ಕಬ್ಬಿನ ಜೊಲ್ಲೆಯಲ್ಲಿ ಮೈದಳೆದ ಗಣಪ


Team Udayavani, Sep 12, 2018, 12:28 PM IST

kabbina.jpg

ಬೆಂಗಳೂರು: ಗಣೇಶ ಚತುರ್ಥಿಯನ್ನು ಪರಿಸರ ಸ್ನೇಹಿಯಾಗಿ ಆಚರಿಸುವ ದೃಷ್ಟಿಯಿಂದ ಈ ಬಾರಿ ಜೆಪಿ ನಗರದ ಪುಟ್ಟೇನಹಳ್ಳಿಯ ಶ್ರೀ ಸತ್ಯ ಸಾಯಿ ಗಣಪತಿ ದೇವಸ್ಥಾನದ ಆಡಳಿತ ಮಂಡಳಿ, ಸುಮಾರು 30 ಅಡಿ ಎತ್ತರದ ಗಣಪನನ್ನು ಕಬ್ಬಿನ ಜೊಲ್ಲೆಯಿಂದ ನಿರ್ಮಿಸಿ ಹಲವರ ಪ್ರಶಂಸೆಗೆ ಪಾತ್ರವಾಗಿದೆ. 

ಪರಿಸರ ಉಳಿವಿನ ಜತೆಗೆ ಜಲ ಮಾಲಿನ್ಯದ ಬಗ್ಗೆಯೂ ಸಾರ್ವಜನಿಕರಿಗೆ ತಿಳಿವಳಿಕೆ ನೀಡುವ ದೃಷ್ಟಿಯಿಂದ ಕಬ್ಬಿನಿಂದ ಗಣಪತಿಯನ್ನು ವಿನ್ಯಾಸ ಮಾಡಲಾಗಿದೆ. ಸುಮಾರು 50 ಟನ್‌ ಕಬ್ಬನ್ನು ಗಣಪತಿ ನಿರ್ಮಿಸಲು ಬಳಕೆ ಮಾಡಿಕೊಳ್ಳಲಾಗಿದ್ದು, ಗಣಪನ ವಾಹನ ಮೂಷಕಕ್ಕೂ ಕಬ್ಬಿನ ಜೊಲ್ಲೆ ಬಳಸಲಾಗಿದೆ.

ಗಣಪನ ಅಲಂಕಾರಕ್ಕೆ ತಮಿಳುನಾಡಿನ ಕಬ್ಬುಗಳನ್ನು ಬಳಕೆ ಮಾಡಿಕೊಳ್ಳಲಾಗಿದ್ದು, ಉತ್ತರಪ್ರದೇಶ, ಆಂಧ್ರಪ್ರದೇಶ ಹಾಗೂ ತಮಿಳುನಾಡಿನ ಸುಮಾರು 50 ಮಂದಿ ವೃತ್ತಿಪರ ಕಾರ್ಮಿಕರು ಒಂದೂವರೆ ತಿಂಗಳಿನಿಂದ ಗಣಪತಿ ವಿನ್ಯಾಸದಲ್ಲಿ ನಿರತರಾಗಿ¨ªಾರೆ ಎಂದು ದೇವಸ್ಥಾನದ ಟ್ರಸ್ಟಿ ರಾಮ್‌ ಮೋಹನ ರಾಜ್‌ ತಿಳಿಸಿದ್ದಾರೆ.

ಕಬ್ಬು ಭಕ್ತರಿಗೆ: ಗುರುವಾರ ಗಣಪತಿ ಪ್ರತಿಷ್ಠಾಪಿಸಲಾಗುತ್ತಿದ್ದು ,15 ದಿನ ಶ್ರೀಸತ್ಯ ಸಾಯಿ ಗಣಪತಿ ದೇವಸ್ಥಾನದ ಆವರಣದಲ್ಲಿ ಗಣಪನನ್ನು ಸಾರ್ವಜನಿಕ ದರ್ಶನಕ್ಕೆ ಇರಿಸಲಾಗುವುದು. ಗಣಪತಿ ದೇವಸ್ಥಾನದ ಒಳಾಂಗಣವನ್ನು ಕಬ್ಬಿನ ಜೊಲ್ಲೆ ಜತೆಗೆ ಬಿಲ್ವಪತ್ರೆ ಕಾಯಿ, ಹಾಗೂ ತೆಂಗಿನ ಕಾಯಿಗಳಿಂದ ಅಲಂಕೃತಗೊಳಿಸಲಾಗಿದ್ದು, ಸುಮಾರು 50 ಸಾವಿರ ಮಂದಿ ದೇವಸ್ಥಾನಕ್ಕೆ ಭೇಟಿ ನೀಡುವ ನಿರೀಕ್ಷೆ ಇದೆ. ಗಣಪತಿ ಹಬ್ಬ ಮುಗಿದ ತಕ್ಷಣ ಅಲಂಕಾರಿಕ ಕಬ್ಬುಗಳನ್ನು ಭಕ್ತರಿಗೆ ಹಂಚಲಾಗುವುದು ಎಂದು ರಾಮ್‌ಮೋಹನ ರಾಜ್‌ ಹೇಳಿದ್ದಾರೆ.

4 ಸಾವಿರ ಕೆ.ಜಿ. ಬೃಹತ್‌ಲಾಡು: ಇದೇ ವೇಳೆ ಗಣೇಶ ಚತುರ್ಥಿ ಅಂಗವಾಗಿ ಸಿದ್ಧಪಡಿಸಲಾಗಿರುವ 4 ಸಾವಿರ ಕೆ.ಜಿ. ತೂಕದ ಬೃಹದಾಕಾರದ ಲಾಡನ್ನು ಮಂಗಳವಾರ ಶ್ರೀ ಸತ್ಯ ಸಾಯಿ ಗಣಪತಿ ದೇವಸ್ಥಾನದ ಆವರಣದಲ್ಲಿ ಸಾರ್ವಜನಿಕರ ವೀಕ್ಷಣೆಗೆ ಅನಾವರಣಗೊಳಿಸಲಾಯಿತು.

ಗೌರಿ -ಗಣೇಶ ಹಬ್ಬದ ವಿಶೇಷವಾಗಿ ದೇವಸ್ಥಾನದ ಆಡಳಿತ ಮಂಡಳಿ ಲಾಡನ್ನು ಸಿದ್ಧಪಡಿಸಿದ್ದು, ಭಕ್ತರಿಗೆ ಪ್ರಸಾದ ರೂಪದಲ್ಲಿ ವಿತರಿಸಲಾಗುವುದು. ಲಾಡು ತಯಾರಿಸಲು 1000 ಕೆ.ಜಿ. ಕಡಲೆ ಹಿಟ್ಟು, 2000 ಕೆ.ಜಿ. ಸಕ್ಕರೆ, 700 ಕೆ.ಜಿ. ಸನ್‌ ಪ್ಯೂರ್‌ಎಣ್ಣೆ, 300 ಕೆ.ಜಿ. ತುಪ್ಪ, 50 ಕೆ.ಜಿ. ಗೋಡಂಬಿ, 50 ಕೆ.ಜಿ. ಒಣ ದ್ರಾಕ್ಷಿ, 5 ಕೆ.ಜಿ. ಏಲಕ್ಕಿಯನ್ನು ಬಳಕೆ ಮಾಡಿಕೊಳ್ಳಲಾಗಿದೆ.

ಟಾಪ್ ನ್ಯೂಸ್

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.