60 ಒಂಟೆ ಕತ್ತರಿಸಿ ಹೈದರಾಬಾದ್ಗೆ ಮಾಂಸ ರವಾನೆ: ನಾಲ್ವರ ಬಂಧನ
Team Udayavani, Sep 12, 2018, 6:00 AM IST
ಹುಮನಾಬಾದ: ಬೀದರ್ ಜಿಲ್ಲೆ ಹುಮನಾಬಾದ ತಾಲೂಕಿನ ನಂದಗಾಂವ್ ಗ್ರಾಮದ ಹೊರವಲಯದಲ್ಲಿ ಒಂಟೆಗಳನ್ನು ಕತ್ತರಿಸಿ, ಮಾಂಸವನ್ನು ಹೈದರಾಬಾದ್ಗೆ ಸಾಗಿಸುತ್ತಿದ್ದ ವೇಳೆ ದಾಳಿ ನಡೆಸಿದ ಪೊಲೀಸರು, 90 ಲಕ್ಷ ರೂ.ಮೌಲ್ಯದ 60 ಒಂಟೆಗಳ ಮಾಂಸವನ್ನು ವಶಪಡಿಸಿಕೊಂಡಿದ್ದಾರೆ. ಕೃತ್ಯದಲ್ಲಿ ತೊಡಗಿದ್ದ ನಾಲ್ವರನ್ನು ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ನಂದಗಾಂವ್ ಗ್ರಾಮದ ಎಂ.ಡಿ.ಸಿರಾಜ್ ರಫಿಯೋದೀನ್ ಮತ್ತು ಆತನ ಮಗ ಆದಿಲ್ ಸಿರಾಜುದ್ದೀನ್, ಬೀದರ ತಾಲೂಕು ಕಮಟಾಣಾ ಗ್ರಾಮದ ಉಮರ್ ಫಾರೂಕ್ ಚಾಂದಪಾಷಾ, ಲತೀಫ್ಬಾಬಾ ಸಾದೀಕ ಅಲಿ ಬಂಧಿತ ಆರೋಪಿಗಳು. ಸೆ.2ರಿಂದ ಈವರೆಗೆ 90 ಲಕ್ಷ ರೂ.ಮೌಲ್ಯದ 60 ಒಂಟೆಗಳನ್ನು ಕತ್ತರಿಸಿ ಮಾಂಸವನ್ನು ಹೈದರಾಬಾದ್ಗೆ ಇವರು ಸಾಗಿಸಿದ್ದಾರೆ. ಹರಿಯಾಣ ಮೂಲದ ಶಾಹೀದ್ ಇಸ್ಸಾರ್ ಖುರೇಷಿ ಹರಿಯಾಣದಿಂದ ನಂದಗಾಂವ್ ಗ್ರಾಮಕ್ಕೆ ಒಂಟೆಗಳನ್ನು ಟ್ರಕ್ನಲ್ಲಿ ಸಾಗಿಸುತ್ತಿದ್ದ. ಬೀದರ್ನ ಆಯೂಬ್ ಮುಲ್ತಾನಿ ಹೈದರಾಬಾದ್ನಲ್ಲಿ ಮಾರಾಟ ಮಾಡುತ್ತಿದ್ದ.
ಈ ಮಾಂಸವನ್ನು ಖಾಜಾಪಾಷಾ ಖರೀದಿಸುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ರಾಜಸ್ಥಾನ ಮತ್ತು ಹರಿಯಾಣದಲ್ಲಿ ಒಂಟೆಗಳನ್ನು ಕಸಾಯಿಖಾನೆಗೆ ಕಳಿಸುವುದನ್ನು ಅಲ್ಲಿನ ಸರ್ಕಾರ ನಿಷೇಧಿಸಿದ ಕಾರಣ ಹರಿಯಾಣ ಮೂಲಕ ಖುರೇಷಿ ಇಲ್ಲಿನ ವ್ಯಕ್ತಿಗಳ ಜೊತೆಗೆ ಸಂಬಂಧ ಬೆಳೆಸಿ, ವ್ಯವಹಾರ ಆರಂಭಿಸಿದ್ದ. ಪ್ರತಿ ಒಂಟೆಯ ಬೆಲೆ 1.5 ಲಕ್ಷ ರೂ.ಇದೆ. ಆ ಪ್ರಕಾರ ಈವರೆಗೆ ಒಟ್ಟು 60 ಒಂಟೆ ಕತ್ತರಿಸಿದ್ದಾರೆ. ಅವುಗಳ ಮೂಳೆಗಳನ್ನು ಹೊಲದಲ್ಲೇ ಹೂಳಿದ್ದಾರೆ. ಹಳ್ಳಿಖೇಡ(ಬಿ) ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ