ಉಡುಪಿ ಸಹಜ ಸ್ಥಿತಿಗೆ; 7 ಪ್ರಕರಣ ದಾಖಲು,10 ಮಂದಿ ವಶಕ್ಕೆ


Team Udayavani, Sep 12, 2018, 9:47 AM IST

udupi-bund-1.jpg

ಉಡುಪಿ: ಸೋಮವಾರದ ಭಾರತ ಬಂದ್‌ ಸಂದರ್ಭ ಉಡುಪಿಯಲ್ಲಿ ನಡೆದ ಕಾಂಗ್ರೆಸ್‌ – ಬಿಜೆಪಿ ನಡುವಿನ ಘರ್ಷಣೆ ಪ್ರಕರಣಕ್ಕೆ ಸಂಬಂಧಿಸಿ 10 ಮಂದಿ ಪೊಲೀಸ್‌ ವಶದಲ್ಲಿದ್ದಾರೆ. ಪೊಲೀಸರು ಸ್ವಯಂ ಪ್ರೇರಿತರಾಗಿ 3 ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ.
ಬಲವಂತದ ಬಂದ್‌ಗೆ ಸಂಬಂಧಿಸಿ 1, ಮಹಿಳಾ ದೌರ್ಜನ್ಯಕ್ಕೆ ಸಂಬಂಧಿಸಿ ಒಂದು ಹಾಗೂ ಪರಸ್ಪರ ಹಲ್ಲೆಗೆ ಸಂಬಂಧಿಸಿ 2 ಪ್ರಕರಣಗಳು ಉಡುಪಿ ಮತ್ತು ಮಣಿಪಾಲ ಠಾಣೆಗಳಲ್ಲಿ ದಾಖಲಾಗಿವೆ. ಬಿಜೆಪಿ ಮತ್ತು ಕಾಂಗ್ರೆಸ್‌ನ ಒಟ್ಟು 30ರಿಂದ 40 ಮಂದಿಯ ವಿರುದ್ಧ ಪ್ರಕರಣ ದಾಖಲಿಸಿ ಕೊಳ್ಳಲಾಗಿದೆ.

ಗಾಯಾಳುಗಳಾಗಿ ಜಿಲ್ಲಾಸ್ಪತ್ರೆಯಲ್ಲಿ ದಾಖಲಾಗಿರುವ ಬಿಜೆಪಿಯ 6 ಮತ್ತು ಕಾಂಗ್ರೆಸ್‌ನ 4 ಮಂದಿ ಚಿಕಿತ್ಸೆ ಜತೆಗೆ ಪೊಲೀಸ್‌ ನಿಗಾದಲ್ಲಿದ್ದಾರೆ. ಆರೋಪಿಗಳೂ ಆಗಿರುವುದರಿಂದ ಇವರು ಪೊಲೀಸ್‌ ವಶದಲ್ಲಿರುತ್ತಾರೆ. ಘರ್ಷಣೆಗೆ ಸಂಬಂಧಿಸಿ ಎರಡೂ ಪಕ್ಷಗಳ ಕಾರ್ಯಕರ್ತರ ವಿರುದ್ಧವೂ ಒಂದೇ ರೀತಿಯ ಸೆಕ್ಷನ್‌ ಅಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಹೆಚ್ಚುವರಿ ಪೊಲೀಸ್‌ ನಿಯೋಜನೆ
ಮಂಗಳವಾರ ನಗರದಲ್ಲಿ ಯಾವುದೇ ಅಹಿತಕರ ಘಟನೆ ನಡೆದಿಲ್ಲ. ಆದರೆ ಉಡುಪಿಯಲ್ಲಿ 2 ಕೆಎಸ್‌ಆರ್‌ಪಿ ತುಕಡಿಗಳನ್ನು ನಿಯೋ ಜಿಸಲಾಗಿದೆ. ಕುಂದಾ ಪುರಕ್ಕೆ ಒಂದು ಕೆಎಸ್‌ಆರ್‌ಪಿ ತುಕಡಿ ಕಳುಹಿಸಿ ಕೊಡಲಾಗಿದೆ. ಲಾಠಿಚಾರ್ಜ್‌ ಮತ್ತು ಘರ್ಷಣೆ ಕುರಿತಾಗಿ ಚಿಕ್ಕಮಗಳೂರು ಎಸ್‌ಪಿ ಅಣ್ಣಾಮಲೈ ಮಂಗಳವಾರ ಕೂಡ ಮಾಹಿತಿ ಪಡೆದುಕೊಂಡಿದ್ದಾರೆ.

ರಾಡ್‌ನಿಂದ ಹಲ್ಲೆ
“ಕಾಂಗ್ರೆಸ್‌ ಕಾರ್ಯಕರ್ತರು ನ‌ನ್ನ ಮೇಲೆ ರಾಡ್‌ನಿಂದ ಮಾರಣಾಂತಿಕ ವಾಗಿ ಹಲ್ಲೆ ನಡೆಸಿದ್ದಾರೆ. ಪಕ್ಷದ ಧ್ವಜ ವನ್ನು ಕಾಲಿನಿಂದ ತುಳಿದಿದ್ದಾರೆ’ ಎಂದು ಪ್ರಭಾಕರ ಪೂಜಾರಿ ಅವರು ಕಾಂಗ್ರೆಸ್‌ನ ಪ್ರಖ್ಯಾತ್‌ ಶೆಟ್ಟಿ, ರಮೇಶ್‌ ಕಾಂಚನ್‌, ಯತೀಶ್‌ ಕರ್ಕೇರ, ಸತೀಶ್‌ ಅಮೀನ್‌ ಪಡುಕೆರೆ, ಸುರೇಶ್‌ ಕುಂದರ್‌, ಜನಾರ್ದನ ಭಂಡಾರ್‌ಕರ್‌ ಸೇರಿದಂತೆ 25ಕ್ಕೂ ಅಧಿಕ ಮಂದಿಯ ವಿರುದ್ಧ ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪ್ರಭಾಕರ ಪೂಜಾರಿ ಅವರು ಪ್ರಾಣಾಪಾಯದಿಂದ ಪಾರಾಗಿದ್ದು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.

ಪ್ರತಿ ದೂರು
ಪ್ರಭಾಕರ ಪೂಜಾರಿ, ದಿನಕರ ಪೂಜಾರಿ, ಯೋಗೀಶ್‌ ಸಾಲ್ಯಾನ್‌, ರಾಕೇಶ್‌ ಜೋಗಿ, ಶರತ್‌ ಬೈಲಕೆರೆ, ದಿನೇಶ್‌ ಅಮೀನ್‌, ಗಿರೀಶ್‌ ಅಂಚನ್‌ ಹಾಗೂ ಇತರರು ಕಲ್ಲಿನಿಂದ ಹಲ್ಲೆ ನಡೆಸಿರುವುದಾಗಿ ಕಾಂಗ್ರೆಸ್‌ನ ಗೋಪಾಲ ಪೂಜಾರಿ ದೂರು ನೀಡಿದ್ದಾರೆ. 

ಬಲವಂತದ ಬಂದ್‌ ವಿರುದ್ಧ  ಕೇಸ್‌
ಮಣಿಪಾಲ ಟೈಗರ್‌ ಸರ್ಕಲ್‌ ಬಳಿ ಆಟೋರಿಕ್ಷಾ ನಿಲ್ದಾಣ ಬಂದ್‌ ಮಾಡಬೇಕೆಂದು ಆಗ್ರಹಿಸಿ  ಸಾರ್ವಜನಿಕ ಶಾಂತಿ ನೆಮ್ಮದಿಗೆ ಭಂಗವುಂಟು ಮಾಡಿರುವ ಪ್ರಕರಣದಲ್ಲಿ ಕಾಂಗ್ರೆಸ್‌ನ ಪ್ರಖ್ಯಾತ್‌ ಶೆಟ್ಟಿ, ಪ್ರಶಾಂತ್‌ ಪೂಜಾರಿ, ಯತೀಶ್‌ ಕರ್ಕೇರಾ, ರಮೇಶ್‌ ಕಾಂಚನ್‌ ಹಾಗೂ ಇತರರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಲಾಠಿಚಾರ್ಜ್‌ ಅನಿವಾರ್ಯವಾಗಿತ್ತು: ಎಸ್‌ಪಿ
“ಕಾಂಗ್ರೆಸ್‌ ಮತ್ತು ಬಿಜೆಪಿ ಕಾರ್ಯಕರ್ತರು ಮನವಿಗೆ ಸ್ಪಂದಿಸದೇ ಇದ್ದಾಗ ಲಾಠಿ ಚಾರ್ಜ್‌ ಮಾಡುವುದು ಅನಿವಾರ್ಯವಾಯಿತು.ಇಲ್ಲವಾದರೆ ಪರಿಸ್ಥಿತಿ ಕೈ ಮೀರಿ ಹೋಗುತ್ತಿತ್ತು. ಬಳಿಕ ಪರಿಸ್ಥಿತಿ ಪೂರ್ಣ ಹತೋಟಿಗೆ ಬಂದಿತ್ತು. ಕೆಲವರ ವಿರುದ್ಧ ನಾವಾಗಿಯೇ ಪ್ರಕರಣ ದಾಖಲಿಸಿಕೊಂಡಿದ್ದೇವೆ. ವೀಡಿಯೋ ಮತ್ತಿತರ ಮಾಹಿತಿಗಳ ಆಧಾರದಲ್ಲಿ ಮತ್ತಷ್ಟು ಮಂದಿಯ ವಿರುದ್ಧ ಪ್ರಕರಣ ದಾಖಲಿಸಿ ಕೊಳ್ಳಲಾಗುವುದು’ ಎಂದು ಎಸ್‌ಪಿ ಲಕ್ಷ್ಮಣ ಬ. ನಿಂಬರಗಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.