೆ ನೀಡುವಂತೆ ಸೂಚಿಸಿದ್ದರು.  ಕಳ್ಳಿಗುಡ್ಡೆಯ ಸಮುದಾಯ ಭವನದ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಶಶಿಧರ್‌ ಕಳ್ಳಿಗುಡ್ಡೆ ಅವರು ಶಾಸಕರ ಮನವಿಯನ್ನು ಜಿಲ್ಲಾ ಸಮಾಜ ಕಲ್ಯಾಣಿಧಿಕಾರಿಗಳಿಗೂ ಮತ್ತು ಜಿಲ್ಲಾಧಿಕಾರಿಗಳಿಗೂ ನೀಡಿದ್ದರು. ಆದರೆ ಫಲಿತಾಂಶ ಮಾತ್ರ ಶೂನ್ಯ.

ನಾವು ಇನ್ನೇನು ಮಾಡಬೇಕು?
ಬಳ್ಕೂರು ಗ್ರಾಮದ ಕಳ್ಳಿಗುಡ್ಡೆಯ ಸಮುದಾಯ ಭವನಕ್ಕೆ ಹಲವು ಮೂಲ ಸೌಕರ್ಯಗಳನ್ನು ಒದಗಿಸಿ ಕಾಯಕಲ್ಪಗೊಳಿಸುವುದಕ್ಕಾಗಿ ಅಭಿವೃದ್ಧಿ ಸಮಿತಿಯನ್ನು ಸ್ಥಳೀಯರಾದ ನಾವು ರಚಿಸಿಕೊಂಡಿದ್ದೇವೆ. ಈಗಾಗಲೇ ಶಾಸಕರಲ್ಲಿ ಚರ್ಚಿಸಿ ಅವರ ಮನವಿಯನ್ನು ಸಂಬಂಧಪಟ್ಟವರಿಗೆ ನೀಡಿದ್ದೇವೆ. ಉದ್ಘಾಟನೆಯಾಗಿ ನಾಲ್ಕು ವರ್ಷಗಳಾದರೂ ಈ ಭವನದಲ್ಲಿ ಯಾವುದೇ ಸಭೆ-ಸಮಾರಂಭಗಳು ನಡೆದಿಲ್ಲ. ನಾವು ಇನ್ನೇನು ಮಾಡಬೇಕು ಎಂದು ತೋಚುತ್ತಿಲ್ಲ.
– ಶಶಿಧರ್‌ ಕಳ್ಳಿಗುಡ್ಡೆ, ಅಧ್ಯಕ್ಷ, ಅಭಿವೃದ್ಧಿ ಸಮಿತಿ, ಸಮುದಾಯ ಭವನ

ಅನುದಾನದ ಕೊರತೆ
ಕಳ್ಳಿಗುಡ್ಡೆಯ ಸಮುದಾಯ ಭವನದ ಅವವ್ಯಸ್ಥೆಯನ್ನು ನೋಡಿದ್ದೇವೆ. ಈ ಭವನದ ಕಾರ್ಯಕಲ್ಪಕ್ಕಾಗಿ ಜಿಲ್ಲಾ ಸಮಾಜ ಕಲ್ಯಾಧಿಕಾರಿಗಳಿಗೆ ಮನವಿಯನ್ನು ನೀಡಿದ್ದೇವೆ ಗ್ರಾ.ಪಂ. ನಿಂದ ಹಲವು ಮೂಲಭೂತ ಸೌಕರ್ಯಗಳನ್ನು ಒದಗಿಸಲು ಅನುದಾನದ ಕೊರತೆಯಿದೆ.
– ಅಕ್ಷಶ್‌ ಶೇರೆಗಾರ್‌, ಅಧ್ಯಕ್ಷರು, ಗ್ರಾ.ಪಂ. ಬಳ್ಕೂರು

ಟಾಪ್ ನ್ಯೂಸ್

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

Madhavi Latha

BJP ‘ನಾನು ಮಹಿಳೆಯಲ್ಲ’ ಎಂಬ ಮಾಧವಿ ವೈರಲ್‌ ವೀಡಿಯೋ ತಿರುಚಿದ್ದು!

16-summer-palace-1

Summer Palace: ಷಾಹಿ ಸುಲ್ತಾನರ ಬೇಸಗೆ ಅರಮನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.