ಚಾರ್ಮಾಡಿ ಘಾಟಿ: ಭೂರಮೆಯ ಸ್ವರ್ಗದಲ್ಲಿ ಸಂಚಾರ ಸಂಕಷ್ಟ


Team Udayavani, Sep 12, 2018, 12:15 PM IST

12-sepctember-9.jpg

ಬೆಳ್ತಂಗಡಿ: ಚುಮು ಚುಮು ಚಳಿಯ ನಡುವೆ ಪ್ರಯಾಣಿಕರ ಮನಕ್ಕೆ ಮುದ ನೀಡುವ ಹಚ್ಚ ಹಸುರಿನ ಕಾನನದ ಮಧ್ಯೆ ಹಾದು ಹೋಗುವ ಚಾರ್ಮಾಡಿ ಘಾಟಿ ಕಣಿವೆ ರಸ್ತೆಯಲ್ಲಿನ ಪ್ರಯಾಣ ಈಗ ಬಹಳ ತ್ರಾಸದಾಯಕವಾಗಿದೆ. ಘಾಟಿ ರಸ್ತೆಯಲ್ಲಿ ತಾಸುಗಟ್ಟಲೆ ಸಂಚಾರ ಸ್ಥಗಿತ, ಹೊಂಡ-ಗುಂಡಿಗಳಿಂದ ಕೂಡಿದ ಕಡಿದಾದ ತಿರುವಿನ ಸಂಚಾರದಿಂದಾಗಿ ಪ್ರಯಾಣಿಕರ ಕಷ್ಟ ಹೇಳತೀರದಂತಾಗಿದೆ.

ಸಂಚಾರ ಅಸ್ತವ್ಯಸ್ತ
ಸಂಪಾಜೆ ಘಾಟಿ ರಸ್ತೆಯಲ್ಲಿ ಸಂಚಾರ ಸ್ಥಗಿತ ಹಿನ್ನೆಲೆಯಲ್ಲಿ ಚಾರ್ಮಾಡಿ ಘಾಟಿ ರಸ್ತೆಯಲ್ಲಿ ವಾಹನ ಸಂಚಾರ ಹೆಚ್ಚಳವಾಗಿ ದಿನಂಪ್ರತಿ ತಾಸುಗಟ್ಟಲೆ ಬ್ಲಾಕ್‌ ಆಗುತ್ತಿದ್ದು, ಪ್ರಯಾಣಿಕರು ಅರಣ್ಯದ ಮಧ್ಯೆಯೇ ಪರದಾಡುವಂತಾಗಿದೆ. ರಾತ್ರಿ ಸಂಚಾರ ಸ್ಥಗಿತವಾದರೆ ಬೆಳಗಿನ ಜಾವದ ವರೆಗೂ ಘಾಟಿ ಪ್ರದೇಶದಲ್ಲಿಯೇ ಹಸಿವು, ನಿದ್ದೆ ಬಿಟ್ಟು ಪರಿತಪಿಸುವ ಸ್ಥಿತಿ ಪ್ರಯಾಣಿಕರದ್ದು. ಇದರಿಂದಾಗಿ ಚಿಕ್ಕ ಮಕ್ಕಳು, ಮಹಿಳೆಯರು, ವೃದ್ಧರು ಕಷ್ಟ ಅನುಭವಿಸುವಂತಾಗಿದೆ.

ಕಿರಿದಾದ ಹದಗೆಟ್ಟ ರಸ್ತೆ
ಘಾಟಿ ರಸ್ತೆಯ ಅಂಚಿನಲ್ಲಿ ಹೊಂಡಗಳಿದ್ದು, ಡಾಮರು ರಸ್ತೆಯಿಂದ ಕೆಳಗೆ ವಾಹನಗಳನ್ನು ಇಳಿಸಲು ಸಾಧ್ಯವಾಗುತ್ತಿಲ್ಲ. ರಾತ್ರಿಯ ವೇಳೆ ಚಾಲಕ ರಸ್ತೆಯ ಅಂಚಿಗೆ ಇಳಿಸಿದ್ದಲ್ಲಿ ಪ್ರಪಾತಕ್ಕೆ ಜಾರುವ ಸಾಧ್ಯತೆ ಅಧಿಕ. ಕಿರಿದಾಗಿರುವ ಪ್ರದೇಶಗಳಲ್ಲಿ ಬಸ್‌ ಗಳು ಹಾಗೂ ಸರಕು ತುಂಬಿದ ಲಾರಿಗಳು ಮುಖಾಮುಖೀಯಾದರೆ ಕಷ್ಟಪಟ್ಟು ಹಾದು ಹೋಗಬೇಕಾಗುತ್ತದೆ. ಇಂತಹ ಪ್ರದೇಶಗಳಲ್ಲಿ ಆಗಾಗ ಸಂಚಾರದಲ್ಲಿ ಅಡಚಣೆ ಉಂಟಾಗುತ್ತಿದೆ. ಈಗಾಗಲೇ ರಸ್ತೆ ಕುಸಿಯುವ ಭೀತಿ ಎದುರಾಗಿರುವ ಕೆಲವು ಸ್ಥಳಗಳಲ್ಲಿ ಮರಳನ್ನು ತುಂಬಿದ ಚೀಲಗಳನ್ನು ಇಡುವ ಮೂಲಕ ತಾತ್ಕಾಲಿಕ ರಕ್ಷಣೆ ಮಾಡಲಾಗಿದೆ.

ಸಂಪರ್ಕ ಕೊಂಡಿ
ಈಗ ಜಿಲ್ಲೆಗಿರುವ ಏಕೈಕ ಹತ್ತಿರದ ಸಂಪರ್ಕ ರಸ್ತೆ ಚಾರ್ಮಾಡಿ. ಮಂಗಳೂರು ಹಾಗೂ ಧರ್ಮಸ್ಥಳ ಸಹಿತ ಇತರ ಯಾತ್ರಾಸ್ಥಳಗಳಿಗೆ ಬರುವ ವಾಹನಗಳು ಇದೇ ಮಾರ್ಗವಾಗಿ ಸಂಚರಿಸುತ್ತಿವೆ. ಘಾಟಿಯಲ್ಲಿ ಸಣ್ಣ ಅವಘಡಗಳಾದರೂ ತಾಸುಗಟ್ಟಲೆ ವಾಹನ ಸಂಚಾರ ಸ್ಥಗಿತಗೊಳ್ಳುವುದು ಸಾಮಾನ್ಯವಾಗಿದೆ. ವಾಹನ ದಟ್ಟಣೆಯನ್ನು ನಿಯಂತ್ರಿಸಲು ಇಲ್ಲಿ ಯಾವುದೇ ವ್ಯವಸ್ಥೆಗಳಿಲ್ಲ. ಯಾವುದೇ ಅಗತ್ಯ ಬಂದರೂ 30 ಕಿ. ಮೀ. ದೂರದ ಬೆಳ್ತಂಗಡಿಯಿಂದ ಪೊಲೀಸರು ಇಲ್ಲಿಗೆ ಬರಬೇಕಾಗಿದೆ. ಮಾರ್ಗ ಮಧ್ಯೆ ವಾಹನಗಳು ಕೆಟ್ಟು ನಿಂತು ಸಂಚಾರದಲ್ಲಿ ವ್ಯತ್ಯಯವಾಗುತ್ತಿದ್ದು, ವಾಹನಗಳ ತೆರವಿಗೆ ಕ್ರೇನ್‌ನ ವ್ಯವಸ್ಥೆಯನ್ನು ಕಲ್ಪಿಸಿದರೆ ಅನುಕೂಲವಾಗುತ್ತದೆ.

ಮೂಲ ಸೌಕರ್ಯವಿಲ್ಲ
ಚಾರ್ಮಾಡಿಯಿಂದ ಕೊಟ್ಟಿಗೆಹಾರದವರೆಗೆ ಸುಮಾರು 20 ಕಿ. ಮೀ. ರಸ್ತೆ ದಟ್ಟವಾದ ಅರಣ್ಯದಲ್ಲಿ ಹಾದು ಹೋಗುತ್ತದೆ. ವಾಹನ ಸಂಚಾರದಲ್ಲಿ ಅಡಚಣೆಯಾದರೆ ಅರಣ್ಯದ ನಡುವೆಯೇ ಜನರು ರಾತ್ರಿ ಕಳೆಯಬೇಕಾಗಿದೆ. ಯಾವುದೇ ಕನಿಷ್ಠ ಮೂಲ ಸೌಲಭ್ಯಗಳು ಇಲ್ಲಿ ಲಭ್ಯವಿಲ್ಲ.

ನೀರು, ತಿಂಡಿ ಜತೆಗಿರಲಿ
ಚಾರ್ಮಾಡಿ ಘಾಟಿ ರಸ್ತೆಯಲ್ಲಿ ಎಷ್ಟು ಗಂಟೆಗಳ ಕಾಲ ರಸ್ತೆ ಸಂಚಾರ ಅಸ್ತವ್ಯಸ್ತವಾಗುತ್ತದೆ ಎಂಬ ಅರಿವು ಹೆಚ್ಚಿನವರಿಗೆ ಇರುವುದಿಲ್ಲ. ಪ್ರಯಾಣದ ವೇಳೆ ತಿಂಡಿ, ನೀರು ಮೊದಲಾದ ಅಗತ್ಯ ವಸ್ತುಗಳನ್ನು ಜತೆಯಲ್ಲಿ ತೆಗೆದುಕೊಂಡು ತೆರಳುವುದು ಉತ್ತಮ. ಇಲ್ಲವಾದರೆ ಅರಣ್ಯದ ಮಧ್ಯೆ ನೀರಿಗೂ ಕಷ್ಟವಾದೀತು.

ಅನುದಾನ ಬರಬೇಕಿದೆ
ಈಗಾಗಲೇ ತಾತ್ಕಾಲಿಕ ಕಾಮಗಾರಿಗಳು ಮುಗಿದಿವೆ. ಮುಂದಿನ ದಿನಗಳಲ್ಲಿ ಕಾಯಂ ಪರಿಹಾರಕ್ಕಾಗಿ ಅನುದಾನ ಬರಬೇಕಿದೆ. ಈಗಾಗಲೇ ಪ್ರಸ್ತಾವನೆ ಕಳುಹಿಸಲಾಗಿದೆ. ಹೀಗಾಗಿ ಅದಕ್ಕೆ ಅನುಮೋದನೆ ಸಿಕ್ಕ ಬಳಿಕವೇ ತೀರ್ಮಾನವಾಗಬೇಕಿದೆ.
-ಸುಬ್ಬರಾಮ ಹೊಳ್ಳ 
ಕಾರ್ಯಪಾಲಕ ಎಂಜಿನಿಯರ್‌, ರಾ.ಹೆ.ಮಂಗಳೂರು

ಟಾಪ್ ನ್ಯೂಸ್

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.