ರೂಪಾಯಿ-ಷೇರು ಕುಸಿತ ; ತೈಲಬೆಲೆ ಜಿಗಿತ


Team Udayavani, Sep 12, 2018, 4:09 PM IST

fuel.jpg

ಮುಂಬಯಿ: ರೂಪಾಯಿ ಮೌಲ್ಯ ಕುಸಿತ, ತೈಲ ಬೆಲೆ ಏರಿಕೆಯ ಆಘಾತದ ನಡುವೆಯೇ ಷೇರುಪೇಟೆಯ ತಲ್ಲಣ ಮುಂದುವರಿದಿದೆ. ಮಂಗಳವಾರದ ಮುಂಬೈ ಷೇರುಪೇಟೆ ಸಂವೇದಿ ಸೂಚ್ಯಂಕ ಬರೋಬ್ಬರಿ 509.04 ಅಂಕಗಳಷ್ಟು ಕುಸಿತ ಕಂಡಿದ್ದು, ವಹಿವಾಟಿನ ಅಂತ್ಯಕ್ಕೆ 37,413.13ಕ್ಕೆ ತಲುಪಿದೆ. ಕಳೆದ ಆರು ತಿಂಗಳಲ್ಲೇ ಇದು ಗರಿಷ್ಠ ಕುಸಿತ ಎಂದು ಮಾರುಕಟ್ಟೆ ತಜ್ಞರು ವಿಶ್ಲೇಷಿಸಿದ್ದಾರೆ. 

ಇನ್ನು, ನಿಫ್ಟಿ 150.60 ಅಂಕ ಇಳಿದು, 11,287.50ರಲ್ಲಿ ವಹಿವಾಟು ಅಂತ್ಯಗೊಳಿಸಿದೆ. ರೂಪಾಯಿ ಮೌಲ್ಯ ಕುಸಿತ, ಕಚ್ಚಾ ತೈಲದ ದರ ಏರಿಕೆ ಹಾಗೂ ಅಮೆರಿಕ-ಚೀನಾ ನಡುವಿನ ವ್ಯಾಪಾರ ಸಮರ ಕೂಡ ಸೆನ್ಸೆಕ್ಸ್‌ ಪಾತಾಳಕ್ಕಿಳಿಯಲು ಕಾರಣ ಎಂದು ಹೇಳಲಾಗಿದೆ.

ರೂ. ಮೌಲ್ಯ ಕುಸಿತ: ಇದೇ ವೇಳೆ, ಡಾಲರ್‌ ವಿರುದ್ಧ ರೂಪಾಯಿ ಮೌಲ್ಯವೂ ದಾಖಲೆಯ ಮಟ್ಟಕ್ಕೆ ಕುಸಿದಿದೆ. ಮಂಗಳವಾರ ಆರಂಭದಲ್ಲಿ ಡಾಲರ್‌ ಮುಂದೆ 20 ಪೈಸೆಯಷ್ಟು ಏರಿಕೆ ಕಂಡಿತ್ತಾದರೂ, ಅನಂತರ ಕುಸಿಯುತ್ತಾ ದಿನಾಂತ್ಯಕ್ಕೆ 28 ಪೈಸೆಯಷ್ಟು ಇಳಿಕೆಯಾಗಿ, ಒಂದು ಡಾಲರ್‌ಗೆ ಪ್ರತಿಯಾಗಿ 72.73 ರೂ.ಗಳಿಗೆ ಬಂದು ಮುಟ್ಟಿದೆ. 

ಮತ್ತೆ ತೈಲ ಬಿಸಿ: ಕಳೆದ ಹದಿನೈದು ದಿನಗಳಿಂದ ಏರುತ್ತಿರುವ ಪೆಟ್ರೋಲ್‌ ಹಾಗೂ ಡೀಸೆಲ್‌ ಬೆಲೆ ಮಂಗಳವಾರ 14 ಪೈಸೆಗಳ ಏರಿಕೆ ಕಂಡಿದೆ. ದಿಲ್ಲಿಯಲ್ಲಿ ಪ್ರತಿ ಲೀ. ಪೆಟ್ರೋಲ್‌ಗೆ 80.87 ರೂ., ಡೀಸೆಲ್‌ಗೆ 72.97 ರೂ. ಆಗಿದೆ. ಮುಂಬೈನಲ್ಲಿ ಪ್ರತಿ ಲೀ. ಪೆಟ್ರೋಲ್‌ ಹಾಗೂ ಡೀಸೆಲ್‌ ಬೆಲೆ ಕ್ರಮವಾಗಿ 88.26 ರೂ. ಹಾಗೂ 77.47 ರೂ. ಗಳಿಗೆ ಮುಟ್ಟಿದೆ. 

ಪಿಐಎಲ್‌ ಸಲ್ಲಿಕೆ
ಪ್ರತಿದಿನ ತೈಲ ದರ ಪರಿಷ್ಕರಣೆ ಪ್ರಶ್ನಿಸಿ ದಿಲ್ಲಿ ಹೈಕೋರ್ಟ್‌ಗೆ ಪೂಜಾ ಮಹಾಜನ್‌ ಎಂಬವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್‌) ಸಲ್ಲಿಸಿದ್ದಾರೆ. ಕರ್ನಾಟಕ ವಿಧಾನಸಭೆ ಚುನಾ ವಣೆಗೂ ಮುನ್ನ 22 ದಿನಗಳ ಕಾಲ ತೈಲ ಬೆಲೆ ಪರಿಷ್ಕರಿಸಿರಲಿಲ್ಲ. ಬೇಕಾದಾಗ ದೈನಂದಿನ ಬೆಲೆ ಪರಿಷ್ಕರಣೆ ನಿಲ್ಲಿಸಬಹುದಾದರೆ ಈಗ ಅದು ಏಕೆ ಸಾಧ್ಯವಿಲ್ಲ, ತೈಲಗಳ ಮೇಲೆ ಒಂದು ಸ್ಥಿರ ತೈಲ ಬೆಲೆ ನಿಗದಿಗೊಳಿಸಬಾರದೇಕೆ ಎಂದು ಅವರು ಕೇಂದ್ರವನ್ನು ಪ್ರಶ್ನಿಸಿದ್ದಾರೆ. ಬುಧವಾರ ಅರ್ಜಿಯ ವಿಚಾರಣೆ ನಡೆಯುವ ಸಾಧ್ಯತೆಯಿದೆ. 

ಇಲ್ಲಿ ಪೆಟ್ರೋಲ್‌ಗೆ 90 ರೂ.!
ಮುಂಬೈನಿಂದ ಪೂರ್ವಕ್ಕೆ 500 ಕಿ.ಮೀ. ದೂರವಿರುವ ಪರ್ಬಾನಿ ಎಂಬ ಊರಿನಲ್ಲಿ ಪೆಟ್ರೋಲ್‌ ಬೆಲೆ 90 ರೂ.ಗಳ ಗಡಿ ದಾಟಿದೆ. ಕೇವಲ 3,10,000 ಜನಸಂಖ್ಯೆ ಇರುವ ಈ ಪಟ್ಟಣದಲ್ಲಿ ಸೋಮವಾರವೇ ಪೆಟ್ರೋಲ್‌ ಬೆಲೆ 89.97 ರೂ. ಇತ್ತು. ಇನ್ನು, ಈ ಊರಿನಲ್ಲಿ ಡೀಸೆಲ್‌ ಬೆಲೆ ಪ್ರತಿ ಲೀಟರ್‌ಗೆ 77.92 ರೂ.ಗಳಿಂದ 78.06 ರೂ.ಗಳಿಗೆ ಏರಿದೆ. 

ಬೆಲೆ ಇಳಿಸಿದ ದೀದಿ
ಪೆಟ್ರೋಲ್‌ ಮೇಲಿನ ತೆರಿಗೆಯನ್ನು ಇಳಿಸಿದ ರಾಜ್ಯಗಳ ಪಟ್ಟಿಗೆ ಪಶ್ಚಿಮ ಬಂಗಾಳ ಸೇರ್ಪಡೆಗೊಂಡಿದೆ. ಸಿಎಂ ಮಮತಾ ಬ್ಯಾನರ್ಜಿ ತೈಲಗಳ ಮೇಲಿನ ವ್ಯಾಟ್‌ ಇಳಿಸಿದ್ದು, ಪೆಟ್ರೋಲ್‌, ಡೀಸೆಲ್‌ ದರ 1 ರೂ. ಇಳಿಕೆಯಾಗಿದೆ.

ಟಾಪ್ ನ್ಯೂಸ್

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.