ವಯಸ್ಸಿನ ದೃಢೀಕರಣವಿಲ್ಲದೇ ಲಗ್ನಪತ್ರಿಕೆ ಮುದ್ರಿಸಿದರೆ ಶಿಕ್ಷೆ


Team Udayavani, Sep 10, 2018, 6:00 AM IST

marrage.jpg

ಬಾಗಲಕೋಟೆ: ಬಾಲ್ಯ ವಿವಾಹ ತಡೆಗೆ ಜಿಲ್ಲಾಡಳಿತ ಹೊಸ ಪ್ರಯೋಗಕ್ಕೆ ಮುಂದಾಗಿದೆ. ಇನ್ನು ಮುಂದೆ ಜಿಲ್ಲೆಯ ಮುದ್ರಣಕಾರರು, ಡಿಟಿಪಿ ಕೇಂದ್ರದವರು, ವಧು-ವರರ ವಯಸ್ಸಿನ ದೃಢೀಕರಣ ಇಲ್ಲದೇ ಮದುವೆ ಆಮಂತ್ರಣ ಪತ್ರಿಕೆ ಮುದ್ರಿಸಿಕೊಟ್ಟರೆ ಅಂತವರ ವಿರುದ್ಧವೂ ಪ್ರಕರಣ ದಾಖಲಿಸಲು ಬಾಲ್ಯ ವಿವಾಹ ತಡೆ ಜಿಲ್ಲಾಮಟ್ಟದ ಸಮನ್ವಯ ಮತ್ತು ಪರಿಶೀಲನಾ ಸಮಿತಿ ನಿರ್ಧರಿಸಿದೆ.

ಎಷ್ಟೇ ಕಟ್ಟುನಿಟ್ಟಿನ ಕ್ರಮ ಕೈಗೊಂಡರೂ ಕದ್ದುಮುಚ್ಚಿ ಬಾಲ್ಯ ವಿವಾಹ ನಡೆಯುತ್ತಲೇ ಇವೆ. ಹೀಗಾಗಿ ಮದುವೆ ಆಯೋಜಿಸುವ ಆರಂಭ ಹಂತದಲ್ಲೂ ಕಣ್ಗಾವಲಿಗೆ ಜಿಲ್ಲಾಡಳಿತ ಮುಂದಾಗಿದೆ. ಬಾಲ್ಯ ವಿವಾಹ ನಿಷೇಧ ಕರ್ನಾಟಕ ತಿದ್ದುಪಡಿ ಕಾಯ್ದೆ-2016ರ ಪ್ರಕಾರ ಮದುವೆ ಆಮಂತ್ರಣ ಮುದ್ರಣಕಾರರೂ ಅಪರಾಧಿಗಳಾಗುತ್ತಾರೆ. ಕಾನೂನು ಪ್ರಕಾರ ಅವರಿಗೆ ಕನಿಷ್ಠ 1, ಗರಿಷ್ಠ 2 ವರ್ಷ ಜೈಲು ಶಿಕ್ಷೆ ಹಾಗೂ 1 ಲಕ್ಷ ರೂ.ವರೆಗೆ ದಂಡ ವಿಧಿಸಲು ಈ ತಿದ್ದುಪಡಿ ಕಾನೂನಿನಲ್ಲಿ ಅವಕಾಶಗಳಿವೆ.

ಜತೆಗೆ ಬಾಲ್ಯ ವಿವಾಹ ಆದಲ್ಲಿ ಕೇವಲ ಹುಡುಗ, ಹುಡುಗಿಯ ತಂದೆ-ತಾಯಿ ಅಷ್ಟೇ ಅಲ್ಲದೇ ಪೂಜಾರಿಗಳು, ಸಂಬಂಧಿಕರು, ಉತ್ತೇಜನ ನೀಡಿದವರು, ಬಾಲ್ಯ ವಿವಾಹ ತಡೆಯಲು ವಿಫಲರಾದವರು (ಸಂಬಂಧಿಸಿದ ಇಲಾಖೆ ಅಧಿಕಾರಿಗಳು) ಹಾಗೂ ಬಾಲ್ಯ ವಿವಾಹದಲ್ಲಿ ಭಾಗವಹಿಸಿದವರೂ ಅಪರಾಧಿಗಳಾಗುತ್ತಾರೆ. ಹೀಗಾಗಿ ಈ ಕಾನೂನು ಜಾಗೃತಿಗೊಳಿಸುವ ಜತೆಗೆ ಮದುವೆಗೆ ಮೂಲ ಆರಂಭವಾಗುವ ಮದುವೆ ಆಮಂತ್ರಣ ಪತ್ರಿಕೆ ಮುದ್ರಣದಿಂದಲೇ ಕಡಿವಾಣ ಹಾಕಲು ಹೊಸ ಪ್ರಯೋಗ ಜಾರಿಯಾಗಿದೆ. ಈ ನಿಟ್ಟಿನಲ್ಲಿ ಮುದ್ರಣಕಾರರು ವಯಸ್ಸಿನ ದೃಢೀಕರಣವಿಲ್ಲದೇ ಆಮಂತ್ರಣ ಪತ್ರಿಕೆ ಮುದ್ರಿಸುವಂತಿಲ್ಲ ಎಂಬ ಷರತ್ತು, ಜಿಲ್ಲೆಯ ಎಲ್ಲ ಮುದ್ರಣಕಾರರು, ಡಿಟಿಪಿ ಕೇಂದ್ರದ ಮಾಲೀಕರಿಗೆ ಹಾಕಲಾಗಿದೆ.

ದೃಢೀಕರಣ ಕಡ್ಡಾಯ:
ಯಾವುದೇ ವ್ಯಕ್ತಿ ಅಥವಾ ಕುಟುಂಬದವರು ಮದುವೆ ಆಮಂತ್ರಣ ಪತ್ರಿಕೆ ಮುದ್ರಿಸಲು ಬಂದರೆ ಅವರಿಂದ ವಯಸ್ಸಿನ ದೃಢೀಕರಣ ಪತ್ರ ಪಡೆಯುವುದು ಕಡ್ಡಾಯಗೊಳಿಸಲಾಗಿದೆ. ಜನನ ಪ್ರಮಾಣ ಪತ್ರ, ಶಾಲಾ ವಯಸ್ಸಿನ ದೃಢೀಕರಣ ಪತ್ರ, ಎಸ್ಸೆಸ್ಸೆಲ್ಸಿ ಅಂಕಪಟ್ಟಿ, ಸರ್ಕಾರಿ ವೈದ್ಯರು ರೇಡಿಯೋಲಜಿ ಪರೀಕ್ಷೆ ನಡೆಸಿ ನೀಡಿದ ದೃಢೀಕರಣ ಪತ್ರ ಮುಂತಾದ ಯಾವುದಾದರೊಂದು ಪ್ರಮಾಣ ಪತ್ರ ಪಡೆದ ಬಳಿಕವೇ ಆಮಂತ್ರಣ ಪತ್ರಿಕೆ ಮುದ್ರಿಸಲು ಸೂಚಿಸಲಾಗಿದೆ.

ದಾಖಲೆ ಸಂಗ್ರಹ ಕಡ್ಡಾಯ :
ಜಿಲ್ಲೆಯ ಎಲ್ಲ ಮುದ್ರಣಕಾರರು, ಡಿಟಿಪಿ ಕೇಂದ್ರದವರು ತಾವು ಮುದ್ರಿಸುವ ಮದುವೆ ಆಮಂತ್ರಣ ಪತ್ರಿಕೆಗಳ ಒಂದು ಪ್ರತಿ, ಅದಕ್ಕೆ ಪಡೆದ ವಯಸ್ಸಿನ ದೃಢೀಕರಣ ಪತ್ರಗಳನ್ನು ಕಡ್ಡಾಯವಾಗಿ ಆಯಾ ಮುದ್ರಣಾಲಯದ ಕಡತಗಳಲ್ಲಿ ಕಾಯ್ದಿಟ್ಟಿರಬೇಕೆಂಬ ಸೂಚನೆಯಿದೆ.

ಸಮಿತಿ ಸಭೆಯಲ್ಲಿ ಚರ್ಚಿಸಿದ ಬಳಿಕ ಜಿಲ್ಲೆಯ ಎಲ್ಲ ಮುದ್ರಣಕಾರರು, ಡಿಟಿಪಿ ಕೇಂದ್ರಗಳಿಗೆ ವಿಶೇಷ ಸೂಚನಾ ಪತ್ರ ಹೊರಡಿಸಲಾಗಿದೆ. ಮದುವೆ ಆಮಂತ್ರಣ ಪತ್ರಿಕೆ ಮುದ್ರಿಸಲು ಹುಡುಗಿಗೆ 18, ಹುಡುಗನಿಗೆ 21 ವಯಸ್ಸಿನ ದೃಢೀಕರಣ ಪತ್ರ ಪಡೆಯುವುದು ಕಡ್ಡಾಯಗೊಳಿಸಲಾಗಿದೆ.
– ಕೆ.ಜಿ. ಶಾಂತಾರಾಮ್‌, ಜಿಲ್ಲಾಧಿಕಾರಿ ಹಾಗೂ ಅಧ್ಯಕ್ಷರು, ಬಾಲ್ಯ ವಿವಾಹ ತಡೆಯುವ ಜಿಲ್ಲಾ ಮಟ್ಟದ ಸಮನ್ವಯ ಮತ್ತು ಪರಿಶೀಲನೆ ಸಮಿತಿ

– ಶ್ರೀಶೈಲ ಕೆ. ಬಿರಾದಾರ

ಟಾಪ್ ನ್ಯೂಸ್

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.