ಸಹಜೀವಿಯನ್ನು ಕೊಂದು ವೃದ್ಧ ನೇಣಿಗೆ ಶರಣು


Team Udayavani, Sep 12, 2018, 12:28 PM IST

sahajeevi.jpg

ಬೆಂಗಳೂರು: ವೃದ್ಧೆಯೊಬ್ಬಳ ಜತೆ ಸಹ ಜೀವನ (ಲಿವ್‌ ಇನ್‌) ನಡೆಸುತ್ತಿದ್ದ ವೃದ್ಧ ಟೈಲರ್‌ ಆಕೆಯನ್ನು ಕೊಲೆಗೈದು ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿವೇಕನಗರದ ವನ್ನಾರಪೇಟೆಯಲ್ಲಿರುವ ಬಟ್ಟೆ ಅಂಗಡಿಯಲ್ಲಿ ಸೋಮವಾರ ನಡೆದಿದೆ.

ಕೇರಳ ಮೂಲದ ದೊಮ್ಮಲೂರು ನಿವಾಸಿ ರವೀಂದ್ರನ್‌(70) ಹಾಗೂ ಕೊಡಗು ಮೂಲದ ಉಮಾ (65) ಮೃತರು. ಘಟನೆಗೆ ಸ್ಪಷ್ಟ ಕಾರಣ ತಿಳಿದು ಬಂದಿಲ್ಲ. ಆದರೆ, ಹಣಕಾಸು ಸಮಸ್ಯೆಯಿಂದ ಬೇಸರಗೊಂಡಿದ್ದ ರವೀಂದ್ರನ್‌ ಉಮಾರನ್ನು ಕೊಂದು, ಬಳಿಕ ತಾವೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 3-4 ದಿನಗಳ ಹಿಂದೆಯೇ ಘಟನೆ ನಡೆದಿದ್ದು, ಅಂಗಡಿಯಲ್ಲಿ ದುರ್ವಾಸನೆ ಬರುತ್ತಿದ್ದರಿಂದ ಸೋಮವಾರ ಸಂಜೆ ಪ್ರಕರಣ ಬೆಳಕಿಗೆ ಬಂದಿದೆ ಎಂದು ಪೊಲೀಸರು ಹೇಳಿದರು.

ರವೀಂದ್ರನ್‌ಗೆ ಈಗಾಗಲೇ ವಿವಾಹವಾಗಿದ್ದು, ಒಬ್ಬ ಮಗ, ಒಬ್ಬ ಮಗಳು ಇದ್ದಾರೆ. ದೊಮ್ಮಲೂರಿನಲ್ಲಿ ಕುಟುಂಬ ವಾಸವಾಗಿದೆ. ರವೀಂದ್ರನ್‌ ಹಲಸೂರಿನ ಸೇನಾ ಕ್ಯಾಂಪ್‌ನ ಸಿಬ್ಬಂದಿಗೆ ಸಮವಸ್ತ್ರ ಪೂರೈಕೆ ಮಾಡುತ್ತಿದ್ದರು. ಇದೇ ಅಂಗಡಿಯಲ್ಲಿ ಉಮಾ 1981ರಿಂದ ಕೆಲಸ ಮಾಡುತ್ತಿದ್ದು, ಅಂಗಡಿಗೆ ಹೊಂದಿಕೊಂಡಂತೆ ಇರುವ ಹಿಂಭಾಗದ ಕೊಠಡಿಯಲ್ಲಿ ವಾಸವಾಗಿದ್ದರು. ಅವರಿಬ್ಬರೂ ಮೂರು ದಶಕಗಳಿಂದ ಸಹಜೀವನ ನಡೆಸುತ್ತಿದ್ದರು. ಈ ವಿಚಾರ ರವೀಂದ್ರನ್‌ ಕುಟುಂಬ ಸದಸ್ಯರಿಗೂ ತಿಳಿದಿದೆ ಎಂದು ಪೊಲೀಸರು ಹೇಳಿದರು.

3-4 ದಿನಗಳ ಹಿಂದೆಯೇ ಘಟನೆ: ಕಳೆದ ಶುಕ್ರವಾರ ಅವರಿಬ್ಬರೂ ಅಂಗಡಿಯಲ್ಲಿ ಒಟ್ಟಿಗೆ ಇರುವುದನ್ನು ಸ್ಥಳೀಯರು ನೋಡಿದ್ದಾರೆ. ಅನಂತರ ಯಾರಿಗೂ ಕಾಣಿಸಿಕೊಂಡಿಲ್ಲ. ಹೀಗಾಗಿ ಘಟನೆ ನಾಲ್ಕು ದಿನಗಳ ಹಿಂದೆಯೇ ನಡೆದಿರುವ ಸಾಧ್ಯತೆಯಿದೆ. ಹಣಕಾಸಿನ ವಿಚಾರವಾಗಿ ಆತಂಕಗೊಂಡಿದ್ದ ರವೀಂದ್ರನ್‌ ಶುಕ್ರವಾರ ರಾತ್ರಿ ಅಂಗಡಿಯ ರೋಲಿಂಗ್‌ ಶೆಲ್ಟರ್‌ ಒಳಗಿನಿಂದ ಲಾಕ್‌ ಮಾಡಿಕೊಂಡಿದ್ದಾರೆ. ಬಳಿಕ ಉಮಾರನ್ನು ಅವರ ಕೊಠಡಿಯಲ್ಲೇ ಚಾಕುವಿನಿಂದ ಇರಿದು ಕೊಲೆಗೈದು, ನಂತರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸೋಮವಾರ ಸಂಜೆ ಅಂಗಡಿಯಿಂದ ದುರ್ವಾಸನೆ ಬರುತ್ತಿದ್ದರಿಂದ ಅನುಮಾನಗೊಂಡ ಸ್ಥಳೀಯರು ಕೂಡಲೇ “ನಮ್ಮ-100’ಕ್ಕೆ ಕರೆ ಮಾಡಿ ಮಾಹಿತಿ ನೀಡಿದ್ದರು. ಈ ಮಾಹಿತಿ ಪಡೆದು ಸ್ಥಳಕ್ಕೆ ಧಾವಿಸಿ ವಿವೇಕನಗರ ಠಾಣೆ ಹೊಯ್ಸಳ ಪೊಲೀಸರು ಅಂಗಡಿಯ ಶೆಲ್ಟರ್‌ ಬೀಗ ಮುರಿದು ಒಳ ಪ್ರವೇಶಿಸಿದಾಗ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದರು.

ಮನೆ ಮುಟ್ಟುಗೋಲು: 2006ರಲ್ಲಿ ಸಂಬಂಧಿಯೊಬ್ಬರು ರವೀಂದ್ರನ್‌ ಅವರ ಮನೆಯ ದಾಖಲೆ ಪಡೆದು ಬ್ಯಾಂಕ್‌ವೊಂದರಲ್ಲಿ 2 ಕೋಟಿ ರೂ. ಸಾಲ ಪಡೆದುಕೊಂಡಿದ್ದರು. ಆದರೆ, ವಂಚಿಸಿದ್ದ ಸಂಬಂಧಿ ಇದುವರೆಗೂ ಬ್ಯಾಂಕಿಗೆ ಹಣ ಪಾವಿತಿಸಿಲ್ಲ. ಸದ್ಯ ಅವರು ವಿದೇಶದಲ್ಲಿ ವಾಸವಾಗಿದ್ದಾರೆ.

ಈ ನಡುವೆ ಕೋರ್ಟ್‌ ಅನುಮತಿ ಪಡೆದ ಬ್ಯಾಂಕ್‌ ಅಧಿಕಾರಿಗಳು 15ದಿನಗಳ ಹಿಂದೆ ಮನೆ ಮುಟ್ಟುಗೋಲು ಹಾಕಿಕೊಳ್ಳುವುದಾಗಿ ಕೋರ್ಟ್‌ನ ಆದೇಶ ಪ್ರತಿ ಸಮೇತ ಬಂದಿದ್ದರು. ಇದರಿಂದ ಬೇಸರಗೊಂಡಿದ್ದ ರವಿಂದ್ರನ್‌ ಕಳೆದ 8-10 ದಿನಗಳಿಂದ ಅಂಗಡಿಯಲ್ಲೇ ಮಲಗುತ್ತಿದ್ದರು. ವಂಚನೆಯಿಂದ ನೊಂದು ರವೀಂದ್ರನ್‌ ಹೀಗೆ ಮಾಡಿಕೊಂಡಿರಬಹುದೆಂದು ಸಂಬಂಧಿಕರು ಹೇಳಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಟಾಪ್ ನ್ಯೂಸ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.