ಪಕ್ಷೇತರ ಸದಸ್ಯರ ಒಲಿಸಿಕೊಳ್ಳಲು ರಾಮಲಿಂಗಾರೆಡ್ಡಿ ಮಾತುಕತೆ
Team Udayavani, Sep 12, 2018, 12:28 PM IST
ಬೆಂಗಳೂರು: ಬಿಬಿಎಂಪಿಯಲ್ಲಿ ಮೇಯರ್ -ಉಪ ಮೇಯರ್ ಚುನಾವಣೆಯಲ್ಲಿ ನಿರ್ಣಾಯಕ ಪಾತ್ರ ವಹಿಸಿರುವ ಪಕ್ಷೇತರ ಸದಸ್ಯರನ್ನು ಬಿಜೆಪಿಯತ್ತ ಸೆಳೆಯಲು ಮಾಜಿ ಉಪ ಮುಖ್ಯಮಂತ್ರಿ ಆರ್.ಆಶೋಕ್ ಮಾತುಕತೆ ನಡೆಸಿದ ಬೆನ್ನಲ್ಲೇ ಮಂಗಳವಾರ ಕೆಪಿಸಿಸಿ ಅಧ್ಯಕ್ಷ ದಿನೇಶ್ಗುಂಡೂರಾವ್ ಹಾಗೂ ಮಾಜಿ ಸಚಿವ ರಾಮಲಿಂಗಾರೆಡ್ಡಿ ಪಕ್ಷೇತರ ಪಾಲಿಕೆ ಸದಸ್ಯರ ಜತೆ ಖಾಸಗಿ ಹೊಟೇಲ್ನಲ್ಲಿ ಸಭೆ ನಡೆಸಿದರು.
ಜಯನಗರ ವಾರ್ಡ್ನ ಗಂಗಾಬಿಕೆಯನ್ನು ಮೇಯರ್ ಮಾಡಲು ರಾಮಲಿಂಗಾ ರೆಡ್ಡಿ ಪ್ರಯತ್ನ ನಡೆಸಿದ್ದು, ಈ ಬಾರಿಯೂ ತಮ್ಮ ಪಕ್ಷದ ಅಭ್ಯರ್ಥಿ ಪರವಾಗಿರುವಂತೆ ಪಕ್ಷೇತರ ಸದಸ್ಯರಿಗೆ ಮನವಿ ಮಾಡಿದರು.
ಕಳೆದ ಮೂರು ಅವಧಿಗೆ ಕಾಂಗ್ರೆಸ್ ಮೇಯರ್ ಆಯ್ಕೆಯಾಗಲು ಪಕ್ಷೇತರ ಸದಸ್ಯರು ಸಹಕಾರ ನೀಡಿದ್ದು, ಕಾಂಗ್ರೆಸ್ ಕೂಡ ಪಕ್ಷೇತರರ ಹಿತ ಕಾಯಲು ಬದ್ಧವಾಗಿದೆ. ಇದುವರೆಗೂ ಪಕ್ಷ ನಿಮ್ಮೊಂದಿಗೆ ಉತ್ತಮ ಸಂಬಂಧ ಇಟ್ಟುಕೊಂಡಿದೆ. ಈ ಬಾರಿಯೂ ಅದೇ ಮುಂದುವರೆಸಿಕೊಂಡು ಹೋಗಲು ಕಾಂಗ್ರೆಸ್ ಮೇಯರ್ ಅಭ್ಯರ್ಥಿಗೆ ಬೆಂಬಲ ನೀಡುವಂತೆ ಕೋರಿದರು.
ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರೂ ಸಹ ಪಕ್ಷೇತರ ಸದಸ್ಯರಿಗೆ ಕಾಂಗ್ರೆಸ್ ಪರವಾಗಿರುವಂತೆ ಮನವಿ ಮಾಡಿದರು ಎಂದು ಹೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Tollywood: ಅಧಿಕೃತವಾಗಿ ರಿವೀಲ್ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್ ಡೇಟ್
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್?
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Sandalwood: ಜಪಾನ್ನಲ್ಲಿ ಈ ದಿನ ರಿಲೀಸ್ ಆಗಲಿದೆ ‘777 ಚಾರ್ಲಿʼ?
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ