ಪ್ರತಿ ಶಿಶುವಿಗೂ ಶ್ರವಣ ತಪಾಸಣೆ ಕಡ್ಡಾಯ


Team Udayavani, Sep 11, 2018, 12:29 PM IST

prati.jpg

ಬೆಂಗಳೂರು: ಕೇರಳ ಮಾದರಿಯಲ್ಲಿ ಪ್ರತಿ ನವಜಾತ ಶಿಶುವಿನ ಶ್ರವಣ ದೋಷ ತಪಾಸಣೆಯನ್ನು ರಾಜ್ಯದಲ್ಲೂ ಸಾರ್ವತ್ರಿಕ ಮತ್ತು ಕಡ್ಡಾಯಗೊಳಿಸಲಾಗುವುದು ಎಂದು ಆರೋಗ್ಯ ಇಲಾಖೆ ಆಯುಕ್ತ ಪಂಕಜ್‌ ಕುಮಾರ್‌ ಪಾಂಡೆ ತಿಳಿಸಿದ್ದಾರೆ.

ಆರೋಗ್ಯ ಇಲಾಖೆ, ರಾಷ್ಟ್ರೀಯ ಶ್ರವಣ ದೋಷ ನಿಯಂತ್ರಣ ಮತ್ತು ನಿವಾರಣಾ ಕಾರ್ಯಕ್ರಮ ಹಾಗೂ ರಾಷ್ಟ್ರೀಯ ಬಾಲ ವಿಕಾಸ ಕಾರ್ಯಕ್ರಮದ ವತಿಯಿಂದ ಸೋಮವಾರ ವಿಕಾಸಸೌಧದಲ್ಲಿ ಹಮ್ಮಿಕೊಂಡಿದ್ದ ನವಜಾತ ಶಿಶುವಿನ ಶ್ರವಣ ದೋಷ ತಪಾಸಣಾ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.

ರಾಷ್ಟ್ರೀಯ ಶ್ರವಣ ದೋಷ ನಿಯಂತ್ರಣ ಮತ್ತು ನಿವಾರಣಾ ಕಾರ್ಯಕ್ರಮದಡಿ (ಎನ್‌ಪಿಪಿಸಿಡಿ) ರಾಜ್ಯದಲ್ಲಿ ನವಜಾತ ಶಿಶುಗಳ ಶ್ರವಣ ದೋಷ ತಪಾಸಣಾ ಕಾರ್ಯಕ್ರಮ ನಡೆಯುತ್ತಿದೆ. ಸದ್ಯ ಪೋಷಕರ ಕೋರಿಕೆ ಮೇರೆಗೆ ಅಥವಾ ಕೆಲವೊಂದು ವಿಶೇಷ ಪ್ರಕರಣಗಳಲ್ಲಿ ಮಾತ್ರ ಆಯ್ದ ಆಸ್ಪತ್ರೆಗಳಲ್ಲಿ ತಪಾಸಣಾ ಕಾರ್ಯ ಕೈಗೊಳ್ಳಲಾಗುತ್ತಿದೆ.

ಆದರೆ, ಹುಟ್ಟುವ ಮಕ್ಕಳಲ್ಲಿನ ಶ್ರವಣ ದೋಷವನ್ನು ಶೀಘ್ರ ಪತ್ತೆ ಹಚ್ಚಿ, ಸೂಕ್ತ ಚಿಕಿತ್ಸೆ ಕೊಡುವ ಮೂಲಕ ಶ್ರವಣ ದೋಷದ ಮೇಲೆ ನಿಯಂತ್ರಣ ಸಾಧಿಸಲು ಇನ್ನು ಮುಂದೆ ರಾಜ್ಯದಲ್ಲಿ ಹುಟ್ಟು ಪ್ರತಿಯೊಂದು ಮಗುವಿನ ಶ್ರವಣ ದೋಷ ತಪಾಸಣೆಯನ್ನು ಎಲ್ಲ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಸಾರ್ವತ್ರಿಕ ಮತ್ತು ಕಡ್ಡಾಯಗೊಳಿಸಲಾಗುವುದು. ಈ ಕಾರ್ಯಕ್ರಮವನ್ನು ಪ್ರಸಕ್ತ ಆರ್ಥಿಕ ವರ್ಷದ ಕ್ರಿಯಾ ಯೋಜನೆಯಲ್ಲಿ ಸೇರಿಸಿಕೊಳ್ಳಲಾಗುವುದು ಎಂದರು.

ರಾಜ್ಯವೇ ಹಣ ಹೊಂದಿಸಲಿದೆ: ಶ್ರವಣ ದೋಷ ತಪಾಸಣೆ ಮತ್ತು ಅಗತ್ಯ ಶ್ರವಣ ಉಪಕರಣಗಳ ವಿತರಣೆಗೆ ರಾಷ್ಟ್ರೀಯ ಶ್ರವಣ ದೋಷ ನಿಯಂತ್ರಣ ಮತ್ತು ನಿವಾರಣಾ ಕಾರ್ಯಕ್ರಮದಲ್ಲಿ ರಾಜ್ಯ ಸರ್ಕಾರದ ಪ್ರಸ್ತಾವನೆಗಳಿಗೆ ಕೇಂದ್ರ ಸರ್ಕಾರದ ಅನುಮೋದನೆ ಈವರೆಗೆ ಸಿಕ್ಕಿಲ್ಲ. ಆದರೆ, ಕಾರ್ಯಕ್ರಮಕ್ಕೆ ಹಣದ ಅಡಚಣೆಯಾಗಬಾರದು ಎಂದು ರಾಜ್ಯ ಸರ್ಕಾರವೇ ಹಣ ಹೊಂದಿಸಲಿದೆ.

ಈ ಕಾರ್ಯಕ್ರಮಕ್ಕೆ 5ರಿಂದ 10 ಕೋಟಿ ರೂ. ಬೇಕಾಗಬಹುದು. ರಾಜ್ಯ ಸರ್ಕಾರದ ಪಾಲು ಸೇರಿದಂತೆ ಇತರ ಕಾರ್ಯಕ್ರಮಗಳಲ್ಲಿ ಅನುದಾನವನ್ನು ಬಳಸಿಕೊಳ್ಳಲಾಗುವುದು ಎಂದು ಇದೇ ವೇಳೆ ಪಾಂಡೆ ತಿಳಿಸಿದರು. ಈ ವೇಳೆ ಶ್ರವಣ ದೋಷಕ್ಕೆ ಒಳಗಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿರುವ ಮಕ್ಕಳ ಪೋಷಕರು ತಮ್ಮ ಅನುಭವಗಳನ್ನು ಹಂಚಿಕೊಂಡರು.

ಕೇರಳದಲ್ಲಿ ನವಜಾತ ಶಿಶುವಿನ ಶ್ರವಣ ದೋಷದ ಸಾರ್ವತ್ರಿಕ ತಪಾಸಣೆ ಯೋಜನೆ ಬಗ್ಗೆ ಕೇರಳ ಸಾಮಾಜಿಕ ಭದ್ರತಾ ಅಭಿಯಾನದ ಕಾರ್ಯನಿರ್ವಾಕ ಅಧಿಕಾರಿ ಡಾ. ಮಹ್ಮದ್‌ ಅಶೀಲ್‌ ಪ್ರತ್ಯಾಕ್ಷಿಕೆ ನೀಡಿದರು. ರಾಷ್ಟ್ರೀಯ ಆರೋಗ್ಯ ಅಭಿಯಾನದ ರಾಜ್ಯ ಯೋಜನಾ ನಿರ್ದೇಶಕ ರತನ್‌ ಕೇಲ್ಕರ್‌ ಇತರರಿದ್ದರು.

ಅವಮಾನಕ್ಕೆ ಹೆದರದಿರಿ – ಮಾಜಿ ವೇಗಿ ಬ್ರೆಟ್‌ ಲೀ: ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಜಾಗತಿಕ ಶ್ರವಣ ರಾಯಭಾರಿ, ಮಾಜಿ ಕ್ರಿಕೆಟಿಗ ಬ್ರೆಟ್‌ ಲೀ, ನವಜಾತ ಶಿಶುವಿನ ಶ್ರವಣ ದೋಷ ನಿವಾರಣೆಗೆ ಶೀಘ್ರ ಪತ್ತೆ ಹಾಗೂ ಸೂಕ್ತ ಚಿಕಿತ್ಸೆ ಅವಶ್ಯಕವಾಗಿದೆ.

ಶ್ರವಣ ದೋಷ ಎದುರಿಸುತ್ತಿರುವ ಮಕ್ಕಳ ಪೋಷಕರು ಸಮಾಜದಲ್ಲಿ ಎದುರಾಗುವ ಅವಮಾನ, ಮುಜುಗರವನ್ನು ಧೈರ್ಯದಿಂದ ಎದುರಿಸಬೇಕು. ಶ್ರವಣ ದೋಷ ಎದುರಿಸುತ್ತಿರುವ ಮಕ್ಕಳು ಮತ್ತು ಅವರ ಪೋಷಕರ ಬಗ್ಗೆ ಸಮಾಜ ಮಾನವೀಯ ದೃಷ್ಟಿಕೋನ ಹೊಂದಿರಬೇಕು. ಈ ದೋಷ ನಿವಾರಣೆಗೆ ಭಾರತ ಸರ್ಕಾರ ಸಾಕಷ್ಟು ಯೋಜನೆಗಳನ್ನು ಹಾಕಿಕೊಂಡಿದೆ. ಆದರೆ, ಸಾಗಬೇಕಾದ ಹಾದಿ ಇನ್ನೂ ಇದೆ ಎಂದು ತಿಳಿಸಿದರು.

ಟಾಪ್ ನ್ಯೂಸ್

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.