ನಿರುದ್ಯೋಗಿಗಳನ್ನು ಉದ್ಯಮಶೀಲರನ್ನಾಗಿಸುವುದೇ ಗುರಿ


Team Udayavani, Sep 11, 2018, 12:25 PM IST

aravinda.jpg

ಮಂಗಳೂರು: ರಾಜ್ಯ ಸರಕಾರದ ಕೌಶಲಾಭಿವೃದ್ಧಿ, ಉದ್ಯಮ ಶೀಲತೆ ಮತ್ತು ಜೀವನೋಪಾಯ ಎಂಬ ಹೊಸ ಇಲಾಖೆಯ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಿಗೆ ಸಂಬಂಧಿಸಿದಂತೆ ಕೇಂದ್ರ ಕಚೇರಿ
ಯೆಯ್ನಾಡಿಯ ಕೈಗಾರಿಕಾ ವಲಯದಲ್ಲಿ ಶೀಘ್ರವೇ ಉದ್ಘಾಟನೆಯಾಗಲಿದೆ. ಜಂಟಿ ನಿರ್ದೇಶಕ ಅರವಿಂದ ಡಿ. ಬಾಳೇರಿ “ಉದಯವಾಣಿ’ಯೊಂದಿಗೆ ಇಲಾಖೆಯ ಕಾರ್ಯ ವೈಖರಿ ಕುರಿತು ಮಾಹಿತಿ ಹಂಚಿಕೊಂಡಿದ್ದಾರೆ.

* ಹೊಸ ಕಚೇರಿ ಸ್ವರೂಪ ಹೇಗೆ?
ನಮ್ಮದು ಹೊಸ ಇಲಾಖೆ ಆಗಿರುವ ಕಾರಣ ಮಂಗಳೂರಿನಲ್ಲಿಯೂ ಅದಕ್ಕೆ ಬೇಕಾದ ಎಲ್ಲ ಮೂಲ ಸೌಕರ್ಯ ವನ್ನು ರೂಪಿಸಬೇಕಾಗಿದೆ. ಸದ್ಯ ಐದು ಮಂದಿ ಸಿಬಂದಿಯನ್ನು ನೇಮಿಸಲಾಗಿದೆ. ಅವರ ಪೈಕಿ ಒಬ್ಬರು ಸ್ವಉದ್ಯೋಗ ಕೋರಿ ಬರುವವರಿಗೆ ಮಾರ್ಗದರ್ಶನ ನೀಡಲಿದ್ದು, ಮೊದಲ ಹಂತವಾಗಿ “ದಿಶಾ’ ಎಂಬ ಯೋಜನೆ ಕೈಗೆತ್ತಿಕೊಳ್ಳಲಾಗಿದೆ.

* ಏನಿದು “ದಿಶಾ’?
ವಿದ್ಯಾವಂತ ನಿರುದ್ಯೋಗಿಗಳಿಗೆ ಮಾರ್ಗದರ್ಶನ ನೀಡಲು ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರ(ಸಿಡಾಕ್‌) ಮೂಲಕ ಕೈಗೆತ್ತಿಕೊಳ್ಳುತ್ತಿರುವ ಯೋಜನೆಯಿದು. ಕೈಗಾರಿಕಾ ಇಲಾಖೆ, ಕೌಶಲಾಭಿವೃದ್ಧಿ ಇಲಾಖೆ ಮತ್ತು ಸಂಯುಕ್ತ
ರಾಷ್ಟ್ರಗಳ ಅಭಿವೃದ್ಧಿ ಸಂಸ್ಥೆ ಸಹಯೋಗವಿರಲಿದೆ. 4 ಹಂತಗಳಲ್ಲಿ ಯೋಜನೆ ಜಾರಿಗೊಳ್ಳಲಿದ್ದು, ಮೊದಲಿಗೆ “ದಿಶಾ ಔಟ್‌ರೀಟ್‌’ ಎಂಬ ಕಾರ್ಯಕ್ರಮದಡಿ ಮಾರ್ಚ್‌ನೊಳಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಟ್ಟು 5 ಸಾವಿರ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ ತಲಾ 2,500 ಸ್ವ ಉದ್ಯೋಗ ಆಸಕ್ತ ಅಂತಿಮ ವರ್ಷದ ಎಂಜಿನಿಯರಿಂಗ್‌ ಕಾಲೇಜು, ಐಟಿಐ, ಡಿಪ್ಲೋಮಾ ಕಾಲೇಜು ವಿದ್ಯಾರ್ಥಿಗಳಿಗೆ ಸ್ವಂತ ಉದ್ಯಮದತ್ತ ಪ್ರೇರೇಪಿಸಲಾಗುವುದು. ನಮ್ಮ ಮೊದಲ ಆದ್ಯತೆ ಸರಕಾರಿ ಕಾಲೇಜುಗಳಾಗಿವೆ. 

*ಮಾಹಿತಿಯಿಂದ ಪ್ರಯೋಜನ?
ಮಾಹಿತಿ ನೀಡಿದ ಬಳಿಕ 2ನೇ ಹಂತದಲ್ಲಿ 3 ಜಿಲ್ಲೆಗಳಲ್ಲಿ ತಲಾ 625 ವಿದ್ಯಾರ್ಥಿಗಳಿಗೆ “ದಿಶಾ ರೆಡಿ’ ಎಂಬ
ಪರಿಕಲ್ಪನೆಯಡಿ ಮಾಹಿತಿ ಕಾರ್ಯಾಗಾರ ನಡೆಸಲಾಗುವುದು. ಅನಂತರ ದಿಶಾ ಸ್ಟಡೀ ಎಂಬ ಹಂತದಡಿ ಮತ್ತೆ ಮಾಹಿತಿ ಕಾರ್ಯಾಗಾರ ನಡೆಸಿ ಅಂತಿಮವಾಗಿ 60 ಮಂದಿ ಯನ್ನು ಆಯ್ಕೆ ಮಾಡಿ ಸ್ವಂತ ಉದ್ದಿಮೆ
ಪ್ರಾರಂಭಿಸಲು ತರಬೇತಿ ನೀಡಲಾಗುತ್ತದೆ. ಪೂರಕ ಮೂಲ ಸೌಕರ್ಯ, ಹಣಕಾಸು ನೆರವು ಒದಗಿಸಲಾಗು
ವುದು. ಈ ಹಿನ್ನೆಲೆಯಲ್ಲಿ ಶೀಘ್ರವೇ “ದಿಶಾ ಸೆಲ್‌’ ಆರಂಭವಾಗಲಿದೆ.

*ಯಾರೆಲ್ಲ ಇದರ ಪ್ರಯೋಜನ ಪಡೆಯಬಹುದು?
ಸಾಮಾನ್ಯವಾಗಿ ಸ್ವಂತ ಉದ್ದಿಮೆ ಮಾಡಲು ಮುಂದಾಗುವವರಿಗೆ ಯಾವುದು ಮಾಡಬಹುದು, ಸಾಲ ಯಾರು ಕೊಡುತ್ತಾರೆ, ಉದ್ಯಮ ಯೋಜನೆ ಹೇಗೆ ಮಾಡುವುದು ಎಂಬುದು ತಿಳಿದಿರದು. ಹೀಗಾಗಿ, ಸಣ್ಣ ಗುಡಿ ಕೈಗಾರಿಕೆಯಿಂದ ಹಿಡಿದು 5 ಕೋಟಿ ರೂ. ವರೆಗಿನ ಮೊತ್ತದ ಯಾವುದೇ ಮಾದರಿ ಕೈಗಾರಿಕೆ/ಉದ್ಯಮ ಸ್ಥಾಪಿಸಲು ಇಚ್ಛಿಸುವವರು ಇಲಾಖೆಯಲ್ಲಿ ಮಾಹಿತಿ ಪಡೆಯಬಹುದು.

*ಕರಾವಳಿಯಲ್ಲಿ ಯಾವ ಮಾದರಿ ಸ್ವಂತ ಉದ್ದಿಮೆಗೆ ಅವಕಾಶಗಳಿವೆ?
ಆಹಾರೋದ್ಯಮ, ಮೀನುಗಾರಿಕೆ, ಫಾರೆಸ್ಟ್‌ ಬೇಸ್ಡ್ ಆಗ್ರೋ ಇಂಡಸ್ಟ್ರಿ ಸ್ಥಾಪಿಸುವತ್ತ ಹೆಚ್ಚಿನವರು ಆಸಕ್ತಿ ತೋರಿಸುತ್ತಿದ್ದಾರೆ.

*ಮೊದಲ ಬಾರಿಗೆ ಈ ಮಾದರಿಯ ಸೇವೆ ಲಭಿಸುತ್ತಿದೆಯೇ?
ಕೇಂದ್ರ ಸರಕಾರದ ಕೌಶಲಾಭಿವೃದ್ಧಿ ಇಲಾಖೆಯಡಿ ಈಗಾಗಲೇ ಉತ್ತೇಜನ-ಸಾಲ ಸೌಲಭ್ಯ ಲಭ್ಯವಿದೆ. ಆದರೆ ರಾಜ್ಯ ಸರಕಾರದಿಂದ ಮೊದಲ ಬಾರಿಗೆ ದಕ್ಷಿಣ ಕನ್ನಡ ಸಹಿತ 16 ಜಿಲ್ಲೆಗಳಲ್ಲಿ ಈ ಮಾದರಿ ಕಾರ್ಯಕ್ರಮ ಪ್ರಾರಂಭವಾಗುತ್ತಿದೆ. ಇದಕ್ಕಾಗಿ ಇಲಾಖೆಗೆ 750 ಕೋಟಿ ರೂ. ನೀಡಲಾಗಿದೆ.  

*ಆದರೆ, ಈಗಾಗಲೇ ಇಂಥ ಹಲವು ತರಬೇತಿ ವ್ಯವಸ್ಥೆ ಇದೆಯಲ್ಲಾ ?
ಪ್ರಸ್ತುತ ಹಲವು ಮಾದರಿಯ ಸರಕಾರಿ ಯೋಜನೆ ಗಳಿವೆ. ತೋಟ ಗಾರಿಕೆ, ಕೃಷಿ ಅಥವಾ ಸಮಾಜ ಕಲ್ಯಾಣ, ಮೀನುಗಾರಿಕೆ ಇಲಾಖೆಗಳಲ್ಲಿಯೇ ಮಾಹಿತಿ ಲಭ್ಯ ಲಭ್ಯವಾಗಲಿದ್ದು, ಆಸಕ್ತರು ಸಂಪರ್ಕಿಸಬಹುದು.
ಇನ್ನು ಮುಂದೆ ಸ್ವ ಉದ್ಯೋಗ ಕುರಿತಂತೆ ಎಲ್ಲ ಮಾಹಿತಿಯೂ ನಮ್ಮ ಇಲಾಖೆಯಡಿಯೇ ಲಭ್ಯವಾಗಲಿದೆ.

ಕೇಂದ್ರ ಸರಕಾರದ ಕೌಶಲಾಭಿವೃದ್ಧಿಗೆ ಸಂಬಂಧಿಸಿದ ಇಲಾಖೆ ಮಾದರಿಯಲ್ಲೇ ರಾಜ್ಯ ಸರಕಾರವೂ ಕೌಶಲಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯನ್ನು ಸೃಜಿಸಿದೆ. ಈ ಹಿಂದೆ ಕೈಗಾರಿಕಾ ಇಲಾಖೆಯಲ್ಲಿದ್ದ ಸಿಡಾಕ್‌, ಜಿಟಿಡಿಸಿ ಸೇರಿದಂತೆ ಹಲವು ಸಂಸ್ಥೆಗಳು ಇದರಲ್ಲಿ ವಿಲೀನಗೊಂಡಿವೆ. ದಕ್ಷಿಣ ಕನ್ನಡ ಸೇರಿದಂತೆ ಸುಮಾರು 16 ಜಿಲ್ಲೆಗಳಲ್ಲಿ ಈ ಹೊಸ ಇಲಾಖೆ ಕಾರ್ಯ ಚಟುವಟಿಕೆಗಳು ಶುರುವಾಗುತ್ತಿವೆ. ಆ ಪ್ರಕಾರ, ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾರವಾರ ಜಿಲ್ಲೆ ಒಳಗೊಂಡಂತೆ ಮಂಗಳೂರಿನ ಯೆಯ್ನಾಡಿಯ ಕೈಗಾರಿಕಾ ಪ್ರದೇಶದಲ್ಲಿ ಸೆಪ್ಟಂಬರ್‌ ಮೊದಲ ವಾರದೊಳಗೆ ಕೇಂದ್ರ ಕಚೇರಿ ಉದ್ಘಾಟನೆಯಾಗುವ ಸಾಧ್ಯತೆಯಿದೆ. 

*ಸುರೇಶ್‌ ಪುದುವೆಟ್ಟು

ಟಾಪ್ ನ್ಯೂಸ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.