ಮೀನುಗಾರಿಕಾ ಕ್ಷೇತ್ರದಲ್ಲಿ ಉದ್ಯೋಗಾವಕಾಶ ಅಪಾರ


Team Udayavani, Sep 12, 2018, 1:41 PM IST

12-sepctember-13.jpg

. ಮೀನುಗಾರಿಕೆ ಮತ್ತು ಕೃಷಿ ವಿಜ್ಞಾನ ಕ್ಷೇತ್ರದಲ್ಲಿ ಉದ್ಯೋಗಾವಕಾಶಗಳು ಹೇಗಿವೆ?
ನಮ್ಮ ದೇಶ ವಾರ್ಷಿಕ 278 ಮಿಲಿಯನ್‌ ಟನ್‌ ಆಹಾರ ಉತ್ಪಾದನೆ ಮಾಡುತ್ತಿದೆ. ಹಾಗಿದ್ದರೂ 20 ಕೋಟಿ ಜನ ಹಸಿವಿನಿಂದ ತತ್ತರಿಸುತ್ತಿದ್ದಾರೆ. ಸುಮಾರು 40 ಕೋಟಿ ಜನ ಪೋಷಕಾಂಶಗಳ ಕೊರತೆಯಿಂದ ಬಳಲುತ್ತಿದ್ದಾರೆ. ಮಕ್ಕಳ ಸಾವಿನ ಸಂಖ್ಯೆಯೂ ಜಾಸ್ತಿಯಿದೆ. ಆ ಕಾರಣದಿಂದ ಹೆಚ್ಚುತ್ತಿರುವ ಹಸಿವನ್ನು ನೀಗಿಸುವಲ್ಲಿ ಮೀನುಗಾರಿಕೆ ಮತ್ತು ಮೀನು ಕೃಷಿಯ ಪಾತ್ರ ಮುಂದೆ ಗಣನೀಯವಾಗಿದೆ. ಹಾಗಾಗಿ ಹೊಸ ಉದ್ಯೋಗಾವಕಾಶಗಳನ್ನು ಈ ಕ್ಷೇತ್ರ ಭವಿಷ್ಯದಲ್ಲಿ ನೀಡಲಿದೆ.

. ಕೃಷಿ ಬಗ್ಗೆ ಯುವಕರ ಒಲವು ಕಡಿಮೆಯಾಗುತ್ತಿದೆ ಎಂಬ ಆರೋಪವಿದೆ. ಕಲಿಕೆ ಮೂಲಕ ಒಲವು ಬೆಳೆಸಲು ಸಾಧ್ಯವೇ?
ಆರೋಪ ಅಲ್ಲ; ಸತ್ಯ. ಆದರೆ ಒಮ್ಮೆ ಕೃಷಿ ರಂಗಕ್ಕೆ ಧುಮುಕಿದರೆ ಖಂಡಿತ ವಿಮುಖರಾಗಲಾರರು. ಕೃಷಿ ಅಥವಾ ಮೀನು ಕೃಷಿಯಲ್ಲಿ ಮಾನವ ಶ್ರಮ ಕಡಿಮೆ. ಆದರೆ ಲಾಭ ಜಾಸ್ತಿ. ಈ ನಿಟ್ಟಿನಲ್ಲಿ ಕೃಷಿಯಿಂದ ವಿಮುಖರಾದವರು ಮೀನು ಕೃಷಿಯನ್ನು ಉದ್ಯಮವಾಗಿ ಸ್ವೀಕರಿಸಬಹುದು. ಉದ್ಯೋಗವಾಗಿ ಸ್ವೀಕರಿಸಿ, ವೈಜ್ಞಾನಿಕವಾಗಿ ಅಭಿವೃದ್ಧಿಪಡಿಸಿದರೆ ಕೃಷಿ ಮತ್ತು ಮೀನು ಕೃಷಿ ಎರಡೂ ಲಾಭದಾಯಕ ಉದ್ಯಮ. ಏಕೆಂದರೆ ಇತ್ತೀಚಿನ ದಿನಗಳಲ್ಲಿ ಮೀನುಗಾರಿಕಾ ಕ್ಷೇತ್ರ ವೇಗವಾಗಿ ಬೆಳೆಯುತ್ತಿದೆ. ಕಡಿಮೆ ಜಾಗದಲ್ಲಿ ಹೆಚ್ಚು ಉತ್ಪಾದನೆ ಮಾಡುವಂತಹ ತಂತ್ರಜ್ಞಾನಗಳು ಲಭ್ಯವಿವೆ.

. ಮೀನುಗಾರಿಕೆ ಮತ್ತು ಕೃಷಿ ವಿಜ್ಞಾನ ಕ್ಷೇತ್ರದಲ್ಲಿ ಬದಲಾಗಬೇಕಾದ ವಿಷಯಗಳಿವೆಯೇ?
ಆಹಾರ ಉತ್ಪಾದನೆ ಬಗ್ಗೆ ಮಾತ್ರ ನಾವೆಲ್ಲರೂ ತಲೆ ಕೆಡಿಸಿಕೊಳ್ಳುತ್ತಿದ್ದೇವೆ. ಆದರೆ ಸಮಸ್ಯೆ ಇರುವುದು ಉತ್ಪಾದನೆಯಲ್ಲಿ ಅಲ್ಲ; ಸರಬರಾಜು ಮಾಡುವ ವ್ಯವಸ್ಥೆಯಲ್ಲಿ. ವ್ಯವಸ್ಥಿತ ಸರಬರಾಜು ಆದಲ್ಲಿ ನಮಗೆ ಈಗ ಉತ್ಪಾದನೆ ಆಗುತ್ತಿರುವ ಆಹಾರವೇ ಸಾಕು. ಯಾವಾಗ ಪೂರೈಕೆ ಮತ್ತು ಬೇಡಿಕೆಯನ್ನು ನಿಗ್ರಹಿಸುತ್ತೇವೋ, ವೈಜ್ಞಾನಿಕ ಬೆಲೆಯನ್ನು ರೈತರಿಗೆ ಕೊಡಲು ಪ್ರಾರಂಭಿಸುತ್ತೇವೋ ಮತ್ತು ಉತ್ಪಾದನೆಯಾದ ಎಲ್ಲ ಆಹಾರಗಳನ್ನು ಸರಿಯಾಗಿ ಸಂಸ್ಕರಣ ವ್ಯವಸ್ಥೆ ಮಾಡಿಕೊಳ್ಳುತ್ತೇವೆಯೋ ಆಗ ಆಹಾರಕ್ಕೆ ಸಮಸ್ಯೆ ಬಾರದು. 

. ಮೀನುಗಾರಿಕಾ ಕ್ಷೇತ್ರದ ಮಹತ್ವ, ಅವಕಾಶಗಳ ಬಗ್ಗೆ ವಿದ್ಯಾರ್ಥಿಗಳಿಗೆ ಹೇಗೆ ಮನವರಿಕೆ ಮಾಡಬಹುದು?
ಬಂಡವಾಳದ ಕೊರತೆ ಮತ್ತು ಅಗತ್ಯ ಕೌಶಲದ ಕೊರತೆ, ಉತ್ಸಾಹದ ಕೊರತೆ ಯುವಕರಲ್ಲಿ ಕಾಡುತ್ತಿದೆ. ಹಾಗಾಗಿ ಈ ಬಗ್ಗೆ ವಿದ್ಯಾರ್ಥಿಗಳು ಅಷ್ಟೊಂದು ಆಸಕ್ತಿ ತಳೆಯುತ್ತಿಲ್ಲ. ಕೃಷಿಯನ್ನು ಬ್ರ್ಯಾಂಡ್  ಮಾಡಿ ಲಾಭದಾಯಕ ಎಂಬುದಾಗಿ ಪ್ರೊಮೋಟ್‌ ಮಾಡಿದರೆ ವಿದ್ಯಾರ್ಥಿಗಳನ್ನು ಆಕರ್ಷಿಸಲು ಸಾಧ್ಯ. 

ಧನ್ಯಾ ಬಾಳೆಕಜೆ

ಟಾಪ್ ನ್ಯೂಸ್

1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್‌ಡಿಎ ಗ್ಯಾರಂಟಿ

1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್‌ಡಿಎ ಗ್ಯಾರಂಟಿ

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

Supreme Court slams IMA

Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್‌ ಗರಂ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಕ್ಷ ಬೋಧಕ ವರ್ಗ ಕೋರ್ಸ್‌ಗಳು ವಿಶಿಷ್ಟ  , ಸರಳ

ದಕ್ಷ ಬೋಧಕ ವರ್ಗ ಕೋರ್ಸ್‌ಗಳು ವಿಶಿಷ್ಟ  , ಸರಳ

vydyakeeya

ವೈದ್ಯಕೀಯ ವ್ಯಾಸಂಗಕ್ಕೆ ಫ್ಲೆಕ್ಸಿಬಲ್‌ ಟಚ್‌

ಸಾರ್ವಜನಿಕ ಆಡಳಿತ ಆಸಕ್ತಿಯಿದ್ದರೆ ಅವಕಾಶಗಳು ಹಲವು

ಸಾರ್ವಜನಿಕ ಆಡಳಿತ ಆಸಕ್ತಿಯಿದ್ದರೆ ಅವಕಾಶಗಳು ಹಲವು

stand-up-comedy

ಆಧುನಿಕರ ಆಕರ್ಷಣೆ ಸ್ಟ್ಯಾಂಡಪ್‌ ಕಾಮಿಡಿ!

novel

ಕೃಷಿ ಬದುಕಿನ ಸೂಕ್ಷ್ಮ ನೋಟ ನೀಡುವ ಅಗೆದೆಷ್ಟೂ ನಕ್ಷತ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್‌ಡಿಎ ಗ್ಯಾರಂಟಿ

1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್‌ಡಿಎ ಗ್ಯಾರಂಟಿ

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.