ಪುಣೆ ಬಿಲ್ಲವ ಸಮಾಜ ಸೇವಾ ಸಂಘದಿಂದ ವಾರ್ಷಿಕ ಗುರುಜಯಂತಿ ಆಚರಣೆ


Team Udayavani, Sep 12, 2018, 4:11 PM IST

1109mum01.jpg

ಪುಣೆ: ಜ್ಞಾನದಿಂದ ಸನ್ಮಾರ್ಗದಲ್ಲಿ  ನಡೆದಾಗ ನಮ್ಮ ಜೀವನ ಸಾರ್ಥಕವಾಗುತ್ತದೆ. ಅಂಥ ಜ್ಞಾನವನ್ನು ನಾವು ಪಡೆಯಬೇಕಾದರೆ ನಮಗೆ ವಿದ್ಯೆ ಬೇಕಾಗಬಹುದು. ವಿದ್ಯೆಯನ್ನೂ ಸನ್ಮಾರ್ಗದ ದಾರಿಯನ್ನೂ ತೋರಿಸುವವನು ಗುರು. ಅಂಥಹ ವಿದ್ಯಾ ಜ್ಞಾನವನ್ನು ಪಡೆಯಬೇಕಾದರೆ ನಾವೆಲ್ಲರೂ ಗುರುವಿನ ಗುಲಾಮರಾಗಬೇಕು. ಇಂದಿನ ದಿನಗಳಲ್ಲಿ ವಿದ್ಯೆ ಇಲ್ಲದ ವ್ಯಕ್ತಿ ಆಟಕ್ಕುಂಟು ಲೆಕ್ಕಕಿಲ್ಲ ಎಂಬಂತ ಪರಿಸ್ಥಿತಿ ಇದೆ. ಆದರೆ ನಮ್ಮ ಸಮಾಜದವರು 18 ನೇ ಶತಮಾನದÇÉೇ ದೇವಮಾನವರಾದ  ಗುರುವನ್ನು ಪಡೆದ ಪುಣ್ಯವಂತರು. ಒಂದೇ ಜಾತಿ, ಒಂದೇ ಮತ, ಒಂದೇ ದೇವರು  ಎಂದು ಜಗಕ್ಕೆ ಸಾರುತ್ತಾ ಭೂಮಿಗಿಳಿದು ಬಂದವರು  ಬ್ರಹ್ಮಶ್ರೀ ನಾರಾಯಣ ಗುರುಗಳು. ಸಮಾಜದಲ್ಲಿ ಇದ್ದ ತಾರತಮ್ಯವನ್ನು ನಿರ್ನಾಮ ಮಾಡಿದ ಗುರುವರ್ಯರ  ಗುರು ಪೂಜೆಯನ್ನು ಇಂದು ನಾವೆಲ್ಲ ಒಂದೇ ತಾಯಿಯ ಮಕ್ಕಳು ಎಂಬಂತೆ  ಕೂಡಿ  ಗುರುಗಳ ಪಾದಗಳಿಗೆ ಅರ್ಪಣೆ ಮಾಡಿದ್ದೇವೆ. ಅಂತಹ ಪುಣ್ಯ ಪುರುಷರ ಪೂಜೆ ವರ್ಷಕೊಮ್ಮೆ ಎಂಬ ಭಾವನೆ ನಮ್ಮಲ್ಲಿರಬಾರದು. ದಿನ ನಿತ್ಯ ಅವರ ಸ್ಮರಣೆ ಮಾಡಿ ಅವರ ತತ್ವ ಆದರ್ಶಗಳನ್ನು ನಮ್ಮಲ್ಲಿ ಜೀವನದಲ್ಲಿ ಅಳವಡಿಸಿಕೊಂಡು, ನಮ್ಮ ಮಕ್ಕಳಿಗೂ ತಿಳಿಸುವ ಮೂಲಕ ಅವರ ನಿತ್ಯ ಪೂಜೆಯನ್ನು ಮಾಡಬೇಕು. ಸಂಘಟನೆಯಿಂದ ಬಲಿಷ್ಟರಾಗಿ ಎಂಬ ಗುರು ಪ್ರೇರಣೆಯಂತೆ ನಾವೆÇÉಾ ನಮ್ಮ ಸಂಘಟನಾ ಶಕ್ತಿಯನ್ನು ಒಟ್ಟುಗೂಡಿಸಿ ಬಲಿಷ್ಟರಾಗೋಣ  ಎಂದು ಪುಣೆ ಬಿಲ್ಲವ ಸಂಘದ ಅಧ್ಯಕ್ಷರಾದ ಶೇಖರ್‌ ಪೂಜಾರಿ ನುಡಿದರು.

ಸೆ. 9 ರಂದು ಬಿಲ್ಲವ ಸಮಾಜ ಸೇವಾ ಸಂಘ ಪುಣೆ ಇದರ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ  164 ನೇ ಜಯಂತಿ ಆಚರಣೆ ಅಂಗವಾಗಿ,  ಸೋಮವಾರ ಪೇಟೆಯ ನರ ಪತ್‌ಗಿರಿ ಚೌಕ್‌ನಲ್ಲಿರುವ ಸಂತ  ಘಾಡೆY ಮಹಾರಾಜ್‌ ಪ್ರಾರ್ಥನಾಗೃಹದಲ್ಲಿ ನಡೆದ ಗುರುಪೂಜೆ ನಡೆದಿದ್ದು, ಆನಂತರ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಅವರು,  ಜನ ಸಾಮಾನ್ಯರ  ಉ¨ªಾರಕ್ಕಾಗಿ ಅವತಾರವೆತ್ತಿದ ಪೂಜ್ಯ ನಾರಾಯಣ ಗುರುಗಳ ತತ್ವಾದರ್ಶವನ್ನು ಪಾಲನೆ ಮಾಡುತ್ತ, ನಮ್ಮ ಹಿರಿಯರು ಸ್ಥಾಪನೆ ಮಾಡಿದ ಈ ಸಂಸ್ಥೆಯನ್ನು ಸಮಾಜ ಬಾಂಧವರ ಕಷ್ಟ ಸುಖಗಳಿಗೆ ಪೂರಕವಾಗಿ ಕಾರ್ಯವನ್ನು ಮಾಡುತ್ತಾ  ಬೆಳೆಸಬೇಕಾದ ಕರ್ತವ್ಯ ನಮ್ಮ ಮೇಲಿದೆ. ಪುಣೆ ಬಿಲ್ಲವ ಸಂಘ ಎಂಬುವುದು ಒಂದು ಕುಟುಂಬವಿದ್ದಂತೆ. ಸಮಾಜ  ಬಾಂಧವರು ಎಲ್ಲರೂ ನಮ್ಮ ಬಂಧುಗಳು. ನಮ್ಮ ಮನೆಯಂತಿರುವ ಈ ಸಂಘವನ್ನು ಮಾದರಿ ಸಂಘವಾಗಿ  ಮಾಡುವ  ಧ್ಯೇಯ ನಮ್ಮದಾಗಬೇಕು ಎಂದರು.

ಗುರುಪೂಜೆಯ ಅಂಗವಾಗಿ ಬೆಳಗ್ಗೆ  9 ರಿಂದ, ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಮಲ್ದಾಕ್ಕ ಚೌಕ, ಮಂಗಳವಾರ ಪೇಟೆಯ ಪ್ರಧಾನ ಅರ್ಚಕರಾದ ಕರುಣಾಕರ ಶಾಂತಿ ಅವರ  ಪೌರೋಹಿತ್ಯದಲ್ಲಿ ಕಲಶ ಮಹೂರ್ತ, ಗುರುಪೂಜೆ ನಡೆಯಿತು. ಸಂಘದ ಉಪಾಧ್ಯಕ್ಷ  ಜಯ ಆರ್‌. ಪೂಜಾರಿ ದಂಪತಿ ಪೂಜೆಯ ಯಜಮಾನತ್ವ ವಹಿಸಿದ್ದರು. ಸಮಾಜ ಬಾಂಧವರಿಂದ ಭಜನೆ ನಡೆಯಿತು. ಅನಂತರ  ಮಹಾಮಂಗಳಾರತಿ ನೆರವೇರಿತು.

ಶೇಖರ್‌ ಟಿ. ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದ ವೇದಿಕೆಯಲ್ಲಿ ಪೂಜಾ ಸಮಿತಿಯ ಕಾರ್ಯಾಧ್ಯಕ್ಷ ಪಾಂಡುರಂಗ  ಅರ್‌. ಪೂಜಾರಿ, ಸಂಘದ ಸಂಸ್ಥಾಪಕ  ಅಧ್ಯಕ್ಷ ಸುಂದರ್‌ ಎನ್‌. ಪೂಜಾರಿ, ಧಾರ್ಮಿಕ ಪ್ರವಚನಕಾರ ಕೊಳ್ತಿಗೆ ನಾರಾಯಣ ಗೌಡ, ಪಿಂಪ್ರಿ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯ ಅಧ್ಯಕ್ಷ ಸತೀಶ್‌ ಅರ್‌. ಸಾಲ್ಯಾನ್‌, ಪುಣೆ ಬಿಲ್ಲವ  ಸಂಘದ ಉಪಾಧ್ಯಕ್ಷರುಗಳಾದ ವಿಶ್ವನಾಥ್‌ ಪೂಜಾರಿ ಕಡ್ತಲ ಜಯ ಅರ್‌. ಪೂಜಾರಿ, ಕಾರ್ಯದರ್ಶಿ ಲೋಹಿತ್‌ ಕೆ. ಪೂಜಾರಿ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಸರೋಜಿನಿ ಡಿ. ಬಂಗೇರ ಅವರು ಉಪಸ್ಥಿತರಿದ್ದರು.

ಕಾರ್ಯಕ್ರಮಕ್ಕೆ ಆಗಮಿಸಿದ ವಿವಿಧ-ಸಂಘ ಸಂಸ್ಥೆಗಳ ಪದಾಧಿಕಾರಿ ಗಳನ್ನು ಹಾಗು ಸಾಧಕರನ್ನು ಪುಷ್ಪತ್ಛ ನೀಡಿ ಅಭಿನಂದಿಸಲಾಯಿತು.  ಹಾಗೂ ಬಿಲ್ಲವ  ಸಮಾಜದ ಪ್ರತಿಭಾನ್ವಿತ  ವಿದ್ಯಾರ್ಥಿಗಳಿಗೆ ಅಧ್ಯಕ್ಷರು  ಹಾಗೂ ಸಂಘದ ಪದಾಧಿಕಾರಿಗಳು  ಪ್ರತಿಭಾ ಪುರಸ್ಕಾರ ನೀಡಿ  ಅಭಿನಂದಿಸಿದರು. ಸಮಾಜದ ಹಿರಿಯರಾದ ಕೊಥ್ರೊಡ್‌   ಮಾದವ ಪೂಜಾರಿ  ದಂಪತಿ  ಹಾಗೂ        ಶಿವಾಜಿನಗರದ  ದೇವಕಿ ಗಿರಿಯ  ಪೂಜಾರಿಯವರನ್ನು   ಸಂಘದ ಪರವಾಗಿ ಸಮ್ಮಾನಿಸಲಾಯಿತು. ಸಮ್ಮಾನ ಪತ್ರವನ್ನು ಕ್ರಮವಾಗಿ ಸುಂದರ ಕರ್ಕೇರ ಹಾಗೂ ಶಿವಪ್ರಸಾದ ಪೂಜಾರಿ ಮೌಲಿ ಅವರು ಓದಿದರು. ಸಂಘದ ವಾರ್ಷಿಕ ವರದಿಯನ್ನು  ಎಸ್‌. ಕೆ. ಪೂಜಾರಿ ವಾಚಿಸಿದರು.

ಕಾರ್ಯಕ್ರಮದಲ್ಲಿ ನಗರದ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದು ಪ್ರಸಾದ ಸ್ವೀಕರಿಸಿದರು. ಕಾರ್ಯಕ್ರಮಕ್ಕೆ ಸಮಾಜದ ಪ್ರಮುಖರಾದ  ಸಂಘದ ಮಾಜಿ ಅಧ್ಯಕ್ಷರುಗಳಾದ  ಸದಾಶಿವ ಸಾಲ್ಯಾನ್‌, ಸದಾನಂದ ಪೂಜಾರಿ, ಪೂಜಾ  ಸಮಿತಿಯ ಕಾರ್ಯದರ್ಶಿ  ಗಿರೀಶ್‌ ಪೂಜಾರಿ, ಶಿವರಾಂ ಪೂಜಾರಿ, ಶಂಕರ್‌ ಪೂಜಾರಿ, ಉತ್ತಂ ಪಣಿಯಾಡಿ, ಎಸ್‌. ಕೆ. ಪೂಜಾರಿ, ವಾಸುದೇವ ಪೂಜಾರಿ, ಜಯ ಟಿ. ಪೂಜಾರಿ,  ವಸಂತ್‌ ಪೂಜಾರಿ, ವಿಶ್ವನಾಥ್‌ ಟಿ. ಪೂಜಾರಿ,  ರಾಘು ಪೂಜಾರಿ, ಲೋಹಿತ್‌ ಪೂಜಾರಿ, ಶಿವರಾಂ ಪೂಜಾರಿ, ಪ್ರಿಯಾ ಪಣಿಯಾಡಿ, ರೇವತಿ ಪೂಜಾರಿ, ಉಮಾ ಕೆ. ಪೂಜಾರಿ, ವನಿತಾ ಎಸ್‌. ಕರ್ಕೇರ, ಲಲಿತಾ  ಪೂಜಾರಿ ಅವರು ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಿದರು.  ವಿಶ್ವನಾಥ ಪೂಜಾರಿ ಕಡ್ತಲ ಅವರು ಸಭಾಗೃಹದ ಮೇಲ್ವಿಚಾರಣೆಯಲ್ಲಿ ಸಹಕರಿಸಿದರು.

ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಪ್ರಸಾದ ಸ್ವೀಕರಿಸಿ ಗುರು ಕೃಪೆಗೆ ಪಾತ್ರರಾದರು. ಪ್ರಸಾದ ವಿತರಣೆಯ ಆನಂತರ ಸದಾಶಿವ ಸಾಲ್ಯಾನ್‌ ಮತ್ತು ಶಂಕರ ಪೂಜಾರಿ ದುರ್ಗಾ ಅವರ ಸೇವಾರ್ಥಕವಾಗಿ ಅನ್ನ ಸಂತರ್ಪಣೆ ಜರಗಿತು. ಸಂಘದ ಜೊತೆ ಕಾರ್ಯದರ್ಶಿ ಸುಂದರ ಕರ್ಕೇರ ಅವರು ಕಾರ್ಯಕ್ರಮ ನಿರೂಪಿಸಿದರು. ಹರೀಶ್‌ ಪೂಜಾರಿ ವಂದಿಸಿದರು. ಪ್ರತಿಭಾ ಪುರಸ್ಕಾರ ಪಡೆದ ವಿದ್ಯಾರ್ಥಿಗಳ ಯಾದಿಯನ್ನು ರೇವತಿ ಪೂಜಾರಿ ಅವರು ಓದಿದರು.

ಸಮಷ್ಟಿಯಲ್ಲಿ ಜನರು ಅಜ್ಞಾನದತ್ತ ಮುಖ ಮಾಡಿದಾಗ ವೇದಶಾಶ÷, ಪುರಾಣಗಳಿಂದ ಸಿಗದ ಜ್ಞಾನವನ್ನು ಸರಳ ಶೈಲಿಯಲ್ಲಿ  ಜನ ಮಾನಸಕ್ಕೆ ದಾರೆಯೆರೆದವರು  ಬ್ರಹ್ಮಶ್ರೀ ನಾರಾಯಣ ಗುರುಗಳು. ಅಧ್ಯಾತ್ಮದ ತತ್ವಗಳೆಲ್ಲವನ್ನು ಸರಳ ರೀತಿಯಲ್ಲಿ ಬೋಧನೆ ಮಾಡಿ ಹಿಂದುಳಿದ ವರ್ಗಕ್ಕೆ ಚೈತನ್ಯದ ಸಂದೇಶ ನೀಡಿ ಸಮಾಜದಲ್ಲಿ ಸಮಾನತೆಯನ್ನು ಸಾರಿದವರು. ನಾರಾಯಣ ಗುರುಗಳು ಒಂದೇ ಜಾತಿಗೆ ಸೀಮಿತವಾದವರಲ್ಲ. ಒಂದೇ ಜಾತಿ, ಒಂದೇ ಮತ, ಒಂದೇ ದೇವರು ಎಂದು ಸಾರಿ ವಿಶ್ವ ಗುರುವಾದವರು ಅವರು. ಬ್ರಾಹ್ಮಣ ಜಾತಿವಾದುದಲ್ಲ ಅದೊಂದು ಗುಣ ಸ್ವಭಾವ.  ಅದು ಪ್ರಕಟವಾಗಬೇಕಾದರೆ ವಿದ್ಯೆ ಬೇಕು.  ಇದನ್ನೇ ಆಧಾರವಾಗಿ ಬ್ರಹ್ಮಶ್ರೀಗಳು ವಿದ್ಯೆಯಿಂದ ಸಂಘಟಿತರಾಗಿ ಎಂದು ಬೋಧಿಸಿ ಸಂಘಟಿತರಾಗಲು  ಕರೆಕೊಟ್ಟವರು. ಸಂಘಟನೆಯಿಂದ ಯಾವ ಕೆಲಸವನ್ನು ಮಾಡಬಹುದು ಎಂದು ಜಗಕ್ಕೆ ತೋರಿಸಿ ಕೊಟ್ಟವರು ನಾರಾಯಣ ಗುರುಗಳು.
ಕೊಳ್ತಿಗೆ ನಾರಾಯಣ ಗೌಡ, 
ಪ್ರವಚನಕಾರರು, ಯಕ್ಷಗಾನ ಕಲಾವಿದರು

ಚಿತ್ರ-ವರದಿ : ಹರೀಶ್‌ ಮೂಡಬಿದ್ರೆ ಪುಣೆ

ಟಾಪ್ ನ್ಯೂಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 23 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 23 ಮಂದಿಗೆ ಗಾಯ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.