ತಾಳಿಕೋಟೆಯಲ್ಲಿ ಬೇಕಾಬಿಟ್ಟಿ ಕಾಮಗಾರಿ


Team Udayavani, Sep 10, 2018, 4:16 PM IST

vij-1.jpg

ತಾಳಿಕೋಟೆ: ನಗರೋತ್ಥಾನ ಯೋಜನೆಯಡಿ 7 ಕೋಟಿ ರೂ. ವೆಚ್ಚದಲ್ಲಿ ವಿವಿಧ ಕಾಮಗಾರಿಗಳನ್ನು ಪಟ್ಟಣದ ವಿವಿಧಡೆ ಕೈಗೊಳ್ಳಲಾಗುತ್ತಿದೆ. ಆದರೆ ಕಾಮಗಾರಿ ನಿರ್ವಹಣೆ ಬೇಕಾಬಿಟ್ಟಿ ಕೈಗೊಳ್ಳುವುದರ ಜೊತೆಗೆ ಗುತ್ತಿಗೆದಾರನ
ಕರಾಮತ್ತಿಗೆ ಒಳಚರಂಡಿ ಚೇಂಬರ್‌ಗಳು ಒಡೆದು ನೆಲದಲ್ಲಿ ಮುಚ್ಚಿ ಹೋಗುತ್ತಿದ್ದರೂ ಸಂಬಂಧಿಸಿದ ಅಧಿಕಾರಿಗಳು ಮೌನಕ್ಕೆ ಶರಣಾಗಿದ್ದಾರೆ.

7 ಕೋಟಿ ರೂ. ವೆಚ್ಚದಲ್ಲಿ ಮುಖ್ಯಮಂತ್ರಿ ನಗರೋತ್ಥಾನ ಪೇಸ್‌ 3 ಯೋಜನೆಯಡಿ ಡಾಂಬರೀಕರಣ ಹಾಗೂ ಸಿಸಿ ರಸ್ತೆ, ಚರಂಡಿ ಒಳಗೊಂಡಂತೆ ವಿವಿಧ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ. ಈಗಾಗಲೇ ಕೈಗೊಂಡ ಕಾಮಗಾರಿಗಳಲ್ಲಿ ಕೆಲವೆಡೆ ಬೇಕಾಬಿಟ್ಟಿ ಕಾಮಗಾರಿ ನಿರ್ವಹಿಸಲಾಗಿದೆ. ಕೆಲವೆಡೆ ರಸ್ತೆ ಕಾಮಗಾರಿಗೆ ಮೆಟಿಂಗಮಾಡಿದ್ದರೆ ಇನ್ನೊಂದಡೆ ಇದ್ದ ರಸ್ತೆ ಮೇಲೆ ಡಾಂಬರೀಕರಣ ಕೈಗೊಂಡು ಗುತ್ತಿಗೆದಾರ ಕೈತೊಳೆದುಕೊಳ್ಳುತ್ತ ಸಾಗಿದ್ದಾನೆ.

ಯಾವುದೇ ಕಾಮಗಾರಿ ನಿರ್ವಹಿಸಬೇಕಾದರೆ ಪುರಸಭೆ ಸಂಬಂಧಿತ ಆಸ್ತಿ ಹಾನಿಗೊಳಗಾಗದಂತೆ ಗುತ್ತಿಗೆದಾರ ಮುನ್ನೆಚ್ಚರಿಕೆ ವಹಿಸಬೇಕಾಗುತ್ತದೆ. ಒಂದು ವೇಳೆ ಅಚಾತುರ್ಯದಿಂದ ಹಾನಿಗೊಳಗಾದರೆ ಅದೇ ಗುತ್ತಿಗೆದಾರು
ಹಾನಿಗೀಡಾಗಿದ್ದನ್ನು ಸರಿಪಡಿಸಿ ಮುಂದಿನ ಕಾಮಗಾರಿ ಕೈಗೊಳ್ಳಬೇಕಾಗುತ್ತದೆ.

ಅದ್ಯಾವುದನ್ನು ಲೆಕ್ಕಿಸದೇ ರಸ್ತೆ ಡಾಂಬರೀಕರಣದ ನೆಪದಲ್ಲಿ ಒಳಚರಂಡಿ ಚೇಂಬರ್‌ಗಳನ್ನು ಒಡೆದು ಹಾಕಿದ್ದಲ್ಲದೇ ಚೆಂಬರ್‌ನ ಸುತ್ತ ಕಡಿ ಕಂಕರಗಳನ್ನು ಹಾಕಿ ಚೇಂಬರ್‌ ಇಲ್ಲೇ ಇದೇ ಎಂಬುದನ್ನು ಗುರುತಿಸಲಿಕ್ಕೆ ಆಗದ ಹಾಗೆ ಡಾಂಬರೀಕರಣಕ್ಕೆ ಮುಂದಾಗಿರುವದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಕಾಮಗಾರಿ ನಿರ್ವಹಣೆ ಸಮಯದಲ್ಲಿ ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಹಂತ ಹಂತದಲ್ಲಿ ತಪಾಸಣೆ ಕೈಗೊಳ್ಳುತ್ತ
ಸಾಗಬೇಕಾಗುತ್ತದೆ. ಆದರೆ ವಿವಿಧ ಕಾಮಗಾರಿಗಳಲ್ಲಿ ಬಹುತೇಕ ಕಾಮಗಾರಿಗಳು ಮುಕ್ತಾಯ ಹಂತಕ್ಕೆ ಬಂದರೂ ಯಾವ ಒಬ್ಬ ಅಧಿಕಾರಿಯೂ ಭೇಟಿ ನೀಡಿ ಪರಿಶೀಲನೆ ಕೈಗೊಳ್ಳದಿರುವುದು ಅಧಿಕಾರಿಗಳ ನಡೆ ಮೇಲೆ ಸಂಶಯಕ್ಕೆ ಎಡೆ ಮಾಡಿಕೊಟ್ಟಿದೆ.

ಈಗಾಗಲೇ ಕೆಲವು ವಾರ್ಡ್‌ಗಳಲ್ಲಿ ಬೇಕಾ ಬಿಟ್ಟಿ ರಸ್ತೆ ಕಾಮಗಾರಿ ನಿರ್ವಹಿಸುತ್ತಿರುವದನ್ನು ಮನಗಂಡ ಸಾರ್ವಜನಿಕರು ಹಾಗೂ ಕೆಲವು ಸಂಘಟಕರು ನಗರಾಭಿವೃದ್ಧಿ ಯೋಜನೆ ಇಲಾಖೆ ಅಧಿಕಾರಿಗಳಿಗೆ ಲಿಖೀತವಾಗಿ ದೂರು ಸಲ್ಲಿಸುತ್ತ ಬಂದರೂ ಯಾವುದೇ ಪ್ರಯೋಜನೆ ಆಗಿಲ್ಲ.
 
ಜಿಲ್ಲಾಧಿಕಾರಿಗಳು ಕಾಮಗಾರಿ ನಿರ್ವಹಣೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಕೈಗೊಳ್ಳಬೇಕು. ಬೇಕಾಬಿಟ್ಟಿ ಕಾಮಗಾರಿ ನಿರ್ವಹಿಸಿದ ಗುತ್ತಿಗೆದಾರನ ಮೇಲೆ ಹಾಗೂ ಸಂಬಂಧಿಸಿದ ಅಧಿಕಾರಿಗಳ ಮೇಲೆ ಸೂಕ್ತ ಕ್ರಮ ಜರುಗಿಸಬೇಕೆಂದು ನಾಗರಿಕರು ಒತ್ತಾಯಿಸಿದ್ದಾರೆ.

ನಗರೋತ್ಧಾನ ಯೋಜನೆಯಡಿ ಪಟ್ಟಣದಲ್ಲಿ ನಡೆದಿರುವ ಡಾಂಬರೀಕರಣ ಹಾಗೂ ಸಿಸಿ ರಸ್ತೆ ಕಾಮಗಾರಿಗಳು ಕಳಪೆಯಾಗಿವೆ. ಒಳಚರಂಡಿ ಚೇಂಬರ್‌ಗಳನ್ನು ಒಡೆದು ಹಾಕಿದ್ದಲ್ಲದೇ ಅವುಗಳನ್ನು ಸುತ್ತಲೂ ಕಡಿ ಕಂಕರಗಳಿಂದ ಮುಚ್ಚಿ ಬೇಕಾಬಿಟ್ಟಿ ಕಾಮಗಾರಿ ಮಾಡಲಾಗುತ್ತಿದೆ. ಈಗಾಗಲೇ ಜಿಲ್ಲಾ ನಗರಾಭಿವೃದ್ಧಿ ಯೋಜನೆ ಇಲಾಖೆಗೆ ಲಿಖೀತವಾಗಿ ದೂರು ಸಲ್ಲಿಸಿದ್ದೇವೆ. ಕೂಡಲೇ ಕಾಮಗಾರಿ ತಪಾಸಣೆ ಕೈಗೊಂಡು ಗುತ್ತಿಗೆದಾರನ ಮೇಲೆ ಕ್ರಮ ಕೈಗೊಳ್ಳಬೇಕು.
 ಜೈಭೀಮ ಮುತ್ತಗಿ, ಕರವೇ ತಾಲೂಕು ಉಪಾಧ್ಯಕ್ಷ

ಒಳಚರಂಡಿ ಚೇಂಬರ್‌ಗಳು ಒಡೆದು ಹಾಗೆ ಮುಚ್ಚಿ ರಸ್ತೆ ಕಾಮಗಾರಿ ಕೈಗೊಂಡಿರುವ ದೂರಿನ ಬಗ್ಗೆ ಎರಡು ದಿನದಲ್ಲಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡುತ್ತೇನೆ. ಈ ವಿಷಯ ಕುರಿತು ಗುತ್ತಿಗೆದಾರನ ಜೊತೆ ಈಗಲೇ ದೂರವಾಣಿ ಮೂಲಕ ಮಾತನಾಡುತ್ತೇನೆ. 
 ಮಹೇಶ ಕಲಾಲ್‌, ನಗರಾಭಿವೃದ್ಧಿ ಕೋಶದ ಎಇಇ

„ಜಿ.ಟಿ. ಘೋರ್ಪಡೆ

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.