ಹಳೆನೇರೆಂಕಿ: ದೈವದ ಕಟ್ಟೆ ಒಡೆದು ನಿಧಿ ಶೋಧ


Team Udayavani, Sep 11, 2018, 1:21 PM IST

daiv-katte.jpg

ಕಡಬ: ರಾಮಕುಂಜ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಹಳೆ ನೇರೆಂಕಿ ಗ್ರಾಮದ ಹೊಸಮಾ ರಡ್ಡ ಪಾತ್ರ ಮಾಡಿಯಲ್ಲಿ  ದೈವದ ಕಟ್ಟೆಯನ್ನು ಒಡೆದು ಗುಂಡಿ ತೋಡಿ ನಿಧಿಗಾಗಿ ಹುಡುಕಾಡಿದ ಘಟನೆ ಸೋಮವಾರ ಬೆಳಕಿಗೆ ಬಂದಿದೆ. ಸುಮಾರು 400 ವರ್ಷಗಳ ಇತಿಹಾಸ ಹೊಂದಿರುವ ಪಾತ್ರಮಾಡಿ ಉಳ್ಳಾಕ್ಲು ದೈವದ ಕಟ್ಟೆಯನ್ನು ಕೆಲವು ದಿನಗಳ ಹಿಂದೆಯೇ ಒಡೆದು ಹಾಕಿ ಕಟ್ಟೆಯ ಸುತ್ತ ಗುಂಡಿ ತೋಡಿ ನಿಧಿಗಾಗಿ ಹುಡುಕಾಟ ನಡೆಸಲಾಗಿದೆ ಎಂದು ಶಂಕಿಸಲಾಗಿದೆ. 

ಕಟ್ಟೆಯ ಹತ್ತಿರದ ಜಮೀನಿನ ಮಾಲಕರು ತಮ್ಮ ತೋಟದಲ್ಲಿ ತೆಂಗಿನ ಕಾಯಿ ಕೀಳುವ ಸಂದರ್ಭದಲ್ಲಿ ಗುಂಡಿ ತೋಡಿರುವುದು ಕಂಡು ಬಂತು. ಸ್ಥಳೀಯರಾದ ಅಶೋಕ್‌ ಹಾಗೂ ಹರೀಶ್‌ ಆಚಾರ್ಯ ಅವರು ಗುಂಡಿ ತೋಡಿರುವುದನ್ನು  ಖಚಿತಪಡಿಸಿ ಸಾಮಾಜಿಕ ಮುಂದಾಳು ಸಂಜೀವ ಗೌಡ ಮುಳಿಮಜಲು ಅವರ ಮೂಲಕ ಪೊಲೀಸ್‌ ಠಾಣೆಗೆ ಮಾಹಿತಿ ನೀಡಿದ್ದಾರೆ. ಕಡಬ ಎಸ್‌ಐ ಪ್ರಕಾಶ್‌ ದೇವಾಡಿಗ ಹಾಗೂ ಸಿಬಂದಿ ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿದ್ದು, ಸ್ಥಳದಲ್ಲಿ ಕುಂಕುಮ ತುಂಬಿದ ಎರಡು ಬಾಟಲಿಗಳು  ಪತ್ತೆಯಾಗಿವೆ.

ಜೈನರ ಕಾಲದ ಕಟ್ಟೆ 
ಜೈನ ಅರಸರ ಕಾಲದಲ್ಲಿ ಇಲ್ಲಿ ದೈವದ ಕಟ್ಟೆ ನಿರ್ಮಿಸಲಾಗಿದ್ದು, ಹಳೆ ನೇರೆಂಕಿಯ ಚಕ್ರವರ್ತಿ ಕೊಡ ಮಣಿತ್ತಾಯ  ದೈವಸ್ಥಾನಕ್ಕೆ ಸಂಬಂಧ ಪಟ್ಟ ಕಟ್ಟೆ ಎಂದು ಹೇಳಲಾಗಿದೆ. ಸುಮಾರು 40 ವರ್ಷಗಳಿಂದ  ಇಲ್ಲಿ  ದೈವಗಳಿಗೆ ಪರ್ವ ಕೊಡುತ್ತಿರಲಿಲ್ಲ. ಈ ಹಿನ್ನೆಲೆಯಲ್ಲಿ ಕಟ್ಟೆಯ ಸುತ್ತ ಗಿಡಗಂಟಿ  ಬೆಳೆದು ಯಾರೂ ಹೋಗುವಂತಿರಲಿಲ್ಲ. 

ಹಿಂದೆಯೂ ಅಗೆಯಲಾಗಿತ್ತು 
ಕಟ್ಟೆಯ ಅಡಿಯಲ್ಲಿ ಬಂಗಾರದ ಕಣಜ ಇದೆ  ಎನ್ನುವ ನಂಬಿಕೆ  ಸ್ಥಳೀಯರಲ್ಲಿದೆ.  ಸುಮಾರು 500 ಮೀ. ದೂರದಲ್ಲಿ ನಾಗದೇವರ ಬನವಿದೆ. ಅದರಲ್ಲಿ ಚಿನ್ನದ ಕೊಪ್ಪರಿಗೆ ಇದೆ ಎಂದು  12 ವರ್ಷಗಳ ಹಿಂದೆ ಅಲ್ಲಿಯೂ ಅಗೆಯಲಾಗಿತ್ತು. 

ಶಿಕ್ಷೆಗಾಗಿ ದೈವಕ್ಕೆ ಮೊರೆ 
ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ ಸಂದರ್ಭ ಊರಿನ ಆಸ್ತಿಕರು  ಸೇರಿ ಕಟ್ಟೆ ಕೆಡವಿದವರಿಗೆ ವರ್ಷದೊಳಗೆ ತಕ್ಕ ಶಾಸ್ತಿಯಾಗಬೇಕು ಎಂದು ದೈವದಲ್ಲಿ ಪ್ರಾರ್ಥಿಸಿದರು. 

ಟಾಪ್ ನ್ಯೂಸ್

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Uppinangady ಬೆಂಕಿ ಅವಘಡ: ಭಾರೀ ನಷ್ಟ

Uppinangady ಮನೆಗೆ ಆಕಸ್ಮಿಕ ಬೆಂಕಿ: ಭಾರೀ ನಷ್ಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

10

ಕುತ್ತಿಗೆಗೇ ಬಂತು… ಕುತ್ತಿಗೆ ಸ್ಪ್ರಿಂಗ್‌ ಇದ್ದಂತೆ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.