ಗೌರಿಹಬ್ಬದ ಸೀರೆಗೆ ನಾರಿಯರ ಪೈಪೋಟಿ! 


Team Udayavani, Sep 12, 2018, 6:00 AM IST

26.jpg

ಮೈಸೂರು/ಬೆಂಗಳೂರು: ಸೀರೆ ಅಂದ್ರೆ ನೀರೆಯರಿಗೆ ಅದೆಂಥಧ್ದೋ ಖುಷಿ…. ಅದರಲ್ಲೂ ಗೌರಿ- ಗಣೇಶ ಹಬ್ಬದ ಸಂಭ್ರಮದ ವೇಳೆ ಯಲ್ಲೇ 15 ಸಾವಿರದ ರೇಷ್ಮೆ ಸೀರೆಯನ್ನು ನಾಲ್ಕೂವರೆ ಸಾವಿರಕ್ಕೆ ಕೊಡುತ್ತಾರೆಂದರೆ ಕೇಳಬೇಕೇ? ಹೌದು, ಬೆಂಗಳೂರು, ಮೈಸೂರಿನಲ್ಲಿ ಸರ್ಕಾರದ ರಿಯಾಯಿತಿ ದರದ ರೇಷ್ಮೆ ಸೀರೆಗಾಗಿ ಮಹಿಳೆಯರು ಮುಗಿಬಿದ್ದಿದ್ದಾರೆ. ಒಬ್ಬರಿಗೆ ಒಂದೇ ಸೀರೆ, ಅದರಲ್ಲೂ ಆಧಾರ್‌ ಕಾರ್ಡ್‌ ಇದ್ದವರಿಗೆ ಮಾತ್ರ ಎಂಬ ನಿಯಮಗಳು ಕೆಲ ಮಹಿಳೆಯರನ್ನು ಕೆರಳಿಸಿದ್ದು ಸರ್ಕಾರದ ಅಧಿಕಾರಿಗಳ ಜತೆಗೆ ಜಗಳಕ್ಕೂ ಇಳಿದಿದ್ದಾರೆ.

ಮುಗಿಬಿದ್ದ ಜನ: ಮಧ್ಯಮ ವರ್ಗದವರೂ ರೇಷ್ಮೆ ಸೀರೆ ಸಿಗಲಿ ಎಂಬ ಕಾರಣ ದಿಂದ ರಿಯಾಯಿತಿ ದರದಲ್ಲಿ ಮಾರಾಟ ಮಾಡಲು ರೇಷ್ಮೆ ಸಚಿವ ಸಾ.ರಾ. ಮಹೇಶ್‌ ಉದ್ದೇಶಿಸಿದ್ದರು. ಮೈಸೂರಿನ ಮೃಗಾಲಯದ ಎದುರಿನ ಕೆಎಸ್‌ಐಸಿ ಸಿಲ್ಕ್ ಮಳಿಗೆಯಲ್ಲಿ ಮತ್ತು ಬೆಂಗಳೂರಿನ ಕೆಂಪೇಗೌಡ ರಸ್ತೆಯ ಬಳಿಯ ಮಳಿಗೆಯಲ್ಲಿ ಮಾರಾಟದ ವ್ಯವಸ್ಥೆ ಮಾಡಲಾಗಿತ್ತು. ಹೀಗಾಗಿ ಮಹಿಳೆಯರು ತಮ್ಮ ಹೆಸರು ನೊಂದಾಯಿಸಲು ಬೆಳಗ್ಗಿನಿಂದಲೇ ಸಾಲುಗಟ್ಟಿ ನಿಂತರು.

ಮಹಿಳೆಯರ ಪ್ರತಿಭಟನೆ: ಮೈಸೂರಿನಲ್ಲಿ ಹೆಸರು ನೊಂದಣಿಗೆ ಆಧಾರ್‌ ಕಾರ್ಡ್‌ ಕಡ್ಡಾಯಗೊಳಿಸಲಾಗಿತ್ತು. ಇದನ್ನು ವಿರೋಧಿಸಿ ಕೆಎಸ್‌ಐಸಿ ಅಂಗಡಿ ಮುಂಭಾಗ ಪ್ರತಿಭಟನೆ ನಡೆಸಿದರು.  ಆಧಾರ್‌ ಕಾರ್ಡ್‌ ಕಡ್ಡಾಯ ಬದಲು ಸರದಿಯಲ್ಲಿ ನಿಂತ ಎಲ್ಲರಿಗೂ ಸೀರೆ ವಿತರಣೆ ಮಾಡ ಬೇಕೆಂದು ಪಟ್ಟು ಹಿಡಿದರು. ಜತೆಗೆ ಆಧಾರ್‌ ಕಾರ್ಡ್‌ ಇಲ್ಲ ದವರಿಗೂ ಸೀರೆ ನೀಡುವಂತೆ ಒತ್ತಾಯಿಸಿದರು. ಈ ನಡುವೆ ಸ್ಥಳದಲ್ಲಿದ್ದ ಪೊಲೀಸರು ಮಹಿಳೆಯರನ್ನು ಸಮಾಧಾನಪಡಿಸಲು ಹರಸಾಹಸ ಪಡಬೇಕಾಯಿತು.

1500 ಸೀರೆ ವಿತರಣೆ: ಸರ್ಕಾರದ ಆದೇಶದ ಮೇರೆಗೆ ಕಡಿಮೆ ದರದಲ್ಲಿ ರೇಷ್ಮೆ ಸೀರೆ ನೀಡಲಾಗುತ್ತಿದ್ದು, 1500 ಪಕ್ಕಾ ಜರಿ ರೇಷ್ಮೆ ಸೀರೆಯನ್ನು ಮಾರಾಟ ಮಾಡಲಾಗುತ್ತಿದೆ. ಈ ಹಿಂದೆ ಲಾಟರಿ ಮೂಲಕ ಸೀರೆ ನೀಡಲು ಉದ್ದೇಶಿಸಲಾಗಿತ್ತು. ಆದರೆ ಇದೀಗ ರೇಷ್ಮೆ ಸೀರೆ ಖರೀದಿಸಲು ಆಧಾರ್‌  ಕಾರ್ಡ್‌ ಕಡ್ಡಾಯ ಮಾಡಲಾಗಿದ್ದು, ಆಧಾರ್‌ ಕಾರ್ಡ್‌ ಹೊಂದಿದ ಮಳೆಯರಿಗೆ ಮಾತ್ರ ಸೀರೆ ನೀಡಲಾಗುತ್ತಿದೆ.

ಐದು ಕಡೆ ವಿತರಣೆ
ಗೌರಿ-ಗಣೇಶ ಹಬ್ಬದ ಕೊಡುಗೆಯಾಗಿ 4,500 ರೂ.ಗೆ ರೇಷ್ಮೆ ಸೀರೆ ಖರೀದಿಸಲು ಮೈಸೂರು ಸೇರಿದಂತೆ ರಾಮನಗರ, ಬೆಳಗಾವಿ, ದಾವಣಗೆರೆ ಹಾಗೂ ಬೆಂಗಳೂರಿನಲ್ಲಿರುವ ಕೆಎಸ್‌ಐಸಿ ಮಳಿಗೆಗಳಲ್ಲಿ ಸಿದ್ಧತೆ ಮಾಡಿಕೊಳ್ಳಲಾಗಿದೆ. ಈ ಮಧ್ಯೆ ಬೆಂಗಳೂರಿನಲ್ಲಿ ರಾತ್ರಿ 8 ಗಂಟೆಯಾದರೂ ಸೀರೆ ಖರೀದಿಗೆಂದು ಬಂದಿದ್ದ ಮಹಿಳೆಯರು ಮನೆಗೆ ಹೋಗಲು ಒಪ್ಪಲಿಲ್ಲ. ಕಡೆಗೆ ಪೊಲೀಸರ ಮನವಿ ಮೇರೆಗೆ ಬುಧವಾರ ವಾಪಸ್‌ ಬರುವುದಾಗಿ ಹೇಳಿ ಹೋದರು.

ಟಾಪ್ ನ್ಯೂಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

15

UV Fusion: ಜೀವನವನ್ನು ಪ್ರೀತಿಸೋಣ

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.