ನಮಗಿನ್ನು ಆಗಸದಲ್ಲೇ ವಿಮಾನಕ್ಕೆ ತೈಲ ಪೂರೈಕೆ ಸಾಧ್ಯ


Team Udayavani, Sep 11, 2018, 12:29 PM IST

namaginnu.jpg

ಬೆಂಗಳೂರು: ದೇಶದ ಹಗುರ ಯುದ್ಧ ವಿಮಾನ ತೇಜಸ್‌ ಇದೇ ಮೊದಲ ಬಾರಿಗೆ ಹಾರಾಟದ ನಡುವೆಯೇ ಯಶಸ್ವಿಯಾಗಿ ಇಂಧನ ಪೂರೈಕೆ ಮಾಡಿಕೊಂಡಿದೆ. ಸೋಮವಾರ ಇಂಥ ಯಶಸ್ವಿ ಕಾರ್ಯಾಚರಣೆ ನಡೆಸಲಾಗಿದೆ. ಇದರಿಂದಾಗಿ ಇಂಥ ಸಾಧನೆ ಮಾಡುವ ಸಾಮರ್ಥ್ಯ ಇರುವ ಕೆಲವೇ ಕೆಲವು ದೇಶಗಳ ಸಾಲಿಗೆ ಭಾರತ ಸೇರಿದಂತಾಗಿದೆ.

ಈ ಸಾಹಸದ ಬಗ್ಗೆ ಹಿಂದುಸ್ತಾನ್‌ ಏರೋನಾಟಿಕ್ಸ್‌ ಲಿಮಿಟೆಡ್‌ (ಎಚ್‌ಎಎಲ್‌) ಮಾಹಿತಿ ನೀಡಿದೆ. ಬೆಳಗ್ಗೆ 9.30ಕ್ಕೆ 20 ಸಾವಿರ ಅಡಿ ಎತ್ತರ ಪ್ರದೇಶದಲ್ಲಿ 1,900 ಕೆಜಿ ಇಂಧನವನ್ನು ಐಎಎಫ್ನ ಐಎಲ್‌78 ವಿಮಾನ, ತೇಜಸ್‌ ಎಲ್‌ಎಸ್‌ಪಿ 8 ವಿಮಾನಕ್ಕೆ ಯಶಸ್ವಿಯಾಗಿ ಪೂರೈಕೆ ಮಾಡಲಾಗಿದೆ. ಅದಕ್ಕಾಗಿ ಹಲವಾರು ಪರೀಕ್ಷಾ ದಿನಾಂಕಗಳನ್ನು ನಿಗದಿ ಮಾಡಲಾಗಿದ್ದರೂ, ಆ ಸಂದರ್ಭದಲ್ಲಿ ಪರೀಕ್ಷೆ ನಡೆಸಲು ಸಾಧ್ಯವಾಗಿರಲಿಲ್ಲ. 

ರಷ್ಯಾ ನಿರ್ಮಿತ ಐಎಲ್‌-78 ಎಂಕೆಐ ಟ್ಯಾಂಕರ್‌ ಬಳಕೆ ಮಾಡಿಕೊಂಡು ತೇಜಸ್‌ಗೆ ಇಂಧನ ಪೂರೈಕೆ ಮಾಡಲಾಗುತ್ತದೆಯೇ ಎಂಬುದನ್ನು ಕರಾರುವಾಕ್ಕಾಗಿ ಪರಿಶೀಲನೆ ನಡೆಸಿದ ಬಳಿಕವೇ ಈ ಸಾಧನೆ ಮಾಡಲಾಗಿದೆ. ಸೆ.4 ಮತ್ತು 6ರಂದು ಈ ಪರೀಕ್ಷೆ ನಡೆಸಲಾಗಿತ್ತು. 

ಐಎಎಫ್ನ ಐಎಲ್‌ 78 ವಿಮಾನವನ್ನು ಪೈಲಟ್‌ ವಿಂಗ್‌ ಕಮಾಂಡರ್‌ ಸಿದ್ಧಾರ್ಥ್ ಸಿಂಗ್‌ ಚಾಲನೆ ಮಾಡುತ್ತಿದ್ದರು. ಈ ಸಂದರ್ಭದಲ್ಲಿ ವಿಮಾನ ಗಂಟೆಗೆ 270 ನಾಟ್‌ಗಳಷ್ಟು ವೇಗದಲ್ಲಿ ಹಾರಾಟ ನಡೆಸುತ್ತಿತ್ತು. ಎಚ್‌ಎಎಲ್‌ ಮತ್ತು ಏರೋನಾಟಿಕಲ್‌ ಡೆವಲಪ್‌ಮೆಂಟ್‌ ಏಜೆನ್ಸಿ (ಎಡಿಎ) ಐಎಎಫ್ ಐಎಲ್‌78ನ್ನು ವಿನ್ಯಾಸಗೊಳಿಸಿತ್ತು. ಗ್ವಾಲಿಯರ್‌ನಲ್ಲಿರುವ ನಿಯಂತ್ರಣ ಕೇಂದ್ರದಿಂದ ಆಗಸದಲ್ಲಿ ತೈಲ ಪೂರೈಕೆ ಮಾಡುವ ಪ್ರಕ್ರಿಯೆಯನ್ನು ಗಮನಿಸಲಾಗುತ್ತಿತ್ತು. 

ಇದೊಂದು ಐತಿಹಾಸಿಕ ಸಾಧನೆ ಮತ್ತು ಆಗಸದಲ್ಲಿಯೇ (ಏರ್‌ ಟು ಏರ್‌) ಇಂಧನ ತುಂಬಿಸುವ ಕಾರ್ಯಾಚರಣೆ ಯಶಸ್ವಿಯಾಗಿ ಮುಕ್ತಾಯವಾಗಿದೆ. ಸೇನಾ ವಿಮಾನಗಳಿಗೆ ಸಂಬಂಧಿಸಿದ ಈ ಕೆಲಸ ಮುಕ್ತಾಯವಾಗಿದೆ ಎಂದು ಹಿಂದುಸ್ತಾನ್‌ ಏರೋನಾಟಿಕ್ಸ್‌ ಲಿಮಿಟೆಡ್‌ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಆರ್‌.ಮಾಧವನ್‌ ಶ್ಲಾ ಸಿದ್ದಾರೆ. 

ಮೂರು ತಿಂಗಳ ಹಿಂದಷ್ಟೇ ಬಿಯಾಂಡ್‌ ವಿಷ್ಯುವಲ್‌ ರೇಂಜ್‌ ಮಿಸೈಲ್‌ ಅನ್ನು ಯಶಸ್ವಿಯಾಗಿ ಪರೀಕ್ಷೆ ನಡೆಸಲಾಗಿತ್ತು. ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್‌ ಇಂಥ ಸಾಧನೆ ಮಾಡಿದ್ದಕ್ಕೆ ಐಎಎಫ್ ಮತ್ತು ಎಚ್‌ಎಎಲ್‌ ಅನ್ನು ಅಭಿನಂಧಿಸಿದ್ದಾರೆ. ಕಳೆದ ಡಿಸೆಂಬರ್‌ನಲ್ಲಿ ಭಾರತೀಯ ವಾಯುಯಾನ ಸಂಸ್ಥೆ 40 ತೇಜಸ್‌ ಮಾರ್ಕ್‌-1 ವಿಮಾನಗಳನ್ನು 50 ಸಾವಿರ ಕೋಟಿ ರೂ. ವೆಚ್ಚದಲ್ಲಿ ಪೂರೈಕೆ ಮಾಡುವಂತೆ ಎಚ್‌ಎಎಲ್‌ಗೆ ಮನವಿ ಮಾಡಿತ್ತು ಐಎಎಫ್.

* 1,900 ಕೆಜಿ- ಇಂಧನ ಪ್ರಮಾಣ
* 20,000 ಅಡಿ- ನೆಲ ಮಟ್ಟದಿಂದ ಇಷ್ಟು ಎತ್ತರದಲ್ಲಿ ಹಾರಾಟ
* 9.30- ಇಂಧನ ಮರು ಪೂರೈಕೆ ನಡೆದ ಸಮಯ
* 270 ನಾಟ್ಸ್‌- ವಿಮಾನ ಹಾರಾಟ ನಡೆಸುತ್ತಿದ್ದ ವೇಗ
* 09- ಐಎಎಫ್ ಸದ್ಯ ಹೊಂದಿರುವ ತೇಜಸ್‌ ವಿಮಾನಗಳ ಸಂಖ್ಯೆ
* 83- ಐಎಎಫ್ ಖರೀದಿಸಲು ಉದ್ದೇಶಿಸಿರುವ ತೇಜಸ್‌ ವಿಮಾನ
* 50,000 ಕೋಟಿ ರೂ.- ಅದರ ವೆಚ್ಚ

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.